ಕರಾವಳಿ

ಹಿಂಜಾವೇ ಪ್ರಮುಖ್ ಜಗದೀಶ ಕಾರಂತ ವಿರುದ್ದ ದ.ಕ ಡಿಸಿ ದೂರು| ‘ಡಿಸಿ ಕೊರಳಪಟ್ಟಿ ಹಿಡಿಯುತ್ತೇವೆ’ ಎಂದಿದ್ದ ಕಾರಂತ್

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ದೂರು ನೀಡಿದ್ದಾರೆ. ನವೆಂಬರ್ 22ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ಭಾಷಣ ಮಾಡುವ ವೇಳೆ, ಜಿಲ್ಲಾಧಿಕಾರಿ ಕೊರಳಪಟ್ಟಿ ಹಿಡಿಯುತ್ತೇವೆ ಎಂದು ಬಹಿರಂಗ ಬೆದರಿಕೆ ಹಾಕಿದ ಹಿನ್ನೆಲೆ ಜಗದೀಶ್ ಕಾರಂತ್ ವಿರುದ್ಧ ದೂರು ದಾಖಲಿಸಲಾಗಿದೆ. ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆಯಲ್ಲಿ ನಾಲಿಗೆ ಹರಿಬಿಟ್ಟಿದ್ದ ಜಗದೀಶ್ ಕಾರಂತ್ ವಿರುದ್ಧ ಇದೀಗ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಕ್ರಮ […]

ಹಿಂಜಾವೇ ಪ್ರಮುಖ್ ಜಗದೀಶ ಕಾರಂತ ವಿರುದ್ದ ದ.ಕ ಡಿಸಿ ದೂರು| ‘ಡಿಸಿ ಕೊರಳಪಟ್ಟಿ ಹಿಡಿಯುತ್ತೇವೆ’ ಎಂದಿದ್ದ ಕಾರಂತ್ Read More »

ಸುಳ್ಯ: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ| ಚಾಲಕ ಅಪಾಯದಿಂದ ಪಾರು|

ಸುಳ್ಯ: ಚಲಿಸುತ್ತಿದ್ದ ಕಾರೊಳಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಸಂಪೂರ್ಣ ಆಹುತಿಯಾದ ಘಟನೆ ಕಡಬ ತಾಲೂಕಿನ ಬಳ್ಪದ ಪಾದೆ ಎಂಬಲ್ಲಿ ನಡೆದಿದೆ. ಪಂಜದ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ( KA19- P7242) ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ನಿಲ್ಲಿಸಿ ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ| ಚಾಲಕ ಅಪಾಯದಿಂದ ಪಾರು| Read More »

ಸುರತ್ಕಲ್: ಸೆಲ್ಫಿ ತೆಗೆಯಲು ಗೂಡ್ಸ್ ರೈಲ್ ಏರಿದ ಯುವಕನಿಗೆ ವಿದ್ಯುತ್ ಶಾಕ್

ಸುರತ್ಕಲ್: ಯುವಕನೋರ್ವ ಗೂಡ್ಸ್ ರೈಲಿನ ಮೇಲೆ ಏರಿ ಸೆಲ್ಫಿ ತೆಗೆಯಲು ಹೋದ ಯುವಕನಿಗೆ ವಿದ್ಯುತ್ ಆಘಾತವಾಗಿ ಸುಟ್ಟ ಗಾಯಗಳಾದ ಘಟನೆ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನ .23 ರ ಮಂಗಳವಾರ ಸಂಜೆ ನಡೆದಿದೆ. ಮಂಗಳೂರಿನ‌ ಸಲ್ಮಾನ್ ಪಾರಸ್ (21) ವಿದ್ಯುತ್ ಅವಘಡಕ್ಕೆ ಒಳಗಾದ ಯುವಕನಾಗಿದ್ದಾನೆ.‌ ನಿಲುಗಡೆಗೊಂಡಿದ್ದ ಗೂಡ್ಸ್ ರೈಲಿನ ಮೇಲೆ ಹತ್ತಿದ ಸಲ್ಮಾನ್ ಫಾರಿಸ್ ಸೆಲ್ಫಿ ತೆಗೆಯಲು ಮುಂದಾದಾಗಿದ್ದಾನೆ. ಆದರೆ ಪಕ್ಕದಲ್ಲೇ ಹಾದು ಹೋಗಿರುವ ಹೈವೋಲ್ಟೇಜ್ ತಂತಿಗಳನ್ನು ಗಮನಿಸದ ಕಾರಣ ವಿದ್ಯುತ್

