ಕರಾವಳಿ

ಸಹಕಾರ ಸಚಿವರ ಗುಡುಗಿದ ಬೆದರಿದರಾ ಡಾ. ಎಂ.ಎನ್ ರಾಜೇಂದ್ರ ಕುಮಾರ್| ಎಂಎಲ್ಸಿ ಚುನಾವಣೆಯಿಂದ ದಿಢೀರ್ ಹಿಂದಕ್ಕೆ ಸರಿದ ಎಸ್ಸಿಡಿಸಿಸಿ‌ ಬ್ಯಾಂಕ್ ಅಧ್ಯಕ್ಷ

ಮಂಗಳೂರು : ದಕ್ಷಿಣ ಕನ್ನಡ ದ್ವಿ ಸದಸ್ಯ ಕ್ಷೇತ್ರದಿಂದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿದ್ದ ಸಹಕಾರಿ ಧುರೀಣ ಎಸ್‌ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್.‌ ರಾಜೇಂದ್ರ ಕುಮಾರ್‌ ಚುನಾವಣಾ ಕಣದಿಂದ ದೂರ ಉಳಿಯುವ ಅಚ್ಚರಿಯ ನಿರ್ಧಾರ ಮಾಡಿದ್ದಾರೆ. ದ.ಕ, ಉಡುಪಿ ಉಭಯ ಜಿಲ್ಲೆಗಳ ಸಹಕಾರಿಗಳು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯ ಮಾಡಿದ ಹಿನ್ನಲೆಯಲ್ಲಿ ಡಾ.ಎಂ.ಎನ್.‌ ರಾಜೇಂದ್ರ ಕುಮಾರ್‌ ಚುನಾವಣೆಗೆ ಸ್ಪರ್ಧಿಸುವ ಮನ ಮಾಡಿದ್ದರು . ಅ. 23 ರಂದು ಈ ಬಗ್ಗೆ ನಾಮಪತ್ರ ಸಲ್ಲಿಸುವುದಾಗಿಯೂ […]

ಸಹಕಾರ ಸಚಿವರ ಗುಡುಗಿದ ಬೆದರಿದರಾ ಡಾ. ಎಂ.ಎನ್ ರಾಜೇಂದ್ರ ಕುಮಾರ್| ಎಂಎಲ್ಸಿ ಚುನಾವಣೆಯಿಂದ ದಿಢೀರ್ ಹಿಂದಕ್ಕೆ ಸರಿದ ಎಸ್ಸಿಡಿಸಿಸಿ‌ ಬ್ಯಾಂಕ್ ಅಧ್ಯಕ್ಷ Read More »

ಸಂಪಾಜೆ: ಮೇಯಲು ಬಿಟ್ಟ ದನಗಳು ನಿಗೂಢ ಕಣ್ಮರೆ| ಭಯ ಮತ್ತು ಅನುಮಾನದಲ್ಲಿ ಮಾಲೀಕರು|

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ಮೇಯಲು ಬಿಟ್ಟ ಕೆಲವು ಹಸುಗಳು ನಿಗೂಢವಾಗಿ ಕಣ್ಮರೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಬೆಳಿಗ್ಗೆ ಮೇಯಲು ಬಿಟ್ಟ ಹಸುಗಳು ಇದ್ದಕ್ಕಿದ್ದಂತೆ ಕಾಣೆಯಾಗುತ್ತಿರುವ ಪ್ರಕರಣ ‌ಮಾಲಿಕರಿಗೆ ಭಯ ಮತ್ತು ಅನುಮಾನಗಳನ್ನು ಹುಟ್ಟುಹಾಕಿದೆ. ಕೆಲವು ಮಾಲೀಕರು ತಮ್ಮ ಅದಾಯದ ಮೂಲಗಳಾದ ಹಸುಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ ಎನ್ನಲಾಗಿದೆ. ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಯಥೇಚ್ಛವಾಗಿ ನಡೆಯುತ್ತಿದ್ದು, ಖದೀಮರು ಗೋವುಗಳನ್ನು ಕದ್ದು ಸಾಗಿಸುತ್ತಿರುವ ಬಗ್ಗೆ ಶಂಕೆ

