ಕರಾವಳಿ

ಆರೋಗ್ಯ‌ ಸಿಬ್ಬಂದಿಯ ಕಾಮಪುರಾಣ| ಆರೋಪಿಯ ಮತ್ತೊಂದು ಮುಖವಾಡ ಬಯಲು|

ಮಂಗಳೂರು: ಆರೋಗ್ಯ ಇಲಾಖೆ ಅಧಿಕಾರಿಯ ಕಾಮಪುರಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೈದ್ಯ ಡಾ. ರತ್ನಾಕರ್​ನ ಮತ್ತೊಂದು ಮುಖವಾಡ ಇದೀಗ ಬಯಲಾಗಿದೆ. ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್ ವಿರುದ್ಧ ಮಹಿಳಾ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ ಭ್ರಷ್ಟಾಚಾರದ ಆರೋಪ ಸಹ ಮಾಡಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಜಿಲ್ಲಾ‌ ಕಾರ್ಯಕ್ರಮದ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ರತ್ನಾಕರ್, ಕಾರ್ಯಕ್ರಮ ಆಯೋಜನೆ ಹೆಸರಿನಲ್ಲಿಯೂ […]

ಆರೋಗ್ಯ‌ ಸಿಬ್ಬಂದಿಯ ಕಾಮಪುರಾಣ| ಆರೋಪಿಯ ಮತ್ತೊಂದು ಮುಖವಾಡ ಬಯಲು| Read More »

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನ ಕಾಮಪುರಾಣ| ‘ಆತ ಆಸ್ಪತ್ರೆ ಸಿಬ್ಬಂದಿಯಲ್ಲ..!’ಸ್ಪಷ್ಟನೆ ನೀಡಿದ ಆಸ್ಪತ್ರೆ ಅಧೀಕ್ಷಕರು

ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ಕಾಮಪುರಾಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಅಧೀಕ್ಷಕರು ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊರ್ವ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತಂತೆ ಮಾಧ್ಯಮಗಳು ವರದಿ‌ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ‌ ಅದೀಕ್ಷಕರು ಸ್ಪಷ್ಟನೆ ನೀಡಿದ್ದಾರೆ. ಇಂದು ಮಾದ್ಯಮಗಳಲ್ಲಿ ಡಾ. ರತ್ನಾಕರ್, ಜಿಲ್ಲಾ ಕಾರ್ಯಕ್ರಮಾಧಿಕಾರಿ ಇವರ ಕುರಿತು ವರದಿಗಳು ಪ್ರಚಾರವಾಗುತ್ತಿದ್ದು, ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳು,

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನ ಕಾಮಪುರಾಣ| ‘ಆತ ಆಸ್ಪತ್ರೆ ಸಿಬ್ಬಂದಿಯಲ್ಲ..!’ಸ್ಪಷ್ಟನೆ ನೀಡಿದ ಆಸ್ಪತ್ರೆ ಅಧೀಕ್ಷಕರು Read More »

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲೊಬ್ಬ ರಸಿಕ ಡಾಕ್ಟರ್| ಸಹೋದ್ಯೋಗಿಗಳನ್ನೇ ಸರಸಕ್ಕೆ ಕರೆಯುತ್ತಿದ್ದವ ಈಗ ಸಸ್ಪೆಂಡ್|

ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಕುಷ್ಠ ರೋಗ ವಿಭಾಗದ ವೈದ್ಯನೊಬ್ಬ ಸಹೋದ್ಯೋಗಿ ಯುವತಿಯರ ಜೊತೆ ಚಕ್ಕಂದ ಆಡುತ್ತಾ ಲೈಂಗಿಕ ಕಿರುಕುಳ ನೀಡುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ವೈದ್ಯನನ್ನು ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಸಸ್ಪೆಂಡ್ ಮಾಡಿದ್ದಾರೆ. ವೆನ್ಲಾಕ್ ಕುಷ್ಠ ರೋಗ ವಿಭಾಗದ ವೈದ್ಯ ಡಾ. ರತ್ನಾಕರ್ ಕರ್ತವ್ಯದಿಂದ ಅಮಾನತಾಗಿರುವ ವೈದ್ಯಾಧಿಕಾರಿ.‌ ಕಳೆದ ಹಲವು ಸಮಯದಿಂದ ಈತ ತನ್ನ ವಿಭಾಗದ ಕೆಲವು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ವಿಚಾರ ಅಲ್ಲಿನ ಇತರ ಸಿಬಂದಿಗೂ ತಿಳಿದಿತ್ತು.‌ ಆತನ ಜೊತೆ

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲೊಬ್ಬ ರಸಿಕ ಡಾಕ್ಟರ್| ಸಹೋದ್ಯೋಗಿಗಳನ್ನೇ ಸರಸಕ್ಕೆ ಕರೆಯುತ್ತಿದ್ದವ ಈಗ ಸಸ್ಪೆಂಡ್| Read More »

ಕುಕ್ಕೆ: ಡಿ.1ರಿಂದ ಜಾತ್ರಾರಂಭ| ಡಿ.3 ಲಕ್ಷ ದೀಪೋತ್ಸವ, ಡಿ.9ರಂದು ವೈಭವದ ಚಂಪಾಷಷ್ಠಿ ಮಹೋತ್ಸವ|

ಮಂಗಳೂರು: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ವೈಭವಕ್ಕೆ ದಿನಗಣನೆ ಆರಂಭವಾಗಿದೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಮಹೋತ್ಸವ ಆರಂಭವಾದರೆ, ಡಿ.15 ಕೊಪ್ಪರಿಗೆ ಇಳಿಸುವುದರ ಮೂಲಕ ಜಾತ್ರಾ ಉತ್ಸವ ಸಮಾಪನಗೊಳ್ಳಲಿದೆ. ಡಿ.9ರಂದು ಚಂಪಾಷಷ್ಠಿಯ ವೈಭವದ ಬ್ರಹ್ಮ ರಥೋತ್ಸವ ಕ್ಷೇತ್ರದಲ್ಲಿ ಜರುಗಲಿದೆ. ಉದ್ಯಮಿ ದಿ.ಮುತ್ತಪ್ಪ ರೈ ಸೇವಾ ರೂಪದಲ್ಲಿ ನೀಡಿದ ಬ್ರಹ್ಮರಥದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಾರೂಢನಾಗಿ ಲಕ್ಷಾಂತರ ಭಕ್ತರಿಗೆ ದರ್ಶನ ಭಾಗ್ಯ ನೀಡಲಿದೆ. ಚಂಪಾಷಷ್ಠಿಯ ಈ ವೈಭವ ಕಾಣಲು,

ಕುಕ್ಕೆ: ಡಿ.1ರಿಂದ ಜಾತ್ರಾರಂಭ| ಡಿ.3 ಲಕ್ಷ ದೀಪೋತ್ಸವ, ಡಿ.9ರಂದು ವೈಭವದ ಚಂಪಾಷಷ್ಠಿ ಮಹೋತ್ಸವ| Read More »

