ಕರಾವಳಿ

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಮ್ಲಜನಕ ಮಟ್ಟ ತಪಾಸಣೆ ಸ್ಥಗಿತ

ಮಂಗಳೂರು: ಅಂತರಾಷ್ಟ್ರೀಯ ಆಗಮನಕ್ಕಾಗಿ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕೆಮ್ಮು ಜ್ವರ ಶೀತ ಉಸಿರಾಟ ತೊಂದರೆ ಹೊರತುಪಡಿಸಿ ಆಮ್ಲಜನಕದ ಮಟ್ಟ ತಪಾಸಣೆಯನ್ನು ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಸೂಚಿಸಿರುವ ಆಯ್ದು ದೇಶಗಳಿಂದ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರನ್ನು ಹೊರತುಪಡಿಸಿ ಉಳಿದ ಪ್ರಯಾಣಿಕರ ಸಿಪಿಸಿಆರ್ ಪರೀಕ್ಷಾ ವರದಿ ಪರಿಸಿ ಪರಿಶೀಲನೆ ಸ್ಥಗಿತಗೊಳಿಸಲಾಗಿದೆ. ಇದರ ಬದಲಾಗಿ ಪ್ರಯಾಣಿಕರು ಏರ್ ಸುವಿಧ ಪೋರ್ಟಲ್ ನಲ್ಲಿ ಆರ್ ಟಿಸಿಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕಾಗಿದೆ. ಈ ಪರೀಕ್ಷಾ ವರದಿಯನ್ನು ಸಂಬಂಧಿತ ಏರ್ ಲೈನ್’ನ ಪ್ರಯಾಣಿಕರು […]

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಮ್ಲಜನಕ ಮಟ್ಟ ತಪಾಸಣೆ ಸ್ಥಗಿತ Read More »

ಹಸುಗೂಸು ಅದಲು ಬದಲು ಪ್ರಕರಣ|ಡಿಎನ್ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ

ಮಂಗಳೂರು: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹಸುಗೂಸನ್ನು ಅದಲು ಬದಲಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯ ಮಗು, ತಂದೆ ಹಾಗೂ ತಾಯಿಯ ಡಿಎನ್‌ಎ ಪರೀಕ್ಷೆಗೆ ಅನುಮತಿ ನೀಡಿದೆ. ತಮ್ಮ ಮಗು ಲೇಡಿಗೋಷನ್ ಆಸ್ಪತ್ರೆಯಲ್ಲಿ ಅದಲು ಬದಲಾಗಿದೆ ಎಂದು ಆರೋಪಿಸಿ ಕುಂದಾಪುರ ನಿವಾಸಿ ಮುಸ್ತಫಾ ಎಂಬುವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ನ್ಯಾಯಾಲಯ ನೀಡಿರುವ ಆದೇಶದನ್ವಯ ಅ.19ರಂದು ಮಗು ಹಾಗೂ ಪೋಷಕರ ಡಿಎಎನ್ ಪರೀಕ್ಷೆ ನಡೆಯಲಿದೆ. ಬಳಿಕ ಇದರ ಸ್ಯಾಂಪಲ್‌ ಅನ್ನು ಹೈದರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ

ಹಸುಗೂಸು ಅದಲು ಬದಲು ಪ್ರಕರಣ|ಡಿಎನ್ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ Read More »

ಪುತ್ತೂರು: ಹೊಸಬಟ್ಟೆ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ| ಕಾರಣ ನಿಗೂಢ

ಮಂಗಳೂರು: ಕೃಷಿಕ ದಂಪತಿಗಳು ಹೊಸ ಬಟ್ಟೆ ಧರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ಘಟನೆ ನಡೆದಿದೆ. ಪಾದೆಕರ್ಯದ ನಿವಾಸಿಗಳಾದ ಕೃಷಿಕ ಸುಬ್ರಹ್ಮಣ್ಯ ಭಟ್ (65) ಮತ್ತು ಶಾರಾದ (50) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು. ಇವರಿಬ್ಬರು ರಾತ್ರಿ ತಮ್ಮ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಮಕ್ಕಳು ಬಾಗಿಲು ತೆಗೆದು ನೋಡಿದಾಗ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವರು ಹೊಸ ಬಟ್ಟೆ ಧರಿಸಿಕೊಂಡು ಆತ್ಮಹತ್ಯೆ

ಪುತ್ತೂರು: ಹೊಸಬಟ್ಟೆ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ| ಕಾರಣ ನಿಗೂಢ Read More »

