ಕರಾವಳಿ

ತೊಕ್ಕೊಟ್ಟು:ಮಧ್ಯ ರಾತ್ರಿಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ಸೆಕ್ಯುರಿಟಿ ಬೈಕನ್ನೇ ಕಳವಿಗೆ ಯತ್ನಿಸಿದವನಿಗೆ ಧರ್ಮದೇಟು,ಆರೋಪಿ ಪೊಲೀಸ್ ವಶಕ್ಕೆ.

ಉಳ್ಳಾಲ:ಮಧ್ಯರಾತ್ರಿಯಲ್ಲಿ ತೊಕ್ಕೊಟ್ಟಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಒಂದರ ಮುಂದೆ ನಿಲ್ಲಿಸಿದ್ದ ಸೆಕ್ಯುರಿಟಿ ಗಾರ್ಡ್ ಓರ್ವರ ಬೈಕನ್ನೇ ಕಳವಿಗೆ ಯತ್ನಿಸಿದವನಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಲಾಗಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕು ಅಂಗಡಿಪದವು ಶಾಂತಿನಗರ ನಿವಾಸಿ ನೌಫಾಲ್(23) ಬೈಕ್ ಕಳವಿಗೆತ್ನಿಸಿದ ಯುವಕ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿರುವ ಮಾರುತಿ ಸೆಂಟರ್ ವಾಣಿಜ್ಯ ಕಟ್ಟಡದ ಮುಂಭಾಗದಲ್ಲಿ ನಿನ್ನೆ ರಾತ್ರಿ ಅದೇ ಕಟ್ಟಡದಲ್ಲಿರುವ ಮುತ್ತೂಟು ಫೈನಾನ್ಸ್ ನ ರಾತ್ರಿ ಪಾಳಿ ಸೆಕ್ಯುರಿಟಿ ಗಾರ್ಡ್ ಅವರು ತನ್ನ (ಪಲ್ಸರ್ NS 200)ಬೈಕನ್ನ ನಿಲ್ಲಿಸಿದ್ದರು. […]

ತೊಕ್ಕೊಟ್ಟು:ಮಧ್ಯ ರಾತ್ರಿಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ಸೆಕ್ಯುರಿಟಿ ಬೈಕನ್ನೇ ಕಳವಿಗೆ ಯತ್ನಿಸಿದವನಿಗೆ ಧರ್ಮದೇಟು,ಆರೋಪಿ ಪೊಲೀಸ್ ವಶಕ್ಕೆ. Read More »

ಆಗುಂಬೆ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಲಾರಿ: ನಾಲ್ವರು ದುರ್ಮರಣ, ಐವರು ಗಂಭೀರ

ಕಾರ್ಕಳ: ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ದಾರುಣ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಅ.29 ರ ಶುಕ್ರವಾರ ನಡೆದಿದೆ. ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು ಎಂದು ತಿಳಿದುಬಂದಿದೆ. ಘಟನೆಯ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 9 ನೇ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಚಾಲಕ ನಿಯಂತ್ರಣ ತಪ್ಪಿ ಲಾರಿ ಪ್ರಪಾತಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ. ಈ ಘಟನೆಯಲ್ಲಿ ನಾಲ್ಕು ಮಂದಿ ಸಾವನಪ್ಪಿದ್ದು, ಐದು

ಆಗುಂಬೆ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಲಾರಿ: ನಾಲ್ವರು ದುರ್ಮರಣ, ಐವರು ಗಂಭೀರ Read More »

ಲಂಚ ಸ್ಚೀಕಾರ : ಮಂಗಳೂರು ಪಾಲಿಕೆ ಅಧಿಕಾರಿಗೆ 5 ವರ್ಷ ಜೈಲು

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯೊಬ್ಬರು ಲಂಚ ಪಡೆದು ಮೀತಿ ಮೀರಿ ಆದಾಯ ಸಂಪಾದನೆ ಮಾಡಿದ ಆರೋಪ ಸಾಭೀತಾಗಿದ್ದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿದೆ.ಮಂಗಳೂರು ಮನಪಾ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿ (50) ಶಿಕ್ಷೆಗೊಳಗಾದ ಅಪರಾಧಿ. ಮಂಜುನಾಥ ಸ್ವಾಮಿ ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ

ಲಂಚ ಸ್ಚೀಕಾರ : ಮಂಗಳೂರು ಪಾಲಿಕೆ ಅಧಿಕಾರಿಗೆ 5 ವರ್ಷ ಜೈಲು Read More »

ಮೂಡುಬಿದಿರೆ: ಮೆಕ್ಯಾನಿಕ್ಸ್ V/s ಇಲೆಕ್ಟ್ರಿಕಲ್ ವಿದ್ಯಾರ್ಥಿಗಳ ನಡುವೆ ಡಿಶ್ಯುಂ…ಡಿಶ್ಯು…| 8 ಮಂದಿ ಡಿಬಾರ್

ಮಂಗಳೂರು: ಇಲ್ಲಿಗೆ ಸಮೀಪದ ತೋಡಾರುವಿನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಕಾಲೇಜ್ ಒಂದರಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿಗಳ ಗುಂಪುಗಳ ಮಧ್ಯೆ ಹೊಡೆದಾಟ ನಡೆದು ಇಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.ಗಾಯಗೊಂಡ ವಿದ್ಯಾರ್ಥಿಗಳನ್ನು ಸಹಾಝ್ ಮತ್ತು ಮಹಮ್ಮದ್ ಸ್ವರೂಬ್ ಎಂದು ಗುರುತಿಸಲಾಗಿದೆ. ಇವರು ಸದ್ಯ ಸರಕಾರಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದರೆ.ಘಟನೆ ಹಿನ್ನೆಲೆ:ಸಂಪ್ರದಾಯ ದಿನ ಎಂಬ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪೂರ್ವ ತಯಾರಿ ನಡೆಸುತ್ತಿದ್ದರು. ಈ ವೇಳೆ ತೃತೀಯ ವರ್ಷದ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದ ವೇಳೆ ಅಂತಿಮ ವರ್ಷದ ವಿದ್ಯಾರ್ಥಿಗಳ

ಮೂಡುಬಿದಿರೆ: ಮೆಕ್ಯಾನಿಕ್ಸ್ V/s ಇಲೆಕ್ಟ್ರಿಕಲ್ ವಿದ್ಯಾರ್ಥಿಗಳ ನಡುವೆ ಡಿಶ್ಯುಂ…ಡಿಶ್ಯು…| 8 ಮಂದಿ ಡಿಬಾರ್ Read More »

ಸುಳ್ಯ: ಜಡ ಹಿಡಿದ ಆಡಳಿತವರ್ಗಕ್ಕೆ ಬಿಸಿ ಮುಟ್ಟಿಸುತ್ತಿರುವ ನ್ಯಾಯಮೂರ್ತಿಗಳು| ನಮಗೆ ಇವರಿಬ್ಬರೇ ಸಾಕು| ಉಳಿದವರೆಲ್ಲ ಯಾಕೆ ಬೇಕು?

