ಮಂಗಳೂರು- ಕುವೈಟ್ ವಿಮಾನಯಾನ| ಊಟಕ್ಕಿಲ್ಲದ ಉಪ್ಪಿನಕಾಯಿ
ಮಂಗಳೂರು: ಇಲ್ಲಿಂದ ಕುವೈತ್ಗೆ ತೆರಳುವ ಏರ್ ಇಂಡಿಯಾ ವಿಮಾನಗಳ ವೇಳಾಪಟ್ಟಿಯನ್ನು ನವೆಂಬರ್ನಿಂದ ಪರಿಷ್ಕರಿಸಲಾಗಿದ್ದು, ಈ ಬಾರಿಯೂ ಅನುಕೂಲ ಕಲ್ಪಿಸಿಲ್ಲ ಎನ್ನುವ ಆರೋಪ ಕುವೈತ್ನ ಅನಿವಾಸಿ ಕರಾವಳಿಗರಿಂದ ಕೇಳಿಬಂದಿದೆ. ಕೋವಿಡ್-19 ಮೊದಲ ಅಲೆಯವರೆಗೆ ಸಮರ್ಪಕವಾಗಿದ್ದ ಮಂಗಳೂರು-ಕುವೈತ್ ವಿಮಾನದ ವೇಳಾಪಟ್ಟಿ, ಬಳಿಕ ದಿಢೀರನೆ ಬದಲಾಗಿದೆ.ಗುರುವಾರ ಕುವೈತ್ನಿಂದ ಹೊರಟು ಮಂಗಳೂರಿಗೆ ಬರುವವರಿಗೆ ಮೊದಲಿನ ವೇಳಾಪಟ್ಟಿ ಅನುಕೂಲವಾಗಿತ್ತು. ಕುವೈತ್ನಲ್ಲಿ ಶುಕ್ರವಾರ ಮತ್ತು ಶನಿವಾರ ವಾರಾಂತ್ಯ ರಜೆ ಇರುವುದರಿಂದ, ಕರಾವಳಿ ಜನರು ಊರಿಗೆ ಬಂದು ಹೋಗಲು ಪ್ರಯೋಜನವಾಗುತ್ತಿತ್ತು. ರಜೆ ಇಲ್ಲದೆ ಭಾನುವಾರ ಮತ್ತೆ ಕೆಲಸಕ್ಕೆ
ಮಂಗಳೂರು- ಕುವೈಟ್ ವಿಮಾನಯಾನ| ಊಟಕ್ಕಿಲ್ಲದ ಉಪ್ಪಿನಕಾಯಿ Read More »










