ಕರಾವಳಿ

ದ.ಕ ಜಿಲ್ಲೆಯಲ್ಲಿ ಪುಣ್ಯಕ್ಷೇತ್ರಗಳಿಗೆ ವಾರಾಂತ್ಯದಲ್ಲೂ ಮುಕ್ತ ಅವಕಾಶ- ಕೋವಿಡ್ ನೆಗೆಟಿವ್ ವರದಿ ಅಗತ್ಯ- ಡಿಸಿ ಆದೇಶ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ಷರತ್ತುಗಳೊಂದಿಗೆ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ಆದರೆ ದೇವಾಲಯಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಡಳಿತ ಮಂಡಳಿಯು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರಬೇಕು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ […]

ದ.ಕ ಜಿಲ್ಲೆಯಲ್ಲಿ ಪುಣ್ಯಕ್ಷೇತ್ರಗಳಿಗೆ ವಾರಾಂತ್ಯದಲ್ಲೂ ಮುಕ್ತ ಅವಕಾಶ- ಕೋವಿಡ್ ನೆಗೆಟಿವ್ ವರದಿ ಅಗತ್ಯ- ಡಿಸಿ ಆದೇಶ Read More »

ಕರಾವಳಿಯಲ್ಲಿ ‘ಬುತ್ತಿಯೊಳಗೆ ಸಾವು!’ ಉಗ್ರರಿಂದ ವಿಧ್ವಂಸಕ ಕೃತ್ಯಕ್ಕೆ ‌ಸಂಚು| ಭಯಾನಕ ಮಾಹಿತಿ ಹೊರಹಾಕಿದ ಗುಪ್ತಚರ ಇಲಾಖೆ

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗುವ ಸಾಧ್ಯತೆಗಳ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಭಯಾನಕ ಮಾಹಿತಿಯನ್ನು ಹೊರಹಾಕಿದೆ. ಹಬ್ಬದ ಸಂದರ್ಭದಲ್ಲಿ ಕರಾವಳಿಯಲ್ಲಿ ಜಾಸ್ತಿ ಜನಸಂದಣಿ ಸೇರುವ ಜಾಗದಲ್ಲಿ ಉಗ್ರರು ವಿಧ್ವಂಸಕ ಕೃತ್ಯಗಳನ್ನು ಎಸಗುವ ಬಗ್ಗೆ ಯೋಜನೆ ಹಾಕಿರುವ ಮಾಹಿತಿ ಕೇಂದ್ರ ಗುಪ್ತಚರ ಇಲಾಖೆಗೆ ಲಭ್ಯವಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ತುರಾಯ ಸ್ಯಾಟಲೈಟ್ ಫೋನ್ ಸಂಪರ್ಕ ಸಾಧಿಸುತ್ತಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು. ಸಂಶಯಾಸ್ಪದ ಪ್ರದೇಶಗಳಿಗೆ ಅಧಿಕಾರಿಗಳು ತೆರಳಿ ಪರಿಶೀಲನೆ ಕೂಡ

ಕರಾವಳಿಯಲ್ಲಿ ‘ಬುತ್ತಿಯೊಳಗೆ ಸಾವು!’ ಉಗ್ರರಿಂದ ವಿಧ್ವಂಸಕ ಕೃತ್ಯಕ್ಕೆ ‌ಸಂಚು| ಭಯಾನಕ ಮಾಹಿತಿ ಹೊರಹಾಕಿದ ಗುಪ್ತಚರ ಇಲಾಖೆ Read More »

ದ.ಕ‌‌ ಗಡಿಭಾಗದ ಮದ್ಯದಂಗಡಿಗಳಲ್ಲಿ ಮದ್ಯ‌ ಮಾರಾಟಕ್ಕೆ ಷರತ್ತುಬದ್ಧ ಅನುಮತಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿನ 19 ಗ್ರಾಮಗಳ ಮದ್ಯದಂಗಡಿಗಳಿಗೆ ಇದೇ ಸೆ.21ರಿಂದ ಮುಂದಿನ ಆದೇಶದವರೆಗೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರಗೆ ಕೆಲವು ಷರತ್ತುಗಳನ್ನು ಕಡ್ಡಾಯ ವಾಗಿ ಪಾಲಿಸಿ ವ್ಯವಹಾರ ನಡೆಸಲು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಮದ್ಯ ಮಾರಾಟ ಮಳಿಗೆಯಲ್ಲಿನ ನೌಕರರು ಹಾಗೂ ಮದ್ಯಖರೀದಿಗೆ ಬರುವ ಗ್ರಾಹಕರುಗಳು ಕಡ್ಡಾಯವಾಗಿ ಮಾಸ್ಕ್

ದ.ಕ‌‌ ಗಡಿಭಾಗದ ಮದ್ಯದಂಗಡಿಗಳಲ್ಲಿ ಮದ್ಯ‌ ಮಾರಾಟಕ್ಕೆ ಷರತ್ತುಬದ್ಧ ಅನುಮತಿ Read More »

ಬಂಟ್ವಾಳ| ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಕರಿಮಣಿ‌ ಸರ ಎಗರಿಸಿದ ಸುಲಿಗೆಕೋರರ ಬಂಧನ|

ಬಂಟ್ವಾಳ: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದು ಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕರಿಮಣಿ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇರ್ವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶನಿವಾರ ನಡೆದಿದೆ. ಮಹಿಳೆ ವತ್ಸಲಾ ಎಂಬವರ ಕುತ್ತಿಗೆಯಿಂದ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಸುಲಿಗೆ ಮಾಡಿ ಪರಾರಿಯಾಗಿದ್ದರು. ಬಂಧಿತ ಆರೋಪಿಗಳನ್ನು ಪುತ್ತೂರು ತಾಲೂಕಿನ ಅರ್ಯಾಪು ಗ್ರಾಮದ ವಲತ್ತಡ್ಕ ರೋಹಿತ್, ಕುಂಜಿರ್ ಪಂಜದ ದೇವಸ್ಯ ನಿವಾಸಿ ಲೋಹಿತ್ ಪಿ.ಆರ್.

ಬಂಟ್ವಾಳ| ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಕರಿಮಣಿ‌ ಸರ ಎಗರಿಸಿದ ಸುಲಿಗೆಕೋರರ ಬಂಧನ| Read More »

ಸಿಎಂ ಗೆ ಕೊಲೆ ಬೆದರಿಕೆ| ಹಿಂದೂ ಮಹಾಸಭಾ ಮುಖಂಡರ ವಿರುದ್ದ ಕೇಸ್|

ಮಂಗಳೂರು: ಮೈಸೂರು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ಡಾ. ಲೋಹಿತ್ ಕುಮಾರ್ ಸುವರ್ಣ ಕೇಸು ದಾಖಲಿಸಿದ್ದಾರೆ. ನಗರದ ಖಾಸಗಿ ಹೊಟೇಲ್‌ನಲ್ಲಿ ಶನಿವಾರ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ”ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ, ನೀವು ಯಾವ ಲೆಕ್ಕ

ಸಿಎಂ ಗೆ ಕೊಲೆ ಬೆದರಿಕೆ| ಹಿಂದೂ ಮಹಾಸಭಾ ಮುಖಂಡರ ವಿರುದ್ದ ಕೇಸ್| Read More »

ರಾಜ್ಯ ಕರಾವಳಿಯಲ್ಲಿ ಸ್ಲೀಪರ್‌ಸೆಲ್ ಗಳು ಚುರುಕು| ಗುಪ್ತಚರ ಇಲಾಖೆಯಿಂದ ಹೈ ಅಲರ್ಟ್.

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಕೇಂದ್ರ ಗುಪ್ತಚರ ಎಜೆನ್ಸಿಗಳು ಹೈ ಅಲರ್ಟ್ ಆಗಿವೆ. ರಾಜ್ಯ ಕರಾವಳಿಯಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆದಿರುವ ಬಗ್ಗೆ ಮಾಹಿತಿ ಕಲೆಹಾಕಿರುವ ಕೇಂದ್ರ ಬೇಹುಗಾರಿಕಾ ಸಂಸ್ಥೆಗಳು, ರಾಜ್ಯದಲ್ಲಿ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್​ಗಳು ಮತ್ತೆ ಆಯಕ್ಟಿವ್ ಆಗಿರುವ ಬಗ್ಗೆ ಚುರುಕುಗೊಂಡಿದ್ದು ತನಿಖೆ ನಡೆಸುತ್ತಿವೆ. ಬೇಹುಗಾರಿಕಾ ಅಧಿಕಾರಿಗಳು ರಾಜ್ಯದ 4 ಕಡೆ ಸ್ಯಾಟಲೈಟ್ ಫೋನ್ ಇಂಟರ್ ಸೆಪ್ಟ್ ಮಾಡಿದ್ದವು. ನಿಗೂಢ ವ್ಯಕ್ತಿಗಳು ಕರಾವಳಿ ಹಾಗು ಮಲೆನಾಡು ಭಾಗದ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸುತ್ತಿರುವ

