ಕರಾವಳಿ

ಮಂಗಳೂರು ವಿ.ವಿ ಯ 209 ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ‌ನೀತಿ ಜಾರಿ| ಅನುಷ್ಟಾನಗೊಂಡ ಬೋಧನಾ ಪಠ್ಯಕ್ರಮ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ 209 ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ರೂಪಿಸಿರುವ ಪಠ್ಯಕ್ರಮ ಬೋಧನೆ ಸೋಮವಾರದಿಂದ ಅನುಷ್ಠಾನಗೊಂಡಿದೆ. ಶೈಕ್ಷಣಿಕ ವರ್ಷ ಆರಂಭದ ಮೊದಲ ದಿನ ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜುಗಳಲ್ಲಿ ಶೇ 85ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇ 75ರಷ್ಟು ಹಾಗೂ ಕೊಡಗು ಜಿಲ್ಲೆಯಲ್ಲಿ ಶೇ 50ರಷ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದರು. ಎನ್‌ಇಪಿ ಹೊಸದಾಗಿ ಅನುಷ್ಠಾನಗೊಂಡಿರುವ ಕಾರಣ ಕಾಲೇಜುಗಳ ಪ್ರಮುಖರಿಗೆ ಅನುಮಾನಗಳಿದ್ದಲ್ಲಿ ಬಗೆಹರಿಸಲು, ಇಬ್ಬರು ಪ್ರಾಧ್ಯಾಪಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ […]

ಮಂಗಳೂರು ವಿ.ವಿ ಯ 209 ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ‌ನೀತಿ ಜಾರಿ| ಅನುಷ್ಟಾನಗೊಂಡ ಬೋಧನಾ ಪಠ್ಯಕ್ರಮ Read More »

ಖ್ಯಾತ ಹೃದ್ರೋಗ ತಜ್ಞ‌ ಡಾ| ಬಿ.ಎಂ ಹೆಗ್ಡೆಗೆ ಇಂದು ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

ಮಂಗಳೂರು: ಖ್ಯಾತ ಹೃದ್ರೋಗ ತಜ್ಞ ಡಾ| ಬೆಳ್ಳೆ ಮೋನಪ್ಪ ಹೆಗ್ಡೆ (ಡಾ| ಬಿ. ಎಂ. ಹೆಗ್ಡೆ) ಅವರಿಗೆ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ನಡೆಯಲಿದೆ. ಡಾ| ಬಿ.ಎಂ.ಹೆಗ್ಡೆಯವರಿಗೆ ಈ ವರ್ಷದ ಜನವರಿಯಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಅವರು ಹೊಸದಿಲ್ಲಿಗೆ ತೆರಳಿದ್ದು ಇಂದು ರಾಷ್ಟ್ರಪತಿ ರಾಮಾನಾಥ ಕೋವಿಂದ್‌ ಅವರಿಂದ ಪ್ರಶಸ್ತಿ ಸ್ವೀಕರಿಸುವರು. ಅವರಿಗೆ 2010ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು. ಉಡುಪಿಯ ಬೆಳ್ಳೆ ಗ್ರಾಮದಲ್ಲಿ ಜನಿಸಿದ ಡಾ| ಬಿ. ಎಂ. ಹೆಗ್ಡೆಯವರು ವೈದ್ಯಕೀಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ

ಖ್ಯಾತ ಹೃದ್ರೋಗ ತಜ್ಞ‌ ಡಾ| ಬಿ.ಎಂ ಹೆಗ್ಡೆಗೆ ಇಂದು ಪದ್ಮವಿಭೂಷಣ ಪ್ರಶಸ್ತಿ ಪ್ರದಾನ Read More »

