ಕರಾವಳಿ

ಕಡಲನಗರಿಯಲ್ಲಿ ನವರಾತ್ರಿ ಸಡಗರ| ವಿವಿಧೆಡೆ ವಿಶೇಷ ಪೂಜೆ, ಪುನಸ್ಕಾರ ಸಂಭ್ರಮ

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಗುರುವಾರ ಆಯುಧ ಪೂಜೆ ಮತ್ತು ಶುಕ್ರವಾರ ವಿಜಯದಶಮಿ ಹಬ್ಬ ಆಚರಿಸಲಾಗುತ್ತಿದ್ದು, ಕಡಲನಗರಿ‌ ಸಂಭ್ರಮದಿಂದ ಅಣಿಯಾಗುತ್ತಿದೆ. ಬೆಲೆ ಏರಿಕೆ ನಡುವೆಯೂ ನಗರ ಮತ್ತು ಹೊರವಲಯದ ಮಾರುಕಟ್ಟೆಗಳಲ್ಲಿ ಪೂಜೆಗಾಗಿ ಹೂವು, ಹಣ್ಣು ಖರೀದಿ ಭರಾಟೆಯು ಬಿರುಸು ಪಡೆದಿತ್ತು. ಬಹುತೇಕ ಕಡೆ ರಸ್ತೆ ಬದಿಯಲ್ಲಿ ಉತ್ತರ ಕರ್ನಾಟಕದಿಂದ ಆಗಮಿಸಿದ ಹೂವಿನ ವ್ಯಾಪಾರಿಗಳು ಬುಧವಾರ ಭರ್ಜರಿ ವ್ಯಾಪಾರ ನಡೆಸಿದ್ದಾರೆ. ಮುಂಜಾನೆಯಿಂದಲೇ ಲಾರಿಗಳಲ್ಲಿ ಸೇವಂತಿಗೆ, ಮಲ್ಲಿಗೆ, ಗುಲಾಬಿ ಹೂಗಳು ಮತ್ತು ಲಿಂಬೆ ಹಣ್ಣು ತಂದು ಅಲ್ಲಲ್ಲಿ ರಾಶಿ ಹಾಕಿ […]

ಕಡಲನಗರಿಯಲ್ಲಿ ನವರಾತ್ರಿ ಸಡಗರ| ವಿವಿಧೆಡೆ ವಿಶೇಷ ಪೂಜೆ, ಪುನಸ್ಕಾರ ಸಂಭ್ರಮ Read More »

ಮಂಗಳೂರು: ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡ ಸಿಎಂ ‘ಭಾವನೆಗಳಿಗೆ ಧಕ್ಕೆ ಆದಾಗ ಆಕ್ಷನ್ ಅಂಡ್ ರಿಯಾಕ್ಷನ್ ಸಹಜ’

ಮಂಗಳೂರು: ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಕಂಡುಬರುತ್ತಿರುವ ನೈತಿಕ ಪೊಲೀಸ್ ಗಿರಿ ಬಹಳ ಸೂಕ್ಷ್ಮವಾಗಿರೋ ವಿಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿದ್ದಾವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ‌. ಕಾನೂನನ್ನು ಕಾಪಾಡುವ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ಎಂದ ಅವರು,ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಾಗುತ್ತದೆ.

ಮಂಗಳೂರು: ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡ ಸಿಎಂ ‘ಭಾವನೆಗಳಿಗೆ ಧಕ್ಕೆ ಆದಾಗ ಆಕ್ಷನ್ ಅಂಡ್ ರಿಯಾಕ್ಷನ್ ಸಹಜ’ Read More »

ಮಂಗಳೂರು: ಕಸ್ಟಮ್ಟ್ ಕಛೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು ಕಸ್ಟಮ್ಸ್ ಅಫೀಸಿನಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, SSLC(10th), ITI ಪಾಸ್ ಆದವರಿಗೆ ಹುದ್ದೆ ಖಾಲಿ ಇದೆ. ಖಾಲಿ ಇರುವ ಈ ಕೆಳಗಿನ 19 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.ಹುದ್ದೆಯ ಹೆಸರು: ಸೀಮನ್, ಗ್ರೀಸರ್, ಟ್ರೇಡ್ಸ್‌ಮನ್, ಸುಖಾನಿ, ಎಂಜಿನ್ ಡ್ರೈವರ್ ವೇತನ: Rs.18000/- ದಿಂದ 81100/-ಹುದ್ದೆಯ ಸ್ಥಳ: ಮಂಗಳೂರು ಕಸ್ಟಮ್ಸ್ ಕಚೇರಿ ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳ ಸಂಖ್ಯೆSeaman 7 (10th /SSLC)Greaser 3 (10th /SSLC)Tradesman 1 (10th /SSLC/ITI)Launch

ಮಂಗಳೂರು: ಕಸ್ಟಮ್ಟ್ ಕಛೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಅ.13 ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಸಿಎಂ ಭೇಟಿ ಹಿನ್ನೆಲೆ| ಕ್ಷೇತ್ರದಲ್ಲಿ ಬಿಗಿ ಬಂದೋಬಸ್ತ್, ಭಕ್ತರಿಗೆ ಪ್ರವೇಶ ನಿಷೇಧ

ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರು ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ ಹಿನ್ನೆಲೆಯಲ್ಲಿ ಅ. 13ರಂದು ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ಅ. 13ರಂದು ಸಂಜೆ 3 ಗಂಟೆಯಿಂದ 7 ಗಂಟೆಯವರೆಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ಭಕ್ತರು ಸಹಕರಿಸಲು ಕೋರಲಾಗಿದೆ. ಬೆಳಗ್ಗೆ 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಅವರು 11 ಗಂಟೆಗೆ ಉಡುಪಿಗೆ ತೆರಳಿ, ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ

ಅ.13 ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಸಿಎಂ ಭೇಟಿ ಹಿನ್ನೆಲೆ| ಕ್ಷೇತ್ರದಲ್ಲಿ ಬಿಗಿ ಬಂದೋಬಸ್ತ್, ಭಕ್ತರಿಗೆ ಪ್ರವೇಶ ನಿಷೇಧ Read More »

ಫೇಸ್ಬುಕ್ ನಲ್ಲಿ ಹಿಂದುತ್ವ ವಿರೋಧಿ ‌ಫೋಸ್ಟಿಂಗ್ ಆರೋಪ| ಉಪನ್ಯಾಸಕಿಯಿಂದ ಸ್ಪಷ್ಟನೆ

ಸುಳ್ಯ: ಪೇಸ್ಟುಕ್ ನಲ್ಲಿ ಹಿಂದುತ್ವ ವಿರೋಧಿ‌ ಹಾಗೂ‌ ಧರ್ಮನಿಂದನೆ ಕುರಿತಂತೆ ಫೋಸ್ಟಿಂಗ್ ಮಾಡಲಾಗಿದೆ ಎಂದು ಸುಳ್ಯದ ಪದವಿ ಕಾಲೇಜೊಂದರ ಉಪನ್ಯಾಸಕಿಯ ಮೇಲೆ ಆರೋಪ ವ್ಯಕ್ತವಾಗಿದ್ದು, ಈ ಕುರಿತಂತೆ ಉಪನ್ಯಾಸಕಿ ಪೂರ್ಣಿಮಾ ಮಳಲಿ ‘ಸಮಗ್ರ ಸಮಾಚಾರ’ ಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ‘ನಾನು ನಿನ್ನೆ ಪುರೋಹಿತರು ಸತ್ಯನಾರಾಯಣ ಪೂಜೆ , ವರ ಮಹಾಲಕ್ಷ್ಮಿ ಪೂಜೆ ಮಾಡಲು ಹೇಳಿ ಬಡವರನ್ನು ಸುಲಿಗೆ ಮಾಡುತ್ತಾರೆ . ಬಡವರು ಜೀವನ ಮಾಡುವುದೇ ಕಷ್ಟ ಎಂದು ಹೇಳಿದ್ದು.ಹಿಂದು ಧರ್ಮದಲ್ಲಿ

ಫೇಸ್ಬುಕ್ ನಲ್ಲಿ ಹಿಂದುತ್ವ ವಿರೋಧಿ ‌ಫೋಸ್ಟಿಂಗ್ ಆರೋಪ| ಉಪನ್ಯಾಸಕಿಯಿಂದ ಸ್ಪಷ್ಟನೆ Read More »

ಉಡುಪಿ: ಭೀಕರ ರಸ್ತೆ ಅಪಘಾತ – ಸವಾರ ಸ್ಥಳದಲ್ಲೇ ಸಾವು

ಉಡುಪಿ: ಉಪ್ಪೂರು ಉಡುಪಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಅ. 12ರ ಮಂಗಳವಾರ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗರಾಜು (40) ಎಂದು ಗುರುತಿಸಲಾಗಿದೆ. ಇವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಪರಿಣಾಮ ದ್ವಿಚಕ್ರ ವಾಹನ ಸವಾರ ರಸ್ತೆಗೆ ಉರುಳಿಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ರೈಸ್ ಮಿಲ್ ನಲ್ಲಿ ಕೆಲಸ ಮಾಡುತಿದ್ದ ನಾಗರಾಜು

ಉಡುಪಿ: ಭೀಕರ ರಸ್ತೆ ಅಪಘಾತ – ಸವಾರ ಸ್ಥಳದಲ್ಲೇ ಸಾವು Read More »

ಪುತ್ತೂರು: ‘ಹಿಟ್ ಅ್ಯಂಡ್ ರನ್’|ಸ್ಕೂಟಿ ಸವಾರ ದುರ್ಮರಣ

ಪುತ್ತೂರು: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ಸವಾರ ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ಅ.12 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ. ನಿಡ್ಪಳ್ಳಿ ಗ್ರಾಮದ ವಾಲ್ತಾಜೆ‌ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ ದುರ್ದೈವಿ. ಅ.12ರ ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು ತರುತ್ತಿದ್ದವೇಳೆ ಮಿತ್ತೂರು ಮಸೀದಿ ಸಮೀಪದದ ಹೆದ್ದಾರಿಯಲ್ಲಿ

