ಕರಾವಳಿ

ಸೈಯ್ಯದ್ ಫಝಲ್ ಕೋಯಮ್ಮ ತಂಙಲ್ ಕೂರ ನಿಧನ|SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂತಾಪ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಸುನ್ನಿ ಮುಸ್ಲಿಮರ ಆಧ್ಯಾತ್ಮಿಕ ನೇತಾರರು, ಉಳ್ಳಾಲದ ಗೌರವಾನ್ವಿತ ಖಾಝಿಯೂ ಆದ ಕೂರತ್ ತಂಘಳ್ ಎಂದೇ ಪ್ರಸಿದ್ಧರಾದ ಬಹುಮಾನ್ಯ ಸೆಯ್ಯದ್ ಫಝಲ್ ಕೋಯಮ್ಮ ಕೂರತ್ ತಂಙಳ್ ರವರು ನಮ್ಮನಗಲಿದ್ದಾರೆ, ಇವರ ವಿಯೋಗವು ಮುಸ್ಲಿಂ ಸಮುದಾಯ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿಗೆ ಎಂದು SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಪ್ರಕಟಣೆಯಲ್ಲಿ ಸಂತಾಪ ವ್ಯಕ್ತ ಪಡಿಸಿದ್ದಾರೆ. ಕೇರಳ, ಕರ್ನಾಟಕದ ಸೇರಿದಂತೆ ದಕ್ಷಿಣ ಭಾರತದಲ್ಲಿ ಸುನ್ನಿ ಸಮೂಹಕ್ಕೆ ಆಧ್ಯಾತ್ಮಿಕ ನಾಯಕತ್ವವನ್ನು ನೀಡಿದ ಗೌರವಾನ್ವಿತರು ದೊಡ್ಡ […]

ಸೈಯ್ಯದ್ ಫಝಲ್ ಕೋಯಮ್ಮ ತಂಙಲ್ ಕೂರ ನಿಧನ|SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂತಾಪ Read More »

ಮಂಗಳೂರು: ನಗರದಲ್ಲಿ ಸಕ್ರಿಯಗೊಂಡ ‘ಚಡ್ಡಿ ಗ್ಯಾಂಗ್’| ರಾತ್ರಿ ವೇಳೆ ಮನೆ ದರೋಡೆಗೈದ ಕಳ್ಳರು

ಸಮಗ್ರ ನ್ಯೂಸ್: ಮಂಗಳೂರು ನಗರದ‌ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರದಂದು ರಾತ್ರಿ ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ. ಚಿನ್ನಾಭರಣದೊಂದಿಗೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕೋಡಿಕಲ್ ಬಳಿಯಲ್ಲಿ ಕಳೆದ ಶನಿವಾರ ಕಳ್ಳತನ ನಡೆದಿದ್ದು, ಇದೇ ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.‌ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.

ಮಂಗಳೂರು: ನಗರದಲ್ಲಿ ಸಕ್ರಿಯಗೊಂಡ ‘ಚಡ್ಡಿ ಗ್ಯಾಂಗ್’| ರಾತ್ರಿ ವೇಳೆ ಮನೆ ದರೋಡೆಗೈದ ಕಳ್ಳರು Read More »

ಮಣಿಪಾಲ: ಸಿಎ ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದಲ್ಲಿ ಜು.5ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಮಹೇಶ್ ಎಂಬವರ ಮಗಳು ಶ್ರೀನಿಧಿ(20) ಎಂದು ಗುರುತಿಸಲಾಗಿದೆ. ಮಂಗಳೂರು ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ಶ್ರೀನಿಧಿ, ಮನೆಯಲ್ಲಿ ಯಾರು ಇಲ್ಲದ ವೇಳೆ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾಡಿಗೆ ಮನೆಯ ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ

ಮಣಿಪಾಲ: ಸಿಎ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಚಾಂದಿನಿ| ‘ನೆರವಾಗಿ ಇಲ್ಲ ದಯಾಮರಣ ಕರುಣಿಸಿ’ ಎಂದು ಈಮೇಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ನಾವೂರು ಗ್ರಾಮದ ಬಡ ಕುಟುಂಬದ ಚಾಂದಿನಿ ಜಿ.ಡಿ. (33) ಎಂಬುವರು ‘ಹೈಪರ್‌ ಐಜಿಇ ಸಿಂಡ್ರೋಮ್‌’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ವೆಚ್ಚ ಭರಿಸಲು ಸರ್ಕಾರದ ನೆರವು ಕೋರಿದ್ದಾರೆ. ‘ಚಿಕಿತ್ಸೆಗೆ ನೆರವು ನೀಡಲು ಸಾಧ್ಯವಾಗದಿದ್ದರೆ ದಯಾಮರಣವನ್ನಾದರೂ ನೀಡಿ’ ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರಿಗೆ ಇ- ಮೇಲ್‌ ಕಳುಹಿಸಿದ್ದಾರೆ. ‘ನನ್ನ ಕಾಯಿಲೆಗೆ ಊರಿನಲ್ಲಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಿರಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ನ

