ಕರಾವಳಿ

ಬಂಟ್ವಾಳ: ತಡರಾತ್ರಿ ಲಾರಿ-ಬೈಕ್ ನಡುವೆ ಢಿಕ್ಕಿ| ಗಂಭೀರವಾಗಿ ಗಾಯಗೊಂಡ ಸವಾರ ಸಾವು|

ಬಂಟ್ವಾಳ: ಇಲ್ಲಿನ ಮೆಲ್ಕಾರ್ ಜಂಕ್ಷನ್ ಬಳಿ ನ.16ರಂದು ತಡರಾತ್ರಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ನಿವಾಸಿ ಗಣೇಶ್(36) ಮೃತಪಟ್ಟವರು. ಗಣೇಶ್ ಅವರು ಮೆಲ್ಕಾರ್ ಜಂಕ್ಷನ್‌ ನಲ್ಲಿ ಬೈಕ್ ಸವಾರಿ ಮಾಡುತ್ತಾ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದರು. ಈ ಸಂದರ್ಭ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದ ಗಣೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದರು.‌ ತಕ್ಷಣ ಅವರನ್ನು ಆಸ್ಪತ್ರೆಗೆ […]

ಬಂಟ್ವಾಳ: ತಡರಾತ್ರಿ ಲಾರಿ-ಬೈಕ್ ನಡುವೆ ಢಿಕ್ಕಿ| ಗಂಭೀರವಾಗಿ ಗಾಯಗೊಂಡ ಸವಾರ ಸಾವು| Read More »

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಹಲ್ಲೆಗೆ ಯತ್ನ| ಆರೋಪಿಗಳ ಬಂಧನ

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆತ್ನಿಸಿದ ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳದ ಕುರ್ನಾಡು ನಿವಾಸಿ ಶರಣ್ (24), ವಿಘ್ನೇಶ್ (23) ಮತ್ತು ಹರ್ಷಿತ್ (22) ಎಂದು ಗುರುತಿಸಲಾಗಿದೆ. ನ.14 ರ ಮಧ್ಯರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಗಳು ಅಬ್ದುಲ್ ಸಮೀರ್ ಎಂಬವರ ಮನೆ ಬಳಿ ಬಂದು ಅವರ ಸಮುದಾಯವನ್ನು ನಿಂದಿಸಿ, ಸಮೀರ್ ಮನೆಯಿಂದ ಹೊರಗೆ ಬರುತ್ತಿದ್ದಂತೆಯೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಮಸೀದಿಗೆ ನುಗ್ಗಿ ಧರ್ಮಗುರುಗಳನ್ನು ನಿಂದಿಸಿ ಹಲ್ಲೆಗೆ ಯತ್ನಿಸಿ

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಹಲ್ಲೆಗೆ ಯತ್ನ| ಆರೋಪಿಗಳ ಬಂಧನ Read More »

ಸುರತ್ಕಲ್ ನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಪೊಲೀಸರ ಮಿಂಚಿನ ಕಾರ್ಯಾಚರಣೆ, ಆರೋಪಿಗಳು ಅಂದರ್|

ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದ್ದು, ಬೈಕ್ ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯನ್ನು ಯುವಕರು ಥಳಿಸಿದ್ದಾರೆ. ಅನ್ಯ ಧರ್ಮದ ಯುವತಿಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಹಿನ್ನಲೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಬೈಕ್ ಹಿಂಬಾಲಿಸಿ ಬಂದ ಯುವಕರ ತಂಡ ಥಳಿಸಿದ್ದು, ಅನ್ಯಧರ್ಮದವರ ಜೊತೆ ಓಡಾಡದಂತೆ ಯುವತಿಗೆ ಧಮ್ಕಿ ಹಾಕಲಾಗಿದೆ. ಯುವತಿ ಅಪಾರ್ಟ್ ಮೆಂಟ್ ಖಾಲಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಲಗೇಜ್ ಶಿಫ್ಟ್ ಮಾಡಿ ಯುವಕ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಯುವಕರ ತಂಡದಿಂದ ಥಳಿಸಲಾಗಿದೆ.