ಪುತ್ತೂರು: ‘ಹಿಟ್ ಅ್ಯಂಡ್ ರನ್’|ಸ್ಕೂಟಿ ಸವಾರ ದುರ್ಮರಣ Read More »

ಉಪ್ಪಿನಂಗಡಿ: ಭೀಕರ ರಸ್ತೆ ದುರಂತ| ಸಾರಿಗೆ ಬಸ್‌ ಹರಿದು ತಾಯಿ‌- ಮಗು ಸಾವು|

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ತಾಯಿ ಮಗು ಮೇಲೆ ಕೆಎಸ್ ಆರ್ ಟಿ ಸಿ ಬಸ್ಸು ಹರಿದ ಪರಿಣಾಮ ಅವರಿಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಶಿರ್ಲಾಲು ನಿವಾಸಿಗಳಾದ ಶಾಹಿದಾ (25), ಮತ್ತು ಅವರ ಪುತ್ರ ಶಾಹೀನ್ (1) ಮೃತಪಟ್ಟವರು. ಬಸ್ಸುಗಳ ನಡುವಿನ ಪೈಪೋಟಿಯೇ ಈ ಘಟನೆಗೆ ಕಾರಣವೆಂದು ಸಾರ್ವಜನಿಕರು ಪ್ರತಿಭಟಿಸಿದ್ದು, ಬಸ್ಸು ನಿಲ್ದಾಣದ ಒಳಗೆ ಯಾವ ಬಸ್ಸುಗಳೂ ಪ್ರವೇಶಿಸದಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು

ಉಪ್ಪಿನಂಗಡಿ: ಭೀಕರ ರಸ್ತೆ ದುರಂತ| ಸಾರಿಗೆ ಬಸ್‌ ಹರಿದು ತಾಯಿ‌- ಮಗು ಸಾವು| Read More »

ಕುಕ್ಕೆ ದೇಗುಲದಲ್ಲಿ ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ಸೇವೆಗೆ ಅವಕಾಶ|

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಮತ್ತು ಸೇವೆಗಳನ್ನು ನೆರವೇರಿಸಲು ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ. 2 ಡೋಸ್‌ ಲಸಿಕೆ ಪಡೆದ ಮತ್ತು 72 ಗಂಟೆ ಮುಂಚಿತವಾಗಿ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹೊಂದಿದ್ದರೆ ಮಾತ್ರ ಸೇವೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಸೇವೆ ಮತ್ತು ದರ್ಶನ ಸಂದರ್ಭ ಕಡ್ಡಾಯವಾಗಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಲ್ಲಲ್ಲಿ ಭದ್ರತಾ ಸಿಬಂದಿ ನಿಯೋಜಿಸಲಾಗಿದೆ ಮಾತ್ರವಲ್ಲದೇ ಈ ಸಿಬಂದಿ ಭಕ್ತರಿಗೆ ಕೋವಿಡ್‌ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. 100

ಕುಕ್ಕೆ ದೇಗುಲದಲ್ಲಿ ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ಸೇವೆಗೆ ಅವಕಾಶ| Read More »

ಕಳಚಿದ ಯಕ್ಷರಂಗದ ಕೊಂಡಿ| ಪ್ರಸಿದ್ದ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ

ಸುಳ್ಯ: ಯಕ್ಷರಂಗದ ಮೇರು ಪ್ರತಿಭೆ, ಕಂಚಿನ ಕಂಠದ ಭಾಗವತ ಪದ್ಯಾಣ ಗಣಪತಿ ಭಟ್ ಇಂದು(ಅ.11) ಬೆಳಿಗ್ಗೆ ನಿಧನರಾಗಿದ್ದಾರೆ.ತೆಂಕು ತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ತನ್ನ ಕಂಠದಿಂದ ಪ್ರಸಿದ್ಧಿಯನ್ನು ಹೊಂದಿದ ಪದ್ಯಾಣ ಗಣಪತಿ ಭಟ್ ರವರು ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಪದ್ಯಾಣದವರು. ಹಲವು ದಶಕಗಳಿಂದ ಹಲವು ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಕಲಾ ಸೇವೆ ಮಾಡಿದ್ದಾರೆ. ಪದ್ಯಾಣ’ ಪದವೇ ಸಂಗೀತ ಶೋತೃಗಳಲ್ಲಿ ಸಂಚಲನೆಯನ್ನುಂಟು ಮಾಡುವಂಥದ್ದು, ಪದ್ಯಾಣ ಕುಟುಂಬ ದಲ್ಲಿ ಜನಿಸಿದವರೆಲ್ಲರೂ ಸಂಗೀತ ಅಥವಾ ಯಕ್ಷಗಾನ ಕಲಾವಿದರೆಂಬುದು ವಾಸ್ತವ ಸಂಗತಿ.

ಕಳಚಿದ ಯಕ್ಷರಂಗದ ಕೊಂಡಿ| ಪ್ರಸಿದ್ದ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ Read More »