ಸುರತ್ಕಲ್: ಸೆಲ್ಫಿ ತೆಗೆಯಲು ಗೂಡ್ಸ್ ರೈಲ್ ಏರಿದ ಯುವಕನಿಗೆ ವಿದ್ಯುತ್ ಶಾಕ್ Read More »

ಬೆಳ್ತಂಗಡಿ: ಮಚ್ಚಿನಿಂದ ಕೊಚ್ಚಿ ಕೊಲೆಗೈಯಲು ಯತ್ನ| ಸಹೋದರರಿಬ್ಬರು ಗಂಭೀರ, ಆರೋಪಿಗಳನ್ನು ಕಂಬಿಹಿಂದೆ ಕಳುಹಿಸಿದ ಪೊಲೀಸರು|

ಬೆಳ್ತಂಗಡಿ: ಸಹೋದರರಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲೆತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ನಡೆದಿದ್ದು, ತಕ್ಷಣವೇ ಕಾರ್ಯಪೃವೃತ್ತರಾದ ಪೊಲೀಸರು ಮಂಗಳವಾರ ರಾತ್ರಿಯೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದವರನ್ನು ನೆಲ್ಲಿಗುಡ್ಡೆ ನಿವಾಸಿಗಳಾದ ಹೈದರ್ ಯಾನೆ ಜಾಕ್ ಹೈದರ್ ಮತ್ತು ಅವರ ಅಣ್ಣ ರಫೀಕ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ರಾತ್ರಿ ಸುಮಾರು 11:45ರ ವೇಳೆ ಹೈದರ್ ಮತ್ತು ರಫೀಕ್ ಆಟೋದಲ್ಲಿ ಬಾಡಿಗೆ ಹೋಗಿ ವಾಪಾಸ್ಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಬಳಿಯಲ್ಲಿ ಅಶುತೋಷ್

ಬೆಳ್ತಂಗಡಿ: ಮಚ್ಚಿನಿಂದ ಕೊಚ್ಚಿ ಕೊಲೆಗೈಯಲು ಯತ್ನ| ಸಹೋದರರಿಬ್ಬರು ಗಂಭೀರ, ಆರೋಪಿಗಳನ್ನು ಕಂಬಿಹಿಂದೆ ಕಳುಹಿಸಿದ ಪೊಲೀಸರು| Read More »

ಸುಳ್ಯ: ಉದ್ಯೋಗದ ನೆಪದಲ್ಲಿ ಮಹಿಳೆಗೆ ಲಕ್ಷಾಂತರ ರೂ.ಪಂಗನಾಮ

ಸುಳ್ಯ: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ದೂರವಾಣಿ ಮೂಲಕ ಲಕ್ಷಾಂತರ ಹಣ ವಂಚಿಸಿರುವುದಾಗಿ ನೆಲ್ಲೂರು ಕೆಮ್ರಾಜೆ ಗ್ರಾಮದ ಮಹಿಳೆಯೊಬ್ಬರು ಉಡುಪಿ ಸೈಬರ್ ಕ್ರೈಮ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಪೂರ್ಣಿಮಾ ಎಂಬವರಿಗೆ ಅಪರಿಚಿತರು ದೂರವಾಣಿ ಕರೆ ಮಾಡಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದರು. ಹಾಗಾಗಿ ಅವರಿಂದ 4,31,500 ರೂಪಾಯಿಗಳನ್ನು ತನ್ನ ಖಾತೆಗೆ ಜಮೆ ಮಾಡಿಸಿಕೊಂಡಿದ್ದಾರೆ. ಈಗ ಉದ್ಯೋಗ ನೀಡದೇ ವಂಚಿಸಿದ್ದಾರೆ. ಈ ಹಣವನ್ನು ವಾಪಾಸ್ ಮರಳಿಸಬೇಕೆಂದು ಉಡುಪಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ನ.21ರಂದು