ಮಂಗಳೂರು: ಕಳೆದೊಂದು ವಾರದಿಂದ ಸುಳ್ಯ ಸಿವಿಲ್ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಸೋಮಶೇಖರ್ ಹಾಗೂ ಯಶವಂತಕುಮಾರ್ ರವರ ಕಾರ್ಯವೈಖರಿ ಗಮನಿಸಿದಾಗ ಸುಳ್ಯದ ಪ್ರತಿಯೊಬ್ಬ ‌ನಾಗರೀಕರ ಮನಸ್ಸಲ್ಲಿ ಬರುವ ಪ್ರಶ್ನೆಯೇ ಇದು..! ಪಾದರಸದಂತೆ ಸಮಸ್ಯೆ ಬಂದಲ್ಲಿಗೆ ತೆರಳಿ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಸ್ಥಳದಲ್ಲೇ ಸೂಕ್ತ ಪರಿಹಾರ ಒದಗಿಸುತ್ತಾ ಜನಪ್ರತಿನಿಧಿ, ಅಧಿಕಾರ ವರ್ಗದವರು ಮಾಡಬೇಕಾದ ಕೆಲಸವನ್ನು‌ ಮಾಡುತ್ತಾ‌ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹೀಗಿದ್ದಾಗ ನಮಗೆ ಅಸಡ್ಡೆ‌ ಹೊಂದಿರುವ ಜನಪ್ರತಿನಿಧಿಗಳು, ಅಧಿಕಾರಿಗಳು ಯಾಕೆ ಬೇಕು? ಎಂದು ‌ಅಂದುಕೊಳ್ಳುವುದು ಸಹಜ. ಕಳೆದೆ ಸೋಮವಾರ ಪ್ರಾಥಮಿಕ ಶಾಲೆಗಳು

ಸುಳ್ಯ: ಜಡ ಹಿಡಿದ ಆಡಳಿತವರ್ಗಕ್ಕೆ ಬಿಸಿ ಮುಟ್ಟಿಸುತ್ತಿರುವ ನ್ಯಾಯಮೂರ್ತಿಗಳು| ನಮಗೆ ಇವರಿಬ್ಬರೇ ಸಾಕು| ಉಳಿದವರೆಲ್ಲ ಯಾಕೆ ಬೇಕು? Read More »

ಸುಳ್ಯ| ಮಳೆ ನೀರಲ್ಲಿ ಕೊಚ್ಚಿ ಹೋದ ಬೈಕ್| 2 ದಿನಗಳ ಬಳಿಕ ನದಿಯಲ್ಲಿ ಪತ್ತೆ|

ಸುಳ್ಯ : ನದಿಯ ಬದಿ ನಿಲ್ಲಿಸಿದ ಪಲ್ಸರ್ ಬೈಕ್ ಒಂದು ಮಳೆ ನೀರಿಗೆ ಕೊಚ್ಚಿ ಎರಡು ದಿನಗಳ ಬಳಿಕ ಪತ್ತೆಯಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜ ಬಳಿ ನಡೆದಿದೆ. ಕಳಂಜ ಗ್ರಾಮದ ಅಯ್ಯನಕಟ್ಟೆಯಲ್ಲಿ ಹೊಳೆ ಯೊಂದಿದ್ದು ಅದರ ಬದಿಯಲ್ಲಿ ಅ.25 ರ ಸಂಜೆ ರಂಜನ್ ಎಂಬವರು ತನ್ನ ಪಲ್ಸರ್ ಬೈಕ್ ಇರಿಸಿ ಬೆಳ್ಳಾರೆಗೆ ತೆರಳಿದ್ದರು. ಆ ವೇಳೆ ಸುರಿದ ಭಾರಿ ಮಳೆಗೆ ಭಾರಿ ಪ್ರಮಾಣದ ನೀರು ಬಂದು ನೀರಿನ ರಭಸಕ್ಕೆ ಬೈಕ್ ನೀರಿನಲ್ಲಿ ಕೊಚ್ಚಿಕೊಂಡು

ಸುಳ್ಯ| ಮಳೆ ನೀರಲ್ಲಿ ಕೊಚ್ಚಿ ಹೋದ ಬೈಕ್| 2 ದಿನಗಳ ಬಳಿಕ ನದಿಯಲ್ಲಿ ಪತ್ತೆ| Read More »

ಪುತ್ತೂರು: ಕಾಮದಾಸೆಯಿಂದ ಮೊಮ್ಮಗಳ ವಯಸ್ಸಿನ ಬಾಲಕಿ ಕೈಗೆ ಮಗುವಿತ್ತ ಆರ್ ಎಸ್ಎಸ್ ಮುಖಂಡ..!? ಪೊಲೀಸ್ ಕಣ್ತಪ್ಪಿಸಿ ನಾರಾಯಣ ರೈ ಕೋರ್ಟ್ ಗೆ ಶರಣಾಗಿದ್ಹೇಗೆ? ಅನಾರೋಗ್ಯವಾಗಿ ಆಸ್ಪತ್ರೆಗೆ ದಾಖಲಾದ ಆರೋಪಿ|

ಮಂಗಳೂರು: ಜಿಲ್ಲೆಯನ್ನೇ ತಲ್ಲಣಗೊಳಿಸಿದ್ದ ಪುತ್ತೂರು‌ ತಾಲೂಕಿನ ಬಡಗನ್ನೂರು ಗ್ರಾಮದ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದ ಮುಖ್ಯ ಆರೋಪಿ ಸಂಘಪರಿವಾರದ ಮುಖಂಡ, ಸುಳ್ಯಪದವು ಪಡವನ್ನೂರು ಗ್ರಾಮದ ಕುದ್ಕಾಡಿ ನಾರಾಯಣ ರೈ ಕೊನೆಗೂ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಆರೋಪಿ ನಾರಾಯಣ ರೈ ತನ್ನ ಮನೆಗೆ ಕೆಲಸಕ್ಕೆ ಬರುತ್ತಿದ್ದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಎನ್ನಲಾಗಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆತ ತನ್ನ ರಾಜಕೀಯ ಪ್ರಭಾವ ಬಳಸಿ ಪ್ರಕರಣದ ದಿಕ್ಕು ತಪ್ಪಿಸಲು ಯತ್ನಿಸಿದ್ದ. ಈ ನಡುವೆ ಸಂತ್ರಸ್ತೆ ಸೆ.5ರಂದು ಮಗುವಿಗೆ

ಪುತ್ತೂರು: ಕಾಮದಾಸೆಯಿಂದ ಮೊಮ್ಮಗಳ ವಯಸ್ಸಿನ ಬಾಲಕಿ ಕೈಗೆ ಮಗುವಿತ್ತ ಆರ್ ಎಸ್ಎಸ್ ಮುಖಂಡ..!? ಪೊಲೀಸ್ ಕಣ್ತಪ್ಪಿಸಿ ನಾರಾಯಣ ರೈ ಕೋರ್ಟ್ ಗೆ ಶರಣಾಗಿದ್ಹೇಗೆ? ಅನಾರೋಗ್ಯವಾಗಿ ಆಸ್ಪತ್ರೆಗೆ ದಾಖಲಾದ ಆರೋಪಿ| Read More »

ನಂದಿನಿ ಉತ್ಪನ್ನಗಳನ್ನು ನಿಗದಿತ ದರಕ್ಕಿಂತ ಹೆಚ್ಚಿಗೆ ಮಾರಾಟ‌ ಮಾಡಿದರೆ ಡೀಲರ್ ಶಿಪ್ ರದ್ದು – ಕೆಎಂಎಫ್ ಆದೇಶ

ಮಂಗಳೂರು: ನಂದಿನಿ ಹಾಲಿನ ಡೀಲರುಗಳು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಡೀಲರ್‌ಶಿಪ್ ರದ್ದು ಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾರುಕಟ್ಟೆ ವ್ಯವಸ್ಥಾಪಕರು ಆದೇಸಿಸಿದ್ದಾರೆ. ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಒಕ್ಕೂಟದೊಂದಿಗೆ ಮಾಡಿಕೊಂಡ ಕರಾರು ಒಪ್ಪಂದದ ಉಲ್ಲಂಘನೆಯಾಗುತ್ತದೆ. ಆದುದರಿಂದ ಕಾನೂನು ಮಾಪನ ಶಾಸ್ತ್ರದ ನಿಯಮದಂತೆ ಗ್ರಾಹಕರಿಗೆ ನಂದಿನಿ ಹಾಲು ಮತ್ತು