ದೇವಸ್ಥಾನದ ಭಗವಧ್ವಜ ತೆಗೆಸಲು ಎಸ್ಐ ಸೂಚನೆ| ಖಡಕ್ ವಾರ್ನಿಂಗ್ ನೀಡಿದ ಹಿಂಜಾವೇ|

ಮಂಗಳೂರು: ‘ಕಾರಿಂಜ ಕ್ಷೇತ್ರದ ಸಮೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಜಾಗರಣ ವೇದಿಕೆ ಮತ್ತು ಜಿಲ್ಲಾಧಿಕಾರಿ ನಡುವಿನ ಜಟಾಪಟಿ ಮುಂದುವರೆದಿದೆ. ಈ ವಿಚಾರವಾಗಿ ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಜಗದೀಶ್‌ ಕಾರಂತ ವಿರುದ್ಧ ದೂರು ದಾಖಲಿಸುವ ಮೂಲಕ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ, ಹಿಂದೂಗಳ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡಿದ್ದಾರೆ’ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಹೇಳಿದರು. ಕಾರಿಂಜ ಕ್ಷೇತ್ರದಲ್ಲಿ ಹಾಕಲಾದ ಭಗವಧ್ವಜವನ್ನು ತೆಗೆಯಬೇಕು ಎಂದು ಪುಂಜಾಲಕಟ್ಟೆ ಠಾಣೆಯ

ದೇವಸ್ಥಾನದ ಭಗವಧ್ವಜ ತೆಗೆಸಲು ಎಸ್ಐ ಸೂಚನೆ| ಖಡಕ್ ವಾರ್ನಿಂಗ್ ನೀಡಿದ ಹಿಂಜಾವೇ| Read More »

ಮೌಡ್ಯಕ್ಕೆ ಬಲಿಯಾಯ್ತು ‘ಶ್ರೀತಾಳೆ’ | ಸತತ ಪ್ರಯತ್ನದ ಬಳಿಕವೂ ಮರಕ್ಕೆ ಬಿತ್ತು ಕೊಡಲಿಯೇಟು|

ಉಡುಪಿ: ಪರಿಸರ ಪ್ರೇಮಿಗಳ ಅವಿರತ ಪ್ರಯತ್ನಗಳ ಹೊರತಾಗಿಯೂ ಬೆಳ್ತಂಗಡಿ ತಾಲೂಕು ವೇಣೂರು ಬಳಿಯ ಕರಿಮಣೇಲು ಗ್ರಾಮದಲ್ಲಿದ್ದ ಶ್ರೀತಾಳೆಮರ ಕೊನೆಗೂ ಮೌಢ್ಯಕ್ಕೆ ಬಲಿಯಾಗಿದೆ ಎಂದು ಮರವನ್ನು ಉಳಿಸಲು ಹೋರಾಡಿದ ಉಡುಪಿಯ ಪ್ರೊ.ಎಸ್.ಎ.ಕೃಷ್ಣಯ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಗಣೇಶ್‌ ರಾಜ್ ಸರಳೇಬೆಟ್ಟು ತಿಳಿಸಿದ್ದಾರೆ. ತಮ್ಮ ಸತತ ಪ್ರಯತ್ನದಿಂದ ಉಡುಪಿ ಸಮೀಪದ ಆತ್ರಾಡಿಯಲ್ಲಿದ್ದ ಶ್ರೀತಾಳೆ ಮರವನ್ನು ಮನೆಯವರ ಜೊತೆ ಮಾತನಾಡಿ ಉಳಿಸುವಲ್ಲಿ ನಾವು ಯಶಸ್ವಿಯಾಗಿದ್ದೆವು. ಆ ಮನೆಯ ಯಜಮಾನರು ಇಂದಿಗೂ ಜೀವಂತವಾಗಿದ್ದಾರೆ. ಕರಿಮಣೇಲು ಮನೆಯವರಿಗೂ ಮನವರಿಕೆ ಮಾಡುವ ಎಲ್ಲಾ ಪ್ರಯತ್ನಗಳನ್ನು ನಾವು

ಮೌಡ್ಯಕ್ಕೆ ಬಲಿಯಾಯ್ತು ‘ಶ್ರೀತಾಳೆ’ | ಸತತ ಪ್ರಯತ್ನದ ಬಳಿಕವೂ ಮರಕ್ಕೆ ಬಿತ್ತು ಕೊಡಲಿಯೇಟು| Read More »

