ಸುಳ್ಯ: ಹೋರಿ ತಿವಿದು ವ್ಯಕ್ತಿ ಸಾವು
ಸುಳ್ಯ: ಹೋರಿಯೊಂದು ತಿವಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕದಲ್ಲಿ ನಡೆದಿದೆ.ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ ಎಂಬವರು ಮೃತಪಟ್ಟ ವ್ಯಕ್ತಿ. ತಾನು ಸಾಕಿರುವ ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು ಸಂಜೆ ವೇಳೆಗೆ ಹೋರಿಯನ್ನು ಹಟ್ಟಿಗೆ ತರಲು ಕಿಟ್ಟಣ್ಣ ಗೌಡರು ತೆರಳಿದ್ದರು ಎನ್ನಲಾಗಿದೆ. ಅಲ್ಲಿ ಹೋರಿ ತಿವಿದು ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಆ ದಾರಿಯಲ್ಲಿ ಬಂದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಅಲ್ಲೇ ಪಕ್ಕದಲ್ಲಿ ಹೋರಿ ಕಟ್ಟಿ ಹಾಕಿರುವುದನ್ನು ನೋಡಿದ್ದಾರೆ.
ಸುಳ್ಯ: ಹೋರಿ ತಿವಿದು ವ್ಯಕ್ತಿ ಸಾವು Read More »









