ಸುಳ್ಯ: ಅಂದು ಬಿಕಿನಿಯೊಂದಿಗೆ ಚೆಲ್ಲಾಟ| ಇಂದು ಹಂದಿ ಫಾರ್ಮ್ ನಿಂದ ತೊಳಲಾಟ| ತೊಡಿಕಾನ ಮಲ್ಲಿಕಾರ್ಜುನನ ಪವಿತ್ರತೆಗೆ ಸ್ಥಳೀಯರಿಂದಲೇ ಧಕ್ಕೆ| ಏನಿದು ಸ್ಟೋರಿ, ಇಲ್ಲಿದೆ ಸಂಪೂರ್ಣ ಸುದ್ದಿ..
ಪುತ್ತೂರು : ಇತಿಹಾಸ ಪ್ರಸಿದ್ಧ ಹಾಗೂ ಪುರಾತನ ಕ್ಷೇತ್ರವೊಂದಕ್ಕೆ ಹಂದಿ ಫಾರ್ಮ್ ಒಂದರಿಂದ ಅಪಚಾರವಾಗುತ್ತಿದೆ. ದೇವಸ್ಥಾನಕ್ಕೆ ಸಂಬಂಧಪಟ್ಟ ಗುಡಿಗೆ ಪಕ್ಕದಲ್ಲೇ ಈ ಹಂದಿ ಫಾರ್ಮ್ ಕಾರ್ಯಾಚರಿಸುತ್ತಿದ್ದು, ಇದರಿಂದಾಗಿ ದೇವಸ್ಥಾನದ ಪಾವಿತ್ಯಕ್ಕೆ ಧಕ್ಕೆಯಾಗುತ್ತಿದೆ ಎನ್ನುವ ಆರೋಪ ಕೇಳಿ ಬರಲಾರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ಹೊಸತೋಟ ಎಂಬಲ್ಲಿನ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಸ್ಥಳೀಯ ವ್ಯಕ್ತಿಯೋರ್ವರು ಹಂದಿಯ ಫಾರ್ಮ್ ಆರಂಭಿಸಿದ್ದು, ಈ ಫಾರ್ಮ್ ಆರಂಭಕ್ಕೆ ಮೊದಲೇ ಸ್ಥಳೀಯರು ಆಕ್ಷೇಪ ಸಲ್ಲಿಸಿದ್ದಾರೆ. ಈ ಸಂಬಂಧ









