ಕರಾವಳಿ

ಮಂಗಳೂರು: ಹೆತ್ತ ತಂದೆಯಿಂದಲೇ ಪುತ್ರಿಗೆ ಲೈಂಗಿಕ ಕಿರುಕುಳ

ಮಂಗಳೂರು; ತಂದೆಯಿಂದಲೇ ಹೆತ್ತ ಮಗಳ ಮೇಲೆ ಲೈಂಗಿಕ ಕಿರುಕುಳ ನಡೆದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಒಂದನೆ ತರಗತಿ ಕಲಿಯುತ್ತಿರುವ ಮಗಳ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗಳಿಗೆ ಈತ ದೌರ್ಜನ್ಯ ಎಸಗುತ್ತಿರುವುದನ್ನು ವಿರೋಧಿಸಿದ ತನ್ನ ತಾಯಿಗೂ ಹಲ್ಲೆ ನಡೆಸಿದ್ದಾನೆ. ಈತ ಕದ್ರಿ ಪೊಲೀಸ್ ಠಾಣೆ ಯಲ್ಲಿ ರೌಡಿಶೀಟರ್ ಆಗಿದ್ದು ಜೊಮ್ಯಾಟೊದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿ ಈತನನ್ನು ಬಂಧಿಸಿದ್ದಾರೆ.

ಮಂಗಳೂರು: ಹೆತ್ತ ತಂದೆಯಿಂದಲೇ ಪುತ್ರಿಗೆ ಲೈಂಗಿಕ ಕಿರುಕುಳ Read More »

ಬಂಟ್ವಾಳ: ಯುವಕ ನಾಪತ್ತೆಯಾಗುತ್ತಿದ್ದಂತೆ ಕೋಟ್ಯಂತರ ರೂ. ವಂಚನೆ ಬಗ್ಗೆ ಕಾಸರಗೋಡು ಠಾಣೆಯಲ್ಲಿ ದೂರು.!

ಬಂಟ್ವಾಳ: ಕ್ರಿಕೆಟ್ ಆಡವಾಡಲೆಂದು ತೆರಳಿ ವಾಪಾಸ್ ಮನೆಗೆ ಬರದೆ ನಾಪತ್ತೆಯಾಗಿದ್ದಾನೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಯುವಕನ ವಿರುದ್ಧ ಉದ್ಯೋಗದಲ್ಲಿದ್ದ ಸಂಸ್ಥೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಬಗ್ಗೆ ಕಾಸರಗೋಡಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಸಿ.ರೋಡ್ ಕೈಕಂಬ ಸಮೀಪದ ತಾಳಿಪಡ್ಡು ನಿವಾಸಿ ಮುಹಮ್ಮದ್ ಫಾರೂಕ್ ನಾಪತ್ತೆಯಾದ ಯುವಕ. ಈತ ನ.28ರಂದು ಬೆಳಗ್ಗೆ 7:30ಕ್ಕೆ ಕ್ರಿಕೆಟ್ ಆಡಲೆಂದು ಮನೆಯಿಂದ ಹೋದವರು ಅ ಬಳಿಕ ಮನೆಗೆ ವಾಪಸ್ ಬಂದಿಲ್ಲ ಎಂದು ಅವರ

ಬಂಟ್ವಾಳ: ಯುವಕ ನಾಪತ್ತೆಯಾಗುತ್ತಿದ್ದಂತೆ ಕೋಟ್ಯಂತರ ರೂ. ವಂಚನೆ ಬಗ್ಗೆ ಕಾಸರಗೋಡು ಠಾಣೆಯಲ್ಲಿ ದೂರು.! Read More »

ಆಸ್ಪತ್ರೆಯಲ್ಲಿ ಅಶ್ಲೀಲ ವರ್ತನೆ| ಆರೋಪಿ ಡಾ| ರತ್ನಾಕರ್ ಗೆ ಜಾಮೀನು

ಮಂಗಳೂರು: ಕಚೇರಿಯ ಮಹಿಳಾ ಸಿಬಂದಿ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಜತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮ ಅಧಿಕಾರಿ ಡಾ| ರತ್ನಾಕರ್‌ ಅವರಿಗೆ 3ನೇ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ನೀಡಿದ್ದು, ಬಿಡುಗಡೆಯಾಗಿದ್ದಾನೆ. ಮಹಿಳಾ ಸಿಬಂದಿಗಳ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಫೋಟೊ ಹಾಗೂ ವೀಡಿಯೋ ತುಣುಕು ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸುಮಾರು 2-3 ತಿಂಗಳ ಹಿಂದೆ ಈ ಘಟನೆ ಸಂಭವಿಸಿದ್ದು, ತಡವಾಗಿ

ಆಸ್ಪತ್ರೆಯಲ್ಲಿ ಅಶ್ಲೀಲ ವರ್ತನೆ| ಆರೋಪಿ ಡಾ| ರತ್ನಾಕರ್ ಗೆ ಜಾಮೀನು Read More »

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತ – 12 ವರ್ಷದ ಬಾಲಕ ದುರ್ಮರಣ

ಉಪ್ಪಿನಂಗಡಿ: ರಿಕ್ಷಾ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಇದೀಗ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಠ ಮಸೀದಿ ಬಳಿ ಲಾರಿ ಮತ್ತು ರಿಕ್ಷಾ ಢಿಕ್ಕಿ ಹೊಡೆದಿದೆ. ಈ ವೇಳೆ ರಿಕ್ಷಾದಲ್ಲಿದ್ದ 12 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತ – 12 ವರ್ಷದ ಬಾಲಕ ದುರ್ಮರಣ Read More »

ಮಂಗಳೂರು: ಆರೋಗ್ಯ ಸಿಬ್ಬಂದಿಯ ಸರಸದಾಟ| 10 ಮಂದಿ ಮಹಿಳೆಯರ ವಿಚಾರಣೆ

ಮಂಗಳೂರು: ದ.ಕ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ರತ್ನಾಕರ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಸೇರಿದಂತೆ 10 ಮಂದಿ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆರೋಗ್ಯ ಇಲಾಖೆಯಾ ಅಧಿಕಾರಿಯಾಗಿದ್ದ ಆರೋಪಿ ಡಾ| ರತ್ನಾಕರ್ ಮತ್ತು ಆತನ ಮೊಬೈಲ್ ವಶಪಡಿಸಿಕೊಂಡಿದ ಪೊಲೀಸರು ಅಳವಾದ ತನಿಖೆ ಕೈಗೊಂಡಿದ್ದರು. ರತ್ನಾಕರ್ ನನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದುಕೊಂಡಿದ್ದು ಎರಡು ದಿನಗಳ ಕಸ್ಟಡಿ ಅವಧಿ ಸೋಮವಾರ ಪೂರ್ಣಗೊಳ್ಳುವ ಹಿನ್ನಲೆಯಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಮಂಗಳೂರು: ಆರೋಗ್ಯ ಸಿಬ್ಬಂದಿಯ ಸರಸದಾಟ| 10 ಮಂದಿ ಮಹಿಳೆಯರ ವಿಚಾರಣೆ Read More »

ಇಂದಿನಿಂದ ಧರ್ಮಸ್ಥಳದಲ್ಲಿ ಲಕ್ಷದೀಪ ಸಂಭ್ರಮ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ನ. 29 (ಸೋಮವಾರ) ರಿಂದ ಡಿ. 4ರ ವರೆಗೆ ನೆರವೇರಲಿದೆ. ಈ ಪ್ರಯುಕ್ತ ದೇವಸ್ಥಾನ, ಬೀಡು, ಮುಖ್ಯಧ್ವಾರ, ವಸತಿಗೃಹ, ಉದ್ಯಾನವನ, ಸಭಾಂಗಣ ಸಹಿತ ಕ್ಷೇತ್ರವನ್ನು ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಲಾಗಿದೆ. ಡಿ. 2ರಂದು ಗುರುವಾರ ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಉದ್ಘಾಟಿಸುವರು. ನ. 29ರಿಂದ ಹೊಸಕಟ್ಟೆ ಉತ್ಸವ, ಕೆರೆಕಟ್ಟೆ ಉತ್ಸವ,

ಇಂದಿನಿಂದ ಧರ್ಮಸ್ಥಳದಲ್ಲಿ ಲಕ್ಷದೀಪ ಸಂಭ್ರಮ Read More »

ಪುತ್ತೂರು: ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ| ಅರುಣ್ ಪುತ್ತಿಲ, ಜಗದೀಶ್ ಕಾರಂತ್ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು|