ಕೃಷಿಭೂಮಿಯನ್ನು ನೋಡಲು ಬಂದ ಯಜಮಾನನನ್ನು ಭೂಮಿಯೊಳಗೆ ಹೂತಿಟ್ಟ ಕಿರಾತಕರು| ಆಸ್ತಿ ಆಸೆಗೆ ಸಂಬಂಧಿಕರೇ ಕೊಲೆಗೈದು ಬೃಹನ್ನಾಟಕ|

ಪುತ್ತೂರು: ಆತ ತಾನು ಖರೀದಿಸಿಸ ಪ್ರೀತಿಯ ಕೃಷಿ ಭೂಮಿಯನ್ನು ನೋಡಲು ಬಂದಿದ್ದ. ಆದರೆ ವಿಧಿಯಾಟ ಬೇರೆ ಆಗಿತ್ತು. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಆತನನ್ನು ಸಂಬಂಧಿಕರೇ ಫೋಟೋ ಫ್ರೇಮ್ ನೊಳಗೆ ಆಗುವಂತೆ ಮಾಡಿದ್ದಾರೆ. ಜಮೀನು ನೋಡಲು ಬಂದವನನ್ನು ಸಂಬಂಧಿಕರೇ ಕೊಲೆಮಾಡಿ ಕಾಡಿನ ಮಧ್ಯೆ ಹೂತು ಹಾಕಿದ್ದಾರೆ. ಈ ಘಟನೆ ನಡೆದದ್ದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮುಗುಳಿ ಎಂಬಲ್ಲಿ. ಮೈಸೂರಿನ ಸುಬ್ರಹ್ಮಣ್ಯ ನಗರದ ಜಗದೀಶ್ (58) ಎಂಬವರೇ ಕೊಲೆಯಾದ ದುರ್ದೈವಿ. ತನ್ನ ಕೃಷಿ ಭೂಮಿಯನ್ನು ಮುಗುಳಿ

ಕೃಷಿಭೂಮಿಯನ್ನು ನೋಡಲು ಬಂದ ಯಜಮಾನನನ್ನು ಭೂಮಿಯೊಳಗೆ ಹೂತಿಟ್ಟ ಕಿರಾತಕರು| ಆಸ್ತಿ ಆಸೆಗೆ ಸಂಬಂಧಿಕರೇ ಕೊಲೆಗೈದು ಬೃಹನ್ನಾಟಕ| Read More »

ಮಂಗಳೂರು: ಪ್ರಜ್ಞೆ ತಪ್ಪಿಸಿ ಬ್ಲೂಫಿಲಂ ಶೂಟಿಂಗ್| ಮಹಿಳೆ ಸೇರಿ ಮೂರು ಮಂದಿ ಖತರ್ನಾಕ್ ಗಳು ಅಂದರ್|

ಮಂಗಳೂರು : ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ ಗೆ ಒಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಇನ್ಲ್ಯಾಂಡ್ ಅಪಾರ್ಟ್ಮೆಂಟ್ ನಿವಾಸಿ ಅಝ್ವೀನ್ ಸಿ. (24), ಬೈಕಂಪಾಡಿ ಜೋಕಟ್ಟೆಯ ಕೆಬಿಎಸ್ ಬೊಟ್ಟು ಹೌಸ್ ನಿವಾಸಿ ಸಫ್ನಾ ಅಲಿಯಾಸ್ ಹತೀಜಮ್ಮ (23) ಬಂಧಿತ ಆರೋಪಿಗಳು ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿಮಾಹಿತಿ ನೀಡಿದ್ದಾರೆ. ದುಬೈನಲ್ಲಿ ಉದ್ಯೋಗದಲ್ಲಿದ್ದು, ವಾಪಾಸಾಗಿದ್ದ ವ್ಯಕ್ತಿಯೊಬ್ಬರ ಮನೆಗೆ ಅಝ್ವಿನ್ ಹಾಗೂ ಆತನ