ಸಂಪಾಜೆ: ಮೇಯಲು ಬಿಟ್ಟ ದನಗಳು ನಿಗೂಢ ಕಣ್ಮರೆ| ಭಯ ಮತ್ತು ಅನುಮಾನದಲ್ಲಿ ಮಾಲೀಕರು| Read More »

ನ.29ರಿಂದ ಡಿ.4ರವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ| ಧರ್ಮನೆಲೆಯಲ್ಲಿ ಸಕಲ ಸಿದ್ದತೆಗಳು ಪೂರ್ಣ|

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನ.29ರಿಂದ ಡಿ.4ರವರೆಗೆ ಲಕ್ಷ ದೀಪೋತ್ಸವ ನಡೆಯಲಿದೆ. ಡಿ.3ರಂದು ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಡಿ.2ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಉದ್ಘಾಟಿಸಲಿದ್ದು, ಬೆಂಗಳೂರಿನ ಎಸ್‌.ವ್ಯಾಸಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ| ರಾಮಚಂದ್ರ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ನ.3ರಂದು ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವನ್ನು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಉದ್ಘಾಟಿಸಲಿದ್ದು, ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿ.ವಿ.ಯ ವಿಶ್ರಾಂತ ಕುಲಪತಿ

ನ.29ರಿಂದ ಡಿ.4ರವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ| ಧರ್ಮನೆಲೆಯಲ್ಲಿ ಸಕಲ ಸಿದ್ದತೆಗಳು ಪೂರ್ಣ| Read More »

ಉಪ್ಪಿನಂಗಡಿ: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಆರೋಪಿಯ ಬಂಧನ

ಉಪ್ಪಿನಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೌಢ ಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತ್ತು. ಆಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಗುರುವಾರ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ

ಉಪ್ಪಿನಂಗಡಿ: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಆರೋಪಿಯ ಬಂಧನ Read More »

ಎಂಎಲ್ಸಿ ಚುನಾವಣೆ| ಡಾ. ಎಂ.ಎನ್ ರಾಜೇಂದ್ರ ಕುಮಾರ್ ವಿರುದ್ದ ಆರೋಪಗಳ ಸುರಿಮಳೆಗೈದ ಸಚಿವ ಎಸ್.ಟಿ‌ ಸೋಮಶೇಖರ್|

ಮಂಗಳೂರು: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ದಿನೇದಿನೆ ಕಾವು ಪಡೆದುಕೊಳ್ಳುತ್ತಿದೆ. ದ.ಕ ಕ್ಷೇತ್ರದಿಂದ ಸಹಕಾರಿ ಧುರೀಣ ರಾಜೇಂದ್ರ ಕುಮಾರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಎಂ.ಎನ್. ರಾಜೇಂದ್ರ ಕುಮಾರ್ ವಿರುದ್ಧ ಮೊದಲ ಬಾರಿಗೆ ದನಿ ಎತ್ತಿದ್ದಾರೆ. ಮಂಗಳೂರು ಹೊರವಲಯದ ಅಡ್ಯಾರಿನಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ವಿರುದ್ಧ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ನೇರ ವಾಗ್ದಾಳಿ ನಡೆಸಿದ್ದಾರೆ. ಎಸ್ ಸಿ ಡಿ ಸಿ ಸಿ ಬ್ಯಾಂಕ್

ಎಂಎಲ್ಸಿ ಚುನಾವಣೆ| ಡಾ. ಎಂ.ಎನ್ ರಾಜೇಂದ್ರ ಕುಮಾರ್ ವಿರುದ್ದ ಆರೋಪಗಳ ಸುರಿಮಳೆಗೈದ ಸಚಿವ ಎಸ್.ಟಿ‌ ಸೋಮಶೇಖರ್| Read More »

ಮಂಗಳೂರು ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ವಶ| ಸುಳ್ಯ ಮೂಲದ ವ್ಯಕ್ತಿಯ ಬಂಧನ|

ಮಂಗಳೂರು: ಅಕ್ರಮ ಸಾಗಾಟದ 34.32ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು‌ ವಶಪಡಿಸಿಕೊಂಡಿದ್ದಾರೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಈ ಪ್ರಯಾಣಿಕ ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈತನಿಂದ 681 ಗ್ರಾಂ ತೂಕದ 34,32,240 ಲಕ್ಷ

ಮಂಗಳೂರು ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ವಶ| ಸುಳ್ಯ ಮೂಲದ ವ್ಯಕ್ತಿಯ ಬಂಧನ| Read More »

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ| ಅಪಾರ ಹಾನಿ, ಬೆಳೆನಾಶ| ಇನ್ನೂ ಮೂರುದಿನ ಭಾರೀ ಮಳೆ ಸಾಧ್ಯತೆ|

ಬೆಂಗಳೂರು: ಕಳೆದೆರಡು ವಾರಗಳಿಂದ ಸತತವಾಗಿ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ. ನಿರಂತರವಾಗಿ ಬೀಳುತ್ತಿರುವ ಮಳೆಗೆ ರಸ್ತೆಗಳು ಹಾನಿಗೀಡಾಗಿವೆ. ಕೆಲವೆಡೆ ಮನೆ ಕುಸಿತ, ರಸ್ತೆ ಕುಸಿತವೂ ಉಂಟಾದ ವರದಿಯಾಗಿದೆ. ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ಸತತ ಮಳೆಗೆ ಸಿಕ್ಕಿ ಹಾನಿಗೀಡಾಗಿವೆ. ಅಕಾಲಿಕ ಮಳೆಗೆ ಜನಜೀವನ ತತ್ತರಿಸುವಂತಾಗಿದೆ. ಹಿಂಗಾರು ಮಳೆ ಆರಂಭದಿಂದಲೂ ಚುರುಕಾಗಿದ್ದು, ನಿರಂತರವಾಗಿ ಬೀಳುತ್ತಿದೆ. ನಿನ್ನೆಯೂ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ| ಅಪಾರ ಹಾನಿ, ಬೆಳೆನಾಶ| ಇನ್ನೂ ಮೂರುದಿನ ಭಾರೀ ಮಳೆ ಸಾಧ್ಯತೆ| Read More »

ಮಂಗಳೂರು: ಸಮುದ್ರದ ತಂಗಾಳಿಗೆ ಮೈಯೊಡ್ಡಿ ಸಲ್ಲಾಪದಲ್ಲಿದ್ದ ಭಿನ್ನಕೋಮಿನ ಜೋಡಿ ಪೊಲೀಸ್ ವಶ|

ಮಂಗಳೂರು: ನಗರದ ಹೊರವಲಯದ ‌ಸುರತ್ಕಲ್ ಬೀಚ್ ಬಳಿ ಕಾರೊಂದರಲ್ಲಿ ಸಲ್ಲಾಪದಲ್ಲಿ‌ ತೊಡಗಿದ್ದ ಭಿನ್ನ ಕೋಮಿನ ಜೋಡಿಯೊಂದು ಪೊಲೀಸರ ವಶವಾಗಿದೆ. ಕುದ್ರೋಳಿಯ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೊಬ್ಬಳು ಕಾರಿನಲ್ಲಿ ಇಂದು ಸಂಜೆ ಪತ್ತೆಯಾಗಿದ್ದು ಇವರಿಗೆ ಪಕ್ಕದಲ್ಲೇ ಇನ್ನೊಬ್ಬಾತ ಅವರಿಗೆ ಸೆಕ್ಯುರಿಟಿ ನೀಡುವ ಕಾರ್ಯ ಮಾಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಸುರತ್ಕಲ್ ಭಜರಂಗದಳದ ಕಾರ್ಯಕರ್ತರು ಮೊದಲು ಆತನನ್ನು ವಿಚಾರಿಸಿದ್ದು ನಂತರ ಜೋಡಿಗಳನ್ನು ಠಾಣೆಗೆ ಕರೆದೊಯ್ದಿದ್ದಾರೆ. ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಯುವತಿ ಸುರತ್ಕಲ್ ಪೋಲಿಸರ ವಶದಲ್ಲಿದ್ದು, ಪತ್ತೆಯಾದ ಯುವಕನನ್ನು ಮೆಹಬೂಬ್

ಮಂಗಳೂರು: ಸಮುದ್ರದ ತಂಗಾಳಿಗೆ ಮೈಯೊಡ್ಡಿ ಸಲ್ಲಾಪದಲ್ಲಿದ್ದ ಭಿನ್ನಕೋಮಿನ ಜೋಡಿ ಪೊಲೀಸ್ ವಶ| Read More »

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತ ಗುಂಪು| ಮಾತಿನ ಚಕಮಕಿ, ಪೊಲೀಸರ ಮದ್ಯಪ್ರವೇಶ|

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಅಪರಿಚಿತ ಯುವಕರ ಗುಂಪೊಂದು ಹಿಂಬಾಲಿಸಿಕೊಂಡು ಬಂದಿದ್ದು, ಹಾಗೂ ವಿದ್ಯಾರ್ಥಿಗಳ ಮದ್ಯೆ ಮಾತಿನ ಚಕಮಕಿ ನಡೆದ ಘಟನೆ ಇಂದು ಸಂಜೆ ನಗರದ ನೆಲ್ಲಿಕಟ್ಟೆಯಲ್ಲಿ ನಡೆದಿದೆ. ಅಪರಿಚಿತ ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ಗೆಳೆಯರಲ್ಲಿ ತಿಳಿಸಿದ್ದಾರೆ. ಆಗ ಸಹಪಾಠಿ ವಿದ್ಯಾರ್ಥಿಗಳು ಆಗಮಿಸಿ ಹಿಂಬಾಲಿಸಿಕೊಂಡು ಬಂದ ಯುವಕರಲ್ಲಿ ಪ್ರಶ್ನಿಸಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ಚಕಮಕಿ ಯಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕರನ್ನು ಪುತ್ತೂರು ಮಹಿಳಾ ಠಾಣೆಗೆ ಕರೆದೊಯ್ದಿದ್ದಾರೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತ ಗುಂಪು| ಮಾತಿನ ಚಕಮಕಿ, ಪೊಲೀಸರ ಮದ್ಯಪ್ರವೇಶ| Read More »

ಉಪ್ಪಿನಂಗಡಿ: ವಿದ್ಯಾರ್ಥಿನಿಗಾಗಿ ಹೊಡೆದಾಡಿಕೊಂಡ ವಿದ್ಯಾರ್ಥಿಗಳು| ಐವರು ಆಸ್ಪತ್ರೆಗೆ ಅಡ್ಮಿಟ್|

ಉಪ್ಪಿನಂಗಡಿ: ವಿದ್ಯಾರ್ಥಿನಿಗಾಗಿ ಕಾಲೇಜು ಆವರಣದಲ್ಲಿ ಎರಡು ವಿದ್ಯಾರ್ಥಿ ತಂಡಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಉಪ್ಪಿನಂಗಡಿ ಕಾಲೇಜೊಂದರಲ್ಲಿ ನಡೆದಿದೆ. ಹೊಡೆದಾಟದಲ್ಲಿ ಎರಡೂ ಕಡೆಯ 5 ಮಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯೋರ್ವಳ ಮೊಬೈಲ್ ಸಂಖ್ಯೆಯನ್ನು ನೀಡಬೇಕೆಂದು ಭಿನ್ನ ಕೋಮಿನ ಸಹಪಾಠಿ ವಿದ್ಯಾರ್ಥಿಯೋರ್ವ ಕೇಳಿದ್ದು ಇದನ್ನು ಆಕ್ಷೇಪಿಸಿ ವಿದ್ಯಾರ್ಥಿನಿ ಪರ ತಂಡದ ಮೂವರು ವಿದ್ಯಾರ್ಥಿಗಳು ವಿಚಾರಿಸಲು ಹೋಗಿದ್ದಾಗ ಇವರ ಮೇಲೆ ಮೂವತ್ತಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಗುಂಪು ಮುಗಿಬಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನೊಂದು

ಉಪ್ಪಿನಂಗಡಿ: ವಿದ್ಯಾರ್ಥಿನಿಗಾಗಿ ಹೊಡೆದಾಡಿಕೊಂಡ ವಿದ್ಯಾರ್ಥಿಗಳು| ಐವರು ಆಸ್ಪತ್ರೆಗೆ ಅಡ್ಮಿಟ್| Read More »