ಪುತ್ತೂರು: ನಗರದ ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ವಿವಾದ ತಾರಕಕ್ಕೇರಿದ್ದು ಇದೀಗ ಪ್ರಮುಖ ಹಿಂದೂ ಸಂಘಟನೆಗಳ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣೆ ವೇದಿಕೆ ಆಯೋಜಕರ ಮೇಲೆ ಐಪಿಸಿ ಸಕ್ಷನ್ 153 ಎ ಯಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಕೊಂಬೆಟ್ಟು ಜ್ಯೂ. ಕಾಲೇಜ್ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆಯಲು ಅರುಣ್ ಕುಮಾರ್ ಪುತ್ತಿಲ ಹಾಗೂ ಚಿನ್ಮಯ ಈಶ್ವರಮಂಗಳ ನೇರ ಹೊಣೆ ಎಂದು ಕ್ಯಾಂಪಸ್ ಫ್ರಂಟ್ ಹಾಗೂ ಎಸ್

ಪುತ್ತೂರು: ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ| ಅರುಣ್ ಪುತ್ತಿಲ, ಜಗದೀಶ್ ಕಾರಂತ್ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು| Read More »

ಉಪ್ಪಿನಂಗಡಿ: ಕರ್ತವ್ಯನಿರತ ಮೆಸ್ಕಾಂ ಸಿಬ್ಬಂದಿ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಮತ್ತು ಸದಸ್ಯನಿಂದ ಹಲ್ಲೆ

ನೆಲ್ಯಾಡಿ : ಉಪ್ಪಿನಂಗಡಿ ಬಳಿ ವಿದ್ಯುತ್ ಸಂಪರ್ಕ ತನಿಖೆ ನಡೆಸಲು ತೆರಳಿದ ಸಂದರ್ಭದಲ್ಲಿ ಕರ್ತವ್ಯ ನಿರತ ಮೆಸ್ಕಾಂ ಜೆಇಇ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಹಾಗೂ ಸದಸ್ಯ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೆಲ್ಯಾಡಿ ಮೆಸ್ಕಾಂ ಶಾಖಾ ಇಂಜಿನಿಯರ್ ರಮೇಶ್.ಬಿ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಕಾರ್ತಿಕೇಯನ್ ಹಾಗೂ ಎಂ.ಕೆ ಪೌಲೋಸ್ ಹಲ್ಲೆ ನಡೆಸಿದವರು ಎನ್ನಲಾಗಿದೆ. ಗುಂಡ್ಯ ಎಂಬಲ್ಲಿ ವಿದ್ಯುತ್ ಸಂಪರ್ಕ ಪರಿಶೀಲನೆ ವೇಳೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ

ಉಪ್ಪಿನಂಗಡಿ: ಕರ್ತವ್ಯನಿರತ ಮೆಸ್ಕಾಂ ಸಿಬ್ಬಂದಿ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಮತ್ತು ಸದಸ್ಯನಿಂದ ಹಲ್ಲೆ Read More »

ಹೂವು ಕೊಯ್ಯಲು ಹೋದ ಯುವತಿ ಕೆರೆಗೆ ಬಿದ್ದು ಸಾವು

ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ. ರಶ್ಮಿತ ಬೆಳಿಗ್ಗೆ ದೇವರಿಗೆ ಪೂಜೆ ಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೂವು ಕೊಯ್ಯಲು ಹೋದ ಯುವತಿ ಕೆರೆಗೆ ಬಿದ್ದು ಸಾವು Read More »

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ : ನಾಲ್ವರನ್ನು ಪೊಲೀಸ್ ವಶಕ್ಕೆ ಪಡೆದ ಆರೋಪ| ಠಾಣೆಯೆದುರು ಜಾಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು|

ಪುತ್ತೂರು: ನಗರದ ಕೊಂಬೆಟ್ಟು ಸರ್ಕಾರಿ ಜ್ಯೂನಿಯರ್ ಕಾಲೇಜ್ ನಲ್ಲಿ ಭಿನ್ನ ಕೋಮಿಗೆ ಸೇರಿದ ಎರಡು ವಿದ್ಯಾರ್ಥಿಗಳ ತಂಡದ ನಡುವೆ ಎರಡು ಬಾರಿ ಹೊಡೆದಾಟ ಹಾಗೂ ಒಂದು ಬಾರಿ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಕೋಮಿಗೆ ಸೇರಿದ ನಾಲ್ವರು ವಿದ್ಯಾರ್ಥಿಗಳನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನ 26 ರಂದು ಸಂಜೆ ನಡೆದಿದೆ. ಹಿಂದೂ ವಿದ್ಯಾರ್ಥಿನಿಯ ಜೊತೆ ಅನ್ಯ ಧರ್ಮೀಯ

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ : ನಾಲ್ವರನ್ನು ಪೊಲೀಸ್ ವಶಕ್ಕೆ ಪಡೆದ ಆರೋಪ| ಠಾಣೆಯೆದುರು ಜಾಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು| Read More »