ಕರಾವಳಿ

ಸುಳ್ಯ| ಮಸೀದಿಯೊಳಗೆ ಇತ್ತಂಡಗಳಿಂದ ಹೊಡೆದಾಟ| ಮೂರು ಮಂದಿ ಆಸ್ಪತ್ರೆಗೆ ದಾಖಲು

ಸುಳ್ಯ : ಬೆಳ್ಳಾರೆಯ ಮಸೀದಿಯೊಂದರಲ್ಲಿ ಎರಡು ತಂಡಗಳು ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾದ ಘಟನೆ ‌ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ . ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿರುವುದಾಗಿ ಹೇಳಲಾಗಿದ್ದು, ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟ ನಡೆಸಿಕೊಂಡಿರುವುದಾಗಿ ಹೇಳಲಾಗಿದೆ. ಆಸಿರ್, ಹಾರಿಸ್, ಹಮೀದ್, ಮುನೀರ್, ಹೈದರಾಲಿ ಮತ್ತು ಮಹಮ್ಮದ್ ಅಜರುದ್ದೀನ್, ಜಮಾಲುದ್ದೀನ್ ಕೆ.ಎಸ್., ಅಬ್ದುಲ್ ಜಮಾಲ್ ನಡುವೆ […]

ಸುಳ್ಯ| ಮಸೀದಿಯೊಳಗೆ ಇತ್ತಂಡಗಳಿಂದ ಹೊಡೆದಾಟ| ಮೂರು ಮಂದಿ ಆಸ್ಪತ್ರೆಗೆ ದಾಖಲು Read More »

ಕೊಲೆಯಾಗಿ‌ ಬದಲಾದ ಆತ್ಮಹತ್ಯೆ |ಗಂಡನ ಪ್ರಾಣಕ್ಕೇ ಕೊಳ್ಳಿ ಇಟ್ಟ ಪತ್ನಿ|ಅಪ್ರಾಪ್ತ ವಯಸ್ಕರಿಬ್ಬರ ಬಂಧನ

ಕುಂದಾಪುರ: ಇಲ್ಲಿನ ಅಂಪಾರು ಗ್ರಾಮದಲ್ಲಿ ಅ.19ರಂದು ಬೆಳಕಿಗೆ ಬಂದ ಆತ್ಮಹತ್ಯೆ ಪ್ರಕರಣವು ಇದೀಗ ಕೊಲೆ ಎಂದು ತನಿಖೆಯಲ್ಲಿ ನಿಜಾಂಶ ಬಯಲಾಗಿದೆ. ಮೃತನ ಪತ್ನಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರಾಗಿರುವ ಕಾರಣ ಇವರನ್ನು ರಿಮಾಂಡ್ ಹೋಂಗೆ ಕಳುಹಿಸಲಾಗಿದೆ. ಅಂಪಾರು ಗ್ರಾಮದ ವಿವೇಕ್ ನಗರ, ಮೋಡುಬಗೆ ನಿವಾಸಿ ನಾಗರಾಜ್ (36) ಕೊಲೆಯಾದವರು. ನಾಗರಾಜ್ ಪತ್ನಿಯಾಗಿದ್ದ ಆರೋಪಿ ಮಮತಾ (34) ಮತ್ತು ಆಕೆಯ ಪರಿಚಯಸ್ಥರು, ಕುಮಾರ್ ಮತ್ತು ದಿನಕರ್ ಅವರನ್ನು ಬಂಧಿಸಲಾಗಿದೆ. ಕೊಲೆಯಲ್ಲಿ ಭಾಗಿಯಾಗಿರುವ ಇಬ್ಬರು ಅಪ್ರಾಪ್ತರನ್ನು

ಕೊಲೆಯಾಗಿ‌ ಬದಲಾದ ಆತ್ಮಹತ್ಯೆ |ಗಂಡನ ಪ್ರಾಣಕ್ಕೇ ಕೊಳ್ಳಿ ಇಟ್ಟ ಪತ್ನಿ|ಅಪ್ರಾಪ್ತ ವಯಸ್ಕರಿಬ್ಬರ ಬಂಧನ Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಲಾಂಛನ ಅನಾವರಣ|

