ಕರಾವಳಿ

ಸುಳ್ಯ: ಟ್ರಾವೆಲ್ಲರ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸಾವು

ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿಗೆ ಸಂಪಾಜೆ ಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಯಾಗಿ ಸವಾರ ಮೃತ ಪಟ್ಟ ಘಟನೆ ಗೂನಡ್ಕ ಸಮೀಪ ಪೇಲ್ತಡ್ಕ ದಿಂದ ವರದಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ವಿನೋದ್ ಕುಮಾರ್ (23) ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಸುಳ್ಯ: ಟ್ರಾವೆಲ್ಲರ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸಾವು Read More »

ಕೋಮು ಪ್ರಚೋದನಕಾರಿ ಭಾಷಣ ಆರೋಪ| ಎಸ್ಡಿಪಿಐ, ಪಿಎಫ್ ಐ ಸಂಘಟಕರ ವಿರುದ್ಧ ದೂರು

ಪುತ್ತೂರು: ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ನೀಡಿರುವ ದೂರಿನ ಮೇರೆಗೆ ಎಸ್.ಡಿ.ಪಿ.ಐ. ಮತ್ತು ಸಿ.ಎಫ್.ಐ. ಸಂಘಟಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಮು ಭಾವನೆ ಕೆರಳಿಸಿ ವಿದ್ಯಾರ್ಥಿಗಳ ನಡುವೆ ಗಲಭೆ ನಡೆಸಲು ಉತ್ತೇಜನ ಹಾಗೂ ಸಾಮಾಜಿಕ ಸ್ವಾಸ್ಥ್ಯ ನಾಶ ಮಾಡಿ ಧರ್ಮದ ಆಧಾರದಲ್ಲಿ ಶಾಲಾ ಕಾಲೇಜುಗಳಲ್ಲಿ ಗಲಭೆ ನಡೆಸಲು ಪ್ರಚೋದನೆ ನಡೆಸುವಂತೆ ಭಾಷಣ ಮಾಡಿರುವುದು ಅಲ್ಲದೆ ಹಿಂದೂ ಮುಖಂಡರ ವಿರುದ್ಧ ಕೀಳು ಮಟ್ಟದ ಶಬ್ದಗಳಲ್ಲಿ ಮಾತನಾಡಿರುವುದಾಗಿ ಮತ್ತು ಕಾಲೇಜಿನ ಒಳಗಡೆ ಅಕ್ರಮ

ಕೋಮು ಪ್ರಚೋದನಕಾರಿ ಭಾಷಣ ಆರೋಪ| ಎಸ್ಡಿಪಿಐ, ಪಿಎಫ್ ಐ ಸಂಘಟಕರ ವಿರುದ್ಧ ದೂರು Read More »

ಮಂಗಳೂರಿನಲ್ಲಿ ಕೇರಳ ವಿದ್ಯಾರ್ಥಿಗಳ‌ ಬೀದಿಕಾಳಗ| ಬಿಡಿಸಲು ಹೋದ ಪೊಲೀಸರ ಮೇಲೂ ಹಲ್ಲೆ| ಕಲ್ಲು, ಇಂಟರ್ ಲಾಕ್ ಎಸೆದು ಪುಂಡಾಟ|

ಮಂಗಳೂರು: ನಗರದ ಎರಡು ಕಡೆ ವಿದ್ಯಾರ್ಥಿಗಳ ನಡುವೆ ತೀವ್ರ ಗಲಾಟೆ ನಡೆದಿದ್ದು ಬಿಡಿಸಲು ಹೋದ ಐವರು ಪೊಲೀಸರಿಗೂ ಕಲ್ಲು, ಇಂಟರ್ ಲಾಕ್ ಎಸೆದು ಹಲ್ಲೆ ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಯೇನಪೋಯ ಡಿಗ್ರಿ ಕಾಲೇಜಿನಲ್ಲಿ 3ನೇ ವರ್ಷದ ಬಿಎಸ್ಪಿ ಹಾಸ್ಪಿಟಾಲಿಟಿ ಓದುತ್ತಿರುವ ಕೇರಳ ಮೂಲದ ಆದರ್ಶ ಪ್ರೇಮಕುಮಾರ್ ಎಂಬಾತ ಗುರುವಾರ ಸಂಜೆ ಏಳು ಗಂಟೆ ಸುಮಾರಿಗೆ ಬಾವುಟ ಗುಡ್ಡೆಯ ಲೈಟ್ ಹೌಸ್ ಹಿಲ್ ಅಪಾರ್ಟ್ಮೆಂಟ್ ಬಳಿ ಬಂದಿದ್ದು ಅಲ್ಲಿ ತನ್ನ ಸ್ನೇಹಿತೆ ಸಿನಾನ್ ಜೊತೆ ಮಾತನಾಡುತ್ತಿದ್ದಾಗ

