ಕರಾವಳಿ

ಮತಾಂತರ ಯತ್ನವೇ ಒಂದೇ ಕುಟುಂಬದ ಸಾವಿಗೆ ಕಾರಣ!!, ಪೊಲೀಸ್ ಕಮಿಷನರ್ ಆಘಾತಕಾರಿ ಮಾಹಿತಿ|

ಮಂಗಳೂರು: ಜಿಲ್ಲೆಯನ್ನು ಬೆಚ್ಚಿ ಬಿಳಿಸಿದ್ದ ಒಂದು ಇಡೀ ಕುಟುಂಬದ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರವೇ ಪ್ರಮುಖ ಕಾರಣ ಎಂದು ದೃಢಪಟ್ಟಿದೆ. ಈ ಪ್ರಕರಣದಲ್ಲಿ ಬಂಧತಳಾಗಿರುವ ಆರೋಪಿ ನೂರ್‌ಜಹಾನ್‌ ಎಂಬಾಕೆ ಮತಾಂತರಕ್ಕೆ ಯತ್ನಿಸಿದ್ದು ಸಾಕ್ಷಿಗಳಿಂದ ಸಾಭೀತಾಗಿದೆ ಎಂದು ಪೊಲೀಸ್‌ ಕಮೀಷನರ್‌ ಶಶಿಕುಮಾರ್ ತಿಳಿಸಿದ್ದಾರೆ. ಡಿಸೆಂಬರ್ 8 ರಂದು ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದರು. ಮೃತ ನಾಗೇಶ್ ಪತ್ನಿ ವಿಜಯಲಕ್ಷ್ಮೀಯನ್ನು ಮದುವೆ ಬ್ರೋಕರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನೂರ್‌ಜಹಾನ್‌ ಡೈವೋರ್ಸ್‌ ನೀಡು, ಮುಸ್ಲಿಂ ಹುಡುಗನೊಂದಿಗೆ ನಿನ್ನ ವಿವಾಹ ಮಾಡಿಸುತ್ತೇನೆ ಎಂದು ಹೇಳಿದ್ದಳು. ವಿಜಯಲಕ್ಷ್ಮೀ […]

ಮತಾಂತರ ಯತ್ನವೇ ಒಂದೇ ಕುಟುಂಬದ ಸಾವಿಗೆ ಕಾರಣ!!, ಪೊಲೀಸ್ ಕಮಿಷನರ್ ಆಘಾತಕಾರಿ ಮಾಹಿತಿ| Read More »

ಮಂಗಳೂರು: ಬಸ್ಸ್ ನಲ್ಲಿ ಅನ್ಯಕೋಮಿನ ಜೋಡಿಯಿಂದ “ಪ್ರೇಮಸಲ್ಲಾಪ” | ಸಾರ್ವಜನಿಕರಿಂದ ಬುದ್ದಿಮಾತು

ಉಡುಪಿ :ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಹೋಗುತ್ತಿದ್ದ ಯುವಜೋಡಿಯೊಂದು ಮೈಮರೆತು ಸರಸ‌ ಸಲ್ಲಾಪದಲ್ಲಿ ತೊಡಗಿದ ಘಟನೆ ನಡೆದಿದೆ. ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯನ್ನು ಉಡುಪಿಯಲ್ಲಿ ಸಾರ್ವಜನಿಕರು ಹಿಡಿದು ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗುತ್ತಿದೆ. ಇಂದು ಬೆಳಗ್ಗೆ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಸರಸದಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದು ಉಡುಪಿಯಲ್ಲಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು.

ಮಂಗಳೂರು: ಬಸ್ಸ್ ನಲ್ಲಿ ಅನ್ಯಕೋಮಿನ ಜೋಡಿಯಿಂದ “ಪ್ರೇಮಸಲ್ಲಾಪ” | ಸಾರ್ವಜನಿಕರಿಂದ ಬುದ್ದಿಮಾತು Read More »

ಕುಕ್ಕೆ ಚಂಪಾಷಷ್ಟಿ ಮಹೋತ್ಸವ ‌ನೇರಪ್ರಸಾರ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವ ಅಂಗವಾಗಿ ಪಂಚಮಿ ರಥೋತ್ಸವ ನೇರಪ್ರಸಾರ ಇಲ್ಲಿ ಕ್ಲಿಕ್ ಮಾಡಿ