ಸುಳ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಡಳಿತ ಮಂಡಳಿಯು ನೂತನ ಲಾಂಛನವನ್ನು ಸಿದ್ಧಗೊಳಿಸಿದೆ. ರಜತ ವರ್ಣದ ಏಳು ಹೆಡೆಯ ನಾಗರಾಜ ಮತ್ತು ಷಣ್ಮುಖನನ್ನು ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೋಲುವ ಏಳು ಹೆಡೆ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ರಜತ ವರ್ಣದ ಚಿತ್ರವು ಲಾಂಛನದ ಮದ್ಯ ಭಾಗವನ್ನು ಅಲಂಕರಿಸಿದೆ. ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್ ಆಚಾರ್ಯ ಪುತ್ತೂರುರವರು ತಮ್ಮ ಕೈಚಳಕದಿಂಡ ಲಾಂಛನವನ್ನು ಬಿಡಿಸಿದ್ದು, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ದ.ಕ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಲಾಂಛನ ಅನಾವರಣ| Read More »

ಅಕ್ಷರ ಸಂತನಿಗೆ ಕೊನೆಗೂ ಒಲಿದ ಪದ್ಮಶ್ರೀ| ನ.8ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ|

ಮಂಗಳೂರು: ಅಕ್ಷರಸಂತ ಎಂದೇ ಖ್ಯಾತಿಯಾಗಿರುವ ಹರೇಕಳ ಹಾಜಬ್ಬರಿಗೆ ಕೊನೆಗೂ ಪದ್ಮಶ್ರೀ ಗೌರವ ಲಭಿಸಿದೆ. ನವೆಂಬರ್ 8ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಹಾಜಬ್ಬರಿಗೆ ಅಧಿಕೃತ ಆಹ್ವಾನ ಬಂದಿದೆ. ಹರೇಕಳ ಹಾಜಬ್ಬರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ 2020ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿತ್ತು. ಮಾರ್ಚ್ ತಿಂಗಳಿನಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಬೇಕಾಗಿತ್ತು. ಆದರೆ ಕೊರೊನಾ

ಅಕ್ಷರ ಸಂತನಿಗೆ ಕೊನೆಗೂ ಒಲಿದ ಪದ್ಮಶ್ರೀ| ನ.8ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ| Read More »

ಮತ್ತೆ‌ ಬಂತು ತುಳುನಾಡ ಹೆಮ್ಮೆಯ ಕಂಬಳ| ಯಾವೂರಲ್ಲಿ ಯಾವಾಗ ಗೊತ್ತಾ?

ಮಂಗಳೂರು: ತುಳುನಾಡಿನ ಸಾಂಪ್ರದಾಯಿಕ ಹೆಮ್ಮೆಯ ಕ್ರೀಡೆ ಕಂಬಳ ನಡೆಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸಿದ್ಧತೆ ನಡೆದಿದ್ದು, ಜಿಲ್ಲಾ ಕಂಬಳ ಸಮಿತಿಯು 2021-22ನೇ ಸಾಲಿನ ಕಂಬಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ನ.27ರಿಂದ ಮಾರ್ಚ್ 26ರ ವರೆಗೆ ಒಟ್ಟು 17 ಕಂಬಳ ಕೂಟಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ವೇಳಾಪಟ್ಟಿ ಪ್ರಕಟಗೊಂಡಿದ್ದರೂ, ಕೆಲವು ಕಂಬಳಗಳ ದಿನಾಂಕಗಳು ಬದಲಾಗುವ ಸಾಧ್ಯತೆಗಳಿವೆ ಎಂದು ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ. ಕಂಬಳ ವೇಳಾಪಟ್ಟಿ:ನ.27 ಮೂಡುಬಿದಿರೆ, ಡಿ.11 ಹೊಕ್ಕಾಡಿ, ಡಿ.18 ಮಂಗಳೂರು, ಡಿ.26 ಮೂಲ್ಕಿ, ಜ.1

ಮತ್ತೆ‌ ಬಂತು ತುಳುನಾಡ ಹೆಮ್ಮೆಯ ಕಂಬಳ| ಯಾವೂರಲ್ಲಿ ಯಾವಾಗ ಗೊತ್ತಾ? Read More »

ಸುಳ್ಯ: ಚಲಿಸುತ್ತಿರುವಾಗ ಹೊತ್ತಿ‌ ಉರಿದ‌ ಕಾರು| ಚಾಲಕ ಅಪಾಯದಿಂದ ಪಾರು|

ಸುಳ್ಯ: ಇಲ್ಲಿನ ಅಜ್ಜಾವರ ಗ್ರಾಮದ ಮಾವಿನಪಳ್ಳ ಎಂಬಲ್ಲಿ ವ್ಯಾಗನರ್ ಕಾರೊಂದು ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ಭುವನ್ ಅತ್ಯಾಡಿ ಎಂಬವರು ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಕಾರಿನೊಳಗೆ ಬೆಂಕಿ ಅವಘಡ ಸಂಭವಿಸಿರುವುದಾಗಿ ತಿಳಿದುಬಂದಿದೆ. ಭುವನ್ ರವರು ರಾತ್ರಿ ತನ್ನ ಮನೆಯಿಂದ ಮಾವಿನಪಳ್ಳ ರಸ್ತೆಯಲ್ಲಿ ಬರುತ್ತಿದ್ದಾಗ ಕಾರಿನ ಬೋನೆಟ್ ನಿಂದ ಹೊಗೆ ಬರಲಾರಂಭಿಸಿತು. ಇದನ್ನು ಗಮನಿಸಿದ ಭುವನ್ ಕಾರನ್ನು ಬದಿಗೆ ನಿಲ್ಲಿಸಿದರು. ಆ ವೇಳೆಗೆ ಕಾರ್ ಏಕಾಏಕಿ ಲಾಕ್ ಆಯಿತು. ಎದುರು ಬೆಂಕಿ ಹೊತ್ತಿಕೊಂಡಿತು. ಭುವನ್

ಸುಳ್ಯ: ಚಲಿಸುತ್ತಿರುವಾಗ ಹೊತ್ತಿ‌ ಉರಿದ‌ ಕಾರು| ಚಾಲಕ ಅಪಾಯದಿಂದ ಪಾರು| Read More »

ಅಕ್ರಮ ಮರಳುಗಾರಿಕೆ ತಪಾಸಣೆ| ಪೊಲೀಸರ ಮೇಲೆಯೇ ಲಾರಿ ಹತ್ತಿಸಲು ಯತ್ನ| ಆರೋಪಿಗಳು ಅರೆಸ್ಟ್

ಮಂಗಳೂರು: ಅಕ್ರಮ ಮರಳುಗಾರಿಕೆಯ ತಪಾಸಣೆಯ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಲಾರಿ ಹತ್ತಿಸಲು ಯತ್ನಿಸಿದ್ದಾರೆ ಎನ್ನಲಾದ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್, ಆಲ್ಟೋ ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ಎರಡು ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ವಿವರ: ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಬಂದ ಮಾಹಿತಿಯ ಮೇರೆಗೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ನಸುಕಿನ ಜಾವ ಅಡ್ಯಾರ್

ಅಕ್ರಮ ಮರಳುಗಾರಿಕೆ ತಪಾಸಣೆ| ಪೊಲೀಸರ ಮೇಲೆಯೇ ಲಾರಿ ಹತ್ತಿಸಲು ಯತ್ನ| ಆರೋಪಿಗಳು ಅರೆಸ್ಟ್ Read More »

ಪಿಲಿಕುಳದ ಮದ್ಯಪ್ರೇಮಿ ಲಂಗೂರ್ ಸಾವು| ಇದರ ಹಿಂದಿದೆ ರೋಚಕ ಕಹಾನಿ..!

