ಕರಾವಳಿ

ಮಡಿಕೇರಿ: ಕಾರಿನ ಮೇಲೆ ಕಾಡಾನೆ ದಾಳಿ| ಪ್ರಯಾಣಿಕರು ಅದೃಷ್ಟವಶಾತ್ ಪಾರು|

ಮಡಿಕೇರಿ: ಕುಶಾಲನಗರದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿರುವ ಘಟನೆ ಆನೆಕಾಡು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮೂವರು ಮಕ್ಕಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪ್ರವಾಸಿತಾಣ ನಿಸರ್ಗಧಾಮ ವೀಕ್ಷಣೆಗೆ ಕುಶಾಲನಗರಕ್ಕೆ ತೆರಳಿದ್ದ ಕುಟುಂಬ ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿತ್ತು. ರಾತ್ರಿ ಸುಮಾರು 8 ಗಂಟೆ ಹೊತ್ತಿನಲ್ಲಿ ಕಾಡಾನೆ ದಿಢೀರ್ ಆಗಿ ಹೆದ್ದಾರಿಯಲ್ಲಿ ಪ್ರತ್ಯಕ್ಷವಾಗಿದೆ. ಕಾರನ್ನು ನಿಧಾನವಾಗಿ ಚಲಾಯಿಸಲಾಯಿತ್ತಾದರೂ ಕಾಡಾನೆ ಸಮೀಪಕ್ಕೆ ಬಂದಾಗಿತ್ತು. ಮಡದಿ, ಮಕ್ಕಳು ಆತಂಕದಿಂದ ಜೋರಾಗಿ ಕಿರುಚಿಕೊಳ್ಳಲು ಆರಂಭಿಸಿದರು. […]

ಮಡಿಕೇರಿ: ಕಾರಿನ ಮೇಲೆ ಕಾಡಾನೆ ದಾಳಿ| ಪ್ರಯಾಣಿಕರು ಅದೃಷ್ಟವಶಾತ್ ಪಾರು| Read More »

ಮಂಗಳೂರು: ವಿಮಾನ ನಿಲ್ದಾಣಕ್ಕೆ ನಾಡಕೋವಿ ತಂದವ ಅಂದರ್

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಕಾರಿನಲ್ಲಿ ಅಕ್ರಮವಾಗಿ ನಾಡಕೋವಿ ಇರಿಸಿಕೊಂಡಿದ್ದ ಯುವಕನನ್ನು ಸಿಐಎಸ್‌ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಬಂಧಿತ ಯುವಕ. ಈತ ವಿದೇಶದಿಂದ ಬಂದಿದ್ದ ತನ್ನ ಸಂಬಂಧಿಕ ವ್ಯಕ್ತಿಯನ್ನು ಕಾರಿನಲ್ಲಿ ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಕಾರನ್ನು ಪಾರ್ಕಿಂಗ್ ಏರಿಯಾದಲ್ಲಿ ಪಾರ್ಕ್ ಮಾಡಿದ್ದಾಗ ಸಿಐಎಸ್‌ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ, ಕಾರಿನ ಮುಂಭಾಗದಲ್ಲಿ ಎರಡು ಕಂಟ್ರಿ ಮೇಡ್ ಪಿಸ್ತೂಲ್ ಪತ್ತೆಯಾಗಿದ್ದು ಈ ಬಗ್ಗೆ ಯುವಕನನ್ನು

ಮಂಗಳೂರು: ವಿಮಾನ ನಿಲ್ದಾಣಕ್ಕೆ ನಾಡಕೋವಿ ತಂದವ ಅಂದರ್ Read More »

ರಾಷ್ಟ್ರೀಯ ಶಿಕ್ಷಣ ನೀತಿ ಶೈಕ್ಷಣಿಕ ವ್ಯವಸ್ಥೆಯ ದುರ್ಬಲೀಕರಣ – ಕೀರ್ತನ್

ಸುಳ್ಯ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿ ಶಿಕ್ಷಣ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಹೋರಾಟ ಮುಂದುವರಿಯಲಿದೆ ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಇವರು ತಿಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರಕಾರ ತರಾತುರಿಯಲ್ಲಿ ಜಾರಿಗೊಳಿಸಲು ಹೊರಟಿದ್ದು ಈ ಬಗ್ಗೆ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಯಾರಿಗೂ ಅರಿವು ಇಲ್ಲದಾಗಿದೆ. ಇದು ಶಿಕ್ಷಣ ವ್ಯವಸ್ಥೆಯನ್ನೇ