ಕುಕ್ಕೆ ಚಂಪಾಷಷ್ಟಿ ಮಹೋತ್ಸವ ‌ನೇರಪ್ರಸಾರ Read More »

ಕುಕ್ಕೆಯಲ್ಲಿಂದು‌ ಪಂಚಮಿ ರಥೋತ್ಸವ ಸಂಭ್ರಮ| ನಾಳೆ ಬ್ರಹ್ಮರಥದಲ್ಲಿ ವಿರಾಜಿಸಲಿದ್ದಾನೆ ಸುಬ್ರಹ್ಮಣ್ಯ| ಭಕ್ತಿ ಪರಾಕಾಷ್ಠೆಯಲ್ಲಿ ಭಕ್ತಗಣ|

ಕುಕ್ಕೆ ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ದ ನಾಗಸನ್ನಿದಿ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ದ ಪಂಚಮಿಯ ದಿನವಾದ ಇಂದು(ಡಿ.8)ತೈಲಾಭ್ಯಂಜನ ಮತ್ತು ಪಂಚಮಿ ರಥೋತ್ಸವ ನೆರವೇರಲಿದೆ. ರಾತ್ರಿ ವಿಶೇಷ ಪಾಲಕಿ ಉತ್ಸವ ಮತ್ತು ಬಂಡಿ ಉತ್ಸವ ದೇವಳದ ಹೊರಾಂಗಣದಲ್ಲಿ ಜರುಗಲಿದೆ. ರಾತ್ರಿ ಪಂಚಮಿ ರಥೋತ್ಸವದ ಬಳಿಕ ಸವಾರಿ ಕಟ್ಟೆಯಲ್ಲಿ ಕಟ್ಟೆ ಪೂಜೆ ಮತ್ತು ಆಕರ್ಷಣೀಯ “ಕುಕ್ಕೆಬೆಡಿ” ಪ್ರದರ್ಶಿತವಾಗಲಿದೆ. ನಾಳೆ (ಡಿ.9) ಪ್ರಾತಃಕಾಲ 6.58ರ ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ವೈಭವದ ಚಂಪಾಷಷ್ಟಿ ಮಹಾರಥೋತ್ಸವ ನೆರವೇರಲಿದ್ದು,

ಕುಕ್ಕೆಯಲ್ಲಿಂದು‌ ಪಂಚಮಿ ರಥೋತ್ಸವ ಸಂಭ್ರಮ| ನಾಳೆ ಬ್ರಹ್ಮರಥದಲ್ಲಿ ವಿರಾಜಿಸಲಿದ್ದಾನೆ ಸುಬ್ರಹ್ಮಣ್ಯ| ಭಕ್ತಿ ಪರಾಕಾಷ್ಠೆಯಲ್ಲಿ ಭಕ್ತಗಣ| Read More »

ಚಂಪಾಷಷ್ಟಿ ಹಿನ್ನಲೆ| ಕುಕ್ಕೆಯಲ್ಲಿ ಎರಡು ದಿನ‌ ಮದ್ಯ ಮಾರಾಟ ಬಂದ್ ಗೆ ಡೀಸಿ ಆದೇಶ|

ಮಂಗಳೂರು: ಪ್ರಸಿದ್ದ ಯಾತ್ರಾ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ಪ್ರಯುಕ್ತ ಡಿ. 10ರ ವರೆಗೆ ನಡೆಯಲಿರುವ ರಥೋತ್ಸವಗಳ ಸಮಯದಲ್ಲಿ ಅಪಾರ ಭಕ್ತಾದಿಗಳು ಸೇರಲಿದ್ದಾರೆ. ಈ ಹಿನ್ನಲೆಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ. ಜಿಲ್ಲಾಧಿಕಾರಿಯವರು ಕರ್ನಾಟಕ ಅಬಕಾರಿ ಕಾಯಿದೆ 1965 ರ ಸೆಕ್ಷನ್ 21 (1) ರ ಅಡಿಯಲ್ಲಿ ದತ್ತವಾದ