ಸುಳ್ಯ: ಉದ್ಯೋಗದ ನೆಪದಲ್ಲಿ ಮಹಿಳೆಗೆ ಲಕ್ಷಾಂತರ ರೂ.ಪಂಗನಾಮ Read More »

ಅಬ್ಬಾ…! ಈ‌ ಒಂದು ಮೀನಿನ ಬೆಲೆ‌ ಕೇಳಿದ್ರೆ ಗಾಬರಿಯಾಗ್ತೀರಿ! ಉಡುಪಿಯಲ್ಲಿ‌ ದಾಖಲೆ‌ ಬೆಲೆಗೆ ಮಾರಾಟವಾಯ್ತು ಈ ಮತ್ಸ್ಯ ಕನ್ಯೆ|

ಉಡುಪಿ : ಕಡಲು ಕೋಟ್ಯಾಂತರ ಜಲಚರಗಳ ಸಂಪತ್ತು. ಸಮುದ್ರದಲ್ಲಿ ಸಾವಿರಾರು ಬಗೆಯ ಮತ್ಸ್ಯ ಸಂತತಿ ಇದೆ. ಸಣ್ಣಪುಟ್ಟ ಮೀನುಗಳಿಂದ ಹಿಡಿದು ಗಜಗಾತ್ರದ ಮೀನುಗಳೂ ಇವೆ. ಈ ಮತ್ಸ್ಯ ಗಳ ಬೇಟೆಗೆ ಸಾವಿರಾರು ಜನ ಮೀನುಗಾರರು ಕಡಲಿನತ್ತ ಮುಖ ಮಾಡುತ್ತಾರೆ. ರಾಜ್ಯದ ಕರಾವಳಿ ತೀರವಾದ ಉಡುಪಿಯಿಂದ ಹೊರಟ ಮೀನುಗಾರರಿಗೆ ಬಂಪರ್ ಹೊಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಹೊರಟ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದೆ. ಮೀನುಗಾರರಿಗೆ ಸಾಕ್ಷ್ಯಾತ್ ಮತ್ಸ್ಯ ಕನ್ಯೆಯೇ ಒಲಿದಿದ್ದು, ಮೀನುಗಾರರು ಹಿಡಿದ ಆ ಒಂದು

ಅಬ್ಬಾ…! ಈ‌ ಒಂದು ಮೀನಿನ ಬೆಲೆ‌ ಕೇಳಿದ್ರೆ ಗಾಬರಿಯಾಗ್ತೀರಿ! ಉಡುಪಿಯಲ್ಲಿ‌ ದಾಖಲೆ‌ ಬೆಲೆಗೆ ಮಾರಾಟವಾಯ್ತು ಈ ಮತ್ಸ್ಯ ಕನ್ಯೆ| Read More »

ಪುತ್ತೂರು: ವಿದ್ಯಾರ್ಥಿಗಳ ನಡುವೆ ಹೊಡೆದಾಟ| ಆಸ್ಪತ್ರೆಗೆ ದಾಖಲು

ಪುತ್ತೂರು: ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಇಂದು ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಆದಿಲ್, ಆದಿತ್ಯ ಹಾಗೂ ಪ್ರಣಮ್ ಎಂದು ಗುರುತಿಸಲಾಗಿದೆ. ಗಾಯಾಳು ವಿದ್ಯಾರ್ಥಿಗಳ ಪೈಕಿ ಓರ್ವನನ್ನು ಸರಕಾರಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು: ವಿದ್ಯಾರ್ಥಿಗಳ ನಡುವೆ ಹೊಡೆದಾಟ| ಆಸ್ಪತ್ರೆಗೆ ದಾಖಲು Read More »