ರಾಷ್ಟ್ರೀಯ ಶಿಕ್ಷಣ ನೀತಿ ಶೈಕ್ಷಣಿಕ ವ್ಯವಸ್ಥೆಯ ದುರ್ಬಲೀಕರಣ – ಕೀರ್ತನ್ Read More »

ಕಡಬ: ಪಾಳು ಪ್ರವಾಸಿ ಬಂಗಲೆಯಲ್ಲೊಂದು ಅರೆಬೆಂದ ಮೃತದೇಹ| ಅನುಮಾನ ಹುಟ್ಟಿಸುವಂತಿದೆ ದೃಶ್ಯ|

ಕಡಬ: ನಗರದ ಹೃದಯ ಭಾಗದಲ್ಲಿರುವ ಪಾಳು ಬಿದ್ದ ಪ್ರವಾಸಿ ಬಂಗಲೆಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಅರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಉಳಿಪು ನಿವಾಸಿ ಮೋನೆಚ್ಚನ್‌ ಎಂಬವರದ್ದು ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮೃತ ದೇಹ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಇದನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ . ಮೃತ ದೇಹವೂ ಅರೆ ಬೆಂದ ಸ್ಥಿತಿಯಲ್ಲಿದ್ದೂ, ನಿನ್ನೆ ರಾತ್ರಿ ಮೃತಪಟ್ಟಿರಬಹುದೆಂದು ಸಂಶಯಿಸಲಾಗಿದೆ. ಸ್ಥಳದ ಮಹಜರು ಹಾಗೂ

ಕಡಬ: ಪಾಳು ಪ್ರವಾಸಿ ಬಂಗಲೆಯಲ್ಲೊಂದು ಅರೆಬೆಂದ ಮೃತದೇಹ| ಅನುಮಾನ ಹುಟ್ಟಿಸುವಂತಿದೆ ದೃಶ್ಯ| Read More »

ಹಣ ಕೊಡದ್ದಕ್ಕೆ ವೃದ್ಧೆ ತಾಯಿಗೆ ಹಲ್ಲೆ| ದೋಸೆ ಕಾವಲಿಯಲ್ಲಿ ಹೊಡೆದು ಕೊಲ್ಲುತ್ತೇನೆಂದ ಪಾಪಿ‌ಮಗ| ಆರೋಪಿಯ ಬಂಧನ

ಮಂಗಳೂರು: ದ್ವಿಚಕ್ರ ವಾಹನ ತೆಗೆಯಲು ಹಣ ಕೊಡಲು ನಿರಾಕರಿಸಿದ ತನ್ನ ತಾಯಿಗೆ ಹಲ್ಲೆ ನಡೆಸಿದ ಆರೋಪಿಯನ್ನು ಕದ್ರಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕದ್ರಿ ಹಿಲ್‌ನ ಪದವು ಸ್ಕೂಲ್ ಸಮೀಪದ ನಿವಾಸಿ ರೋಶನ್ ರೋಚ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಗ್ಗೆ ಸುಮಾರು 8 ಗಂಟೆಗೆ ತನ್ನ 66ರ ಹರೆಯದ ತಾಯಿ ಐರಿನ್ ಪ್ಯಾಟ್ರಿಕ್ ರೋಚ್ ಎಂಬವರ ಬಳಿ ಆರೋಪಿಯು ಸ್ಕೂಟರ್ ತೆಗೆಯಲು 75 ಸಾವಿರ ರೂ. ಕೊಡಬೇಕು ಎಂದು ಒತ್ತಾಯಿಸಿದ. ಆದರೆ ಐರಿನ್ ಅವರು ಹಣ

ಹಣ ಕೊಡದ್ದಕ್ಕೆ ವೃದ್ಧೆ ತಾಯಿಗೆ ಹಲ್ಲೆ| ದೋಸೆ ಕಾವಲಿಯಲ್ಲಿ ಹೊಡೆದು ಕೊಲ್ಲುತ್ತೇನೆಂದ ಪಾಪಿ‌ಮಗ| ಆರೋಪಿಯ ಬಂಧನ Read More »

‘ಶಾಂತಿ’ ಕದಡಿದ ಖಲೀಲ್ ಕಟ್ಟೆಕಾರ್ ನ ಕೈಬಿಟ್ಟು ಮರು ಮದುವೆಯಾದ ಆಸಿಯಾ..!| ಕೇರಳದ ಮುಸ್ಲಿಂ ಉದ್ಯಮಿಯ ಜೊತೆ 2ನೇ ವಿವಾಹ..?

