‘ಮುಂಬೈ ಕರ್ನಾಟಕ’ ಇನ್ಮುಂದೆ ‘ಕಿತ್ತೂರು ಕರ್ನಾಟಕ’ | ಸಚಿವ ಸಂಪುಟ ಸಭೆಯಲ್ಲಿ ಹೆಸರು ಬದಲಾವಣೆಗೆ ಒಪ್ಪಿಗೆ|
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಪ್ರಸ್ತಾವನೆಗೆ, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತ್ರ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದಂತ ಸಚಿವ ಜೆಸಿ ಮಾಧುಸ್ವಾಮಿಯವರು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂದು ನಾಮಕರಣ ಮಾಡುವ ಪ್ರಸ್ತಾವನೆಯನ್ನು ಸಿಬ್ಬಂದಿ