ಮಂಗಳೂರು: ಪ್ರಜ್ಞೆ ತಪ್ಪಿಸಿ ಬ್ಲೂಫಿಲಂ ಶೂಟಿಂಗ್| ಮಹಿಳೆ ಸೇರಿ ಮೂರು ಮಂದಿ ಖತರ್ನಾಕ್ ಗಳು ಅಂದರ್| Read More »

ಪಲ್ಲಕ್ಕಿ ಹೊತ್ತು ವಿವಾದಕ್ಕೀಡಾದ ಶಾಸಕ ಹರೀಶ್ ಪೂಂಜಾ|

ಬೆಳ್ತಂಗಡಿ: ಗೌಡ ಸಾರಸ್ವತ ಬ್ರಾಹ್ಮಣರಿಗೆ ಸೇರಿದ ವೆಂಕಟರಮಣ ದೇವಸ್ಥಾನದ ದೇವಲ ಪಲ್ಲಕಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೊತ್ತಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮವನ್ನು ಮುಗಿಸಿ ಮನೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರನ್ನು ಬೆಳ್ತಂಗಡಿ ಲಾಯಿಲ ವೆಂಕಟರಮಣ ದೇವರ ಪಲ್ಲಕ್ಕಿ ಹೊರಲು ಸ್ಥಳೀಯ ಯುವಕರು ಒತ್ತಾಯಿಸಿದ್ದಾರೆ. ಈ ಹಿನ್ನಲೆ ಶಾಸಕರು ಪಲ್ಲಕ್ಕಿಗೆ ಹೆಗಲು ಕೊಟ್ಟಿದ್ದಾರೆ. ಇದು ಸದ್ಯ ವಿವಾದಕ್ಕೆ ಕಾರಣವಾಗಿದ್ದು. ಗೌಡ ಸಾರಸ್ವತ ಬ್ರಾಹ್ಮಣರಿಗೆ ಸೇರಿದ ವೆಂಕಟರಮಣ ದೇವಸ್ಥಾನದಲ್ಲಿ ಗೌಡ ಸಾರಸ್ವತರಲ್ಲದೆ ಬೇರೆ ಜಾತಿಗೆ ಪಲ್ಲಕ್ಕಿ

ಪಲ್ಲಕ್ಕಿ ಹೊತ್ತು ವಿವಾದಕ್ಕೀಡಾದ ಶಾಸಕ ಹರೀಶ್ ಪೂಂಜಾ| Read More »

ಪುತ್ತೂರು: ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ ಪ್ರಕರಣ| ಆರೋಪಿಗಳನ್ನು ತಕ್ಷಣ ಬಂಧಿಸಲು ಸಿಎಫ್ಐ ಆಗ್ರಹ

ಪುತ್ತೂರು: ಕೊಂಬೆಟ್ಟು ಕಾಲೇಜ್‍ನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಬುಧವಾರ ಸಂಜೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿದ್ಯಾರ್ಥಿಗಳು ಧರಣಿ ನಡೆಸಿದರು. ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆರೋಪಿಗಳನ್ನು 24 ಗಂಟೆಗಳ ಒಳಗಾಗಿ ಬಂಧಿಸುವಂತೆ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆಗ್ರಹಿಸಿದರು. ಪುತ್ತೂರು ಡಿವೈಎಸ್‍ಪಿ ಅವರು ಸಕಾರಾತ್ಮಕ ಭರವಸೆ ನೀಡಿದ ಬಳಿ ಧರಣಿಯನ್ನು ಹಿಂಪಡೆದರು. ಧರಣಿಯಲ್ಲಿ ಸಿಎಫ್‍ಐ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ, ಜಿಲ್ಲಾಧ್ಯಕ್ಷ ಅನ್ಸಾರ್

ಪುತ್ತೂರು: ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ ಪ್ರಕರಣ| ಆರೋಪಿಗಳನ್ನು ತಕ್ಷಣ ಬಂಧಿಸಲು ಸಿಎಫ್ಐ ಆಗ್ರಹ Read More »