ಮಂಗಳೂರು: ಕರಾವಳಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಇಬ್ರಾಹಿಂ ಖಲೀಲ್ ಕಟ್ಟೆಕಾರ್ ಹಾಗೂ ಆಸಿಯಾ ಪ್ರಕರಣವು ತಲಾಕ್ ಮೂಲಕ ತಾರ್ಕಿಕ ಅಂತ್ಯದ ಬೆನ್ನಲ್ಲೇ ಆಸಿಯಾ ಕೇರಳದಲ್ಲಿ ಮುಸ್ಲಿಂ ಉದ್ಯಮಿಯೊಬ್ಬರನ್ನು ವರಿಸಿದ್ದಾಳೆ ಎನ್ನಲಾಗಿದೆ ಸುಳ್ಯದ ಉದ್ಯಮಿ ಕಲೀಲ್ ಕಟ್ಟೆಕಾರ್ ಎಂಬಾತ ಕೇರಳ ಮೂಲದ ಶಾಂತಿ ಜೂಬಿ ಅಲಿಯಾಸ್ ಆಸಿಯಾಳನ್ನು ಲವ್ ಜಿಹಾದ್ ಮಾಡಿ ಮದುವೆಯಾಗಿರುವ ಪ್ರಕರಣ ದಿನಕ್ಕೊಂದು ಹೈಡ್ರಾಮಾವಾಗಿ ಸುದ್ದಿಯಾಗಿತ್ತು. ಈ ಪ್ರಕರಣ ಕರವಾಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆಸಿಯಾ ಖಲೀಲ್ ನನ್ನು ಬಿಟ್ಟರೂ ಮತ್ತೆ ಹಿಂದೂ ಧರ್ಮಕ್ಕೆ ಹೋಗುವುದಿಲ್ಲ

‘ಶಾಂತಿ’ ಕದಡಿದ ಖಲೀಲ್ ಕಟ್ಟೆಕಾರ್ ನ ಕೈಬಿಟ್ಟು ಮರು ಮದುವೆಯಾದ ಆಸಿಯಾ..!| ಕೇರಳದ ಮುಸ್ಲಿಂ ಉದ್ಯಮಿಯ ಜೊತೆ 2ನೇ ವಿವಾಹ..? Read More »

ಮಂಗಳೂರು: ಹೆತ್ತ ತಂದೆಯಿಂದಲೇ ಪುತ್ರಿಗೆ ಲೈಂಗಿಕ ಕಿರುಕುಳ

ಮಂಗಳೂರು; ತಂದೆಯಿಂದಲೇ ಹೆತ್ತ ಮಗಳ ಮೇಲೆ ಲೈಂಗಿಕ ಕಿರುಕುಳ ನಡೆದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಒಂದನೆ ತರಗತಿ ಕಲಿಯುತ್ತಿರುವ ಮಗಳ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗಳಿಗೆ ಈತ ದೌರ್ಜನ್ಯ ಎಸಗುತ್ತಿರುವುದನ್ನು ವಿರೋಧಿಸಿದ ತನ್ನ ತಾಯಿಗೂ ಹಲ್ಲೆ ನಡೆಸಿದ್ದಾನೆ. ಈತ ಕದ್ರಿ ಪೊಲೀಸ್ ಠಾಣೆ ಯಲ್ಲಿ ರೌಡಿಶೀಟರ್ ಆಗಿದ್ದು ಜೊಮ್ಯಾಟೊದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿ ಈತನನ್ನು ಬಂಧಿಸಿದ್ದಾರೆ.