ರಾಜ್ಯ ಕರಾವಳಿಯಲ್ಲಿ ಸ್ಲೀಪರ್‌ಸೆಲ್ ಗಳು ಚುರುಕು| ಗುಪ್ತಚರ ಇಲಾಖೆಯಿಂದ ಹೈ ಅಲರ್ಟ್. Read More »

ಮಂಗಳೂರು: ಸೆ.20ರಿಂದ 6 ಹಾಗೂ 7ನೇ ತರಗತಿ ಆರಂಭ

ಮಂಗಳೂರು : ದ.ಕ ಜಿಲ್ಲೆ ಸೆ.20ರಿಂದ 6 ಹಾಗೂ 7ನೇ ತರಗತಿ ಆರಂಭವಾಗಲಿದೆ. ಸೆ.17ರಿಂದ 8, 9 ಹಾಗೂ 10ನೇ ಭೌತಿಕ ತರಗತಿಗ ಆರಂಭವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 586 ಶಾಲೆಗಳಲ್ಲಿ ತರಗತಿ ಆರಂಭವಾಗಿದೆ. 9 ಹಾಗೂ 10ನೇ ತರಗತಿ ಬೆಳಗ್ಗೆ 9ರಿಂದ ಅಪರಾಹ್ನ 1.30ರವರೆಗೆ ಹಾಗೂ 8ನೇ ತರಗತಿ ಅಪರಾಹ್ನ 2ರಿಂದ ಸಂಜೆ 4.30ರವರೆಗೆ ನಡೆಯುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ದ.ಕ ಡಿಡಿಪಿಐ ಮಲ್ಲೇಸ್ವಾಮಿ, ಪ್ರೌಢಶಾಲೆ ಆರಂಭವಾಗುವು ಹಿನ್ನೆಲೆ ಶಾಲಾ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು

ಮಂಗಳೂರು: ಸೆ.20ರಿಂದ 6 ಹಾಗೂ 7ನೇ ತರಗತಿ ಆರಂಭ Read More »

ನಾಲ್ಕು ತಿಂಗಳಿನಿಂದ ಸಂಬಳ ನೀಡದೇ ದ್ವೇಷ ಸಾಧಿಸುತ್ತಿರುವ ಹಿರಿಯ ಅಧಿಕಾರಿಗಳು ….!!

ಪುತ್ತೂರು: ಅರಣ್ಯಾಧಿಕಾರಿ ಕಳೆದ 4 ತಿಂಗಳಿನಿಂದ ಸಂಬಳ ಇಲ್ಲದೆ ಕೆಲಸ ಮಾಡುತ್ತಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಿರಿಯ ಅಧಿಕಾರಿಗಳ ವೈಯುಕ್ತಿಕ ದ್ವೇಷದಿಂದಾಗಿ ಸಂಬಳ ಸಿಗುತ್ತಿಲ್ಲ ಎಂದು ಅರಣ್ಯಾಧಿಕಾರಿ ಆರೋಪಿಸಿದ್ದಾರೆ. ಪುತ್ತೂರು ಉಪ ವಲಯ ಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ಸಂಬಳವಿಲ್ಲದೆ ದುಡಿಯುತ್ತಿರುವ ಅಧಿಕಾರಿಯಾಗಿದ್ದು, ಈ ಹಿಂದೆ ಇವರನ್ನು ಸಕಾರಣವಿಲ್ಲದೆ ಹಿರಿಯ ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದರು ಎಂದು ಆರೋಪಿಸಲಾಗಿದ್ದು, ಹಿರಿಯ ಅಧಿಕಾರಿಗಳ ಕ್ರಮ ಪ್ರಶ್ನಿಸಿ ಸಂಜೀವ ಪೂಜಾರಿಯವರು ಕರ್ನಾಟಕ ರಾಜ್ಯ ಆಡಳಿತ ನ್ಯಾಯಾಧೀಕರಣದ ಮೊರೆ ಹೋಗಿದ್ದರು. ಅಲ್ಲಿ ಉಪ ವಲಯಾಧಿಕಾಧಿಕಾರಿ

ನಾಲ್ಕು ತಿಂಗಳಿನಿಂದ ಸಂಬಳ ನೀಡದೇ ದ್ವೇಷ ಸಾಧಿಸುತ್ತಿರುವ ಹಿರಿಯ ಅಧಿಕಾರಿಗಳು ….!! Read More »

ಮೀನು ಪ್ರೀಯರೇ ಮಂಗಳೂರಿಗೆ ಹೊರಡಿ| ಅಗ್ಗವಾಗಿದೆ ಮೀನು ರೇಟ್, ಗ್ರಾಹಕ ಫುಲ್ ಖುಷ್|

ಮಂಗಳೂರು: ಕರಾವಳಿಗೆ ಹೋಗಿ ಸಖತ್ತಾಗಿ ಮೀನೂಟ ಮಾಡಬೇಕು ಅಂತಾ ನೀವೇನಾದರೂ ಪ್ಲ್ಯಾನ್ ಮಾಡಿದ್ರೆ ಇದುವೇ ರೈಟ್ ಟೈಮ್. ಮೀನೂಟ ಪ್ರಿಯರಿಗೆ ಸಂತಸದ ಸುದ್ದಿ ಮಂಗಳೂರಿನಲ್ಲಿ ಕಾಯುತ್ತಿದೆ.ಇಷ್ಟು ದಿನ ಗಗನೆಕ್ಕೆರಿದ ತಾಜಾ ಮೀನಿನ ದರದಲ್ಲಿ ಸದ್ಯ ಭಾರೀ ಇಳಿಕೆಯಾಗಿದೆ.ತಾಜಾ ಮೀನುಗಳು ಅಗ್ಗದ ದರದಲ್ಲಿ ಮಂಗಳೂರಿನಲ್ಲಿ ದೊರಕುತ್ತಿದೆ. ಮೀನು ಪ್ರಿಯರ ಜೊತೆಗೆ, ಮೀನು ಮಾರಾಟಗಾರರು, ಮೀನು ಖರೀದಿದಾರರು ಫುಲ್ ಖುಷ್ ಆಗಿದ್ದಾರೆ. ಮೀನು ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣವಿದೆ. ‘ಅಂಜಲ್, ಮಾಂಜಿ, ಮದಿಮಾಲ್, ಡಿಸ್ಕೋ, ಬಂಗುಡೆ. ಭಲೇ ಅಣ್ಣ, ಭಲೇ ಅಕ್ಕ.

ಮೀನು ಪ್ರೀಯರೇ ಮಂಗಳೂರಿಗೆ ಹೊರಡಿ| ಅಗ್ಗವಾಗಿದೆ ಮೀನು ರೇಟ್, ಗ್ರಾಹಕ ಫುಲ್ ಖುಷ್| Read More »

ಉಪ್ಪಿನಂಗಡಿ: ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು

ಉಪ್ಪಿನಂಗಡಿ: ಸರಳಿಕಟ್ಟೆ ಮನೆಯೊಂದಕ್ಕೆ ಕಳ್ಳರು ನುಗ್ಗಿದ್ದು ಸುಮಾರು ಒಂದು ಲಕ್ಷದ ಇಪ್ಪತ್ತು ಸಾವಿರ ಹಣ ಮತ್ತು ಹತ್ತು ಪವನ್ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ. ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದ್ದು ಉಪ್ಪಿನಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಉಪ್ಪಿನಂಗಡಿ ಸಮೀಪದ ಬಾರ್ಯ ಗ್ರಾಮದ ಸರಳಿಕಟ್ಟೆ ಬೇನಪ್ಪು ನಿವಾಸಿ ಅಬೂಬಕ್ಕರ್ ಮದನಿ ರವರ ಮನೆಗೆ ಕಳ್ಳರು ನುಗ್ಗಿದ್ದು ಇಂದು ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನ .ಪಿ.ಕುಮಾರ್, ಪುತ್ತೂರು ಗ್ರಾಮಾಂತ ವೃತ್ತ ನಿರೀಕ್ಷಕ ಉಮೇಶ್

ಉಪ್ಪಿನಂಗಡಿ: ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು Read More »