ಮಂಗಳೂರಿನಲ್ಲಿ ಕೇರಳ ವಿದ್ಯಾರ್ಥಿಗಳ‌ ಬೀದಿಕಾಳಗ| ಬಿಡಿಸಲು ಹೋದ ಪೊಲೀಸರ ಮೇಲೂ ಹಲ್ಲೆ| ಕಲ್ಲು, ಇಂಟರ್ ಲಾಕ್ ಎಸೆದು ಪುಂಡಾಟ| Read More »

ಒಮಿಕ್ರಾನ್ ಭೀತಿ: ಮಂಗಳೂರಲ್ಲಿ ವಿದೇಶದಿಂದ ಬಂದ ನಾಲ್ವರ ಪರೀಕ್ಷೆ

ಮಂಗಳೂರು: ದೇಶದಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಳೆದೆರಡು ವಾರಗಳಲ್ಲಿ ಮಂಗಳೂರಿಗೆ ಬಂದಿಳಿದಿದ್ದ ನಾಲ್ವರ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈ ವರದಿ ನೆಗೆಟಿವ್ ಆಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೇಳಿದ್ದಾರೆ. ಇಟಲಿ, ಬೆಲ್ಜಿಯಂ, ಲಂಡನ್, ಪ್ಯಾರಿಸ್‌ನಿಂದ ಕಳೆದ ಎರಡು ವಾರದಲ್ಲಿ ಬಂದ ನಾಲ್ಕು ಮಂದಿಯ ಪರೀಕ್ಷೆ ಮಾಡಲಾಗಿತ್ತು. ಇನ್ನು ಮಂಗಳೂರಲ್ಲಿ ಒಮಿಕ್ರಾನ್ ಹಿನ್ನೆಲೆಯಲ್ಲಿ ಸರ್ವೇಕ್ಷಣೆ ಹೆಚ್ಚಿಸಲಾಗಿದೆ. ಅಂದರೆ ಕೋವಿಡ್ ಪಾಸಿಟಿವ್‌ನ 50 ಪ್ರಕರಣಗಳಲ್ಲಿ ಒಂದು ಮಾದರಿಯನ್ನು ಜೆನೋಮಿಕ್ ಸೀಕ್ವೆನ್ಸ್‌ಗಾಗಿ ಬೆಂಗಳೂರಿನ ನಿಮ್ಹಾನ್ಸ್ ಲ್ಯಾಬ್‌ಗೆ ಕಳುಹಿಸಲಾಗುತ್ತದೆ. ಈ

ಒಮಿಕ್ರಾನ್ ಭೀತಿ: ಮಂಗಳೂರಲ್ಲಿ ವಿದೇಶದಿಂದ ಬಂದ ನಾಲ್ವರ ಪರೀಕ್ಷೆ Read More »

ಮಡಿಕೇರಿ: ಕಾರಿನ ಮೇಲೆ ಕಾಡಾನೆ ದಾಳಿ| ಪ್ರಯಾಣಿಕರು ಅದೃಷ್ಟವಶಾತ್ ಪಾರು|

ಮಡಿಕೇರಿ: ಕುಶಾಲನಗರದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿರುವ ಘಟನೆ ಆನೆಕಾಡು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮೂವರು ಮಕ್ಕಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪ್ರವಾಸಿತಾಣ ನಿಸರ್ಗಧಾಮ ವೀಕ್ಷಣೆಗೆ ಕುಶಾಲನಗರಕ್ಕೆ ತೆರಳಿದ್ದ ಕುಟುಂಬ ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿತ್ತು. ರಾತ್ರಿ ಸುಮಾರು 8 ಗಂಟೆ ಹೊತ್ತಿನಲ್ಲಿ ಕಾಡಾನೆ ದಿಢೀರ್ ಆಗಿ ಹೆದ್ದಾರಿಯಲ್ಲಿ ಪ್ರತ್ಯಕ್ಷವಾಗಿದೆ. ಕಾರನ್ನು ನಿಧಾನವಾಗಿ ಚಲಾಯಿಸಲಾಯಿತ್ತಾದರೂ ಕಾಡಾನೆ ಸಮೀಪಕ್ಕೆ ಬಂದಾಗಿತ್ತು. ಮಡದಿ, ಮಕ್ಕಳು ಆತಂಕದಿಂದ ಜೋರಾಗಿ ಕಿರುಚಿಕೊಳ್ಳಲು ಆರಂಭಿಸಿದರು.