ಮಂಗಳೂರು: ಒಂದು ಕಾಲದಲ್ಲಿ ಮದ್ಯವ್ಯಸನಿಯಾಗಿದ್ದ 21 ವರ್ಷದ ಲಂಗೂರ್​​ ಮಂಗಳೂರಿನ ಪಿಲಿಕುಳ ನೈಸರ್ಗಿಕ ಧಾಮದಲ್ಲಿ ಸಾವನ್ನಪ್ಪಿದೆ. ಮಂಗಳೂರಿನ ಈ ಪಾರ್ಕ್​ಗೆ ಕರೆತರಲಾಗಿದ್ದ ಮೊದಲ ಲಂಗೂರ್ ಇದಾಗಿತ್ತು. ರಾಜು ಎಂಬ ಈ ಲಂಗೂರ್ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಕಿಡ್ನಿ ಹಾಗೂ ಲಿವರ್​​ ಸಂಬಂಧಿ ಸಮಸ್ಯೆಯಿಂದ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಪಡುಬಿದ್ರಿಯ ಬಾರ್​​ ಒಂದರ ಸಮೀಪ ಅನಾರೋಗ್ಯದಿಂದ ಬಳಲುತ್ತಿದ್ದ ಈ ಲಂಗೂರ್ ನ್ನು 2005ರಲ್ಲಿ ರಕ್ಷಿಸಲಾಗಿತ್ತು. ಬಾರ್ ಸಮೀಪವೇ ಈ ಲಂಗೂರ್ ಇರುತ್ತಿದ್ದರಿಂದ ಇದಕ್ಕೆ ಮದ್ಯಪಾನಿಗಳು ಮದ್ಯವನ್ನು ನೀಡುತ್ತಿದ್ದರು. ಇದಾದ

ಪಿಲಿಕುಳದ ಮದ್ಯಪ್ರೇಮಿ ಲಂಗೂರ್ ಸಾವು| ಇದರ ಹಿಂದಿದೆ ರೋಚಕ ಕಹಾನಿ..! Read More »

ಉಳ್ಳಾಲ: ಯುವಕನಿಗೆ ಚೂರಿ ಇರಿತ – ಆರೋಪಿ ಪರಾರಿ, ಪೊಲೀಸರಿಂದ ಶೋಧ

ಮಂಗಳೂರು: ಉಳ್ಳಾಲದ ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಗಾಯಗೊಂಡವರನ್ನು ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಹರೀಶ್ ಎಂದು ಗುರುತಿಸಲಾಗಿದೆ. ಉಳ್ಳಾಲ ಪೊಲೀಸರು ಗಾಯಾಳುಗಳನ್ನು ತೊಕ್ಕೊಟ್ಟುವಿನಲ್ಲಿರುವ ಆಸ್ಪತ್ರೆಗೆ ಸೇರಿಸಿದ್ದಾರೆ. ಮೊಗವೀರಪಟ್ನ ನಿವಾಸಿಯೊಬ್ಬ ವಿಶಾಲ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ವೈಯಕ್ತಿಕ ದ್ವೇಷದಿಂದ ನಡೆದಿರುವ ಕೃತ್ಯ ಎಂದು ಶಂಕಿಸಲಾಗಿದ್ದು, ಸದ್ಯ ವಿಶಾಲ್ ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಉಳ್ಳಾಲ: ಯುವಕನಿಗೆ ಚೂರಿ ಇರಿತ – ಆರೋಪಿ ಪರಾರಿ, ಪೊಲೀಸರಿಂದ ಶೋಧ Read More »

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ವರ ಮೃತದೇಹ ಪತ್ತೆಯಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ. ಮೃತ ಮಹಿಳೆಯ ಪ್ರಾಯ ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದ್ದು,ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಜಂಬೂರಾಜ್ ಮಹಾಜನ್, ಎ. ಎಸ್.ಐ ಮೋಹನ್. ಕೆ,ಮಹಾಲಕ್ಷ್ಮಿ, ಮಹೇಶ್ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »