ಬೆಳ್ತಂಗಡಿ: ಭೀಕರ ಅಪಘಾತಕ್ಕೆ ಯುವಕ ಬಲಿ| ಯಮ ಸ್ವರೂಪಿಯಾದ ಕಾರು ಬೈಕ್ ಗೆ ಢಿಕ್ಕಿ|
ಬೆಳ್ತಂಗಡಿಯ ಸಂತೆಕಟ್ಟೆ ಬಳಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರಿನ ಬಂಗೇರ ಕಟ್ಟೆ ನಿವಾಸಿ ಯತಿನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಇನ್ನೋರ್ವ ಸವಾರ ಪ್ರದೀಪ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಯತಿನ್ ಗುರುವಾಯನಕೆರೆಯಲ್ಲಿ ವೆಲ್ಡಿಂಗ್ ಶಾಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಬೆಳ್ತಂಗಡಿ: ಭೀಕರ ಅಪಘಾತಕ್ಕೆ ಯುವಕ ಬಲಿ| ಯಮ ಸ್ವರೂಪಿಯಾದ ಕಾರು ಬೈಕ್ ಗೆ ಢಿಕ್ಕಿ| Read More »