ಬೆಂಗಳೂರಿನ ಯುವಕ ಮಂಗಳೂರಿನಲ್ಲಿ ಸಮುದ್ರಪಾಲು| ಪ್ರವಾಸಕ್ಕೆ ಬಂದು ದುರಂತ

ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದ ತಂಡವೊಂದರಲ್ಲಿದ್ದ 20 ವರ್ಷದ ಯುವಕ ಸಮುದ್ರಪಾಲಾದ ಘಟನೆ ಪಣಂಬೂರು ಸಮುದ್ರ ತೀರದಲ್ಲಿ ನಡೆದಿದೆ. ದಿನೇಶ್ ಎಂಬ 20 ವರ್ಷದ ಯುವಕ ಸಮುದ್ರಪಾಲಾದ ವ್ಯಕ್ತಿ. ದೀಪಕ್, ಶ್ರೀನಿವಾಸ, ಪ್ರಶಾಂತ್ ಸುನೀಲ್, ಸುದೀಪ್, ಪ್ರಜ್ವಲ್, ದಿನೇಶ, ಸೀನಾ ಎಂಬ 8 ಮಂದಿ ನಿನ್ನೆ ರಾತ್ರಿ ಬೆಂಗಳೂರಿನಿಂದ ಕಾರು ಮಾಡಿಕೊಂಡು ಮಂಗಳೂರು ಪ್ರವಾಸಕ್ಕೆ ಬಂದಿದ್ದರು. ಇವರು ಇಂದು ಮಧ್ಯಾಹ್ನ ಪಣಂಬೂರು ಬೀಚ್ ತಲುಪಿದ್ದು ಇಲ್ಲಿ ಮೋಜು ಮಾಡುತ್ತಿದ್ದ ವೇಳೆ ದಿನೇಶ್ ಸಮುದ್ರದಲ್ಲಿ ಬಂದ

ಬೆಂಗಳೂರಿನ ಯುವಕ ಮಂಗಳೂರಿನಲ್ಲಿ ಸಮುದ್ರಪಾಲು| ಪ್ರವಾಸಕ್ಕೆ ಬಂದು ದುರಂತ Read More »

‘ಮುಂಬೈ ಕರ್ನಾಟಕ’ ಇನ್ಮುಂದೆ ‘ಕಿತ್ತೂರು ಕರ್ನಾಟಕ’ | ಸಚಿವ ಸಂಪುಟ ಸಭೆಯಲ್ಲಿ ಹೆಸರು ಬದಲಾವಣೆಗೆ ಒಪ್ಪಿಗೆ|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಪ್ರಸ್ತಾವನೆಗೆ, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತ್ರ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದಂತ ಸಚಿವ ಜೆಸಿ ಮಾಧುಸ್ವಾಮಿಯವರು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂದು ನಾಮಕರಣ ಮಾಡುವ ಪ್ರಸ್ತಾವನೆಯನ್ನು ಸಿಬ್ಬಂದಿ

‘ಮುಂಬೈ ಕರ್ನಾಟಕ’ ಇನ್ಮುಂದೆ ‘ಕಿತ್ತೂರು ಕರ್ನಾಟಕ’ | ಸಚಿವ ಸಂಪುಟ ಸಭೆಯಲ್ಲಿ ಹೆಸರು ಬದಲಾವಣೆಗೆ ಒಪ್ಪಿಗೆ| Read More »

‘ನಾನೊಬ್ಬ ಸಲಿಂಗಿ, ಆದರೆ ಅದಕ್ಕೇನೂ ತೊಂದರೆ ಇಲ್ಲ’ – ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಮೆಸೇಜ್ ಹಾಕಿದ್ದ ಯುವಕ ಈಗ ಪೊಲೀಸ್ ಅತಿಥಿ..!

ಮಂಗಳೂರು: ನಿಶ್ಚಿತಾರ್ಥ ಮುಗಿಸಿಕೊಂಡಿದ್ದ ಯುವ ಜೋಡಿಯೊಂದರ ನಡುವೆ ಮದುವೆಗೆ ಮುನ್ನವೇ ಬಿರುಕು ಬಿಟ್ಟಿದ್ದು, ಯುವಕನ ಹುಚ್ಚಾಟವೇ ಆತನನ್ನು ಪೊಲೀಸ್ ಠಾಣೆ ಏರುವಂತೆ ಮಾಡಿದೆ. ಯುವತಿಯರಿಗೆ ಮದುವೆ ಬಗ್ಗೆ, ಮದುವೆ ನಂತರದ ಸಾಂಸಾರಿಕ ಜೀವನದ ಬಗ್ಗೆ ಆಕಾಂಕ್ಷೆಗಳಿರುತ್ತವೆ. ಆದರೆ ಹೆಚ್ಚಿನ ಯುವಕರು ಸಾಂಸಾರಿಕವಾಗಿ ತಲೆಕೆಡಿಸಿಕೊಳ್ಳೋದು‌ ಕಡಿಮೆ. ಅವರಿಗೆ ಅತಿಯಾದ ಲೈಂಗಿಕ ಬಯಕೆ ಈಡೇರಿಸಿಕೊಳ್ಳುವ ತವಕವೇ ಹೆಚ್ಚು. ಅದಕ್ಕಾಗಿ ಮದುವೆ ನಿಶ್ಚಿತಾರ್ಥ ಆದಕೂಡಲೇ ಯುವತಿಯ ಜೊತೆಗೆ ಹೊರಗೆ ತಿರುಗಾಡಲು ಬಯಸುತ್ತಾರೆ. ಇದೆಲ್ಲ ಈಗಿನ ಸಂದರ್ಭದಲ್ಲಿ ಸಹಜವೇ. ಆದರೆ, ಇಲ್ಲೊಬ್ಬ ಯುವಕ,

‘ನಾನೊಬ್ಬ ಸಲಿಂಗಿ, ಆದರೆ ಅದಕ್ಕೇನೂ ತೊಂದರೆ ಇಲ್ಲ’ – ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಮೆಸೇಜ್ ಹಾಕಿದ್ದ ಯುವಕ ಈಗ ಪೊಲೀಸ್ ಅತಿಥಿ..! Read More »

ವಾಯುಭಾರ ಕುಸಿತ| ನ.11ರ ವರೆಗೆ ದಕ್ಷಿಣ ಭಾರತದಲ್ಲಿ ಭಾರೀ‌ ಮಳೆ ಸಂಭವ| ಕರ್ನಾಟಕ ಸೇರಿ‌ 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ|

ಬೆಂಗಳೂರು: ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಪುದುಚೆರಿಯಲ್ಲಿ ನವೆಂಬರ್ 11ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದಲ್ಲಿ ವ್ಯಾಪಕ ಮಳೆಯಾಗಲಿದ್ದು, ತಮಿಳುನಾಡು, ಮಹಾರಾಷ್ಟ್ರ, ಪುದುಚೆರಿ, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ನವೆಂಬರ್ 11ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ನವೆಂಬರ್ 10ರಿಂದ 11ರ ಅವಧಿಯಲ್ಲಿ ತಮಿಳುನಾಡಿನಲ್ಲಿ ಅತಿ ಹೆಚ್ಚು

ವಾಯುಭಾರ ಕುಸಿತ| ನ.11ರ ವರೆಗೆ ದಕ್ಷಿಣ ಭಾರತದಲ್ಲಿ ಭಾರೀ‌ ಮಳೆ ಸಂಭವ| ಕರ್ನಾಟಕ ಸೇರಿ‌ 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ| Read More »

ಕರ್ತವ್ಯನಿರತ ಸಾರಿಗೆ ಬಸ್ ಚಾಲಕನ ಮೇಲೆ ಹಲ್ಲೆ| ಆರೋಪಿ ಅಂದರ್|

ಸುಳ್ಯ: ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿಯ ನಿಂತಿಕಲ್ಲ್ ಎಂಬಲ್ಲಿ ಕರ್ತವ್ಯನಿರತ ರಾಜ್ಯ ಸಾರಿಗೆ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ನಡೆದಿದ್ದು, ಆರೋಪಿಗೆ ಸುಳ್ಯ ನ್ಯಾಯಾಲಯ ಬಂಧನ ವಿಧಿಸಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ ಡ್ರೈವರ್ ಗೆ ಅದೇ ಮಾರ್ಗವಾಗಿ ಬಂದ ಸ್ಕೂಟಿ ಸವಾರ ನಿಖಿಲ್ ಎಂಬಾತ ಬಸ್ಸನ್ನು ಅಡ್ಡಗಟ್ಡಿ ನಿಲ್ಲಿಸಿ ಚಾಲಕ ಚೆನ್ನಪ್ಪ ಎಂಬವರಿಗೆ ಕೈಯಿಂದ ಹಲ್ಲೆ ನಡೆಸಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಚಾಲಕ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಕರ್ತವ್ಯನಿರತ ಸಾರಿಗೆ ಬಸ್ ಚಾಲಕನ ಮೇಲೆ ಹಲ್ಲೆ| ಆರೋಪಿ ಅಂದರ್| Read More »

