ಕರಾವಳಿ

ಚಂಪಾಷಷ್ಟಿ ಹಿನ್ನಲೆ| ಕುಕ್ಕೆಯಲ್ಲಿ ಎರಡು ದಿನ‌ ಮದ್ಯ ಮಾರಾಟ ಬಂದ್ ಗೆ ಡೀಸಿ ಆದೇಶ|

ಮಂಗಳೂರು: ಪ್ರಸಿದ್ದ ಯಾತ್ರಾ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ಪ್ರಯುಕ್ತ ಡಿ. 10ರ ವರೆಗೆ ನಡೆಯಲಿರುವ ರಥೋತ್ಸವಗಳ ಸಮಯದಲ್ಲಿ ಅಪಾರ ಭಕ್ತಾದಿಗಳು ಸೇರಲಿದ್ದಾರೆ. ಈ ಹಿನ್ನಲೆಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ. ಜಿಲ್ಲಾಧಿಕಾರಿಯವರು ಕರ್ನಾಟಕ ಅಬಕಾರಿ ಕಾಯಿದೆ 1965 ರ ಸೆಕ್ಷನ್ 21 (1) ರ ಅಡಿಯಲ್ಲಿ ದತ್ತವಾದ […]

ಚಂಪಾಷಷ್ಟಿ ಹಿನ್ನಲೆ| ಕುಕ್ಕೆಯಲ್ಲಿ ಎರಡು ದಿನ‌ ಮದ್ಯ ಮಾರಾಟ ಬಂದ್ ಗೆ ಡೀಸಿ ಆದೇಶ| Read More »

ಪುತ್ತೂರು: ಹಿರಿಯ ಬಿಜೆಪಿ ನೇತಾರ ಉರಿಮಜಲು ರಾಮಭಟ್ ಇನ್ನಿಲ್ಲ

ಪುತ್ತೂರು: ಕರಾವಳಿಯ ಹಿರಿಯ ರಾಜಕಾರಣಿ, ಬಿಜೆಪಿ ನೇತಾರ, ಮಾಜಿ ಶಾಸಕ 92 ರ ಹರೆಯದ ಉರಿಮಜಲು ರಾಮ್‌ ಭಟ್ ಅಸ್ತಂಗತರಾಗಿದ್ದಾರೆ. ಅವರ ಆರೋಗ್ಯದಲ್ಲಿ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಮ್ ಭಟ್ ಅವರು ಕಳೆದ ಕೆಲವು ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರ ಆರೋಗ್ಯವು ಸ್ಥಿರವಾಗಿತ್ತು‌ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದರೂ, ಇಂದು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಕೆಲವು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಕೊಂಚ ಚೇತರಿಸಿಕೊಂಡು

ಪುತ್ತೂರು: ಹಿರಿಯ ಬಿಜೆಪಿ ನೇತಾರ ಉರಿಮಜಲು ರಾಮಭಟ್ ಇನ್ನಿಲ್ಲ Read More »

ಮಂಗಳೂರಿನಲ್ಲಿ ಮತ್ತೆ ಕೊರೊನಾ ಕೇಸ್ ಹೆಚ್ಚಳ| ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಸೋಂಕು

ಮಂಗಳೂರು: ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಮತ್ತೊಮ್ಮೆ ಕೊರೋನ ಅಲೆ ಆತಂಕ ಹೆಚ್ಚಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮಂಗಳೂರಿನ ಎಂ.ವಿ. ಶೆಟ್ಟಿ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಹಾಗಾಗಿ ಕಾಲೇಜನ್ನು ಆರೋಗ್ಯ ಇಲಾಖೆ ಕಂಟೇನ್ಮೆಂಟ್ ಮಾಡಿದೆ. 10 ದಿನದಲ್ಲಿ 21 ಜನ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಡಪಟ್ಟಿದೆ.

