ಕರಾವಳಿ

ಬೆಳ್ತಂಗಡಿ: ಭೀಕರ ಅಪಘಾತಕ್ಕೆ ಯುವಕ ಬಲಿ| ಯಮ ಸ್ವರೂಪಿಯಾದ ಕಾರು ಬೈಕ್ ಗೆ ಢಿಕ್ಕಿ|

ಬೆಳ್ತಂಗಡಿಯ ಸಂತೆಕಟ್ಟೆ ಬಳಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರಿನ ಬಂಗೇರ ಕಟ್ಟೆ ನಿವಾಸಿ ಯತಿನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಇನ್ನೋರ್ವ ಸವಾರ ಪ್ರದೀಪ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಯತಿನ್ ಗುರುವಾಯನಕೆರೆಯಲ್ಲಿ ವೆಲ್ಡಿಂಗ್ ಶಾಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಭೀಕರ ಅಪಘಾತಕ್ಕೆ ಯುವಕ ಬಲಿ| ಯಮ ಸ್ವರೂಪಿಯಾದ ಕಾರು ಬೈಕ್ ಗೆ ಢಿಕ್ಕಿ| Read More »

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ| ಆರೋಪಿ ಬಂಧನ

ಬೆಳ್ತಂಗಡಿ: ನಾಲ್ಕನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಆರೋಪಿ ಜಯಾನಂದ ಎಂಬಾತ ಬಾಲಕಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದೊಯ್ದು ಬೆದರಿಸಿ ಅತ್ಯಾಚಾರವೆಸಗಿದ್ದು, ಬಳಿಕ ಬಾಲಕಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ಪೋಷಕರು ಅರೋಪಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಜಯಾನಂದ ಎಂಬಾತನನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ| ಆರೋಪಿ ಬಂಧನ Read More »

ಉಪ್ಪಿನಂಗಡಿ: ಒಂಟಿ ಮಹಿಳೆ‌ಯ ಮನೆಗೆ ನುಗ್ಗಿ ಹಲ್ಲೆ, ದೂರು

ಬಂಟ್ವಾಳ: ಹಾಡುಹಗಲೇ ಮುಸ್ಲಿಂ ಮಹಿಳೆಯೊಬ್ಬರ ಮನೆಯೊಳಗೆ ನುಗ್ಗಿ ಆಕೆಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ನಡೆದಿದೆ. ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆ ಶಹನಾಜ್ ಅಬ್ದುಲ್ ರಹಿಮಾನ್ ಎಂಬವರ ಜೊತೆ ಮಾತನಾಡುತ್ತಿದ್ದ ವೇಳೆ ಇಬ್ಬರು ಮಹಿಳೆ ಮತ್ತು ಕೆಲವು ಯುವಕರು ಸೇರಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳಾದ ಹಸೀನಾ ಹಾಗೂ ಅಪ್ರೀದ್ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ಪೈಪ್ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಮಹಿಳೆಯ

ಉಪ್ಪಿನಂಗಡಿ: ಒಂಟಿ ಮಹಿಳೆ‌ಯ ಮನೆಗೆ ನುಗ್ಗಿ ಹಲ್ಲೆ, ದೂರು Read More »

ಸುಳ್ಯ: ಹೋರಿ ತಿವಿದು ವ್ಯಕ್ತಿ ಸಾವು

ಸುಳ್ಯ: ಹೋರಿಯೊಂದು ತಿವಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕದಲ್ಲಿ ನಡೆದಿದೆ.ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ ಎಂಬವರು ಮೃತಪಟ್ಟ ವ್ಯಕ್ತಿ. ತಾನು ಸಾಕಿರುವ ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು ಸಂಜೆ ವೇಳೆಗೆ ಹೋರಿಯನ್ನು ಹಟ್ಟಿಗೆ ತರಲು ಕಿಟ್ಟಣ್ಣ ಗೌಡರು ತೆರಳಿದ್ದರು ಎನ್ನಲಾಗಿದೆ. ಅಲ್ಲಿ ಹೋರಿ ತಿವಿದು ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಆ ದಾರಿಯಲ್ಲಿ ಬಂದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಅಲ್ಲೇ ಪಕ್ಕದಲ್ಲಿ ಹೋರಿ ಕಟ್ಟಿ ಹಾಕಿರುವುದನ್ನು ನೋಡಿದ್ದಾರೆ.