ನಂದಿನಿ ಉತ್ಪನ್ನಗಳನ್ನು ನಿಗದಿತ ದರಕ್ಕಿಂತ ಹೆಚ್ಚಿಗೆ ಮಾರಾಟ‌ ಮಾಡಿದರೆ ಡೀಲರ್ ಶಿಪ್ ರದ್ದು – ಕೆಎಂಎಫ್ ಆದೇಶ Read More »

ಮಂಗಳೂರು: ಫ್ಲೈಓವರ್‌ನಿಂದ ಕೆಳಗೆ ಬಿದ್ದ ಬೈಕ್| ಸವಾರ ಸಾವು

ಮಂಗಳೂರು: ಫ್ಲೈಓವರ್ ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ. ಮೃತರನ್ನು ಕುಂಪಲ ಸರಳಾಯಕಾಲನಿ ನಿವಾಸಿ, ಕುಂಪಲ ಯುವ ಮರಾಠದ ಮಾಜಿ ಅಧ್ಯಕ್ಷರಾಗಿದ್ದ ಸುಭ್ರಹ್ಮಣ್ಯ ರಾವ್ ಸಿಂದಿಯಾ (50) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬುಲೆಟ್ ವಾಹನದಲ್ಲಿ ಬರುವ ಸಂದರ್ಭ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಬುಲೆಟ್ ಫ್ಲೈಓವರ್‌ಗೆ ಢಿಕ್ಕಿ ಹೊಡೆದಿದ್ದು, ಸವಾರ ಸೇತುವೆಯಿಂದ ಕೆಳಗೆ ರಸ್ತೆಗೆ ಬಿದ್ದು ಗಂಭೀರ

ಮಂಗಳೂರು: ಫ್ಲೈಓವರ್‌ನಿಂದ ಕೆಳಗೆ ಬಿದ್ದ ಬೈಕ್| ಸವಾರ ಸಾವು Read More »

ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ| ಪೇಸ್‌ಬುಕ್ ಪೋಸ್ಟ್ ನಿಂದ‌ ಉಂಟಾದ ವಿವಾದ ಕತ್ತಿಯ ಅಂಚಿನವರೆಗೆ..!

ಬಂಟ್ವಾಳ: ಬಿಜೆಪಿ ಮುಖಂಡನ ಮೇಲೆ ಭಜರಂಗದಳ ಕಾರ್ಯಕರ್ತರಿಂದಲೇ ತಲವಾರು ದಾಳಿ ನಡೆಸಿ ಕೊಲೆ ಯತ್ನ‌ ನಡೆದ ಘಟನೆ ಅ26ರ ತಡ ರಾತ್ರಿ ಬಂಟ್ವಾಳದಲ್ಲಿ ನಡೆದಿದ್ದು, ಘಟನೆಗೆ ಪೇಸ್ ಬುಕ್ ನಲ್ಲಿ ಉಂಟಾದ ವಿವಾದವೇ ಕಾರಣ ಎನ್ನಲಾಗಿದೆ. ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ನಿವಾಸಿ ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ಹಲ್ಲೆಗೆ ಒಳಗಾಗಿದ್ದು, ಇವರ ಮೇಲೆ ಭಜರಂಗದಳ ಕಾರ್ಯಕರ್ತರು ಎನ್ನಲಾದ ನಿತಿನ್ ಬಡಗಬೆಳ್ಳೂರು, ನಿಶಾಂತ್ ಬಡಗಬೆಳ್ಳೂರು, ಪವನ್ ಕುಮ್ಡೇಲ್ ಹಾಗೂ ಇನ್ನಿತರರು ತಲವಾರು

ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ| ಪೇಸ್‌ಬುಕ್ ಪೋಸ್ಟ್ ನಿಂದ‌ ಉಂಟಾದ ವಿವಾದ ಕತ್ತಿಯ ಅಂಚಿನವರೆಗೆ..! Read More »