ಕರಾವಳಿ

ಮಂಗಳೂರು: ಆರೋಗ್ಯ ಸಿಬ್ಬಂದಿಯ ಸರಸದಾಟ| 10 ಮಂದಿ ಮಹಿಳೆಯರ ವಿಚಾರಣೆ

ಮಂಗಳೂರು: ದ.ಕ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ರತ್ನಾಕರ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಸೇರಿದಂತೆ 10 ಮಂದಿ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆರೋಗ್ಯ ಇಲಾಖೆಯಾ ಅಧಿಕಾರಿಯಾಗಿದ್ದ ಆರೋಪಿ ಡಾ| ರತ್ನಾಕರ್ ಮತ್ತು ಆತನ ಮೊಬೈಲ್ ವಶಪಡಿಸಿಕೊಂಡಿದ ಪೊಲೀಸರು ಅಳವಾದ ತನಿಖೆ ಕೈಗೊಂಡಿದ್ದರು. ರತ್ನಾಕರ್ ನನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದುಕೊಂಡಿದ್ದು ಎರಡು ದಿನಗಳ ಕಸ್ಟಡಿ ಅವಧಿ ಸೋಮವಾರ ಪೂರ್ಣಗೊಳ್ಳುವ ಹಿನ್ನಲೆಯಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಮಂಗಳೂರು: ಆರೋಗ್ಯ ಸಿಬ್ಬಂದಿಯ ಸರಸದಾಟ| 10 ಮಂದಿ ಮಹಿಳೆಯರ ವಿಚಾರಣೆ Read More »

ಇಂದಿನಿಂದ ಧರ್ಮಸ್ಥಳದಲ್ಲಿ ಲಕ್ಷದೀಪ ಸಂಭ್ರಮ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ನ. 29 (ಸೋಮವಾರ) ರಿಂದ ಡಿ. 4ರ ವರೆಗೆ ನೆರವೇರಲಿದೆ. ಈ ಪ್ರಯುಕ್ತ ದೇವಸ್ಥಾನ, ಬೀಡು, ಮುಖ್ಯಧ್ವಾರ, ವಸತಿಗೃಹ, ಉದ್ಯಾನವನ, ಸಭಾಂಗಣ ಸಹಿತ ಕ್ಷೇತ್ರವನ್ನು ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಲಾಗಿದೆ. ಡಿ. 2ರಂದು ಗುರುವಾರ ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಉದ್ಘಾಟಿಸುವರು. ನ. 29ರಿಂದ ಹೊಸಕಟ್ಟೆ ಉತ್ಸವ, ಕೆರೆಕಟ್ಟೆ ಉತ್ಸವ,

ಇಂದಿನಿಂದ ಧರ್ಮಸ್ಥಳದಲ್ಲಿ ಲಕ್ಷದೀಪ ಸಂಭ್ರಮ Read More »

ಪುತ್ತೂರು: ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ| ಅರುಣ್ ಪುತ್ತಿಲ, ಜಗದೀಶ್ ಕಾರಂತ್ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು|

ಪುತ್ತೂರು: ನಗರದ ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ವಿವಾದ ತಾರಕಕ್ಕೇರಿದ್ದು ಇದೀಗ ಪ್ರಮುಖ ಹಿಂದೂ ಸಂಘಟನೆಗಳ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣೆ ವೇದಿಕೆ ಆಯೋಜಕರ ಮೇಲೆ ಐಪಿಸಿ ಸಕ್ಷನ್ 153 ಎ ಯಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಕೊಂಬೆಟ್ಟು ಜ್ಯೂ. ಕಾಲೇಜ್ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆಯಲು ಅರುಣ್ ಕುಮಾರ್ ಪುತ್ತಿಲ ಹಾಗೂ ಚಿನ್ಮಯ ಈಶ್ವರಮಂಗಳ ನೇರ ಹೊಣೆ ಎಂದು ಕ್ಯಾಂಪಸ್ ಫ್ರಂಟ್ ಹಾಗೂ ಎಸ್

ಪುತ್ತೂರು: ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ| ಅರುಣ್ ಪುತ್ತಿಲ, ಜಗದೀಶ್ ಕಾರಂತ್ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು| Read More »

ಉಪ್ಪಿನಂಗಡಿ: ಕರ್ತವ್ಯನಿರತ ಮೆಸ್ಕಾಂ ಸಿಬ್ಬಂದಿ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಮತ್ತು ಸದಸ್ಯನಿಂದ ಹಲ್ಲೆ

ನೆಲ್ಯಾಡಿ : ಉಪ್ಪಿನಂಗಡಿ ಬಳಿ ವಿದ್ಯುತ್ ಸಂಪರ್ಕ ತನಿಖೆ ನಡೆಸಲು ತೆರಳಿದ ಸಂದರ್ಭದಲ್ಲಿ ಕರ್ತವ್ಯ ನಿರತ ಮೆಸ್ಕಾಂ ಜೆಇಇ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಹಾಗೂ ಸದಸ್ಯ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೆಲ್ಯಾಡಿ ಮೆಸ್ಕಾಂ ಶಾಖಾ ಇಂಜಿನಿಯರ್ ರಮೇಶ್.ಬಿ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಕಾರ್ತಿಕೇಯನ್ ಹಾಗೂ ಎಂ.ಕೆ ಪೌಲೋಸ್ ಹಲ್ಲೆ ನಡೆಸಿದವರು ಎನ್ನಲಾಗಿದೆ. ಗುಂಡ್ಯ ಎಂಬಲ್ಲಿ ವಿದ್ಯುತ್ ಸಂಪರ್ಕ ಪರಿಶೀಲನೆ ವೇಳೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ

ಉಪ್ಪಿನಂಗಡಿ: ಕರ್ತವ್ಯನಿರತ ಮೆಸ್ಕಾಂ ಸಿಬ್ಬಂದಿ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಮತ್ತು ಸದಸ್ಯನಿಂದ ಹಲ್ಲೆ Read More »

ಹೂವು ಕೊಯ್ಯಲು ಹೋದ ಯುವತಿ ಕೆರೆಗೆ ಬಿದ್ದು ಸಾವು

ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ. ರಶ್ಮಿತ ಬೆಳಿಗ್ಗೆ ದೇವರಿಗೆ ಪೂಜೆ ಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೂವು ಕೊಯ್ಯಲು ಹೋದ ಯುವತಿ ಕೆರೆಗೆ ಬಿದ್ದು ಸಾವು Read More »

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ : ನಾಲ್ವರನ್ನು ಪೊಲೀಸ್ ವಶಕ್ಕೆ ಪಡೆದ ಆರೋಪ| ಠಾಣೆಯೆದುರು ಜಾಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು|

ಪುತ್ತೂರು: ನಗರದ ಕೊಂಬೆಟ್ಟು ಸರ್ಕಾರಿ ಜ್ಯೂನಿಯರ್ ಕಾಲೇಜ್ ನಲ್ಲಿ ಭಿನ್ನ ಕೋಮಿಗೆ ಸೇರಿದ ಎರಡು ವಿದ್ಯಾರ್ಥಿಗಳ ತಂಡದ ನಡುವೆ ಎರಡು ಬಾರಿ ಹೊಡೆದಾಟ ಹಾಗೂ ಒಂದು ಬಾರಿ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಕೋಮಿಗೆ ಸೇರಿದ ನಾಲ್ವರು ವಿದ್ಯಾರ್ಥಿಗಳನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನ 26 ರಂದು ಸಂಜೆ ನಡೆದಿದೆ. ಹಿಂದೂ ವಿದ್ಯಾರ್ಥಿನಿಯ ಜೊತೆ ಅನ್ಯ ಧರ್ಮೀಯ

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ : ನಾಲ್ವರನ್ನು ಪೊಲೀಸ್ ವಶಕ್ಕೆ ಪಡೆದ ಆರೋಪ| ಠಾಣೆಯೆದುರು ಜಾಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು| Read More »

ಆರೋಗ್ಯ‌ ಸಿಬ್ಬಂದಿಯ ಕಾಮಪುರಾಣ| ಆರೋಪಿಯ ಮತ್ತೊಂದು ಮುಖವಾಡ ಬಯಲು|

ಮಂಗಳೂರು: ಆರೋಗ್ಯ ಇಲಾಖೆ ಅಧಿಕಾರಿಯ ಕಾಮಪುರಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೈದ್ಯ ಡಾ. ರತ್ನಾಕರ್​ನ ಮತ್ತೊಂದು ಮುಖವಾಡ ಇದೀಗ ಬಯಲಾಗಿದೆ. ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್ ವಿರುದ್ಧ ಮಹಿಳಾ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ ಭ್ರಷ್ಟಾಚಾರದ ಆರೋಪ ಸಹ ಮಾಡಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಜಿಲ್ಲಾ‌ ಕಾರ್ಯಕ್ರಮದ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ರತ್ನಾಕರ್, ಕಾರ್ಯಕ್ರಮ ಆಯೋಜನೆ ಹೆಸರಿನಲ್ಲಿಯೂ

ಆರೋಗ್ಯ‌ ಸಿಬ್ಬಂದಿಯ ಕಾಮಪುರಾಣ| ಆರೋಪಿಯ ಮತ್ತೊಂದು ಮುಖವಾಡ ಬಯಲು| Read More »

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನ ಕಾಮಪುರಾಣ| ‘ಆತ ಆಸ್ಪತ್ರೆ ಸಿಬ್ಬಂದಿಯಲ್ಲ..!’ಸ್ಪಷ್ಟನೆ ನೀಡಿದ ಆಸ್ಪತ್ರೆ ಅಧೀಕ್ಷಕರು

ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ಕಾಮಪುರಾಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಅಧೀಕ್ಷಕರು ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊರ್ವ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತಂತೆ ಮಾಧ್ಯಮಗಳು ವರದಿ‌ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ‌ ಅದೀಕ್ಷಕರು ಸ್ಪಷ್ಟನೆ ನೀಡಿದ್ದಾರೆ. ಇಂದು ಮಾದ್ಯಮಗಳಲ್ಲಿ ಡಾ. ರತ್ನಾಕರ್, ಜಿಲ್ಲಾ ಕಾರ್ಯಕ್ರಮಾಧಿಕಾರಿ ಇವರ ಕುರಿತು ವರದಿಗಳು ಪ್ರಚಾರವಾಗುತ್ತಿದ್ದು, ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳು,

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನ ಕಾಮಪುರಾಣ| ‘ಆತ ಆಸ್ಪತ್ರೆ ಸಿಬ್ಬಂದಿಯಲ್ಲ..!’ಸ್ಪಷ್ಟನೆ ನೀಡಿದ ಆಸ್ಪತ್ರೆ ಅಧೀಕ್ಷಕರು Read More »

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲೊಬ್ಬ ರಸಿಕ ಡಾಕ್ಟರ್| ಸಹೋದ್ಯೋಗಿಗಳನ್ನೇ ಸರಸಕ್ಕೆ ಕರೆಯುತ್ತಿದ್ದವ ಈಗ ಸಸ್ಪೆಂಡ್|

ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಕುಷ್ಠ ರೋಗ ವಿಭಾಗದ ವೈದ್ಯನೊಬ್ಬ ಸಹೋದ್ಯೋಗಿ ಯುವತಿಯರ ಜೊತೆ ಚಕ್ಕಂದ ಆಡುತ್ತಾ ಲೈಂಗಿಕ ಕಿರುಕುಳ ನೀಡುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ವೈದ್ಯನನ್ನು ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಸಸ್ಪೆಂಡ್ ಮಾಡಿದ್ದಾರೆ. ವೆನ್ಲಾಕ್ ಕುಷ್ಠ ರೋಗ ವಿಭಾಗದ ವೈದ್ಯ ಡಾ. ರತ್ನಾಕರ್ ಕರ್ತವ್ಯದಿಂದ ಅಮಾನತಾಗಿರುವ ವೈದ್ಯಾಧಿಕಾರಿ.‌ ಕಳೆದ ಹಲವು ಸಮಯದಿಂದ ಈತ ತನ್ನ ವಿಭಾಗದ ಕೆಲವು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ವಿಚಾರ ಅಲ್ಲಿನ ಇತರ ಸಿಬಂದಿಗೂ ತಿಳಿದಿತ್ತು.‌ ಆತನ ಜೊತೆ

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲೊಬ್ಬ ರಸಿಕ ಡಾಕ್ಟರ್| ಸಹೋದ್ಯೋಗಿಗಳನ್ನೇ ಸರಸಕ್ಕೆ ಕರೆಯುತ್ತಿದ್ದವ ಈಗ ಸಸ್ಪೆಂಡ್| Read More »

ಕುಕ್ಕೆ: ಡಿ.1ರಿಂದ ಜಾತ್ರಾರಂಭ| ಡಿ.3 ಲಕ್ಷ ದೀಪೋತ್ಸವ, ಡಿ.9ರಂದು ವೈಭವದ ಚಂಪಾಷಷ್ಠಿ ಮಹೋತ್ಸವ|

ಮಂಗಳೂರು: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ವೈಭವಕ್ಕೆ ದಿನಗಣನೆ ಆರಂಭವಾಗಿದೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಮಹೋತ್ಸವ ಆರಂಭವಾದರೆ, ಡಿ.15 ಕೊಪ್ಪರಿಗೆ ಇಳಿಸುವುದರ ಮೂಲಕ ಜಾತ್ರಾ ಉತ್ಸವ ಸಮಾಪನಗೊಳ್ಳಲಿದೆ. ಡಿ.9ರಂದು ಚಂಪಾಷಷ್ಠಿಯ ವೈಭವದ ಬ್ರಹ್ಮ ರಥೋತ್ಸವ ಕ್ಷೇತ್ರದಲ್ಲಿ ಜರುಗಲಿದೆ. ಉದ್ಯಮಿ ದಿ.ಮುತ್ತಪ್ಪ ರೈ ಸೇವಾ ರೂಪದಲ್ಲಿ ನೀಡಿದ ಬ್ರಹ್ಮರಥದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಾರೂಢನಾಗಿ ಲಕ್ಷಾಂತರ ಭಕ್ತರಿಗೆ ದರ್ಶನ ಭಾಗ್ಯ ನೀಡಲಿದೆ. ಚಂಪಾಷಷ್ಠಿಯ ಈ ವೈಭವ ಕಾಣಲು,

ಕುಕ್ಕೆ: ಡಿ.1ರಿಂದ ಜಾತ್ರಾರಂಭ| ಡಿ.3 ಲಕ್ಷ ದೀಪೋತ್ಸವ, ಡಿ.9ರಂದು ವೈಭವದ ಚಂಪಾಷಷ್ಠಿ ಮಹೋತ್ಸವ| Read More »