ಸುರತ್ಕಲ್ ನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಪೊಲೀಸರ ಮಿಂಚಿನ ಕಾರ್ಯಾಚರಣೆ, ಆರೋಪಿಗಳು ಅಂದರ್| Read More »

ಪೇಸ್ ಬುಕ್ ನಲ್ಲಿ ಪ್ರವಾದಿ ನಿಂದನಾತ್ಮಕ ಕಮೆಂಟ್| ಆರೋಪಿಯ ಬಂಧನ|

ಸುಳ್ಯ: ಕಳೆದೊಂದು ವಾರದ ಹಿಂದೆ ಪೇಸ್ ಬುಕ್ ನಲ್ಲಿ ಪ್ರವಾದಿ ಮುಹಮ್ಮದ್ (ಸ.ಅ)ರನ್ನು ಆಶ್ಲೀಲ ಪದಗಳಿಂದ‌ ನಿಂದನೆಗೈದ ಆರೋಪದಲ್ಲಿ ತಾಲೂಕಿನ ಐವರ್ನಾಡು ಗ್ರಾಮದ ಜಗದೀಶ್ ಕೈವಲ್ತಡ್ಕ ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಜಗದೀಶ್ ತನ್ನ ಪೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಪದಬಳಕೆ ಮಾಡಿ ಪ್ರವಾದಿಯನ್ನು ನಿಂದಿಸಿ ಕೋಟ್ಯಾಂತರ ಜನರ‌ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾನೆ, ಈ ಕುರಿತಂತೆ ಪೋಲಿಸರು ಕ್ರಮ ಕೈಗೊಳ್ಳಬೇಕು ಮುಸ್ಲಿಂ ಸಂಘಟನೆಗಳು ದೂರು ನೀಡಿದ್ದವು. ಆದರೆ ದೂರು ನೀಡಿ ವಾರ ಕಳೆದರೂ ಆರೋಪಿಯನ್ನು ಪೊಲೀಸರು

ಪೇಸ್ ಬುಕ್ ನಲ್ಲಿ ಪ್ರವಾದಿ ನಿಂದನಾತ್ಮಕ ಕಮೆಂಟ್| ಆರೋಪಿಯ ಬಂಧನ| Read More »

ಸುಳ್ಯ| ಐತಿಹಾಸಿಕ ರಸ್ತೆಯಲ್ಲೊಂದು ಅಡ್ವೆಂಚರ್ ಎಕ್ಸ್ಪರಿಮೆಂಟ್| ಪುರಾತನ ಟಾರು ರೋಡಿನಲ್ಲಿ ಸಂಚರಿಸುವ ಮಜಾನೇ ಬೇರೆ..! ಈ ವಿಶೇಷ ರಸ್ತೆ ಇರೋದೆಲ್ಲಿ ಗೊತ್ತೇ..?

ಸುಳ್ಯ: ಈ ರಸ್ತೆಗೆ ಡಾಂಬರು ಹಾಯಿಸಿ ಅದೆಷ್ಟು ದಶಕಗಳು ಕಳೆದಿದೆಯೋ ಗೊತ್ತಿಲ್ಲ. ಅಂದು ಮಾಡಿದ ಡಾಂಬರು ರಸ್ತೆಯ ಕುರುಹುಗಳು ಮಾತ್ರ ಇಲ್ಲಿ ಕಂಡುಬರುತ್ತಿದ್ದು, ಭೌಗೋಳಿಕ ಅಧ್ಯಯನ ಮಾಡುವ ಸಂಶೋಧಕರಿಗೆ, ಐತಿಹಾಸಿಕ ಉತ್ಖನನ ಮಾಡಲು ಈ ರಸ್ತೆ ಹೇಳಿ ಮಾಡಿಸಿದ ಸ್ಥಳ..! ಅಷ್ಟೇ ಅಲ್ಲ, ನೀವೇನಾದ್ರೂ ಹೊಸದಾಗಿ ಅಡ್ವೆಂಚರ್‌ ಮಾಡ್ಬೇಕು ಅಂತ ಮನಸ್ಸು ಮಾಡಿದ್ರೆ ಖಂಡಿತವಾಗಿ ಈ ಸ್ಥಳಕ್ಕೊಮ್ಮೆ ಭೇಟಿ‌ ನೀಡಬಹುದು. ಕೇವಲ ಒಂದೂವರೆ ಕಿ.ಮೀ ರಸ್ತೆಯಲ್ಲಿ ಇಡೀ ವಿಶ್ವ ಪರ್ಯಟನೆ ಮಾಡಿದ ಅನುಭವ ನಿಮ್ಮದಾಗಲಿದೆ. ಇಂತಹ ಒಂದು

ಸುಳ್ಯ| ಐತಿಹಾಸಿಕ ರಸ್ತೆಯಲ್ಲೊಂದು ಅಡ್ವೆಂಚರ್ ಎಕ್ಸ್ಪರಿಮೆಂಟ್| ಪುರಾತನ ಟಾರು ರೋಡಿನಲ್ಲಿ ಸಂಚರಿಸುವ ಮಜಾನೇ ಬೇರೆ..! ಈ ವಿಶೇಷ ರಸ್ತೆ ಇರೋದೆಲ್ಲಿ ಗೊತ್ತೇ..? Read More »

