ಕರಾವಳಿ

ಸುಳ್ಯ: ಉದ್ಯೋಗದ ನೆಪದಲ್ಲಿ ಮಹಿಳೆಗೆ ಲಕ್ಷಾಂತರ ರೂ.ಪಂಗನಾಮ

ಸುಳ್ಯ: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ದೂರವಾಣಿ ಮೂಲಕ ಲಕ್ಷಾಂತರ ಹಣ ವಂಚಿಸಿರುವುದಾಗಿ ನೆಲ್ಲೂರು ಕೆಮ್ರಾಜೆ ಗ್ರಾಮದ ಮಹಿಳೆಯೊಬ್ಬರು ಉಡುಪಿ ಸೈಬರ್ ಕ್ರೈಮ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಪೂರ್ಣಿಮಾ ಎಂಬವರಿಗೆ ಅಪರಿಚಿತರು ದೂರವಾಣಿ ಕರೆ ಮಾಡಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದರು. ಹಾಗಾಗಿ ಅವರಿಂದ 4,31,500 ರೂಪಾಯಿಗಳನ್ನು ತನ್ನ ಖಾತೆಗೆ ಜಮೆ ಮಾಡಿಸಿಕೊಂಡಿದ್ದಾರೆ. ಈಗ ಉದ್ಯೋಗ ನೀಡದೇ ವಂಚಿಸಿದ್ದಾರೆ. ಈ ಹಣವನ್ನು ವಾಪಾಸ್ ಮರಳಿಸಬೇಕೆಂದು ಉಡುಪಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ನ.21ರಂದು […]

ಸುಳ್ಯ: ಉದ್ಯೋಗದ ನೆಪದಲ್ಲಿ ಮಹಿಳೆಗೆ ಲಕ್ಷಾಂತರ ರೂ.ಪಂಗನಾಮ Read More »

ಅಬ್ಬಾ…! ಈ‌ ಒಂದು ಮೀನಿನ ಬೆಲೆ‌ ಕೇಳಿದ್ರೆ ಗಾಬರಿಯಾಗ್ತೀರಿ! ಉಡುಪಿಯಲ್ಲಿ‌ ದಾಖಲೆ‌ ಬೆಲೆಗೆ ಮಾರಾಟವಾಯ್ತು ಈ ಮತ್ಸ್ಯ ಕನ್ಯೆ|

ಉಡುಪಿ : ಕಡಲು ಕೋಟ್ಯಾಂತರ ಜಲಚರಗಳ ಸಂಪತ್ತು. ಸಮುದ್ರದಲ್ಲಿ ಸಾವಿರಾರು ಬಗೆಯ ಮತ್ಸ್ಯ ಸಂತತಿ ಇದೆ. ಸಣ್ಣಪುಟ್ಟ ಮೀನುಗಳಿಂದ ಹಿಡಿದು ಗಜಗಾತ್ರದ ಮೀನುಗಳೂ ಇವೆ. ಈ ಮತ್ಸ್ಯ ಗಳ ಬೇಟೆಗೆ ಸಾವಿರಾರು ಜನ ಮೀನುಗಾರರು ಕಡಲಿನತ್ತ ಮುಖ ಮಾಡುತ್ತಾರೆ. ರಾಜ್ಯದ ಕರಾವಳಿ ತೀರವಾದ ಉಡುಪಿಯಿಂದ ಹೊರಟ ಮೀನುಗಾರರಿಗೆ ಬಂಪರ್ ಹೊಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಹೊರಟ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದೆ. ಮೀನುಗಾರರಿಗೆ ಸಾಕ್ಷ್ಯಾತ್ ಮತ್ಸ್ಯ ಕನ್ಯೆಯೇ ಒಲಿದಿದ್ದು, ಮೀನುಗಾರರು ಹಿಡಿದ ಆ ಒಂದು

ಅಬ್ಬಾ…! ಈ‌ ಒಂದು ಮೀನಿನ ಬೆಲೆ‌ ಕೇಳಿದ್ರೆ ಗಾಬರಿಯಾಗ್ತೀರಿ! ಉಡುಪಿಯಲ್ಲಿ‌ ದಾಖಲೆ‌ ಬೆಲೆಗೆ ಮಾರಾಟವಾಯ್ತು ಈ ಮತ್ಸ್ಯ ಕನ್ಯೆ| Read More »

ಪುತ್ತೂರು: ವಿದ್ಯಾರ್ಥಿಗಳ ನಡುವೆ ಹೊಡೆದಾಟ| ಆಸ್ಪತ್ರೆಗೆ ದಾಖಲು

ಪುತ್ತೂರು: ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಇಂದು ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಆದಿಲ್, ಆದಿತ್ಯ ಹಾಗೂ ಪ್ರಣಮ್ ಎಂದು ಗುರುತಿಸಲಾಗಿದೆ. ಗಾಯಾಳು ವಿದ್ಯಾರ್ಥಿಗಳ ಪೈಕಿ ಓರ್ವನನ್ನು ಸರಕಾರಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು: ವಿದ್ಯಾರ್ಥಿಗಳ ನಡುವೆ ಹೊಡೆದಾಟ| ಆಸ್ಪತ್ರೆಗೆ ದಾಖಲು Read More »