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಚಾಂದಿನಿ| ‘ನೆರವಾಗಿ ಇಲ್ಲ ದಯಾಮರಣ ಕರುಣಿಸಿ’ ಎಂದು ಈಮೇಲ್ Read More »

ರೆಡ್ ಅಲರ್ಟ್ ಹಿನ್ನೆಲೆ|ಜುಲೈ 9ರಂದು ದ.ಕ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಜು. 9ರಂದು ರೆಡ್ ಅಲರ್ಟ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಮುಲ್ಲೈ‌ ಮುಗಿಲನ್ ಆದೇಶಿಸಿದ್ದಾರೆ. ಮಳೆಯಿಂದಾಗಿ ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಅಲ್ಲಲ್ಲಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರಸ್ಥಾನ ಬಿಡದಂತೆ ಆದೇಶಿಸಲಾಗಿದ್ದು, ನಾಗರಿಕರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

ರೆಡ್ ಅಲರ್ಟ್ ಹಿನ್ನೆಲೆ|ಜುಲೈ 9ರಂದು ದ.ಕ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ Read More »

ಮತ್ತೆ ಭಾರೀ ಮಳೆ‌ ಸಾಧ್ಯತೆ|ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ| ಮಲೆನಾಡಿನಲ್ಲಿ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಈಗಾಗಲೇ ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ. ಅಷ್ಟೆ ಅಲ್ಲದೆ ದಕ್ಷಿಣ ಒಳನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಯಲ್ಲಿ ಜು.9 ರಿಂದ 12 ರವರೆಗೆ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ ಏಳು ದಿನಗಳ ಕಾಲ

ಮತ್ತೆ ಭಾರೀ ಮಳೆ‌ ಸಾಧ್ಯತೆ|ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ| ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ Read More »

ಮಂಗಳೂರು: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಞಳ್ ಇನ್ನಿಲ್ಲ

ಸಮಗ್ರ ನ್ಯೂಸ್: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನರಾಗಿದ್ದಾರೆ. ಉಳ್ಳಾಲ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಫಝಲ್ ಕೋಯಮ್ಮ ತಂಙಲ್ ಉಳ್ಳಾಲ ಖಾಝಿಯಾಗಿದ್ದರು. ಕೇರಳದ ಎಟ್ಟಿಕುಳಂನಲ್ಲಿರುವ ಅವರು ರಾತ್ರಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಈಗ ಕೂರತ್ ತಂಙಳ್ ರ ಜನಾಝ ಎಟ್ಟಿಕ್ಕುಳಂ ಸ್ವಂತ ಮನೆಯಲ್ಲಿದ್ದು, ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾರ ನೇತೃತ್ವದಲ್ಲಿ ಪುತ್ತೂರಿನ ಕೂರತ್ ನಲ್ಲಿ ಜನಾಝ ನಮಾಝ್ ನಡೆಯಲಿದೆ.

ಮಂಗಳೂರು: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಞಳ್ ಇನ್ನಿಲ್ಲ Read More »