ಸುಳ್ಯ: ಹೋರಿ ತಿವಿದು ವ್ಯಕ್ತಿ ಸಾವು Read More »

ಮಂಗಳೂರು; ಚಪ್ಪಲಿ‌ ಅಂಗಡಿ ಮಾಲೀಕನಿಂದ ಗ್ರಾಹಕಿ ಜೊತೆ ಅಸಭ್ಯ ವರ್ತನೆ| ಆರೋಪಿಯ ಬಂಧನ|

ಮಂಗಳೂರು: ಚಪ್ಪಲಿ ಖರೀದಿಗೆ ಅಂಗಡಿಗೆ ಬಂದ ಮಹಿಳೆಯ ಮೈಮೇಲೆ ಕೈ ಹಾಕಿ‌ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಅಂಗಡಿಯ ಮಾಲೀಕನನ್ನು ಬಂಧಿಸಿರುವ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ಎಂಬಲ್ಲಿರುವ ಚಪ್ಪಲಿ ಅಂಗಡಿಯೊಂದಕ್ಕೆ ಗ್ರಾಹಕಿಯೊಬ್ಬರು ಚಪ್ಪಲಿ ಖರೀದಿಗಾಗಿ ತೆರಳಿದ್ದರು. ಈ ವೇಳೆ ಅಂಗಡಿಯಲ್ಲಿದ್ದ ಅಂಗಡಿ ಮಾಲಿಕ ಗ್ರಾಹಕಿಗೆ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು, ಗ್ರಾಹಕಿಗೆ ಆತ ತೋರಿಸಿದ ಚಪ್ಪಲಿ ಇಷ್ಟವಾಗಿರಲಿಲ್ಲ‌. ಆದರೆ ಅಂಗಡಿ ಮಾಲಕ

ಮಂಗಳೂರು; ಚಪ್ಪಲಿ‌ ಅಂಗಡಿ ಮಾಲೀಕನಿಂದ ಗ್ರಾಹಕಿ ಜೊತೆ ಅಸಭ್ಯ ವರ್ತನೆ| ಆರೋಪಿಯ ಬಂಧನ| Read More »

ಮಂಗಳೂರು: ತಡೆಗೋಡೆ ಕುಸಿದು ಮಣ್ಣಿನಡಿ ಹೂತು ಹೋದ ಮಹಿಳೆ ಗಂಭೀರ, ಮಗು ಪಾರು

ಮಂಗಳೂರು: ನಗರದ ಹೊರವಲಯದ ಬೊಂದೇಲ್ ಕೃಷ್ಣ ನಗರದಲ್ಲಿ ತಡೆಗೋಡೆ ಕುಸಿದು ಮಗು ಹಾಗೂ ಮಹಿಳೆ ಮಣ್ಣಿನಡಿಗೆ ಸಿಲುಕಿದ ಘಟನೆ ಸಂಭವಿಸಿದೆ. ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಕೃಷ್ಣನಗರದಲ್ಲಿ ಮನಪಾದಿಂದ ನಡೆಯುತ್ತಿದ್ದ ಜಲ ಸಿರಿ ಯೋಜನೆ ಕಾಮಗಾರಿ ವೇಳೆ ತಡೆಗೋಡೆ ಕುಸಿದು ಬಿದ್ದಿದೆ. ಪರಿಣಾಮ ಉತ್ತರ ಕನ್ನಡ ಮೂಲದ ಕಾರ್ಮಿಕ ಮಹಿಳೆ ಹಾಗೂ ಮಗು ಮಣ್ಣಿನಡಿ ಹೂತು ಹೋಗಿದ್ದರು. ಸ್ಥಳದಲ್ಲಿದ್ದ ಜೆಸಿಬಿ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಮಣ್ಣಿನಡಿಯಿಂದ

ಮಂಗಳೂರು: ತಡೆಗೋಡೆ ಕುಸಿದು ಮಣ್ಣಿನಡಿ ಹೂತು ಹೋದ ಮಹಿಳೆ ಗಂಭೀರ, ಮಗು ಪಾರು Read More »

ಮತಾಂತರ ಯತ್ನವೇ ಒಂದೇ ಕುಟುಂಬದ ಸಾವಿಗೆ ಕಾರಣ!!, ಪೊಲೀಸ್ ಕಮಿಷನರ್ ಆಘಾತಕಾರಿ ಮಾಹಿತಿ|

ಮಂಗಳೂರು: ಜಿಲ್ಲೆಯನ್ನು ಬೆಚ್ಚಿ ಬಿಳಿಸಿದ್ದ ಒಂದು ಇಡೀ ಕುಟುಂಬದ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರವೇ ಪ್ರಮುಖ ಕಾರಣ ಎಂದು ದೃಢಪಟ್ಟಿದೆ. ಈ ಪ್ರಕರಣದಲ್ಲಿ ಬಂಧತಳಾಗಿರುವ ಆರೋಪಿ ನೂರ್‌ಜಹಾನ್‌ ಎಂಬಾಕೆ ಮತಾಂತರಕ್ಕೆ ಯತ್ನಿಸಿದ್ದು ಸಾಕ್ಷಿಗಳಿಂದ ಸಾಭೀತಾಗಿದೆ ಎಂದು ಪೊಲೀಸ್‌ ಕಮೀಷನರ್‌ ಶಶಿಕುಮಾರ್ ತಿಳಿಸಿದ್ದಾರೆ. ಡಿಸೆಂಬರ್ 8 ರಂದು ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದರು. ಮೃತ ನಾಗೇಶ್ ಪತ್ನಿ ವಿಜಯಲಕ್ಷ್ಮೀಯನ್ನು ಮದುವೆ ಬ್ರೋಕರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನೂರ್‌ಜಹಾನ್‌ ಡೈವೋರ್ಸ್‌ ನೀಡು, ಮುಸ್ಲಿಂ ಹುಡುಗನೊಂದಿಗೆ ನಿನ್ನ ವಿವಾಹ ಮಾಡಿಸುತ್ತೇನೆ ಎಂದು ಹೇಳಿದ್ದಳು. ವಿಜಯಲಕ್ಷ್ಮೀ

ಮತಾಂತರ ಯತ್ನವೇ ಒಂದೇ ಕುಟುಂಬದ ಸಾವಿಗೆ ಕಾರಣ!!, ಪೊಲೀಸ್ ಕಮಿಷನರ್ ಆಘಾತಕಾರಿ ಮಾಹಿತಿ| Read More »

ಮಂಗಳೂರು: ಬಸ್ಸ್ ನಲ್ಲಿ ಅನ್ಯಕೋಮಿನ ಜೋಡಿಯಿಂದ “ಪ್ರೇಮಸಲ್ಲಾಪ” | ಸಾರ್ವಜನಿಕರಿಂದ ಬುದ್ದಿಮಾತು

ಉಡುಪಿ :ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಹೋಗುತ್ತಿದ್ದ ಯುವಜೋಡಿಯೊಂದು ಮೈಮರೆತು ಸರಸ‌ ಸಲ್ಲಾಪದಲ್ಲಿ ತೊಡಗಿದ ಘಟನೆ ನಡೆದಿದೆ. ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯನ್ನು ಉಡುಪಿಯಲ್ಲಿ ಸಾರ್ವಜನಿಕರು ಹಿಡಿದು ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗುತ್ತಿದೆ. ಇಂದು ಬೆಳಗ್ಗೆ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಸರಸದಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದು ಉಡುಪಿಯಲ್ಲಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು.

ಮಂಗಳೂರು: ಬಸ್ಸ್ ನಲ್ಲಿ ಅನ್ಯಕೋಮಿನ ಜೋಡಿಯಿಂದ “ಪ್ರೇಮಸಲ್ಲಾಪ” | ಸಾರ್ವಜನಿಕರಿಂದ ಬುದ್ದಿಮಾತು Read More »

ಕುಕ್ಕೆ ಚಂಪಾಷಷ್ಟಿ ಮಹೋತ್ಸವ ‌ನೇರಪ್ರಸಾರ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವ ಅಂಗವಾಗಿ ಪಂಚಮಿ ರಥೋತ್ಸವ ನೇರಪ್ರಸಾರ ಇಲ್ಲಿ ಕ್ಲಿಕ್ ಮಾಡಿ

ಕುಕ್ಕೆ ಚಂಪಾಷಷ್ಟಿ ಮಹೋತ್ಸವ ‌ನೇರಪ್ರಸಾರ Read More »

ಕುಕ್ಕೆಯಲ್ಲಿಂದು‌ ಪಂಚಮಿ ರಥೋತ್ಸವ ಸಂಭ್ರಮ| ನಾಳೆ ಬ್ರಹ್ಮರಥದಲ್ಲಿ ವಿರಾಜಿಸಲಿದ್ದಾನೆ ಸುಬ್ರಹ್ಮಣ್ಯ| ಭಕ್ತಿ ಪರಾಕಾಷ್ಠೆಯಲ್ಲಿ ಭಕ್ತಗಣ|

ಕುಕ್ಕೆ ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ದ ನಾಗಸನ್ನಿದಿ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ದ ಪಂಚಮಿಯ ದಿನವಾದ ಇಂದು(ಡಿ.8)ತೈಲಾಭ್ಯಂಜನ ಮತ್ತು ಪಂಚಮಿ ರಥೋತ್ಸವ ನೆರವೇರಲಿದೆ. ರಾತ್ರಿ ವಿಶೇಷ ಪಾಲಕಿ ಉತ್ಸವ ಮತ್ತು ಬಂಡಿ ಉತ್ಸವ ದೇವಳದ ಹೊರಾಂಗಣದಲ್ಲಿ ಜರುಗಲಿದೆ. ರಾತ್ರಿ ಪಂಚಮಿ ರಥೋತ್ಸವದ ಬಳಿಕ ಸವಾರಿ ಕಟ್ಟೆಯಲ್ಲಿ ಕಟ್ಟೆ ಪೂಜೆ ಮತ್ತು ಆಕರ್ಷಣೀಯ “ಕುಕ್ಕೆಬೆಡಿ” ಪ್ರದರ್ಶಿತವಾಗಲಿದೆ. ನಾಳೆ (ಡಿ.9) ಪ್ರಾತಃಕಾಲ 6.58ರ ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ವೈಭವದ ಚಂಪಾಷಷ್ಟಿ ಮಹಾರಥೋತ್ಸವ ನೆರವೇರಲಿದ್ದು,

ಕುಕ್ಕೆಯಲ್ಲಿಂದು‌ ಪಂಚಮಿ ರಥೋತ್ಸವ ಸಂಭ್ರಮ| ನಾಳೆ ಬ್ರಹ್ಮರಥದಲ್ಲಿ ವಿರಾಜಿಸಲಿದ್ದಾನೆ ಸುಬ್ರಹ್ಮಣ್ಯ| ಭಕ್ತಿ ಪರಾಕಾಷ್ಠೆಯಲ್ಲಿ ಭಕ್ತಗಣ| Read More »