ಕರಾವಳಿ

ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ| ದೂರು ದಾಖಲು

ಭಟ್ಕಳ: ತನ್ನ ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ನಾಪತ್ತೆಯಾದ ಯುವತಿಯನ್ನು ಮಂಕಿಯ ಯತ್ನಳ್ಳಿ, ಆಡುಕಾಲ್ ನಿವಾಸಿ, ತಾರಾ ನಾರಾಯಣ ಮರಾಠಿ (19) ಎಂದು ಗುರುತಿಸಲಾಗಿದೆ. ಈಕೆ ನವೆಂಬರ್ 5 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು, ಅಲ್ಲಿಗೂ ಹೋಗದೇ ಈವರೆಗೂ […]

ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ| ದೂರು ದಾಖಲು Read More »

ಪುತ್ತೂರು :ಬೈಕ್ ಮತ್ತು ಟಿಪ್ಪರ್ ಢಿಕ್ಕಿ- ಸವಾರರು ಗಂಭೀರ

ಪುತ್ತೂರು: ಮೊಟ್ಟೆತ್ತಡ್ಕ ಎನ್ ಆರ್ ಸಿ ಸಿ ಬಳಿ ಇಂದು ಸಂಜೆ 6.30 ರ ಸುಮಾರಿಗೆ ಟಿಪ್ಪರ್ ಹಾಗೂ ದ್ವಿಚಕ್ರ ವಾಹನವು ಡಿಕ್ಕಿಯಾಗಿರುವುದು ವರದಿಯಾಗಿದೆ. ಮುಂಡೂರು ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಹಾಗೂ ಪುತ್ತೂರು ಕಡೆಯಿಂದ ತನ್ನ ಕೆಲಸ ಮುಗಿಸಿ ಮನೆಯ ಕಡೆ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರರಾದ ಕುರಿಯ ನಿವಾಸಿ ನಾರಾಯಣ ಹಾಗೂ ವಸಂತ ರವರಿಗೆ ಗಂಭೀರ ಗಾಯಗೊಂಡು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದಿದೆ.

ಪುತ್ತೂರು :ಬೈಕ್ ಮತ್ತು ಟಿಪ್ಪರ್ ಢಿಕ್ಕಿ- ಸವಾರರು ಗಂಭೀರ Read More »

ಸುಳ್ಯ| ಹೊಳೆ ದಾಟುತ್ತಿದ್ದ ವೃದ್ದ ನೀರುಪಾಲು| ಕೈಗೆ ಸಿಕ್ಕಿದ ಬಳ್ಳಿಯಿಂದ ಉಳಿದ ಪ್ರಾಣ|

ಸುಳ್ಯ: ನಿರ್ಮಾಣದ ಹಂತದ ಸೇತುವೆಯ ಪಕ್ಕ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಲ್ಲಿ ಹೊಳೆ ದಾಟಲು ಯತ್ನಿಸಿದ ವೃದ್ದರೋರ್ವರು ಹೊಳೆಯಲ್ಲಿ ಕೊಚ್ಚಿ ಹೋದ ಘಟನೆ ಎಲಿಮಲೆ- ಮರ್ಕಂಜ ರಸ್ತೆಯ ಸೇವಾಜೆ ಎಂಬಲ್ಲಿ ನಡೆದಿದೆ. ವೃದ್ಧರ ಅದೃಷ್ಟದಿಂದ ಕೊಚ್ಚಿಹೋಗುತ್ತಿದ್ದ ಅವರ ಕೈಗೆ ಸಿಕ್ಕಿದ ಬಳ್ಳಿ ಅವರ ಪ್ರಾಣ ಉಳಿಸಿದೆ. ಎಲಿಮಲೆ – ಮರ್ಕಂಜ ರಸ್ತೆಯ ಸೇವಾಜೆ ನದಿಯನ್ನು ಅಲ್ಲಿನ ವೃದ್ಧ ಗೋಪಾಲ ಎಂಬವರು ಸಂಜೆ ದಾಟಲು ಪ್ರಯತ್ನಿಸಿದ್ದರು. ಅದಾಗಲೇ ಮಳೆ ಆರಂಭಗೊಂಡ ಕಾರಣ ಹೊಳೆಯಲ್ಲಿ ನೀರಿನ ಮಟ್ಟವೂ ಏರಿಕೆಯಾಗಿತ್ತು. ಈ ವೇಳೆ

ಸುಳ್ಯ| ಹೊಳೆ ದಾಟುತ್ತಿದ್ದ ವೃದ್ದ ನೀರುಪಾಲು| ಕೈಗೆ ಸಿಕ್ಕಿದ ಬಳ್ಳಿಯಿಂದ ಉಳಿದ ಪ್ರಾಣ| Read More »

ಪೊಲೀಸ್ ಇಲಾಖೆ ಬಲವರ್ಧನೆಗೆ ಕ್ರಮ| ರಾಜ್ಯದಲ್ಲಿ ಶೀಘ್ರದಲ್ಲೇ 100 ಪೊಲೀಸ್ ಠಾಣೆಗಳ ನಿರ್ಮಾಣ – ಗೃಹಸಚಿವ ಅರಗ‌ ಜ್ಞಾನೇಂದ್ರ

ಸುಬ್ರಹ್ಮಣ್ಯ: ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಲವರ್ಧನೆಗೆ ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದ್ದು ಸದ್ಯದಲ್ಲಿಯೇ ಸುಮಾರು 100 ಪೊಲೀಸ್ ಠಾಣೆಗಳ ಹೊಸ ಕಟ್ಟಡ ಕಾಮಗಾರಿಯನ್ನು ₹ 200 ಕೋಟಿ ವೆಚ್ಚದಲ್ಲಿ ನಡೆಸಲಾಗುವುದು. ಸುಬ್ರಹ್ಮಣ್ಯ ಪೊಲೀಸ್ ಠಾಣೆ ಕಟ್ಟಡಕ್ಕೆ ₹ 1 ಕೋಟಿ ಅನುದಾನ ನಿಗದಿಪಡಿಸಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೊಲೀಸ್ ಇಲಾಖೆಯಲ್ಲಿ ವಾರ್ಷಿಕ 4

ಪೊಲೀಸ್ ಇಲಾಖೆ ಬಲವರ್ಧನೆಗೆ ಕ್ರಮ| ರಾಜ್ಯದಲ್ಲಿ ಶೀಘ್ರದಲ್ಲೇ 100 ಪೊಲೀಸ್ ಠಾಣೆಗಳ ನಿರ್ಮಾಣ – ಗೃಹಸಚಿವ ಅರಗ‌ ಜ್ಞಾನೇಂದ್ರ Read More »

ಮಂಗಳೂರು ವಿ.ವಿ ಯ 209 ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ‌ನೀತಿ ಜಾರಿ| ಅನುಷ್ಟಾನಗೊಂಡ ಬೋಧನಾ ಪಠ್ಯಕ್ರಮ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ 209 ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ರೂಪಿಸಿರುವ ಪಠ್ಯಕ್ರಮ ಬೋಧನೆ ಸೋಮವಾರದಿಂದ ಅನುಷ್ಠಾನಗೊಂಡಿದೆ. ಶೈಕ್ಷಣಿಕ ವರ್ಷ ಆರಂಭದ ಮೊದಲ ದಿನ ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜುಗಳಲ್ಲಿ ಶೇ 85ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇ 75ರಷ್ಟು ಹಾಗೂ ಕೊಡಗು ಜಿಲ್ಲೆಯಲ್ಲಿ ಶೇ 50ರಷ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದರು. ಎನ್‌ಇಪಿ ಹೊಸದಾಗಿ ಅನುಷ್ಠಾನಗೊಂಡಿರುವ ಕಾರಣ ಕಾಲೇಜುಗಳ ಪ್ರಮುಖರಿಗೆ ಅನುಮಾನಗಳಿದ್ದಲ್ಲಿ ಬಗೆಹರಿಸಲು, ಇಬ್ಬರು ಪ್ರಾಧ್ಯಾಪಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ

ಮಂಗಳೂರು ವಿ.ವಿ ಯ 209 ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ‌ನೀತಿ ಜಾರಿ| ಅನುಷ್ಟಾನಗೊಂಡ ಬೋಧನಾ ಪಠ್ಯಕ್ರಮ Read More »

ಖ್ಯಾತ ಹೃದ್ರೋಗ ತಜ್ಞ‌ ಡಾ| ಬಿ.ಎಂ ಹೆಗ್ಡೆಗೆ ಇಂದು ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

ಮಂಗಳೂರು: ಖ್ಯಾತ ಹೃದ್ರೋಗ ತಜ್ಞ ಡಾ| ಬೆಳ್ಳೆ ಮೋನಪ್ಪ ಹೆಗ್ಡೆ (ಡಾ| ಬಿ. ಎಂ. ಹೆಗ್ಡೆ) ಅವರಿಗೆ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ನಡೆಯಲಿದೆ. ಡಾ| ಬಿ.ಎಂ.ಹೆಗ್ಡೆಯವರಿಗೆ ಈ ವರ್ಷದ ಜನವರಿಯಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಅವರು ಹೊಸದಿಲ್ಲಿಗೆ ತೆರಳಿದ್ದು ಇಂದು ರಾಷ್ಟ್ರಪತಿ ರಾಮಾನಾಥ ಕೋವಿಂದ್‌ ಅವರಿಂದ ಪ್ರಶಸ್ತಿ ಸ್ವೀಕರಿಸುವರು. ಅವರಿಗೆ 2010ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು. ಉಡುಪಿಯ ಬೆಳ್ಳೆ ಗ್ರಾಮದಲ್ಲಿ ಜನಿಸಿದ ಡಾ| ಬಿ. ಎಂ. ಹೆಗ್ಡೆಯವರು ವೈದ್ಯಕೀಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ

ಖ್ಯಾತ ಹೃದ್ರೋಗ ತಜ್ಞ‌ ಡಾ| ಬಿ.ಎಂ ಹೆಗ್ಡೆಗೆ ಇಂದು ಪದ್ಮವಿಭೂಷಣ ಪ್ರಶಸ್ತಿ ಪ್ರದಾನ Read More »

ಬೆಂಗಳೂರಿನ ಯುವಕ ಮಂಗಳೂರಿನಲ್ಲಿ ಸಮುದ್ರಪಾಲು| ಪ್ರವಾಸಕ್ಕೆ ಬಂದು ದುರಂತ

ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದ ತಂಡವೊಂದರಲ್ಲಿದ್ದ 20 ವರ್ಷದ ಯುವಕ ಸಮುದ್ರಪಾಲಾದ ಘಟನೆ ಪಣಂಬೂರು ಸಮುದ್ರ ತೀರದಲ್ಲಿ ನಡೆದಿದೆ. ದಿನೇಶ್ ಎಂಬ 20 ವರ್ಷದ ಯುವಕ ಸಮುದ್ರಪಾಲಾದ ವ್ಯಕ್ತಿ. ದೀಪಕ್, ಶ್ರೀನಿವಾಸ, ಪ್ರಶಾಂತ್ ಸುನೀಲ್, ಸುದೀಪ್, ಪ್ರಜ್ವಲ್, ದಿನೇಶ, ಸೀನಾ ಎಂಬ 8 ಮಂದಿ ನಿನ್ನೆ ರಾತ್ರಿ ಬೆಂಗಳೂರಿನಿಂದ ಕಾರು ಮಾಡಿಕೊಂಡು ಮಂಗಳೂರು ಪ್ರವಾಸಕ್ಕೆ ಬಂದಿದ್ದರು. ಇವರು ಇಂದು ಮಧ್ಯಾಹ್ನ ಪಣಂಬೂರು ಬೀಚ್ ತಲುಪಿದ್ದು ಇಲ್ಲಿ ಮೋಜು ಮಾಡುತ್ತಿದ್ದ ವೇಳೆ ದಿನೇಶ್ ಸಮುದ್ರದಲ್ಲಿ ಬಂದ

ಬೆಂಗಳೂರಿನ ಯುವಕ ಮಂಗಳೂರಿನಲ್ಲಿ ಸಮುದ್ರಪಾಲು| ಪ್ರವಾಸಕ್ಕೆ ಬಂದು ದುರಂತ Read More »

‘ಮುಂಬೈ ಕರ್ನಾಟಕ’ ಇನ್ಮುಂದೆ ‘ಕಿತ್ತೂರು ಕರ್ನಾಟಕ’ | ಸಚಿವ ಸಂಪುಟ ಸಭೆಯಲ್ಲಿ ಹೆಸರು ಬದಲಾವಣೆಗೆ ಒಪ್ಪಿಗೆ|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಪ್ರಸ್ತಾವನೆಗೆ, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತ್ರ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದಂತ ಸಚಿವ ಜೆಸಿ ಮಾಧುಸ್ವಾಮಿಯವರು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂದು ನಾಮಕರಣ ಮಾಡುವ ಪ್ರಸ್ತಾವನೆಯನ್ನು ಸಿಬ್ಬಂದಿ

‘ಮುಂಬೈ ಕರ್ನಾಟಕ’ ಇನ್ಮುಂದೆ ‘ಕಿತ್ತೂರು ಕರ್ನಾಟಕ’ | ಸಚಿವ ಸಂಪುಟ ಸಭೆಯಲ್ಲಿ ಹೆಸರು ಬದಲಾವಣೆಗೆ ಒಪ್ಪಿಗೆ| Read More »

‘ನಾನೊಬ್ಬ ಸಲಿಂಗಿ, ಆದರೆ ಅದಕ್ಕೇನೂ ತೊಂದರೆ ಇಲ್ಲ’ – ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಮೆಸೇಜ್ ಹಾಕಿದ್ದ ಯುವಕ ಈಗ ಪೊಲೀಸ್ ಅತಿಥಿ..!