ಸುಳ್ಯ: ಹಿಂದೂ ಎಂದು ನಂಬಿಸಿ ಅನುಚಿತ ವರ್ತನೆಗೈದ ಮುಸ್ಲಿಂ ಯುವಕ| ಠಾಣೆ ಮೆಟ್ಟಿಲೇರಿದ ಯುವತಿ

ಸುಳ್ಯ: ಅನ್ಯಕೋಮಿನ ಯುವಕನೋರ್ವ ಸಾಮಾಜಿಕ ಜಾಲತಾಣ ದಲ್ಲಿ ಪರಿಚಯವಾದ ಯುವತಿಯೋರ್ವಳನ್ನು ನಾನು ಹಿಂದೂ ಯುವಕನೆಂದು ಸುಳ್ಳು ಹೆಸರು ಹೇಳಿ ನಂಬಿಸಿ ಆಕೆಯನ್ನು ಬಲವಂತವಾಗಿ ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ವಂಚನೆಗೆ ಒಳಗಾದ ಯುವತಿ ಸುಳ್ಯ ಪೋಲಿಸ್ ಮೆಟ್ಟಿಲೇರಿ ದೂರು ನೀಡಿದ್ದಾಳೆ. ಮಡಿಕೇರಿ ಮೂಲದ ಯುವಕನೋರ್ವ ಕಳೆದ 2 ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು ತನ್ನ ಹೆಸರನ್ನು ಕೌಶಲ್ ‌ಎಂದು ಪರಿಚಯಿಸಿಕೊಂಡಿದ್ದನು ಎನ್ನಲಾಗಿದೆ. ನ.೧೧ ರಂದು ಆತ ಯುವತಿಯನ್ನು ಸುಳ್ಯಕ್ಕೆ ಬರುವಂತೆ ಒತ್ತಾಯ ಮಾಡಿದ್ದು, ಹಿಂದೂ ಯುವಕನೆಂದು

ಸುಳ್ಯ: ಹಿಂದೂ ಎಂದು ನಂಬಿಸಿ ಅನುಚಿತ ವರ್ತನೆಗೈದ ಮುಸ್ಲಿಂ ಯುವಕ| ಠಾಣೆ ಮೆಟ್ಟಿಲೇರಿದ ಯುವತಿ Read More »

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು-ಬದಲು ಪ್ರಕರಣ| ಸಂತ್ರಸ್ತ ಮಗು ಡಿಎನ್ಎ ವರದಿ ಬರುವ ಮೊದಲೇ ಸಾವು|

ಮಂಗಳೂರು: ಇಲ್ಲಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಮಗು ಅದಲು-ಬದಲು ಪ್ರಕರಣದಲ್ಲಿನ ಸಂತ್ರಸ್ತ ಮಗು ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಮೂಲಗಳ ಪ್ರಕಾರ, ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ ಎನ್ನಲಾಗಿದೆ. ಅದಲು ಬದಲು ಪ್ರಕರಣದಲ್ಲಿ ಪೋಷಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಬಳಿಕ ಮಗುವಿನ ಡಿ ಎನ್ ಎ ಪರೀಕ್ಷೆಗಾಗಿ ಮಾದರಿಯನ್ನು ಹೈದರಾಬಾದಿಗೆ ಕಳುಹಿಸಿಕೊಡಲಾಗಿತ್ತು. ಪರೀಕ್ಷಾ ವರದಿ ಬರುವುದಕ್ಕಿಂತ ಮೊದಲೇ ಮಗು ಮೃತಪಟ್ಟಿದೆ. ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಅಕ್ಟೋಬರ್ 15ರಂದು, ಕುಂದಾಪುರ ಮೂಲದ ಪೋಷಕರು, ನಮಗೆ ಆಸ್ಪತ್ರೆಯ ಸಿಬ್ಬಂದಿ ಮೊದಲು,

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು-ಬದಲು ಪ್ರಕರಣ| ಸಂತ್ರಸ್ತ ಮಗು ಡಿಎನ್ಎ ವರದಿ ಬರುವ ಮೊದಲೇ ಸಾವು| Read More »