ಮಂಗಳೂರು: ಖಾಸಗಿ ಟಿವಿ ವರದಿಗಾರನಿಗೆ ಹಲ್ಲೆ, ಕೊಲೆಯತ್ನ| ಆರೋಪಿಯ ಬಂಧನ

ಮಂಗಳೂರು : ಖಾಸಗಿ ಟಿವಿ ವಾಹಿನಿ ವರದಿಗಾರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಾಸಗಿ ಟಿವಿ ವರದಿಗಾರರಾಗಿರುವ ಸುಖ್ ಪಾಲ್ ಪೊಳಲಿ ಅವರ ಮೇಲೆ ಯದುನಂದನ್ ಎನ್ನುವವರು ಸೋಮವಾರ ಸಂಜೆ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ತಲೆಗೆ ಪೆಟ್ಟು ಬಿದ್ದ ಸುಖ್ ಪಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಖಾಸಗಿ ಟಿವಿ ವರದಿಗಾರನಿಗೆ ಹಲ್ಲೆ, ಕೊಲೆಯತ್ನ| ಆರೋಪಿಯ ಬಂಧನ Read More »

ಪುತ್ತೂರು: ಸ್ವಂತ ಮೈದುನನಿಂದ ಅತ್ತಿಗೆ ಮೇಲೆ ಗುಂಡಿನ ದಾಳಿ| ಆರೋಪಿ ಪರಾರಿ|

ಪುತ್ತೂರು: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು

ಪುತ್ತೂರು: ಸ್ವಂತ ಮೈದುನನಿಂದ ಅತ್ತಿಗೆ ಮೇಲೆ ಗುಂಡಿನ ದಾಳಿ| ಆರೋಪಿ ಪರಾರಿ| Read More »

ಕಾನೂನು ಮಧ್ಯಪ್ರವೇಶ| ಬೀಸೋ ಕೊಡಲಿಯಿಂದ ತಪ್ಪಿಸಿಕೊಂಡ “ಶ್ರೀತಾಳೆ”

ಬೆಳ್ತಂಗಡಿ: ಅಳಿವಿನಂಚಿನಲ್ಲಿರುವ ಶ್ರೀ ತಾಳೆ ಮರ ಹೂ ಬಿಟ್ಟರೆ ಊರಿಗೆ ಅನಿಷ್ಠ ಎಂಬ ಕಾರಣಕ್ಕಾಗಿ ಹೂ ಬಿಟ್ಟ ತಾಳೆ ಮರವನ್ನು ಕಡಿಯಲು ಮುಂದಾಗಿದ್ದ ಗ್ರಾಮಸ್ಥರನ್ನು ಅರಣ್ಯ ಇಲಾಖೆ ತಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಿಮಣೇಲು ಗ್ರಾಮದ ದೇಲಂಪುರಿ ಎಂಬಲ್ಲಿ ಚಂದ್ರಶೇಖರ್ ಮತ್ತು ಗಿರಿಜಮ್ಮ ಎಂಬುವವರ ಜಾಗದಲ್ಲಿ 80 ವರ್ಷದ ಹಳೆಯದಾದ ತಾಳೆ ಮರ ಹೂ ಬಿಟ್ಟಿದ್ದು, ಈ ಮರ ಹೂ ಬಿಟ್ಟಿರೋದು ಊರಿಗೆ ಅನಿಷ್ಠ ಎಂಬ ಭಾವನೆ ಮನೆಯವರು ಮತ್ತು ಊರವರಿಗೆ ಕಾಡಿದೆ. ಈ

ಕಾನೂನು ಮಧ್ಯಪ್ರವೇಶ| ಬೀಸೋ ಕೊಡಲಿಯಿಂದ ತಪ್ಪಿಸಿಕೊಂಡ “ಶ್ರೀತಾಳೆ” Read More »