ಮಡಿಕೇರಿ: ಕಾರಿನ ಮೇಲೆ ಕಾಡಾನೆ ದಾಳಿ| ಪ್ರಯಾಣಿಕರು ಅದೃಷ್ಟವಶಾತ್ ಪಾರು| Read More »

ಮಂಗಳೂರು: ವಿಮಾನ ನಿಲ್ದಾಣಕ್ಕೆ ನಾಡಕೋವಿ ತಂದವ ಅಂದರ್

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಕಾರಿನಲ್ಲಿ ಅಕ್ರಮವಾಗಿ ನಾಡಕೋವಿ ಇರಿಸಿಕೊಂಡಿದ್ದ ಯುವಕನನ್ನು ಸಿಐಎಸ್‌ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಬಂಧಿತ ಯುವಕ. ಈತ ವಿದೇಶದಿಂದ ಬಂದಿದ್ದ ತನ್ನ ಸಂಬಂಧಿಕ ವ್ಯಕ್ತಿಯನ್ನು ಕಾರಿನಲ್ಲಿ ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಕಾರನ್ನು ಪಾರ್ಕಿಂಗ್ ಏರಿಯಾದಲ್ಲಿ ಪಾರ್ಕ್ ಮಾಡಿದ್ದಾಗ ಸಿಐಎಸ್‌ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ, ಕಾರಿನ ಮುಂಭಾಗದಲ್ಲಿ ಎರಡು ಕಂಟ್ರಿ ಮೇಡ್ ಪಿಸ್ತೂಲ್ ಪತ್ತೆಯಾಗಿದ್ದು ಈ ಬಗ್ಗೆ ಯುವಕನನ್ನು

ಮಂಗಳೂರು: ವಿಮಾನ ನಿಲ್ದಾಣಕ್ಕೆ ನಾಡಕೋವಿ ತಂದವ ಅಂದರ್ Read More »

ರಾಷ್ಟ್ರೀಯ ಶಿಕ್ಷಣ ನೀತಿ ಶೈಕ್ಷಣಿಕ ವ್ಯವಸ್ಥೆಯ ದುರ್ಬಲೀಕರಣ – ಕೀರ್ತನ್

ಸುಳ್ಯ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿ ಶಿಕ್ಷಣ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಹೋರಾಟ ಮುಂದುವರಿಯಲಿದೆ ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಇವರು ತಿಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರಕಾರ ತರಾತುರಿಯಲ್ಲಿ ಜಾರಿಗೊಳಿಸಲು ಹೊರಟಿದ್ದು ಈ ಬಗ್ಗೆ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಯಾರಿಗೂ ಅರಿವು ಇಲ್ಲದಾಗಿದೆ. ಇದು ಶಿಕ್ಷಣ ವ್ಯವಸ್ಥೆಯನ್ನೇ

ರಾಷ್ಟ್ರೀಯ ಶಿಕ್ಷಣ ನೀತಿ ಶೈಕ್ಷಣಿಕ ವ್ಯವಸ್ಥೆಯ ದುರ್ಬಲೀಕರಣ – ಕೀರ್ತನ್ Read More »

ಕಡಬ: ಪಾಳು ಪ್ರವಾಸಿ ಬಂಗಲೆಯಲ್ಲೊಂದು ಅರೆಬೆಂದ ಮೃತದೇಹ| ಅನುಮಾನ ಹುಟ್ಟಿಸುವಂತಿದೆ ದೃಶ್ಯ|

ಕಡಬ: ನಗರದ ಹೃದಯ ಭಾಗದಲ್ಲಿರುವ ಪಾಳು ಬಿದ್ದ ಪ್ರವಾಸಿ ಬಂಗಲೆಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಅರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಉಳಿಪು ನಿವಾಸಿ ಮೋನೆಚ್ಚನ್‌ ಎಂಬವರದ್ದು ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮೃತ ದೇಹ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಇದನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ . ಮೃತ ದೇಹವೂ ಅರೆ ಬೆಂದ ಸ್ಥಿತಿಯಲ್ಲಿದ್ದೂ, ನಿನ್ನೆ ರಾತ್ರಿ ಮೃತಪಟ್ಟಿರಬಹುದೆಂದು ಸಂಶಯಿಸಲಾಗಿದೆ. ಸ್ಥಳದ ಮಹಜರು ಹಾಗೂ

ಕಡಬ: ಪಾಳು ಪ್ರವಾಸಿ ಬಂಗಲೆಯಲ್ಲೊಂದು ಅರೆಬೆಂದ ಮೃತದೇಹ| ಅನುಮಾನ ಹುಟ್ಟಿಸುವಂತಿದೆ ದೃಶ್ಯ| Read More »