ಮುಸ್ಲಿಂಮರ ಹಣ‌ ಶರಣ್ ಪಂಪ್ವೆಲ್ ಗೆ ಆಗುತ್ತೆ,! ಮುಸ್ಲಿಂ ಯುವಕರು ಮಾತ್ರ ‌ಬೇಡ ಅಲ್ವೇ?- ಬಿರುವೆರ್ ಕುಡ್ಲ ಕಿಡಿ

ಮಂಗಳೂರು: ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ, ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲದ ಸಂಚಾಲಕ ಲಕ್ಷ್ಮೀಶ್ ಈ ಹಿಂದೆ ನಡೆದ ಸಭೆಯೊಂದರಲ್ಲಿ ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲ ಒಂದು ಜಾತಿಗೆ ಸೀಮಿತವಾಗಿದೆ ಎಂದಿದ್ದರು. ಬಿರುವೆರ್ ಕುಡ್ಲ ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಏಳು ವರ್ಷಗಳಿಂದ ಸಂಸ್ಥೆಯು ಬಡವರಿಗೆ ಜಾತಿ ಭೇದ ನೋಡದೆ ಮೂರೂವರೆ ಕೋಟಿ ರೂ.ಗಳ

ಮುಸ್ಲಿಂಮರ ಹಣ‌ ಶರಣ್ ಪಂಪ್ವೆಲ್ ಗೆ ಆಗುತ್ತೆ,! ಮುಸ್ಲಿಂ ಯುವಕರು ಮಾತ್ರ ‌ಬೇಡ ಅಲ್ವೇ?- ಬಿರುವೆರ್ ಕುಡ್ಲ ಕಿಡಿ Read More »

ಕುಕ್ಕೆ ಸುಬ್ರಹ್ಮಣ್ಯ ದೇವಳದ ಹಿರಿಯ ಹಸು ಕೆಂಪಿ ಇನ್ನಿಲ್ಲ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ನಿತ್ಯ ಗೋಪೂಜೆ ಪಡೆಯುತ್ತಿದ್ದ ಹಿರಿಯ ಹಸು ಕೆಂಪಿ ವಯೋಸಹಜತೆಯಿಂದ ರವಿವಾರ ಸಾವನ್ನಪ್ಪಿದೆ. ಹಸು ಸುಮಾರು 20 – 22 ವರ್ಷದಿಂದ ಕ್ಷೇತ್ರದಲ್ಲಿ ನಿತ್ಯ ಗೋಪೂಜೆ ಭಾಗ್ಯವನ್ನು ಪಡೆದಿತ್ತು. ಈ ವರ್ಷವು ದೀಪಾವಳಿಯಂದು ಈ ಹಸುವಿಗೆ ಪೂಜೆ ನೆರವೇರಿಸಲಾಗಿತ್ತು. ಇದೇ ಇದರ ಕೊನೆಯ ದೀಪಾವಳಿಯ ಪೂಜೆ ಆಗಿದೆ ಎಂಬ ಮಾತು ಕೇಳಿಬಂದಿದೆ. ಈ ಹಸು ಸುಮಾರು 13 ಕರುಗಳನ್ನು ಈವರೆಗೆ ಹಾಕಿತ್ತು ಎಂದು ದೇವಳದವರು ಮಾಹಿತಿ ನೀಡಿದ್ದಾರೆ. ಪ್ರೀತಿಯ ಕೆಂಪಿ;ಕೆಂಪಿ ಕಳೆದ 22

ಕುಕ್ಕೆ ಸುಬ್ರಹ್ಮಣ್ಯ ದೇವಳದ ಹಿರಿಯ ಹಸು ಕೆಂಪಿ ಇನ್ನಿಲ್ಲ Read More »

ನೆಲ್ಯಾಡಿ : ತಾವರೆಗಾಗಿ ಪ್ರಾಣ ಕಳೆದುಕೊಂಡ ವಿಧ್ಯಾರ್ಥಿನಿ

ನೆಲ್ಯಾಡಿ: ಕೆರೆಗೆ ತಾವರೆ ಹೂವನ್ನು ಕೀಳಲು ಹೋಗಿ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿರುವ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಅಂಬರ್ಜೆ ನಿವಾಸಿ ಮೋಹನ ಎಂಬವರ ಪುತ್ರಿ ಶ್ರೇಯಾ (18) ಎಂದು ಗುರುತಿಸಲಾಗಿದೆ. ಈಕೆ ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದಳು. ಶ್ರೇಯಾ ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂ ಬಿಡಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಿಂದ

ನೆಲ್ಯಾಡಿ : ತಾವರೆಗಾಗಿ ಪ್ರಾಣ ಕಳೆದುಕೊಂಡ ವಿಧ್ಯಾರ್ಥಿನಿ Read More »