ಮಂಗಳೂರು: ಖಾಸಗಿ ಟಿವಿ ವರದಿಗಾರನಿಗೆ ಹಲ್ಲೆ, ಕೊಲೆಯತ್ನ| ಆರೋಪಿಯ ಬಂಧನ

ಮಂಗಳೂರು : ಖಾಸಗಿ ಟಿವಿ ವಾಹಿನಿ ವರದಿಗಾರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಾಸಗಿ ಟಿವಿ ವರದಿಗಾರರಾಗಿರುವ ಸುಖ್ ಪಾಲ್ ಪೊಳಲಿ ಅವರ ಮೇಲೆ ಯದುನಂದನ್ ಎನ್ನುವವರು ಸೋಮವಾರ ಸಂಜೆ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ತಲೆಗೆ ಪೆಟ್ಟು ಬಿದ್ದ ಸುಖ್ ಪಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಖಾಸಗಿ ಟಿವಿ ವರದಿಗಾರನಿಗೆ ಹಲ್ಲೆ, ಕೊಲೆಯತ್ನ| ಆರೋಪಿಯ ಬಂಧನ Read More »

ಪುತ್ತೂರು: ಸ್ವಂತ ಮೈದುನನಿಂದ ಅತ್ತಿಗೆ ಮೇಲೆ ಗುಂಡಿನ ದಾಳಿ| ಆರೋಪಿ ಪರಾರಿ|

ಪುತ್ತೂರು: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು

ಪುತ್ತೂರು: ಸ್ವಂತ ಮೈದುನನಿಂದ ಅತ್ತಿಗೆ ಮೇಲೆ ಗುಂಡಿನ ದಾಳಿ| ಆರೋಪಿ ಪರಾರಿ| Read More »

ಕಾನೂನು ಮಧ್ಯಪ್ರವೇಶ| ಬೀಸೋ ಕೊಡಲಿಯಿಂದ ತಪ್ಪಿಸಿಕೊಂಡ “ಶ್ರೀತಾಳೆ”

ಬೆಳ್ತಂಗಡಿ: ಅಳಿವಿನಂಚಿನಲ್ಲಿರುವ ಶ್ರೀ ತಾಳೆ ಮರ ಹೂ ಬಿಟ್ಟರೆ ಊರಿಗೆ ಅನಿಷ್ಠ ಎಂಬ ಕಾರಣಕ್ಕಾಗಿ ಹೂ ಬಿಟ್ಟ ತಾಳೆ ಮರವನ್ನು ಕಡಿಯಲು ಮುಂದಾಗಿದ್ದ ಗ್ರಾಮಸ್ಥರನ್ನು ಅರಣ್ಯ ಇಲಾಖೆ ತಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಿಮಣೇಲು ಗ್ರಾಮದ ದೇಲಂಪುರಿ ಎಂಬಲ್ಲಿ ಚಂದ್ರಶೇಖರ್ ಮತ್ತು ಗಿರಿಜಮ್ಮ ಎಂಬುವವರ ಜಾಗದಲ್ಲಿ 80 ವರ್ಷದ ಹಳೆಯದಾದ ತಾಳೆ ಮರ ಹೂ ಬಿಟ್ಟಿದ್ದು, ಈ ಮರ ಹೂ ಬಿಟ್ಟಿರೋದು ಊರಿಗೆ ಅನಿಷ್ಠ ಎಂಬ ಭಾವನೆ ಮನೆಯವರು ಮತ್ತು ಊರವರಿಗೆ ಕಾಡಿದೆ. ಈ

ಕಾನೂನು ಮಧ್ಯಪ್ರವೇಶ| ಬೀಸೋ ಕೊಡಲಿಯಿಂದ ತಪ್ಪಿಸಿಕೊಂಡ “ಶ್ರೀತಾಳೆ” Read More »

ಕಡಬ: ಹಾಡುಹಗಲು ಮನೆಯಂಗಳದಲ್ಲೇ ಓಡಾಡಿದ ಕಾಡಾನೆ ಹಿಂಡು

ಕಡಬ. ಹಾಡುಹಗಲೇ ಕಾಡಾನೆ ಹಿಂಡೊಂದು ಮನೆ ಅಂಗಳ ಹಾಗೂ ತೋಟಕ್ಕೆ ಲಗ್ಗೆಯಿಟ್ಟು ಜನರನ್ನು ಭಯಬೀತಿ ಗೊಳಿಸುತ್ತಿರುವ ಘಟನೆ ಕಡಬ ತಾಲೂಕಿನ ಕಡ್ಯ ಕೊಣಾಜೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಕೊಣಾಜೆ ಕಡ್ಯ ಪ್ರದೇಶದಲ್ಲಿ ಕಾಡಾನೆ ರಾತ್ರಿ ಹಾಗೂ ಹಾಡು ಹಗಲಲ್ಲೂ ತೋಟಕ್ಕೆ ನುಗ್ಗಿ ಕೃಷಿ ನಾಶ ಪಡಿಸುತ್ತಿರುವ ದೂರು ಕೇಳಿಬಂದಿದೆ. ಹಲವರ ತೋಟಕ್ಕೆ ಲಗ್ಗೆ ಇಟ್ಟಿರುವ ಕಾಡಾನೆ ನೂರಾರು ಅಡಿಕೆ ಗಿಡ, ಬಾಳೆ ಸೇರಿದಂತೆ ಇತರೆ ಕೃಷಿಗಳನ್ನು ನಾಶ ಪಡಿಸಿದೆ. ಕಾಡಾನೆ ದಾಳಿಯಿಂದ ಜನತೆ