ಹಣ ಕೊಡದ್ದಕ್ಕೆ ವೃದ್ಧೆ ತಾಯಿಗೆ ಹಲ್ಲೆ| ದೋಸೆ ಕಾವಲಿಯಲ್ಲಿ ಹೊಡೆದು ಕೊಲ್ಲುತ್ತೇನೆಂದ ಪಾಪಿ‌ಮಗ| ಆರೋಪಿಯ ಬಂಧನ

ಮಂಗಳೂರು: ದ್ವಿಚಕ್ರ ವಾಹನ ತೆಗೆಯಲು ಹಣ ಕೊಡಲು ನಿರಾಕರಿಸಿದ ತನ್ನ ತಾಯಿಗೆ ಹಲ್ಲೆ ನಡೆಸಿದ ಆರೋಪಿಯನ್ನು ಕದ್ರಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕದ್ರಿ ಹಿಲ್‌ನ ಪದವು ಸ್ಕೂಲ್ ಸಮೀಪದ ನಿವಾಸಿ ರೋಶನ್ ರೋಚ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಗ್ಗೆ ಸುಮಾರು 8 ಗಂಟೆಗೆ ತನ್ನ 66ರ ಹರೆಯದ ತಾಯಿ ಐರಿನ್ ಪ್ಯಾಟ್ರಿಕ್ ರೋಚ್ ಎಂಬವರ ಬಳಿ ಆರೋಪಿಯು ಸ್ಕೂಟರ್ ತೆಗೆಯಲು 75 ಸಾವಿರ ರೂ. ಕೊಡಬೇಕು ಎಂದು ಒತ್ತಾಯಿಸಿದ. ಆದರೆ ಐರಿನ್ ಅವರು ಹಣ

ಹಣ ಕೊಡದ್ದಕ್ಕೆ ವೃದ್ಧೆ ತಾಯಿಗೆ ಹಲ್ಲೆ| ದೋಸೆ ಕಾವಲಿಯಲ್ಲಿ ಹೊಡೆದು ಕೊಲ್ಲುತ್ತೇನೆಂದ ಪಾಪಿ‌ಮಗ| ಆರೋಪಿಯ ಬಂಧನ Read More »

‘ಶಾಂತಿ’ ಕದಡಿದ ಖಲೀಲ್ ಕಟ್ಟೆಕಾರ್ ನ ಕೈಬಿಟ್ಟು ಮರು ಮದುವೆಯಾದ ಆಸಿಯಾ..!| ಕೇರಳದ ಮುಸ್ಲಿಂ ಉದ್ಯಮಿಯ ಜೊತೆ 2ನೇ ವಿವಾಹ..?

ಮಂಗಳೂರು: ಕರಾವಳಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಇಬ್ರಾಹಿಂ ಖಲೀಲ್ ಕಟ್ಟೆಕಾರ್ ಹಾಗೂ ಆಸಿಯಾ ಪ್ರಕರಣವು ತಲಾಕ್ ಮೂಲಕ ತಾರ್ಕಿಕ ಅಂತ್ಯದ ಬೆನ್ನಲ್ಲೇ ಆಸಿಯಾ ಕೇರಳದಲ್ಲಿ ಮುಸ್ಲಿಂ ಉದ್ಯಮಿಯೊಬ್ಬರನ್ನು ವರಿಸಿದ್ದಾಳೆ ಎನ್ನಲಾಗಿದೆ ಸುಳ್ಯದ ಉದ್ಯಮಿ ಕಲೀಲ್ ಕಟ್ಟೆಕಾರ್ ಎಂಬಾತ ಕೇರಳ ಮೂಲದ ಶಾಂತಿ ಜೂಬಿ ಅಲಿಯಾಸ್ ಆಸಿಯಾಳನ್ನು ಲವ್ ಜಿಹಾದ್ ಮಾಡಿ ಮದುವೆಯಾಗಿರುವ ಪ್ರಕರಣ ದಿನಕ್ಕೊಂದು ಹೈಡ್ರಾಮಾವಾಗಿ ಸುದ್ದಿಯಾಗಿತ್ತು. ಈ ಪ್ರಕರಣ ಕರವಾಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆಸಿಯಾ ಖಲೀಲ್ ನನ್ನು ಬಿಟ್ಟರೂ ಮತ್ತೆ ಹಿಂದೂ ಧರ್ಮಕ್ಕೆ ಹೋಗುವುದಿಲ್ಲ

‘ಶಾಂತಿ’ ಕದಡಿದ ಖಲೀಲ್ ಕಟ್ಟೆಕಾರ್ ನ ಕೈಬಿಟ್ಟು ಮರು ಮದುವೆಯಾದ ಆಸಿಯಾ..!| ಕೇರಳದ ಮುಸ್ಲಿಂ ಉದ್ಯಮಿಯ ಜೊತೆ 2ನೇ ವಿವಾಹ..? Read More »