ಮುಸ್ಲಿಂಮರ ಹಣ ಶರಣ್ ಪಂಪ್ವೆಲ್ ಗೆ ಆಗುತ್ತೆ,! ಮುಸ್ಲಿಂ ಯುವಕರು ಮಾತ್ರ ಬೇಡ ಅಲ್ವೇ?- ಬಿರುವೆರ್ ಕುಡ್ಲ ಕಿಡಿ
ಮಂಗಳೂರು: ಬಜರಂಗ ದಳದ ಮುಖಂಡ ಶರಣ್ ಪಂಪ್ವೆಲ್ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ, ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲದ ಸಂಚಾಲಕ ಲಕ್ಷ್ಮೀಶ್ ಈ ಹಿಂದೆ ನಡೆದ ಸಭೆಯೊಂದರಲ್ಲಿ ಶರಣ್ ಪಂಪ್ವೆಲ್ ಬಿರುವೆರ್ ಕುಡ್ಲ ಒಂದು ಜಾತಿಗೆ ಸೀಮಿತವಾಗಿದೆ ಎಂದಿದ್ದರು. ಬಿರುವೆರ್ ಕುಡ್ಲ ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಏಳು ವರ್ಷಗಳಿಂದ ಸಂಸ್ಥೆಯು ಬಡವರಿಗೆ ಜಾತಿ ಭೇದ ನೋಡದೆ ಮೂರೂವರೆ ಕೋಟಿ ರೂ.ಗಳ