ಕಡಬ: ಹಾಡುಹಗಲು ಮನೆಯಂಗಳದಲ್ಲೇ ಓಡಾಡಿದ ಕಾಡಾನೆ ಹಿಂಡು Read More »

ವಿಟ್ಲ: ಕಾರು – ಬೈಕ್‌ ಢಿಕ್ಕಿ – ಸವಾರ ಮೃತ್ಯು

ವಿಟ್ಲ: ಬೈಕ್‌ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಇಂದು ನಡೆದಿದೆ. ಮೃತ ಸವಾರನನ್ನು ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಅವರ ಪುತ್ರ ಪ್ರಜ್ವಲ್‌ (26) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಎನ್‌ಎಂಪಿಟಿ ಉದ್ಯೋಗಿಯಾಗಿದ್ದರು. ಹಾಗಾಗಿ ಕಂಪೆನಿಗೆ ಬೈಕ್‌‌ನಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್‌ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆ ಪರಿಣಾಮ ಪ್ರಜ್ವಲ್‌ ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಟ್ಲ: ಕಾರು – ಬೈಕ್‌ ಢಿಕ್ಕಿ – ಸವಾರ ಮೃತ್ಯು Read More »

ಮುಸ್ಲಿಂ ಹುಡುಗನ ಜೊತೆ ಮದುವೆಗೆ ರೆಡಿಯಾಗಿದ್ದ ಹಿಂದೂ ಹುಡುಗಿ| ಮಠಾಧೀಶರ ಮನವೊಲಿಕೆ ಬಳಿಕ ನಿರ್ಧಾರದಿಂದ ಹಿಂದೆ ಸರಿದ ಯುವತಿ|

ಮಂಗಳೂರು: ಕಳೆದ ಎರಡು ದಿನಗಳಿಂದ ವೈರಲ್ ಆಗಿದ್ದ ಹಿಂದು ಯುವತಿ ಮತ್ತು ಮುಸ್ಲಿಂ ಯುವಕನ ಮದುವೆ ವಿಚಾರದಲ್ಲಿ ಹಿಂದು ಸಂಘಟನೆಗಳ ನಾಯಕರು ಎಂಟ್ರಿ ಆಗಿದ್ದು, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಯವರ ಮನವೊಲಿಕೆ ಬಳಿಕ ಆಕೆ ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದಾಳೆ. ಪಾಂಡೇಶ್ವರದ ಯುವತಿಯ ಮನೆಗೆ ತೆರಳಿದ ಸ್ವಾಮೀಜಿ, ಯುವತಿ ಮತ್ತು ಆಕೆಯ ಹೆತ್ತವರಲ್ಲಿ ಮಾತನಾಡಿದ್ದಾರೆ. ಇತ್ತೀಚಿಗೆ ಸುಳ್ಯದಲ್ಲಿ ‌ನಡೆದ ಆಸಿಯಾ ಪ್ರಕರಣ ಸೇರಿದಂತೆ ಹತ್ತಾರು ಪ್ರಕರಣದಲ್ಲಿ ಹಿಂದು ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ, ಮತಾಂತರ ಮಾಡಿರುವ

ಮುಸ್ಲಿಂ ಹುಡುಗನ ಜೊತೆ ಮದುವೆಗೆ ರೆಡಿಯಾಗಿದ್ದ ಹಿಂದೂ ಹುಡುಗಿ| ಮಠಾಧೀಶರ ಮನವೊಲಿಕೆ ಬಳಿಕ ನಿರ್ಧಾರದಿಂದ ಹಿಂದೆ ಸರಿದ ಯುವತಿ| Read More »

ಬಂಟ್ವಾಳ: ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಮಹಿಳೆ

ಬಂಟ್ವಾಳ: ಮಹಿಳೆಯೋರ್ವರು ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಳಗ್ಗೆ 10 ಗಂಟೆಯ ಸುಮಾರಿಗೆ ಮಹಿಳೆಯೋರ್ವರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ್ದನ್ನು ವಾಹನ ಸವಾರರು ನೋಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ವಿಷಯ ತಿಳಿದ ತಕ್ಷಣವೇ ಮುಳುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆ ಬಳಿ ಧಾವಿಸಿದ್ದು, ಮಹಿಳೆ ಅದಾಗಲೇ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇನ್ನೂ ನದಿಗೆ ಹಾರಿದ ಮಹಿಳೆ ಯಾರು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಬಂಟ್ವಾಳ: ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಮಹಿಳೆ Read More »