ಮಂಗಳೂರಿನಲ್ಲಿ ಮತ್ತೆ ಕೊರೊನಾ ಕೇಸ್ ಹೆಚ್ಚಳ| ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಸೋಂಕು Read More »

ಕುಂದಾಪುರ: ಅಮಾಸೆಬೈಲು ಪೊದೆಯಲ್ಲಿ ಶಿಶು ಪತ್ತೆ ಪ್ರಕರಣ – ಇವರೇ ಶಿಶುವನ್ನು ಎಸೆದ ಕಟುಕ ದಂಪತಿ

ಕುಂದಾಪುರ: ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯ ಮಚ್ಚಟ್ಟು ಗ್ರಾಮದ ಕಳಿನಜೆಡ್ಡು ವಾರಾಹಿ ಸೇತುವೆ ಬಳಿ ಡಿ.1ರಂದು ಪತ್ತೆಯಾದ ಹೆಣ್ಣು ನವಜಾತ ಶಿಶುವನ್ನು ಎಸೆದು ಹೋದ ಕಟುಕ ದಂಪತಿಯನ್ನು ಅಮಾಸೆಬೈಲು ಪೊಲೀಸರು ಡಿ.4ರಂದು ಆರೋಪಿಗಳನ್ನು ಹೆಬ್ರಿ ಸಮೀಪದ ಕುಚ್ಚೂರು ಎಸ್ಟೇಟ್‍ನಲ್ಲಿ ಪೊಲೀಸರು ಬಂಧಿಸಿ, ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬೈಂದೂರು ತಾಲೂಕು ಜಡ್ಕಲ್ ಸಮೀಪದ ಮುದೂರು ಗ್ರಾಮದ ಸತೀಶ ಪೂಜಾರಿ(43) ಮತ್ತು ರಾಧಿಕ (40) ದಂಪತಿ. ಆರೋಪಿ ಇಬ್ಬರಿಗೂ ಕೂಡ ಹಿಂದೆ ಮದುವೆಯಾಗಿದ್ದು, ಸಂಸಾರದಿಂದ ದೂರವಾಗಿದ್ದಾರೆ. ಸತೀಶ ಪೂಜಾರಿಯ ಹೆಂಡತಿ ಮಕ್ಕಳು ಅವರನ್ನು

ಕುಂದಾಪುರ: ಅಮಾಸೆಬೈಲು ಪೊದೆಯಲ್ಲಿ ಶಿಶು ಪತ್ತೆ ಪ್ರಕರಣ – ಇವರೇ ಶಿಶುವನ್ನು ಎಸೆದ ಕಟುಕ ದಂಪತಿ Read More »

‘ಸಿಎಸ್ ಸಿ’ಪೋರ್ಟಲ್ ನಲ್ಲಿ ಉತ್ತಮ ನಿರ್ವಹಣೆ| ಮೇದಿನಿ ಜನ ಸೇವಾಕೇಂದ್ರ ರಾಜ್ಯಕ್ಕೆ ಪ್ರಥಮ|

ಪುತ್ತೂರು: ಕರ್ನಾಟಕದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸೇವಾ ಕೇಂದ್ರಗಳ ಪೈಕಿ ಕೇಂದ್ರ ಹಾಗೂ ರಾಜ್ಯ ಸರಕಾರದ ಜನಸೇವಾ ಕಾರ್ಯಗಳನ್ನು ಜನರಿಗೆ ಮುಟ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ತಾಲೂಕಿನ ಏಕಮಾತ್ರ ಸೇವಾ ಕೇಂದ್ರವಾದ ‘ಮೇದಿನಿ ಜನಸೇವಾ ಕೇಂದ್ರ’ವು 2020-21ನೇ ಸಾಲಿನ ಅತೀ ಹೆಚ್ಚು ಸಿಎಸ್ ಸಿ ಪೋರ್ಟಲ್ ನಲ್ಲಿ ಟ್ರಾಕ್ಷನ್ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಪುತ್ತೂರಿನ ನಗರಸಭಾ ಕಟ್ಟಡದಲ್ಲಿ ಸರಿತಾ ನವೀನ್ ಮೂಡಂಬೈಲು ರವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಮೇದಿನಿ ಜನಸೇವಾ

‘ಸಿಎಸ್ ಸಿ’ಪೋರ್ಟಲ್ ನಲ್ಲಿ ಉತ್ತಮ ನಿರ್ವಹಣೆ| ಮೇದಿನಿ ಜನ ಸೇವಾಕೇಂದ್ರ ರಾಜ್ಯಕ್ಕೆ ಪ್ರಥಮ| Read More »

ಪುತ್ತೂರು: ಸ್ಕೂಟರ್ ಢಿಕ್ಕಿ ಹೊಡೆದು ಪಾದಚಾರಿ ಸಾವು

ಪುತ್ತೂರು: ನಗರದ ಪೋಲಿಸ್ ಠಾಣಾ ಮುಂಭಾಗ ನಡೆದುಕೊಂದು ಹೋಗುತ್ತಿದ್ದ ವ್ಯಕ್ರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಚಿಕ್ಕಪುತ್ತೂರಿನ ಕೇಶವ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಹೆಗ್ಡೆ ಆರ್ಕೇಡ್ ಮುಂಭಾಗದಿಂದ ಮನೆಗೆ ನಡೆದುಕೊಂಡು ಹೋಗುತಿದ್ದ ವೇಳೆ ಸ್ಕೂಟರೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ರಸ್ತೆಗೆಸೆಯಲ್ಪಟ್ಟ ಕೇಶವ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ

ಪುತ್ತೂರು: ಸ್ಕೂಟರ್ ಢಿಕ್ಕಿ ಹೊಡೆದು ಪಾದಚಾರಿ ಸಾವು Read More »

ಸುಳ್ಯ: ಟ್ರಾವೆಲ್ಲರ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸಾವು

ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿಗೆ ಸಂಪಾಜೆ ಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಯಾಗಿ ಸವಾರ ಮೃತ ಪಟ್ಟ ಘಟನೆ ಗೂನಡ್ಕ ಸಮೀಪ ಪೇಲ್ತಡ್ಕ ದಿಂದ ವರದಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ವಿನೋದ್ ಕುಮಾರ್ (23) ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಸುಳ್ಯ: ಟ್ರಾವೆಲ್ಲರ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸಾವು Read More »

ಕೋಮು ಪ್ರಚೋದನಕಾರಿ ಭಾಷಣ ಆರೋಪ| ಎಸ್ಡಿಪಿಐ, ಪಿಎಫ್ ಐ ಸಂಘಟಕರ ವಿರುದ್ಧ ದೂರು

ಪುತ್ತೂರು: ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ನೀಡಿರುವ ದೂರಿನ ಮೇರೆಗೆ ಎಸ್.ಡಿ.ಪಿ.ಐ. ಮತ್ತು ಸಿ.ಎಫ್.ಐ. ಸಂಘಟಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಮು ಭಾವನೆ ಕೆರಳಿಸಿ ವಿದ್ಯಾರ್ಥಿಗಳ ನಡುವೆ ಗಲಭೆ ನಡೆಸಲು ಉತ್ತೇಜನ ಹಾಗೂ ಸಾಮಾಜಿಕ ಸ್ವಾಸ್ಥ್ಯ ನಾಶ ಮಾಡಿ ಧರ್ಮದ ಆಧಾರದಲ್ಲಿ ಶಾಲಾ ಕಾಲೇಜುಗಳಲ್ಲಿ ಗಲಭೆ ನಡೆಸಲು ಪ್ರಚೋದನೆ ನಡೆಸುವಂತೆ ಭಾಷಣ ಮಾಡಿರುವುದು ಅಲ್ಲದೆ ಹಿಂದೂ ಮುಖಂಡರ ವಿರುದ್ಧ ಕೀಳು ಮಟ್ಟದ ಶಬ್ದಗಳಲ್ಲಿ ಮಾತನಾಡಿರುವುದಾಗಿ ಮತ್ತು ಕಾಲೇಜಿನ ಒಳಗಡೆ ಅಕ್ರಮ

ಕೋಮು ಪ್ರಚೋದನಕಾರಿ ಭಾಷಣ ಆರೋಪ| ಎಸ್ಡಿಪಿಐ, ಪಿಎಫ್ ಐ ಸಂಘಟಕರ ವಿರುದ್ಧ ದೂರು Read More »

ಮಂಗಳೂರಿನಲ್ಲಿ ಕೇರಳ ವಿದ್ಯಾರ್ಥಿಗಳ‌ ಬೀದಿಕಾಳಗ| ಬಿಡಿಸಲು ಹೋದ ಪೊಲೀಸರ ಮೇಲೂ ಹಲ್ಲೆ| ಕಲ್ಲು, ಇಂಟರ್ ಲಾಕ್ ಎಸೆದು ಪುಂಡಾಟ|

ಮಂಗಳೂರು: ನಗರದ ಎರಡು ಕಡೆ ವಿದ್ಯಾರ್ಥಿಗಳ ನಡುವೆ ತೀವ್ರ ಗಲಾಟೆ ನಡೆದಿದ್ದು ಬಿಡಿಸಲು ಹೋದ ಐವರು ಪೊಲೀಸರಿಗೂ ಕಲ್ಲು, ಇಂಟರ್ ಲಾಕ್ ಎಸೆದು ಹಲ್ಲೆ ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಯೇನಪೋಯ ಡಿಗ್ರಿ ಕಾಲೇಜಿನಲ್ಲಿ 3ನೇ ವರ್ಷದ ಬಿಎಸ್ಪಿ ಹಾಸ್ಪಿಟಾಲಿಟಿ ಓದುತ್ತಿರುವ ಕೇರಳ ಮೂಲದ ಆದರ್ಶ ಪ್ರೇಮಕುಮಾರ್ ಎಂಬಾತ ಗುರುವಾರ ಸಂಜೆ ಏಳು ಗಂಟೆ ಸುಮಾರಿಗೆ ಬಾವುಟ ಗುಡ್ಡೆಯ ಲೈಟ್ ಹೌಸ್ ಹಿಲ್ ಅಪಾರ್ಟ್ಮೆಂಟ್ ಬಳಿ ಬಂದಿದ್ದು ಅಲ್ಲಿ ತನ್ನ ಸ್ನೇಹಿತೆ ಸಿನಾನ್ ಜೊತೆ ಮಾತನಾಡುತ್ತಿದ್ದಾಗ

ಮಂಗಳೂರಿನಲ್ಲಿ ಕೇರಳ ವಿದ್ಯಾರ್ಥಿಗಳ‌ ಬೀದಿಕಾಳಗ| ಬಿಡಿಸಲು ಹೋದ ಪೊಲೀಸರ ಮೇಲೂ ಹಲ್ಲೆ| ಕಲ್ಲು, ಇಂಟರ್ ಲಾಕ್ ಎಸೆದು ಪುಂಡಾಟ| Read More »

ಒಮಿಕ್ರಾನ್ ಭೀತಿ: ಮಂಗಳೂರಲ್ಲಿ ವಿದೇಶದಿಂದ ಬಂದ ನಾಲ್ವರ ಪರೀಕ್ಷೆ

ಮಂಗಳೂರು: ದೇಶದಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಳೆದೆರಡು ವಾರಗಳಲ್ಲಿ ಮಂಗಳೂರಿಗೆ ಬಂದಿಳಿದಿದ್ದ ನಾಲ್ವರ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈ ವರದಿ ನೆಗೆಟಿವ್ ಆಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೇಳಿದ್ದಾರೆ. ಇಟಲಿ, ಬೆಲ್ಜಿಯಂ, ಲಂಡನ್, ಪ್ಯಾರಿಸ್‌ನಿಂದ ಕಳೆದ ಎರಡು ವಾರದಲ್ಲಿ ಬಂದ ನಾಲ್ಕು ಮಂದಿಯ ಪರೀಕ್ಷೆ ಮಾಡಲಾಗಿತ್ತು. ಇನ್ನು ಮಂಗಳೂರಲ್ಲಿ ಒಮಿಕ್ರಾನ್ ಹಿನ್ನೆಲೆಯಲ್ಲಿ ಸರ್ವೇಕ್ಷಣೆ ಹೆಚ್ಚಿಸಲಾಗಿದೆ. ಅಂದರೆ ಕೋವಿಡ್ ಪಾಸಿಟಿವ್‌ನ 50 ಪ್ರಕರಣಗಳಲ್ಲಿ ಒಂದು ಮಾದರಿಯನ್ನು ಜೆನೋಮಿಕ್ ಸೀಕ್ವೆನ್ಸ್‌ಗಾಗಿ ಬೆಂಗಳೂರಿನ ನಿಮ್ಹಾನ್ಸ್ ಲ್ಯಾಬ್‌ಗೆ ಕಳುಹಿಸಲಾಗುತ್ತದೆ. ಈ

ಒಮಿಕ್ರಾನ್ ಭೀತಿ: ಮಂಗಳೂರಲ್ಲಿ ವಿದೇಶದಿಂದ ಬಂದ ನಾಲ್ವರ ಪರೀಕ್ಷೆ Read More »