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ

ಸುಳ್ಯ : ಅಡ್ಕಾರ್ ಮಾವಿನ ಕಟ್ಟೆಯಲ್ಲಿ ಕಾರು ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಭವಿಸಿದೆ. ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಹಾಗೂ ವೇಗವಾಗಿ ಬಂದ ಹಿನ್ನೆಲೆ ಚಾಲಕ ನಿಯಂತ್ರಣ ಕಳೆದು ಕೊಂಡಿದ್ದಾನೆ, ಬಳಿಕ ಕಾರು ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.ಇದೇ ವೇಳೆ ಕಾರಿನಲ್ಲಿ ಇದ್ದ ಮೂವರು ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಮೈಸೂರಿನ ಶ್ರೇಯಸ್ಸ್, ಭುವನ್ ಹಾಗೂ ಸರ್ವೇಶ್ ಎಂದು ಗುರುತಿಸಲಾಗಿದೆ, ಅವರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ Read More »

ಮಂಗಳೂರು: ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಕೊಲೆ ಪ್ರಕರಣ – ನಾಲ್ವರು ಪೊಲೀಸ್ ವಶಕ್ಕೆ

ಮಂಗಳೂರು: ನಗರದ ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಪಾರ್ಟಿ ನೆಪದಲ್ಲಿ ಯುವಕನೊಬ್ಬನ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ನಿವಾಸಿ ಜೇಸನ್ (25) ವಶಕ್ಕೆ ಪಡೆದ ಆರೋಪಿ. ಅ.15 ರಂದು ರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್,ಪ್ರಜ್ವಲ್ ಎಂಬವರು ತೆರಳಿದ್ದರು. ಸರಿಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಎಂಬುವರ ಮಧ್ಯೆ

ಮಂಗಳೂರು: ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಕೊಲೆ ಪ್ರಕರಣ – ನಾಲ್ವರು ಪೊಲೀಸ್ ವಶಕ್ಕೆ Read More »

ದ.ಕ ದಲ್ಲಿ‌ ಕೊರೊನಾ ಮಾರ್ಗಸೂಚಿ ಕಟ್ಟುನಿಟ್ಟು| ಎರಡು ಡೋಸ್ ಲಸಿಕೆ ಹಾಕಿಸದವರಿಗೆ‌ ಮಾಲ್, ಚಿತ್ರಮಂದಿರಕ್ಕೆ ನಿರ್ಬಂಧ

ಮಂಗಳೂರು: ಮಂಗಳೂರಿನಲ್ಲಿ ಮಾಲ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳ ಒಳಗೆ ಪ್ರವೇಶಿಸಲು ಕೊರೋನಾ ಲಸಿಕೆಯ ಎರಡು ಡೋಸ್‌ ಹಾಕಿಕೊಳ್ಳುವುದು ಕಡ್ಡಾಯ ಎಂದು ದಕ್ಷಿಣ ಕನ್ನಡ ಡಿಸಿ ಡಾ.ರಾಜೇಂದ್ರ ಕೆವಿ ಹೇಳಿದ್ದಾರೆ. ಕೋವಿಡ್ ಪಾಸಿಟಿವಿಟಿ ದರ ಶೇಕಡ 0.46ಕ್ಕೆ ಇಳಿದಿರುವುದರಿಂದ ಅಕ್ಟೋಬರ್ 14ರಿಂದ ಥಿಯೇಟರ್‌ಗಳು, ಮಲ್ಟಿಪ್ಲೆಕ್ಸ್‌ಗಳು, ಆಡಿಟೋರಿಯಂಗಳು 100 ಪ್ರತಿಶತ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ. ಆದ್ದರಿಂದ, ಈ ಸ್ಥಳಗಳಿಗೆ ಭೇಟಿ ನೀಡುವ ಎಲ್ಲ ಜನರು ಎರಡು ಡೋಸ್ ಲಸಿಕೆಗಳನ್ನು ತೆಗೆದುಕೊಳ್ಳಬೇಕು. ಆದರೆ ವಯಸ್ಸಾದವರು ಮತ್ತು

ದ.ಕ ದಲ್ಲಿ‌ ಕೊರೊನಾ ಮಾರ್ಗಸೂಚಿ ಕಟ್ಟುನಿಟ್ಟು| ಎರಡು ಡೋಸ್ ಲಸಿಕೆ ಹಾಕಿಸದವರಿಗೆ‌ ಮಾಲ್, ಚಿತ್ರಮಂದಿರಕ್ಕೆ ನಿರ್ಬಂಧ Read More »

ಖಾಝಿ ನೇಮಕ ವಿಚಾರ| ಮಸೀದಿಯೊಳಗೇ ಹೊಡೆದಾಟ‌ ನಡೆಸಿದ ಮುಖಂಡರು|

ಪುತ್ತೂರು: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ.‌ ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ

ಖಾಝಿ ನೇಮಕ ವಿಚಾರ| ಮಸೀದಿಯೊಳಗೇ ಹೊಡೆದಾಟ‌ ನಡೆಸಿದ ಮುಖಂಡರು| Read More »

ಸುಬ್ರಹ್ಮಣ್ಯ: ಬೈಕಿನ ಮೇಲೆ ಕಡವೆ ಹಾರಿ ಸವಾರ ಸಾವು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕಿನ ಮೇಲೆ ಕಡವೆ ಹಾರಿದ ಪರಿಣಾಮವಾಗಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಕಛೇರಿ ಸಿಬ್ಬಂದಿ ರಾಮಚಂದ್ರ ಅರ್ಬಿತ್ತಾಯ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ಇಂದು ಮುಂಜಾನೆ ಸುಮಾರು 5.45ರ ಹೊತ್ತಿಗೆ ರಾಮಚಂದ್ರ ಅರ್ಬಿತ್ತಾಯರು ತಮ್ಮ ಸಹೋದರ ರವಿ ಅರ್ಬಿತ್ತಾಯರೊಂದಿಗೆ ಕುಲ್ಕುಂದಕ್ಕೆ ಶಟಲ್ ಬ್ಯಾಡ್ಮಿಂಟನ್ ಆಟ ಆಡಲು ತೆರಳುತ್ತಿರುವ ಸಂದರ್ಭ ಕುಲ್ಕುಂದದ ಬ್ರಾಮರಿ‌ ನೆಸ್ಟ್ ವಸತಿಗೃಹದ ಬಳಿ ಅವರು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಪಕ್ಕದ ಗುಡ್ಡದಿಂದ ಕಡವೆ

ಸುಬ್ರಹ್ಮಣ್ಯ: ಬೈಕಿನ ಮೇಲೆ ಕಡವೆ ಹಾರಿ ಸವಾರ ಸಾವು Read More »

ದಸರಾ ಪಾರ್ಟಿಯಲ್ಲಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯ

ಮಂಗಳೂರು: ಇಲ್ಲಿನ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಧನುಷ್ (20 ವರ್ಷ) ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಘಟನೆಯ ವಿವರ: ಅ.15ರಂದು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್ & ಪ್ರಜ್ವಲ್ ಎಂಬವರು ತೆರಳಿದ್ದಾರೆ. ಸಮಯ ಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್

ದಸರಾ ಪಾರ್ಟಿಯಲ್ಲಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯ Read More »

ಆಯುಧ ಪೂಜೆ ದಿನ ವಿಎಚ್ ಪಿ ಯಿಂದ ತ್ರಿಶೂಲ ದೀಕ್ಷೆ| ಚರ್ಚೆಗೆ ಗ್ರಾಸವಾದ ಪರಿವಾರದ ನಡೆ| ಸ್ಪಷ್ಟನೆ ನೀಡಿದ ಶರಣ್

ಮಂಗಳೂರು: ಆಯುಧ ಪೂಜೆ ದಿನವಾದ ನಿನ್ನೆ ತ್ರಿಶೂಲ ದೀಕ್ಷೆ ಹೆಸರಲ್ಲಿ ಹಿಂದೂ ಕಾರ್ಯಕರ್ತರಿಗೆ ಬಜರಂಗದಳದವರು ಶಸ್ತ್ರ ಹಂಚಿದ ಘಟನೆ ನಡೆದಿದ್ದು, ಕಾರ್ಯಕ್ರಮದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರಸ್ಪರ ಆರೋಪ ಪ್ರತ್ಯಾರೋಪಗಳು ನಡೆದಿದೆ. ಮಂಗಳೂರು ನಗರದ ಕದ್ರಿ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ನಡೆದ ತ್ರಿಶೂಲ ದೀಕ್ಷೆ ಕಾರ್ಯಕ್ರಮದಲ್ಲಿ ಹಿಂದೂ ಕಾರ್ಯಕರ್ತರಿಗೆ ಚೂರಿ ಮಾದರಿಯ ತ್ರಿಶೂಲದಂಥ ಶಸ್ತ್ರವನ್ನು ಹಂಚಿಕೆ ಮಾಡಲಾಗಿದೆ. ಮಂಗಳೂರಿನ ಕದ್ರಿಯ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ವಿಎಚ್‌ಪಿ ವಿಭಾಗದ ಕಾರ್ಯದರ್ಶಿ ಶರಣ್ ಪಂಪ್

ಆಯುಧ ಪೂಜೆ ದಿನ ವಿಎಚ್ ಪಿ ಯಿಂದ ತ್ರಿಶೂಲ ದೀಕ್ಷೆ| ಚರ್ಚೆಗೆ ಗ್ರಾಸವಾದ ಪರಿವಾರದ ನಡೆ| ಸ್ಪಷ್ಟನೆ ನೀಡಿದ ಶರಣ್ Read More »