ಚಂಪಾಷಷ್ಟಿ ಹಿನ್ನಲೆ| ಕುಕ್ಕೆಯಲ್ಲಿ ಎರಡು ದಿನ‌ ಮದ್ಯ ಮಾರಾಟ ಬಂದ್ ಗೆ ಡೀಸಿ ಆದೇಶ| Read More »

ಪುತ್ತೂರು: ಹಿರಿಯ ಬಿಜೆಪಿ ನೇತಾರ ಉರಿಮಜಲು ರಾಮಭಟ್ ಇನ್ನಿಲ್ಲ

ಪುತ್ತೂರು: ಕರಾವಳಿಯ ಹಿರಿಯ ರಾಜಕಾರಣಿ, ಬಿಜೆಪಿ ನೇತಾರ, ಮಾಜಿ ಶಾಸಕ 92 ರ ಹರೆಯದ ಉರಿಮಜಲು ರಾಮ್‌ ಭಟ್ ಅಸ್ತಂಗತರಾಗಿದ್ದಾರೆ. ಅವರ ಆರೋಗ್ಯದಲ್ಲಿ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಮ್ ಭಟ್ ಅವರು ಕಳೆದ ಕೆಲವು ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರ ಆರೋಗ್ಯವು ಸ್ಥಿರವಾಗಿತ್ತು‌ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದರೂ, ಇಂದು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಕೆಲವು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಕೊಂಚ ಚೇತರಿಸಿಕೊಂಡು

ಪುತ್ತೂರು: ಹಿರಿಯ ಬಿಜೆಪಿ ನೇತಾರ ಉರಿಮಜಲು ರಾಮಭಟ್ ಇನ್ನಿಲ್ಲ Read More »

ಮಂಗಳೂರಿನಲ್ಲಿ ಮತ್ತೆ ಕೊರೊನಾ ಕೇಸ್ ಹೆಚ್ಚಳ| ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಸೋಂಕು

ಮಂಗಳೂರು: ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಮತ್ತೊಮ್ಮೆ ಕೊರೋನ ಅಲೆ ಆತಂಕ ಹೆಚ್ಚಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮಂಗಳೂರಿನ ಎಂ.ವಿ. ಶೆಟ್ಟಿ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಹಾಗಾಗಿ ಕಾಲೇಜನ್ನು ಆರೋಗ್ಯ ಇಲಾಖೆ ಕಂಟೇನ್ಮೆಂಟ್ ಮಾಡಿದೆ. 10 ದಿನದಲ್ಲಿ 21 ಜನ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಡಪಟ್ಟಿದೆ.

ಮಂಗಳೂರಿನಲ್ಲಿ ಮತ್ತೆ ಕೊರೊನಾ ಕೇಸ್ ಹೆಚ್ಚಳ| ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಸೋಂಕು Read More »

ಕುಂದಾಪುರ: ಅಮಾಸೆಬೈಲು ಪೊದೆಯಲ್ಲಿ ಶಿಶು ಪತ್ತೆ ಪ್ರಕರಣ – ಇವರೇ ಶಿಶುವನ್ನು ಎಸೆದ ಕಟುಕ ದಂಪತಿ

ಕುಂದಾಪುರ: ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯ ಮಚ್ಚಟ್ಟು ಗ್ರಾಮದ ಕಳಿನಜೆಡ್ಡು ವಾರಾಹಿ ಸೇತುವೆ ಬಳಿ ಡಿ.1ರಂದು ಪತ್ತೆಯಾದ ಹೆಣ್ಣು ನವಜಾತ ಶಿಶುವನ್ನು ಎಸೆದು ಹೋದ ಕಟುಕ ದಂಪತಿಯನ್ನು ಅಮಾಸೆಬೈಲು ಪೊಲೀಸರು ಡಿ.4ರಂದು ಆರೋಪಿಗಳನ್ನು ಹೆಬ್ರಿ ಸಮೀಪದ ಕುಚ್ಚೂರು ಎಸ್ಟೇಟ್‍ನಲ್ಲಿ ಪೊಲೀಸರು ಬಂಧಿಸಿ, ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬೈಂದೂರು ತಾಲೂಕು ಜಡ್ಕಲ್ ಸಮೀಪದ ಮುದೂರು ಗ್ರಾಮದ ಸತೀಶ ಪೂಜಾರಿ(43) ಮತ್ತು ರಾಧಿಕ (40) ದಂಪತಿ. ಆರೋಪಿ ಇಬ್ಬರಿಗೂ ಕೂಡ ಹಿಂದೆ ಮದುವೆಯಾಗಿದ್ದು, ಸಂಸಾರದಿಂದ ದೂರವಾಗಿದ್ದಾರೆ. ಸತೀಶ ಪೂಜಾರಿಯ ಹೆಂಡತಿ ಮಕ್ಕಳು ಅವರನ್ನು

ಕುಂದಾಪುರ: ಅಮಾಸೆಬೈಲು ಪೊದೆಯಲ್ಲಿ ಶಿಶು ಪತ್ತೆ ಪ್ರಕರಣ – ಇವರೇ ಶಿಶುವನ್ನು ಎಸೆದ ಕಟುಕ ದಂಪತಿ Read More »

‘ಸಿಎಸ್ ಸಿ’ಪೋರ್ಟಲ್ ನಲ್ಲಿ ಉತ್ತಮ ನಿರ್ವಹಣೆ| ಮೇದಿನಿ ಜನ ಸೇವಾಕೇಂದ್ರ ರಾಜ್ಯಕ್ಕೆ ಪ್ರಥಮ|

ಪುತ್ತೂರು: ಕರ್ನಾಟಕದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸೇವಾ ಕೇಂದ್ರಗಳ ಪೈಕಿ ಕೇಂದ್ರ ಹಾಗೂ ರಾಜ್ಯ ಸರಕಾರದ ಜನಸೇವಾ ಕಾರ್ಯಗಳನ್ನು ಜನರಿಗೆ ಮುಟ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ತಾಲೂಕಿನ ಏಕಮಾತ್ರ ಸೇವಾ ಕೇಂದ್ರವಾದ ‘ಮೇದಿನಿ ಜನಸೇವಾ ಕೇಂದ್ರ’ವು 2020-21ನೇ ಸಾಲಿನ ಅತೀ ಹೆಚ್ಚು ಸಿಎಸ್ ಸಿ ಪೋರ್ಟಲ್ ನಲ್ಲಿ ಟ್ರಾಕ್ಷನ್ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಪುತ್ತೂರಿನ ನಗರಸಭಾ ಕಟ್ಟಡದಲ್ಲಿ ಸರಿತಾ ನವೀನ್ ಮೂಡಂಬೈಲು ರವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಮೇದಿನಿ ಜನಸೇವಾ

‘ಸಿಎಸ್ ಸಿ’ಪೋರ್ಟಲ್ ನಲ್ಲಿ ಉತ್ತಮ ನಿರ್ವಹಣೆ| ಮೇದಿನಿ ಜನ ಸೇವಾಕೇಂದ್ರ ರಾಜ್ಯಕ್ಕೆ ಪ್ರಥಮ| Read More »

ಪುತ್ತೂರು: ಸ್ಕೂಟರ್ ಢಿಕ್ಕಿ ಹೊಡೆದು ಪಾದಚಾರಿ ಸಾವು

ಪುತ್ತೂರು: ನಗರದ ಪೋಲಿಸ್ ಠಾಣಾ ಮುಂಭಾಗ ನಡೆದುಕೊಂದು ಹೋಗುತ್ತಿದ್ದ ವ್ಯಕ್ರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಚಿಕ್ಕಪುತ್ತೂರಿನ ಕೇಶವ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಹೆಗ್ಡೆ ಆರ್ಕೇಡ್ ಮುಂಭಾಗದಿಂದ ಮನೆಗೆ ನಡೆದುಕೊಂಡು ಹೋಗುತಿದ್ದ ವೇಳೆ ಸ್ಕೂಟರೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ರಸ್ತೆಗೆಸೆಯಲ್ಪಟ್ಟ ಕೇಶವ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ

ಪುತ್ತೂರು: ಸ್ಕೂಟರ್ ಢಿಕ್ಕಿ ಹೊಡೆದು ಪಾದಚಾರಿ ಸಾವು Read More »