ಪಂಜ: ಕಲಾಮಂದಿರ್ ಡಾನ್ಸ್ ಕ್ರಿವ್ ಬೆಳ್ಳಾರೆ ‘ಪಂಜದಲ್ಲಿ ನೃತ್ಯ ತರಗತಿ ಪ್ರಾರಂಭ

ಸಮಗ್ರ ನ್ಯೂಸ್: ಕಲಾ ಮಂದಿರ್ ಡಾನ್ಸ್ ಕ್ರಿವ್ ಬೆಳ್ಳಾರೆ ಇದರ ವತಿಯಿಂದ ಪಂಜ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನೃತ್ಯ ತರಗತಿಗಳನ್ನು ಉದ್ಘಾಟಿಸಿದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಇವರು “ಮಾನಸಿಕ ಮತ್ತು ಶಾರೀರಿಕ ಆರೋಗ್ಯಕ್ಕೆ ಪೂರಕವಾದ ನೃತ್ಯ ತರಬೇತಿ ತರಗತಿಯಿಂದ ಮಕ್ಕಳಿಗೆ ಪ್ರಯೋಜನವಾಗಲಿ” ಎಂದರು. ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ಸಭಾಧ್ಯಕ್ಷತೆ ವಹಿಸಿ “ನೃತ್ಯ ತರಬೇತಿ ಪಡೆದ ನಮ್ಮೂರಿನ ಮಕ್ಕಳು ರಾಜ್ಯ ರಾಷ್ಟ್ರ ಮಟ್ಟದಲ್ಲಿ

ಪಂಜ: ಕಲಾಮಂದಿರ್ ಡಾನ್ಸ್ ಕ್ರಿವ್ ಬೆಳ್ಳಾರೆ ‘ಪಂಜದಲ್ಲಿ ನೃತ್ಯ ತರಗತಿ ಪ್ರಾರಂಭ Read More »

ಕಡಬ: ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿದ ಯುವಕನ ರಕ್ಷಣೆ| ತುಂಬಿ ಹರಿಯುತ್ತಿದ್ದ ನದಿಯಿಂದ ಬಚಾವಾಗಿದ್ದು ಹೇಗೆ?

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರ ನದಿಯ ಮದ್ಯ ಭಾಗದ ಪೊದೆಯೊಂದರಲ್ಲಿ ಸಿಲುಕಿಕೊಂಡಿದ್ದು ಆಗ್ನಿ ಶಾಮಕ ದಳ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಜುಲೈ 8 ರ ಮುಂಜಾನೆ ನಡೆದಿದೆ. ನಿರಂತರ ಮಳೆಗೆ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು ಪುಳಿಕುಕ್ಕು ಸೇತುವೆ ಮತ್ತು ರೈಲು ಸೇತುವೆ ಮದ್ಯ ಭಾಗದಲ್ಲಿರುವ ಪೊದೆಯೊಂದರಲ್ಲಿ ಯುವಕನೋರ್ವ ಸಿಲುಕಿಕೊಂಡು ರಕ್ಷಣೆಗಾಗಿ ಕೂಗಾಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಾತ್ರಿಯಿಂದಲೇ ಕೂಗಾಡುವ ಧ್ವನಿ ಕೇಳುತ್ತಿತ್ತು ಎಂದು

ಕಡಬ: ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿದ ಯುವಕನ ರಕ್ಷಣೆ| ತುಂಬಿ ಹರಿಯುತ್ತಿದ್ದ ನದಿಯಿಂದ ಬಚಾವಾಗಿದ್ದು ಹೇಗೆ? Read More »

ಸುರತ್ಕಲ್: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| 16 ಜಾನುವಾರುಗಳ ರಕ್ಷಣೆ| ಗೋಮಾಂಸ, ವಾಹನ ವಶ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕೃಷ್ಣಾಪುರ 8ನೇ ಬ್ಲಾಕ್ ಬಳಿ ಮನೆಯಲ್ಲೇ ಭಾರಿ ಅಕ್ರಮ ಕಸಾಯಿಖಾನೆಯನ್ನು ನಡೆಸುತ್ತಿರುವುದು ಭಾನುವಾರ ಪತ್ತೆಯಾಗಿದೆ. ಸ್ಥಳದಲ್ಲಿದ್ದ 16 ಜಾನುವಾರುಗಳನ್ನು ರಕ್ಷಿಸಿರುವ ಪೊಲೀಸರು, ಗೋಮಾಂಸ ಹಾಗೂ ಅದರ ಸಾಗಣೆಗೆ ಬಳಸುತ್ತಿದ್ದ ಆಟೊರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ. ಸುಸಜ್ಜಿತ ಕಾಂಕ್ರಿಟ್ ಮನೆಯೊಂದರಲ್ಲಿ ಜಾನುವಾರುಗಳನ್ನು ಕಡಿದು ಮಾಂಸ ತಯಾರಿಸಿ ಸ್ಥಳೀಯ ಹೋಟೆಲ್‌ಗಳೂ ಸೇರಿದಂತೆ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರಮುಖರು ನೀಡಿದ ಮಾಹಿತಿ

ಸುರತ್ಕಲ್: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| 16 ಜಾನುವಾರುಗಳ ರಕ್ಷಣೆ| ಗೋಮಾಂಸ, ವಾಹನ ವಶ Read More »