ಸುಳ್ಯ| ಅನ್ಯಕೋಮಿನ ಯುವಕ‌ನಿಂದ ಅಸಭ್ಯ ವರ್ತನೆ| ದೂರು‌ ದಾಖಲಿಸಿದ ಯುವತಿ| ಯುವಕನ ಬಂಧಿಸಿದ ಪೊಲೀಸರು

ಸುಳ್ಯ: ಇಲ್ಲಿನ ಮುರುಳ್ಯ ಗ್ರಾಮದ ಅಲೆಕ್ಕಾಡಿಯಲ್ಲಿ ಅನ್ಯಕೋಮಿನ ಯುವಕನೋರ್ವ ಅಸಹ್ಯವಾಗಿ ವರ್ತಿಸಿದ್ದಾಗಿ ಯುವತಿಯೋರ್ವಳು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ ಘಟನೆ ನಡೆದಿದೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ನವಾಜ್(29) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದು ಬಂದಿದೆ. ಅಲೆಕ್ಕಾಡಿಯಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ ಕಲ್ಮಡ್ಕದ ಕಜೆ ನವಾಜ್ (29) ಎಂಬಾತ ಅದೇ ಕಟ್ಟಡದಲ್ಲಿ ಬಾಡಿಗೆ ರೂಮ್ ಮಾಡಿಕೊಂಡು ತಾಯಿಯೊಂದಿಗೆ ವಾಸವಿರುವ ಯುವತಿಯ ಜೊತೆ ಕೈಸನ್ನೆ ಮಾಡುವುದು, ಬಟ್ಟೆ ಕಳಚುವುದು, ಮತ್ತು ಬಟ್ಟೆ

ಸುಳ್ಯ| ಅನ್ಯಕೋಮಿನ ಯುವಕ‌ನಿಂದ ಅಸಭ್ಯ ವರ್ತನೆ| ದೂರು‌ ದಾಖಲಿಸಿದ ಯುವತಿ| ಯುವಕನ ಬಂಧಿಸಿದ ಪೊಲೀಸರು Read More »

ಮನೆ ಬಾಗಿಲು ಮುರಿದು 18.35 ಲಕ್ಷ ನಗದು ದೋಚಿದ ಕಳ್ಳರು

ಉಡುಪಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿ ಸುಮಾರು ನಗದು, ಚಿನ್ನಾಭರಣ ಸಹಿತ ಸುಮಾರು 18.35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಎಗರಿಸಿದ ಘಟನೆ ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್‌ನ ಜಯಗಣೇಶ ಬೀಡು ಎಂಬವರ ಮನೆಯಲ್ಲಿ ನಡೆದಿದೆ. ನ.6 ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಹಿಂಬಾಗಿಲಿನ ಕಿರು ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ಮುರಿದು ಒಳ ಪ್ರವೇಶಿಸಿ, ಒಳಗಿನ ಬಾಗಿಲಿನ ಚಿಲಕದ ಬದಿ ಮುರಿದು ಮಾಸ್ಟರ್‌

ಮನೆ ಬಾಗಿಲು ಮುರಿದು 18.35 ಲಕ್ಷ ನಗದು ದೋಚಿದ ಕಳ್ಳರು Read More »

ಬಂಟ್ವಾಳ: ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ: ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಪೆರ್ಲಾಪು ಎಂಬಲ್ಲಿ ನಡೆದಿದೆ. ಪೆರ್ಲಾಪು ನಿವಾಸಿ ಸುರೇಶ್(38) ಮೃತಪಟ್ಟ ವ್ಯಕ್ತಿ.ಸುರೇಶ್ ಎಂಬಾತ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಲಕ್ಷಣ ಅವರ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯಾಹ್ನ ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೆ ಇದ್ದ ಸತ್ತ ಒಣಗಿದ ತೆಂಗಿನ ಮರ ಆಕಸ್ಮಿಕವಾಗಿ ಸುರೇಶ್ ಅವರ ಮೈಮೇಲೆ ಬಿದ್ದು

ಬಂಟ್ವಾಳ: ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »