ಕರಾವಳಿ

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ| ಅಪಾರ ಹಾನಿ, ಬೆಳೆನಾಶ| ಇನ್ನೂ ಮೂರುದಿನ ಭಾರೀ ಮಳೆ ಸಾಧ್ಯತೆ|

ಬೆಂಗಳೂರು: ಕಳೆದೆರಡು ವಾರಗಳಿಂದ ಸತತವಾಗಿ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ. ನಿರಂತರವಾಗಿ ಬೀಳುತ್ತಿರುವ ಮಳೆಗೆ ರಸ್ತೆಗಳು ಹಾನಿಗೀಡಾಗಿವೆ. ಕೆಲವೆಡೆ ಮನೆ ಕುಸಿತ, ರಸ್ತೆ ಕುಸಿತವೂ ಉಂಟಾದ ವರದಿಯಾಗಿದೆ. ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ಸತತ ಮಳೆಗೆ ಸಿಕ್ಕಿ ಹಾನಿಗೀಡಾಗಿವೆ. ಅಕಾಲಿಕ ಮಳೆಗೆ ಜನಜೀವನ ತತ್ತರಿಸುವಂತಾಗಿದೆ. ಹಿಂಗಾರು ಮಳೆ ಆರಂಭದಿಂದಲೂ ಚುರುಕಾಗಿದ್ದು, ನಿರಂತರವಾಗಿ ಬೀಳುತ್ತಿದೆ. ನಿನ್ನೆಯೂ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ […]

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ| ಅಪಾರ ಹಾನಿ, ಬೆಳೆನಾಶ| ಇನ್ನೂ ಮೂರುದಿನ ಭಾರೀ ಮಳೆ ಸಾಧ್ಯತೆ| Read More »

ಮಂಗಳೂರು: ಸಮುದ್ರದ ತಂಗಾಳಿಗೆ ಮೈಯೊಡ್ಡಿ ಸಲ್ಲಾಪದಲ್ಲಿದ್ದ ಭಿನ್ನಕೋಮಿನ ಜೋಡಿ ಪೊಲೀಸ್ ವಶ|

ಮಂಗಳೂರು: ನಗರದ ಹೊರವಲಯದ ‌ಸುರತ್ಕಲ್ ಬೀಚ್ ಬಳಿ ಕಾರೊಂದರಲ್ಲಿ ಸಲ್ಲಾಪದಲ್ಲಿ‌ ತೊಡಗಿದ್ದ ಭಿನ್ನ ಕೋಮಿನ ಜೋಡಿಯೊಂದು ಪೊಲೀಸರ ವಶವಾಗಿದೆ. ಕುದ್ರೋಳಿಯ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೊಬ್ಬಳು ಕಾರಿನಲ್ಲಿ ಇಂದು ಸಂಜೆ ಪತ್ತೆಯಾಗಿದ್ದು ಇವರಿಗೆ ಪಕ್ಕದಲ್ಲೇ ಇನ್ನೊಬ್ಬಾತ ಅವರಿಗೆ ಸೆಕ್ಯುರಿಟಿ ನೀಡುವ ಕಾರ್ಯ ಮಾಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಸುರತ್ಕಲ್ ಭಜರಂಗದಳದ ಕಾರ್ಯಕರ್ತರು ಮೊದಲು ಆತನನ್ನು ವಿಚಾರಿಸಿದ್ದು ನಂತರ ಜೋಡಿಗಳನ್ನು ಠಾಣೆಗೆ ಕರೆದೊಯ್ದಿದ್ದಾರೆ. ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಯುವತಿ ಸುರತ್ಕಲ್ ಪೋಲಿಸರ ವಶದಲ್ಲಿದ್ದು, ಪತ್ತೆಯಾದ ಯುವಕನನ್ನು ಮೆಹಬೂಬ್

ಮಂಗಳೂರು: ಸಮುದ್ರದ ತಂಗಾಳಿಗೆ ಮೈಯೊಡ್ಡಿ ಸಲ್ಲಾಪದಲ್ಲಿದ್ದ ಭಿನ್ನಕೋಮಿನ ಜೋಡಿ ಪೊಲೀಸ್ ವಶ| Read More »

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತ ಗುಂಪು| ಮಾತಿನ ಚಕಮಕಿ, ಪೊಲೀಸರ ಮದ್ಯಪ್ರವೇಶ|

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಅಪರಿಚಿತ ಯುವಕರ ಗುಂಪೊಂದು ಹಿಂಬಾಲಿಸಿಕೊಂಡು ಬಂದಿದ್ದು, ಹಾಗೂ ವಿದ್ಯಾರ್ಥಿಗಳ ಮದ್ಯೆ ಮಾತಿನ ಚಕಮಕಿ ನಡೆದ ಘಟನೆ ಇಂದು ಸಂಜೆ ನಗರದ ನೆಲ್ಲಿಕಟ್ಟೆಯಲ್ಲಿ ನಡೆದಿದೆ. ಅಪರಿಚಿತ ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ಗೆಳೆಯರಲ್ಲಿ ತಿಳಿಸಿದ್ದಾರೆ. ಆಗ ಸಹಪಾಠಿ ವಿದ್ಯಾರ್ಥಿಗಳು ಆಗಮಿಸಿ ಹಿಂಬಾಲಿಸಿಕೊಂಡು ಬಂದ ಯುವಕರಲ್ಲಿ ಪ್ರಶ್ನಿಸಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ಚಕಮಕಿ ಯಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕರನ್ನು ಪುತ್ತೂರು ಮಹಿಳಾ ಠಾಣೆಗೆ ಕರೆದೊಯ್ದಿದ್ದಾರೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತ ಗುಂಪು| ಮಾತಿನ ಚಕಮಕಿ, ಪೊಲೀಸರ ಮದ್ಯಪ್ರವೇಶ| Read More »

ಉಪ್ಪಿನಂಗಡಿ: ವಿದ್ಯಾರ್ಥಿನಿಗಾಗಿ ಹೊಡೆದಾಡಿಕೊಂಡ ವಿದ್ಯಾರ್ಥಿಗಳು| ಐವರು ಆಸ್ಪತ್ರೆಗೆ ಅಡ್ಮಿಟ್|

ಉಪ್ಪಿನಂಗಡಿ: ವಿದ್ಯಾರ್ಥಿನಿಗಾಗಿ ಕಾಲೇಜು ಆವರಣದಲ್ಲಿ ಎರಡು ವಿದ್ಯಾರ್ಥಿ ತಂಡಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಉಪ್ಪಿನಂಗಡಿ ಕಾಲೇಜೊಂದರಲ್ಲಿ ನಡೆದಿದೆ. ಹೊಡೆದಾಟದಲ್ಲಿ ಎರಡೂ ಕಡೆಯ 5 ಮಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯೋರ್ವಳ ಮೊಬೈಲ್ ಸಂಖ್ಯೆಯನ್ನು ನೀಡಬೇಕೆಂದು ಭಿನ್ನ ಕೋಮಿನ ಸಹಪಾಠಿ ವಿದ್ಯಾರ್ಥಿಯೋರ್ವ ಕೇಳಿದ್ದು ಇದನ್ನು ಆಕ್ಷೇಪಿಸಿ ವಿದ್ಯಾರ್ಥಿನಿ ಪರ ತಂಡದ ಮೂವರು ವಿದ್ಯಾರ್ಥಿಗಳು ವಿಚಾರಿಸಲು ಹೋಗಿದ್ದಾಗ ಇವರ ಮೇಲೆ ಮೂವತ್ತಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಗುಂಪು ಮುಗಿಬಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನೊಂದು

ಉಪ್ಪಿನಂಗಡಿ: ವಿದ್ಯಾರ್ಥಿನಿಗಾಗಿ ಹೊಡೆದಾಡಿಕೊಂಡ ವಿದ್ಯಾರ್ಥಿಗಳು| ಐವರು ಆಸ್ಪತ್ರೆಗೆ ಅಡ್ಮಿಟ್| Read More »

ಪುತ್ತೂರು: ಮಹಿಳೆಯ ದೇಹ ಸ್ಪರ್ಶಿಸಿ ಯುವಕನಿಂದ ಅಸಭ್ಯ ವರ್ತನೆ| ಕೇಸು ದಾಖಲು

ಪುತ್ತೂರು : ಯುವಕನೊಬ್ಬ ಅನ್ಯ ಧರ್ಮದ ಮಹಿಳೆಯ ದೇಹ ಸ್ಪರ್ಷಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಯುವಕನನ್ನು ಧಳಿಸಿದ ಹಾಗೂ ಸಂತ್ರಸ್ತ ಮಹಿಳೆ ಯುವಕನ ವಿರುದ್ದ ಠಾಣೆಗೆ ದೂರು ನೀಡಿದ ಘಟನೆ ಪುತ್ತೂರು ನಗರದ ಹೊರವಲಯ ಮರೀಲ್ ನಲ್ಲಿ ನ.18ರಂದು ನಡೆದಿದೆ. ಪುತ್ತೂರು ತಾಲೂಕು ರಾಮಕುಂಜ ಗ್ರಾಮದ ಹಳೆನೇರೆಂಕಿ ನಿವಾಸಿ ಪ್ರಕಾಶ್ (32ವ.) ಕಿರುಕುಳ ನೀಡಿರುವ ಬಗ್ಗೆ ಸಂತ್ರಸ್ತ ಮಹಿಳೆ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆ, ಆರೋಪಿ

ಪುತ್ತೂರು: ಮಹಿಳೆಯ ದೇಹ ಸ್ಪರ್ಶಿಸಿ ಯುವಕನಿಂದ ಅಸಭ್ಯ ವರ್ತನೆ| ಕೇಸು ದಾಖಲು Read More »

ಚಂದ್ರಗ್ರಹಣ ಹಿನ್ನಲೆ| ದ.ಕ ಜಿಲ್ಲೆಯ ದೇವಸ್ಥಾನಗಳಲ್ಲಿ ಇಂದು ಪೂಜಾ ಸಮಯ ಬದಲಾವಣೆ ಇದೆಯೇ?

ಮಂಗಳೂರು: ಇಂದು ಕಾರ್ತಿಕ ಪೂರ್ಣಿಮೆಯ ದಿನ ಶುಕ್ರವಾರ ಸಂಭವಿಸುವ ಅಪರೂಪದ ಚಂದ್ರ ಗ್ರಹಣ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ದೇವಸ್ಥಾನಗಳಲ್ಲಿ ಪೂಜಾ ಸಮಯ ಬದಲಾವಣೆ, ವಿಶೇಷ ಪೂಜೆ, ಸ್ವಚ್ಛತೆ ಇರುವುದಿಲ್ಲ. ಭಾರತದ ದಕ್ಷಿಣ ಭಾಗಕ್ಕೆ ಈ ಚಂದ್ರ ಗ್ರಹಣದ ಎಫೆಕ್ಟ್ ಇಲ್ಲದಿರುವುದರಿಂದ ಯಾವುದೇ ಬದಲಾವಣೆ ಇಲ್ಲ ಅಂತಾ ದೇವಸ್ಥಾನಗಳ ಆಡಳಿತ ಮಂಡಳಿ ಹೇಳಿವೆ.

ಚಂದ್ರಗ್ರಹಣ ಹಿನ್ನಲೆ| ದ.ಕ ಜಿಲ್ಲೆಯ ದೇವಸ್ಥಾನಗಳಲ್ಲಿ ಇಂದು ಪೂಜಾ ಸಮಯ ಬದಲಾವಣೆ ಇದೆಯೇ? Read More »

ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣ| ನಾಪತ್ತೆಯಾದ ವಕೀಲ ರಾಜೇಶ್ ಮನೆಯಲ್ಲಿ ಪೊಲೀಸರಿಂದ ಶೋಧ

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯಾದ ವಕೀಲ ಕೆ.ಎಸ್.ಎನ್ ರಾಜೇಶ್ ಭಟ್ ಅವರ ಮನೆಯಲ್ಲಿ ಪೊಲೀಸರು ನ.18ರ ಬುಧವಾರ ಶೋಧ ನಡೆಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಎಸಿಪಿ ರಂಜಿತ್ ಬಂಡಾರು ಅವರ ನೇತೃತ್ವದ ಪೊಲೀಸರ ತಂಡ ಬಿಜೈನ ಮನೆಯಲ್ಲಿ ಶೋಧ ನಡೆಸಿದೆ. ತನಿಖೆಗೆ ಅಗತ್ಯವಾದ ದಾಖಲೆಗಳಿಗಾಗಿ ಶೋಧ ನಡೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರಿನ ಖ್ಯಾತ ವಕೀಲರಾಗಿದ್ದ ರಾಜೇಶ್ ಭಟ್ ಅವರು ತಮ್ಮ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆ ಬಂದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣ| ನಾಪತ್ತೆಯಾದ ವಕೀಲ ರಾಜೇಶ್ ಮನೆಯಲ್ಲಿ ಪೊಲೀಸರಿಂದ ಶೋಧ Read More »

ಬಂಟ್ವಾಳ: ರವಿ ಪೂಜಾರಿ ಹೆಸರಲ್ಲಿ ಬೆದರಿಕೆ ಕರೆ ಪ್ರಕರಣ ರದ್ದುಗೊಳಿಸಿದ ಕೋರ್ಟ್

ಬಂಟ್ವಾಳ: ಕೃಷಿಕರೊಬ್ಬರ ಮೊಬೈಲ್ ಗೆ ರವಿ ಪೂಜಾರಿ ಹೆಸರು ಹೇಳಿಕೊಂಡು 25 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಕೊಡದೇ ಇದ್ದರೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣವನ್ನು ‌ಬಂಟ್ವಾಳ ಜೆಎಂಎಫ್ ಸಿ ನ್ಯಾಯಾಲಯ‌ ರದ್ದು ಪಡಿಸಿದೆ. ವಿಟ್ಲಾ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಾತೃಶ್ರೀ ಕೃಪಾ ನಿವಾಸಿ ವೆಂಕಟರಮಣ ಭಟ್ ಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಈಗ ನ್ಯಾಯಾಲಯದಲ್ಲಿ ದೂರುದಾರರು ಪ್ರಕರಣವನ್ನು ಮುಂದುವರಿಸದಿರಲು ನಿರ್ಧರಿಸಿದ ಕಾರಣ ಪ್ರಕರಣ ರದ್ದುಗೊಳ್ಳುವ

ಬಂಟ್ವಾಳ: ರವಿ ಪೂಜಾರಿ ಹೆಸರಲ್ಲಿ ಬೆದರಿಕೆ ಕರೆ ಪ್ರಕರಣ ರದ್ದುಗೊಳಿಸಿದ ಕೋರ್ಟ್ Read More »

ಮಂಗಳೂರು: ಮಕ್ಕಳ ಮಾರಾಟ ಮತ್ತು ಕೊಳ್ಳುವವರಿಗೆ 5 ವರ್ಷ ಸಜೆ

ಮಂಗಳೂರು: ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್ 81 ಪ್ರಕಾರ 5 ವರ್ಷ ಸೆರೆಮನೆ ವಾಸ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು. ಮಕ್ಕಳ ಮಾರಾಟ ಅಪರಾಧವಾಗಿದ್ದು, ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯನ್ನು 3 ರಿಂದ 7 ವರ್ಷಗಳವರೆಗೆ ವಿಧಿಸಬಹುದಾಗಿದೆ.ಹೆಚ್ಚಿನ ಮಾಹಿತಿಗೆ ರಾಜ್ಯ ದತ್ತು ಸಂಪನ್ಮೂಲ ಏಜೆನ್ಸಿ ದೂ.ಸಂ:080-22867381/2, ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂ.ಸಂ.:0824-2440004 ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಮಕ್ಕಳ ಮಾರಾಟ ಮತ್ತು ಕೊಳ್ಳುವವರಿಗೆ 5 ವರ್ಷ ಸಜೆ Read More »

ಬೈಕ್ ಗೆ ಅಡ್ಡಬಂದ ನಾಯಿ| ಸಹಸವಾರ ಸಾವು

ಕಡಬ: ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡಬಂದ ಪರಿಣಾಮ ಅಪಘಾತ ಸಂಭವಿಸಿ ಸಹಸವಾರ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡೆದಿದೆ. ಮೃತಪಟ್ಟವರನ್ನು ಗ್ರಾಮದ ಸುರೇಶ್ (53) ಎಂದು ಗುರುತಿಸಲಾಗಿದೆ. ಇವರು ಎಡಮಂಗಲದಿಂದ ಕೊಳಂಬೆ ಎಂಬಲ್ಲಿಗೆ ಟ್ಯಾಪಿಂಗ್ ಗೆ ಮಾಡಲು ತಮ್ಮ ಸಂತೋಷ್ ಎಂಬವರೊಂದಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಪರಿಣಾಮ ಸುರೇಶ್ ಎಂಬವರು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿನ ವೈದ್ಯರ ಸಲಹೆಯಂತೆ ಮಂಗಳೂರಿನ

ಬೈಕ್ ಗೆ ಅಡ್ಡಬಂದ ನಾಯಿ| ಸಹಸವಾರ ಸಾವು Read More »