ಮಂಗಳೂರು: ನಿಶ್ಚಿತಾರ್ಥ ಮುಗಿಸಿಕೊಂಡಿದ್ದ ಯುವ ಜೋಡಿಯೊಂದರ ನಡುವೆ ಮದುವೆಗೆ ಮುನ್ನವೇ ಬಿರುಕು ಬಿಟ್ಟಿದ್ದು, ಯುವಕನ ಹುಚ್ಚಾಟವೇ ಆತನನ್ನು ಪೊಲೀಸ್ ಠಾಣೆ ಏರುವಂತೆ ಮಾಡಿದೆ. ಯುವತಿಯರಿಗೆ ಮದುವೆ ಬಗ್ಗೆ, ಮದುವೆ ನಂತರದ ಸಾಂಸಾರಿಕ ಜೀವನದ ಬಗ್ಗೆ ಆಕಾಂಕ್ಷೆಗಳಿರುತ್ತವೆ. ಆದರೆ ಹೆಚ್ಚಿನ ಯುವಕರು ಸಾಂಸಾರಿಕವಾಗಿ ತಲೆಕೆಡಿಸಿಕೊಳ್ಳೋದು‌ ಕಡಿಮೆ. ಅವರಿಗೆ ಅತಿಯಾದ ಲೈಂಗಿಕ ಬಯಕೆ ಈಡೇರಿಸಿಕೊಳ್ಳುವ ತವಕವೇ ಹೆಚ್ಚು. ಅದಕ್ಕಾಗಿ ಮದುವೆ ನಿಶ್ಚಿತಾರ್ಥ ಆದಕೂಡಲೇ ಯುವತಿಯ ಜೊತೆಗೆ ಹೊರಗೆ ತಿರುಗಾಡಲು ಬಯಸುತ್ತಾರೆ. ಇದೆಲ್ಲ ಈಗಿನ ಸಂದರ್ಭದಲ್ಲಿ ಸಹಜವೇ. ಆದರೆ, ಇಲ್ಲೊಬ್ಬ ಯುವಕ,

‘ನಾನೊಬ್ಬ ಸಲಿಂಗಿ, ಆದರೆ ಅದಕ್ಕೇನೂ ತೊಂದರೆ ಇಲ್ಲ’ – ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಮೆಸೇಜ್ ಹಾಕಿದ್ದ ಯುವಕ ಈಗ ಪೊಲೀಸ್ ಅತಿಥಿ..! Read More »

ವಾಯುಭಾರ ಕುಸಿತ| ನ.11ರ ವರೆಗೆ ದಕ್ಷಿಣ ಭಾರತದಲ್ಲಿ ಭಾರೀ‌ ಮಳೆ ಸಂಭವ| ಕರ್ನಾಟಕ ಸೇರಿ‌ 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ|

ಬೆಂಗಳೂರು: ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಪುದುಚೆರಿಯಲ್ಲಿ ನವೆಂಬರ್ 11ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದಲ್ಲಿ ವ್ಯಾಪಕ ಮಳೆಯಾಗಲಿದ್ದು, ತಮಿಳುನಾಡು, ಮಹಾರಾಷ್ಟ್ರ, ಪುದುಚೆರಿ, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ನವೆಂಬರ್ 11ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ನವೆಂಬರ್ 10ರಿಂದ 11ರ ಅವಧಿಯಲ್ಲಿ ತಮಿಳುನಾಡಿನಲ್ಲಿ ಅತಿ ಹೆಚ್ಚು

ವಾಯುಭಾರ ಕುಸಿತ| ನ.11ರ ವರೆಗೆ ದಕ್ಷಿಣ ಭಾರತದಲ್ಲಿ ಭಾರೀ‌ ಮಳೆ ಸಂಭವ| ಕರ್ನಾಟಕ ಸೇರಿ‌ 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ| Read More »