ಕರಾವಳಿ

ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ| ಮೂಲಭೂತ ಸೌಕರ್ಯಗಳೇ ಮರೀಚಿಕೆ|

ಸುಳ್ಯ: ರಾಜ್ಯದಲ್ಲಿ ಹೆಚ್ಚಿನ ಪ್ರಯಾಣಿಕರು ಸಂಪರ್ಕಿಸುವ ರೈಲು ನಿಲ್ದಾಣಗಳ ಸಾಲಿನಲ್ಲಿ ಬರುವ ಸುಬ್ರಹ್ಮಣ್ಯದ ನೆಟ್ಟಣ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕುಂಠಿತವಾಗಿ ಪ್ರಯಾಣಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರಸಿದ್ಧ ಯಾತ್ರಾ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ರೈಲುಮಾರ್ಗದ ಮುಖಾಂತರ ಆಗಮಿಸುವ ಪ್ರವಾಸಿಗರು ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಇಳಿಯಬೇಕಾಗುತ್ತದೆ. ಆದರೆ ಸರಿಯಾದ ಮೂಲಸೌಕರ್ಯ ಇರದ ಕಾರಣಕ್ಕೆ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ. ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ […]

ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ| ಮೂಲಭೂತ ಸೌಕರ್ಯಗಳೇ ಮರೀಚಿಕೆ| Read More »

ಬೆಳ್ತಂಗಡಿ: ಪತ್ನಿಯನ್ನು ತವರಿಗೆ ಕಳುಹಿಸಿ ಪತಿ ಹೋಗಿದ್ದೆಲ್ಲಿಗೆ?| ಅನುಮಾನಗೊಂಡ ಪತ್ನಿಯಿಂದ ದೂರು|h

ಬೆಳ್ತಂಗಡಿ. ಹೆಂಡತಿ ತವರು ಮನೆಗೆ ಹೋಗಿದ್ದ ಸಂದರ್ಭ ಪತಿಯೋರ್ವ ಇದ್ದಕ್ಕಿದ್ದಂತೆ ಕಾಣೆಯಾದ ಘಟನೆ ತಾಲೂಕಿನ ಕುವೆಟ್ಟು ಎಂಬಲ್ಲಿ ನಡೆದಿದೆ. ಗ್ರಾಮದ ಸುನ್ನತ್ ಕರೆಯ ಸಂಶುದ್ದೀನ್ ಎಂಬಾತನೇ ಮನೆಬಿಟ್ಟು ಹೋದ ವ್ಯಕ್ತಿ ಪತ್ನಿ ಹಾಗೂ ಎರಡು ಗಂಡು ಮಕ್ಕಳೊಂದಿಗೆ ವಾಸವಾಗಿದ್ದ ಸಂಶುದ್ದೀನ್ ನ ಪತ್ನಿ ಸುಮಾರು ಎರಡು ತಿಂಗಳ ಹಿಂದೆ ತವರು ಮನೆಗೆ ಹೋಗಿದ್ದು ಪ್ರತೀದಿನ ಪತಿಯೊಂದಿಗೆ ಫೋನ್ ಮೂಲಕ ಮಾತನಾಡುತ್ತಿದ್ದರು ಎನ್ನಲಾಗಿದೆ. ಡಿ.‌ 18ರಂದು ಪತಿ ಯಾವುದೇ ಕರೆ ಮಾಡದೇ ಇದ್ದು, ಡಿ. 19 ರಂದು ಪತ್ನಿ

ಬೆಳ್ತಂಗಡಿ: ಪತ್ನಿಯನ್ನು ತವರಿಗೆ ಕಳುಹಿಸಿ ಪತಿ ಹೋಗಿದ್ದೆಲ್ಲಿಗೆ?| ಅನುಮಾನಗೊಂಡ ಪತ್ನಿಯಿಂದ ದೂರು|h Read More »

ಸುಳ್ಯ: ಸ್ವಂತ ಅಂಗಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಕಂಡುಬಂದ ಮಾಜಿ ಗ್ರಾ.ಪಂ ಸದಸ್ಯನ ಶವ

ಸುಳ್ಯ : ಮಾಜಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ತನ್ನ ಅಂಗಡಿಯ ಕೋಣೆಯೊಳಗಡೆ ಮಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಅಡ್ತಲೆಯಲ್ಲಿ ನಡೆದಿದೆ ಮರ್ಕಂಜ ಗ್ರಾಮದ ಕಾಯರ ಭೋಜಪ್ಪ(48) ರವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಭೋಜಪ್ಪರವರು ಅಡ್ತಲೆಯಲ್ಲಿ ಅಂಗಡಿ ನಡೆಸುತ್ತಿದ್ದು ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡಿರುವುದಾಗಿ ಮೇಲ್ನೋಟಕ್ಕೆ ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಭವಾನಿ, ಪುತ್ರಿ ರಕ್ಷಾ, ಪುತ್ರ ಯತಿನ್ ರನ್ನು ಅಗಲಿದ್ದಾರೆ.

ಸುಳ್ಯ: ಸ್ವಂತ ಅಂಗಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಕಂಡುಬಂದ ಮಾಜಿ ಗ್ರಾ.ಪಂ ಸದಸ್ಯನ ಶವ Read More »

ಸುಳ್ಯ: ಅಮಲಿಗಾಗಿ ಫೆವಿಕಾಲ್ ವಾಸನೆಯ ಸೇವನೆ| ಅಪ್ರಾಪ್ತರ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು|

ಸುಳ್ಯ: ಇಲ್ಲಿನ ಜಯನಗರ ಮನೆಯೊಂದರಲ್ಲಿ ಸುಮಾರು 9, 10, ವರ್ಷದ ಮೂವರು ಬಾಲಕರು ಫೆವಿಕಲ್ ಗಮ್ ವಾಸನೆ ಸೇವನೆ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳಿಯರು ಬಾಲಕರನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ನಿನ್ನೆ ವರದಿಯಾಗಿದೆ. ಅಮಲಿಗಾಗಿ ಅಪ್ರಾಪ್ತ‌ ಬಾಲಕರು ಮಾದಕ ನಶೆಯ ಮೊರೆ ಹೋಗಿದ್ದಾರೆಂದು ಹೇಳಲಾಗುತ್ತಿದ್ದು, ಬಾಲಕರನ್ನು ವಿಚಾರಣೆ ಮಾಡಿದ ಪೊಲೀಸರು ಪೋಷಕರನ್ನು ಕರೆಸಿ ಎಚ್ಚರಿಕೆ ನೀಡಿ ತಿಳಿಹೇಳಿ ಕಳಿಸಿರುವುದಾಗಿ ತಿಳಿದುಬಂದಿದೆ. ಸುಳ್ಯ ನಗರದ ಹಲವೆಡೆ ಗೌಪ್ಯವಾಗಿ ಮಾದಕ ನಶೆಯ ನಂಟು ಹೆಚ್ಚಾಗುತ್ತಿದ್ದು, ಅಪ್ರಾಪ್ತ ಮಕ್ಕಳು ಈ

ಸುಳ್ಯ: ಅಮಲಿಗಾಗಿ ಫೆವಿಕಾಲ್ ವಾಸನೆಯ ಸೇವನೆ| ಅಪ್ರಾಪ್ತರ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು| Read More »

“ಎದೆ ತುಂಬಿ ಹಾಡುವೆನು” | ಸಂದೇಶ್ ನೀರ್ ಮಾರ್ಗ‌ ರನ್ನರ್ ಅಪ್

ಮಂಗಳೂರು: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋನಲ್ಲಿ ಮಂಗಳೂರಿನ ಸಂದೇಶ್‌ ನೀರುಮಾರ್ಗ ಅವರು ರನ್ನರ್‌ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಈ ರಿಯಾಲಿಟಿ ಶೋನಲ್ಲಿ ಅಂತಿಮ ಹಂತ ತಲುಪಿದ್ದ 6 ಸ್ಪರ್ಧಿಗಳ ಪೈಕಿ ನಾಲ್ವರು ಫೈನಲ್‌ ಪ್ರವೇಶಿಸಿದ್ದರು. ಅದರಲ್ಲಿ ಸಂದೇಶ್‌ ಮೊದಲಿಗರು. ಕೊನೆಯ ಎರಡು ಸ್ಥಾನದಲ್ಲಿ ಮೊದಲ ಸ್ಥಾನವನ್ನು ಬಳ್ಳಾರಿಯ ಚಿನ್ಮಯ್‌ ಅವರು ಪಡೆದರೆ ಎರಡನೇ ಸ್ಥಾನ ಸಂದೇಶ್‌ ನೀರುಮಾರ್ಗ ಅವರ ಪಾಲಾಗಿದೆ. ಇದರ ಜತೆ 5 ಲಕ್ಷ ರೂ. ನಗದು ಗೆದ್ದಿದ್ದಾರೆ.

“ಎದೆ ತುಂಬಿ ಹಾಡುವೆನು” | ಸಂದೇಶ್ ನೀರ್ ಮಾರ್ಗ‌ ರನ್ನರ್ ಅಪ್ Read More »

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ| ಕೊನೆಗೂ ನ್ಯಾಯಾಲಯಕ್ಕೆ ಶರಣಾದ ವಕೀಲ ರಾಜೇಶ್ ಭಟ್|

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಭಟ್‌ ಕೊನೆಗೂ ನ್ಯಾಯಾಲಯಕ್ಕೆ ಡಿ.20ರ ಸೋಮವಾರ ಶರಣಾಗಿದ್ದಾನೆ. ಕಾನೂನು ಮಹಾ ವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕನಾಗಿದ್ದ ಕೆ.ಎಸ್‌.ಎನ್‌. ರಾಜೇಶ್‌ ಭಟ್ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಪೊಲೀಸರ ಕೈಗೆ ಸಿಗದೇ ಪರಾರಿಯಾಗಿದ್ದ. ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ| ಕೊನೆಗೂ ನ್ಯಾಯಾಲಯಕ್ಕೆ ಶರಣಾದ ವಕೀಲ ರಾಜೇಶ್ ಭಟ್| Read More »

ಪ್ರೇಮ ಪ್ರಕರಣ| ಮಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ| ಪ್ರಿಯಕರ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ವೈಶಾಲಿ ಗಾಯಕ್ ವಾಡ್ (25) ನೇಣಿಗೆ ಶರಣಾಗಿದ್ದಾಳೆ. ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿನ ಸಿಲಿಕಾನಿಯಾ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದೆ. ಮೃತಳು ಮೂಲತಃ ಬೀದರ್ ನಿವಾಸಿಯಾಗಿದ್ದು, ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದಳು. ಪ್ರೇಮ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಆತ್ಮಹತ್ಯೆ ಮಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆ ಹಿನ್ನೆಲೆ ಆಕೆಯ ಗೆಳೆಯ ಕೇರಳದ ಪಾಲಕ್ಕಾಡ್ ನಿವಾಸಿ ಸುಜೀಶ್(24) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೇಮ ಪ್ರಕರಣ| ಮಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ| ಪ್ರಿಯಕರ ಅರೆಸ್ಟ್ Read More »

ಸುಳ್ಯ: ಅಪ್ರಾಪ್ತ ಬಾಲಕನಿಂದ ದ್ವಿಚಕ್ರ ವಾಹನ ಚಲಾವಣೆ|ಪೋಷಕರಿಗೆ ದಂಡ ವಿಧಿಸಿದ ಕೋರ್ಟ್‌

ಸುಳ್ಯ: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಕೀ ಕೊಟ್ಟು ಪೋಷಕರು ದಂಡ ಕಟ್ಟಿದ ಘಟನೆ ಸುಳ್ಯದಲ್ಲಿ ನಡೆದಿದೆ. ತಾಲೂಕಿನ ದೇವಚಳ್ಳದ ಅಪ್ರಾಪ್ತ ಬಾಲಕನೋರ್ವ ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಪೋಷಕರಿಗೆ 10,000 ರೂ. ದಂಡ ವಿಧಿಸಿದೆ. ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಸುರೇಶ ಎನ್ನುವವರು ತನ್ನ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅನುಮತಿ ನೀಡಿದ್ದರು. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ

ಸುಳ್ಯ: ಅಪ್ರಾಪ್ತ ಬಾಲಕನಿಂದ ದ್ವಿಚಕ್ರ ವಾಹನ ಚಲಾವಣೆ|ಪೋಷಕರಿಗೆ ದಂಡ ವಿಧಿಸಿದ ಕೋರ್ಟ್‌ Read More »

ಚಾರ್ಮಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ ದ.ಕ ಡಿಸಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನಿರ್ಬಂಧ ವಿಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು -ತುಮಕೂರು ರಸ್ತೆಯ 75 ಕಿಲೋಮೀಟರ್ ಚಾರ್ಮಾಡಿ ಗ್ರಾಮದಿಂದ ದಕ್ಷಿಣಕನ್ನಡ ಜಿಲ್ಲೆ ಗಡಿವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಡಿಸೆಂಬರ್ 18 ರಿಂದ ಮುಂದಿನ ಆದೇಶದವರೆಗೆ ದಿನದ 24 ಗಂಟೆಗಳ ಕಾಲ ಲಘು, ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ ದ.ಕ ಡಿಸಿ ಡಾ. ರಾಜೇಂದ್ರ ಕೆ.ವಿ Read More »

ಜಿಲ್ಲೆಗೊಂದು ಗೋಶಾಲೆ ಇನ್ನೂ ಪ್ರಾರಂಭವಾಗಿಲ್ಲ| ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ| ಗೋಮಾಂಸ ರಪ್ತು ಕಂಪನಿಗಳ ಪರವಾನಗಿ ‌ರದ್ದು‌ ಮಾಡಿಲ್ಲ| ಸದನದಲ್ಲಿ ಸರ್ಕಾರವನ್ನು ತರಾಟೆಗೆತ್ತಿಕೊಂಡ ಯು.ಟಿ‌ ಖಾದರ್

ಬೆಳಗಾವಿ:‌ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕರ್ನಾಟಕ – ಗೋವಾ ಗಡಿಯಲ್ಲಿ ಇರುವ ಗೋಮಾಂಸ ರಫ್ತು ಕಂಪನಿಗಳ ಪರವಾನಗಿ ರದ್ದು ಯಾಕಿಲ್ಲ? ಎಂದು ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಅವರು, ಗೋ ಸಂತತಿ ಜಾಸ್ತಿ ಮಾಡಲು ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನೆ ಎತ್ತಿದರು. ಹೈನುಗಾರಿಕೆಗೆ, ಹಾಲಿಗೆ ಸಂಬಂಧಿಸಿದ ಪ್ರೋತ್ಸಾಹ ಧನ‌ ಜಾಸ್ತಿ ನೀಡಿದರೆ ರೈತರು ಜಾಸ್ತಿ ಗೋವುಗಳನ್ನು ಸಾಕುತ್ತಾರೆ. ಆದರೆ

ಜಿಲ್ಲೆಗೊಂದು ಗೋಶಾಲೆ ಇನ್ನೂ ಪ್ರಾರಂಭವಾಗಿಲ್ಲ| ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ| ಗೋಮಾಂಸ ರಪ್ತು ಕಂಪನಿಗಳ ಪರವಾನಗಿ ‌ರದ್ದು‌ ಮಾಡಿಲ್ಲ| ಸದನದಲ್ಲಿ ಸರ್ಕಾರವನ್ನು ತರಾಟೆಗೆತ್ತಿಕೊಂಡ ಯು.ಟಿ‌ ಖಾದರ್ Read More »