ಮಂಗಳೂರು: ಹೆತ್ತ ತಂದೆಯಿಂದಲೇ ಪುತ್ರಿಗೆ ಲೈಂಗಿಕ ಕಿರುಕುಳ Read More »

ಬಂಟ್ವಾಳ: ಯುವಕ ನಾಪತ್ತೆಯಾಗುತ್ತಿದ್ದಂತೆ ಕೋಟ್ಯಂತರ ರೂ. ವಂಚನೆ ಬಗ್ಗೆ ಕಾಸರಗೋಡು ಠಾಣೆಯಲ್ಲಿ ದೂರು.!

ಬಂಟ್ವಾಳ: ಕ್ರಿಕೆಟ್ ಆಡವಾಡಲೆಂದು ತೆರಳಿ ವಾಪಾಸ್ ಮನೆಗೆ ಬರದೆ ನಾಪತ್ತೆಯಾಗಿದ್ದಾನೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಯುವಕನ ವಿರುದ್ಧ ಉದ್ಯೋಗದಲ್ಲಿದ್ದ ಸಂಸ್ಥೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಬಗ್ಗೆ ಕಾಸರಗೋಡಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಸಿ.ರೋಡ್ ಕೈಕಂಬ ಸಮೀಪದ ತಾಳಿಪಡ್ಡು ನಿವಾಸಿ ಮುಹಮ್ಮದ್ ಫಾರೂಕ್ ನಾಪತ್ತೆಯಾದ ಯುವಕ. ಈತ ನ.28ರಂದು ಬೆಳಗ್ಗೆ 7:30ಕ್ಕೆ ಕ್ರಿಕೆಟ್ ಆಡಲೆಂದು ಮನೆಯಿಂದ ಹೋದವರು ಅ ಬಳಿಕ ಮನೆಗೆ ವಾಪಸ್ ಬಂದಿಲ್ಲ ಎಂದು ಅವರ

ಬಂಟ್ವಾಳ: ಯುವಕ ನಾಪತ್ತೆಯಾಗುತ್ತಿದ್ದಂತೆ ಕೋಟ್ಯಂತರ ರೂ. ವಂಚನೆ ಬಗ್ಗೆ ಕಾಸರಗೋಡು ಠಾಣೆಯಲ್ಲಿ ದೂರು.! Read More »

ಆಸ್ಪತ್ರೆಯಲ್ಲಿ ಅಶ್ಲೀಲ ವರ್ತನೆ| ಆರೋಪಿ ಡಾ| ರತ್ನಾಕರ್ ಗೆ ಜಾಮೀನು

ಮಂಗಳೂರು: ಕಚೇರಿಯ ಮಹಿಳಾ ಸಿಬಂದಿ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಜತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮ ಅಧಿಕಾರಿ ಡಾ| ರತ್ನಾಕರ್‌ ಅವರಿಗೆ 3ನೇ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ನೀಡಿದ್ದು, ಬಿಡುಗಡೆಯಾಗಿದ್ದಾನೆ. ಮಹಿಳಾ ಸಿಬಂದಿಗಳ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಫೋಟೊ ಹಾಗೂ ವೀಡಿಯೋ ತುಣುಕು ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸುಮಾರು 2-3 ತಿಂಗಳ ಹಿಂದೆ ಈ ಘಟನೆ ಸಂಭವಿಸಿದ್ದು, ತಡವಾಗಿ

ಆಸ್ಪತ್ರೆಯಲ್ಲಿ ಅಶ್ಲೀಲ ವರ್ತನೆ| ಆರೋಪಿ ಡಾ| ರತ್ನಾಕರ್ ಗೆ ಜಾಮೀನು Read More »

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತ – 12 ವರ್ಷದ ಬಾಲಕ ದುರ್ಮರಣ

ಉಪ್ಪಿನಂಗಡಿ: ರಿಕ್ಷಾ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಇದೀಗ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಠ ಮಸೀದಿ ಬಳಿ ಲಾರಿ ಮತ್ತು ರಿಕ್ಷಾ ಢಿಕ್ಕಿ ಹೊಡೆದಿದೆ. ಈ ವೇಳೆ ರಿಕ್ಷಾದಲ್ಲಿದ್ದ 12 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತ – 12 ವರ್ಷದ ಬಾಲಕ ದುರ್ಮರಣ Read More »