ಕರಾವಳಿ

ಅಕ್ಷರ ಸಂತನಿಗೆ ಕೊನೆಗೂ ಒಲಿದ ಪದ್ಮಶ್ರೀ| ನ.8ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ|

ಮಂಗಳೂರು: ಅಕ್ಷರಸಂತ ಎಂದೇ ಖ್ಯಾತಿಯಾಗಿರುವ ಹರೇಕಳ ಹಾಜಬ್ಬರಿಗೆ ಕೊನೆಗೂ ಪದ್ಮಶ್ರೀ ಗೌರವ ಲಭಿಸಿದೆ. ನವೆಂಬರ್ 8ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಹಾಜಬ್ಬರಿಗೆ ಅಧಿಕೃತ ಆಹ್ವಾನ ಬಂದಿದೆ. ಹರೇಕಳ ಹಾಜಬ್ಬರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ 2020ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿತ್ತು. ಮಾರ್ಚ್ ತಿಂಗಳಿನಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಬೇಕಾಗಿತ್ತು. ಆದರೆ ಕೊರೊನಾ

ಅಕ್ಷರ ಸಂತನಿಗೆ ಕೊನೆಗೂ ಒಲಿದ ಪದ್ಮಶ್ರೀ| ನ.8ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ| Read More »

ಮತ್ತೆ‌ ಬಂತು ತುಳುನಾಡ ಹೆಮ್ಮೆಯ ಕಂಬಳ| ಯಾವೂರಲ್ಲಿ ಯಾವಾಗ ಗೊತ್ತಾ?

ಮಂಗಳೂರು: ತುಳುನಾಡಿನ ಸಾಂಪ್ರದಾಯಿಕ ಹೆಮ್ಮೆಯ ಕ್ರೀಡೆ ಕಂಬಳ ನಡೆಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸಿದ್ಧತೆ ನಡೆದಿದ್ದು, ಜಿಲ್ಲಾ ಕಂಬಳ ಸಮಿತಿಯು 2021-22ನೇ ಸಾಲಿನ ಕಂಬಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ನ.27ರಿಂದ ಮಾರ್ಚ್ 26ರ ವರೆಗೆ ಒಟ್ಟು 17 ಕಂಬಳ ಕೂಟಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ವೇಳಾಪಟ್ಟಿ ಪ್ರಕಟಗೊಂಡಿದ್ದರೂ, ಕೆಲವು ಕಂಬಳಗಳ ದಿನಾಂಕಗಳು ಬದಲಾಗುವ ಸಾಧ್ಯತೆಗಳಿವೆ ಎಂದು ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ. ಕಂಬಳ ವೇಳಾಪಟ್ಟಿ:ನ.27 ಮೂಡುಬಿದಿರೆ, ಡಿ.11 ಹೊಕ್ಕಾಡಿ, ಡಿ.18 ಮಂಗಳೂರು, ಡಿ.26 ಮೂಲ್ಕಿ, ಜ.1

ಮತ್ತೆ‌ ಬಂತು ತುಳುನಾಡ ಹೆಮ್ಮೆಯ ಕಂಬಳ| ಯಾವೂರಲ್ಲಿ ಯಾವಾಗ ಗೊತ್ತಾ? Read More »

ಸುಳ್ಯ: ಚಲಿಸುತ್ತಿರುವಾಗ ಹೊತ್ತಿ‌ ಉರಿದ‌ ಕಾರು| ಚಾಲಕ ಅಪಾಯದಿಂದ ಪಾರು|

ಸುಳ್ಯ: ಇಲ್ಲಿನ ಅಜ್ಜಾವರ ಗ್ರಾಮದ ಮಾವಿನಪಳ್ಳ ಎಂಬಲ್ಲಿ ವ್ಯಾಗನರ್ ಕಾರೊಂದು ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ಭುವನ್ ಅತ್ಯಾಡಿ ಎಂಬವರು ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಕಾರಿನೊಳಗೆ ಬೆಂಕಿ ಅವಘಡ ಸಂಭವಿಸಿರುವುದಾಗಿ ತಿಳಿದುಬಂದಿದೆ. ಭುವನ್ ರವರು ರಾತ್ರಿ ತನ್ನ ಮನೆಯಿಂದ ಮಾವಿನಪಳ್ಳ ರಸ್ತೆಯಲ್ಲಿ ಬರುತ್ತಿದ್ದಾಗ ಕಾರಿನ ಬೋನೆಟ್ ನಿಂದ ಹೊಗೆ ಬರಲಾರಂಭಿಸಿತು. ಇದನ್ನು ಗಮನಿಸಿದ ಭುವನ್ ಕಾರನ್ನು ಬದಿಗೆ ನಿಲ್ಲಿಸಿದರು. ಆ ವೇಳೆಗೆ ಕಾರ್ ಏಕಾಏಕಿ ಲಾಕ್ ಆಯಿತು. ಎದುರು ಬೆಂಕಿ ಹೊತ್ತಿಕೊಂಡಿತು. ಭುವನ್

ಸುಳ್ಯ: ಚಲಿಸುತ್ತಿರುವಾಗ ಹೊತ್ತಿ‌ ಉರಿದ‌ ಕಾರು| ಚಾಲಕ ಅಪಾಯದಿಂದ ಪಾರು| Read More »

ಅಕ್ರಮ ಮರಳುಗಾರಿಕೆ ತಪಾಸಣೆ| ಪೊಲೀಸರ ಮೇಲೆಯೇ ಲಾರಿ ಹತ್ತಿಸಲು ಯತ್ನ| ಆರೋಪಿಗಳು ಅರೆಸ್ಟ್

ಮಂಗಳೂರು: ಅಕ್ರಮ ಮರಳುಗಾರಿಕೆಯ ತಪಾಸಣೆಯ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಲಾರಿ ಹತ್ತಿಸಲು ಯತ್ನಿಸಿದ್ದಾರೆ ಎನ್ನಲಾದ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್, ಆಲ್ಟೋ ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ಎರಡು ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ವಿವರ: ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಬಂದ ಮಾಹಿತಿಯ ಮೇರೆಗೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ನಸುಕಿನ ಜಾವ ಅಡ್ಯಾರ್

ಅಕ್ರಮ ಮರಳುಗಾರಿಕೆ ತಪಾಸಣೆ| ಪೊಲೀಸರ ಮೇಲೆಯೇ ಲಾರಿ ಹತ್ತಿಸಲು ಯತ್ನ| ಆರೋಪಿಗಳು ಅರೆಸ್ಟ್ Read More »

ಪಿಲಿಕುಳದ ಮದ್ಯಪ್ರೇಮಿ ಲಂಗೂರ್ ಸಾವು| ಇದರ ಹಿಂದಿದೆ ರೋಚಕ ಕಹಾನಿ..!

ಮಂಗಳೂರು: ಒಂದು ಕಾಲದಲ್ಲಿ ಮದ್ಯವ್ಯಸನಿಯಾಗಿದ್ದ 21 ವರ್ಷದ ಲಂಗೂರ್​​ ಮಂಗಳೂರಿನ ಪಿಲಿಕುಳ ನೈಸರ್ಗಿಕ ಧಾಮದಲ್ಲಿ ಸಾವನ್ನಪ್ಪಿದೆ. ಮಂಗಳೂರಿನ ಈ ಪಾರ್ಕ್​ಗೆ ಕರೆತರಲಾಗಿದ್ದ ಮೊದಲ ಲಂಗೂರ್ ಇದಾಗಿತ್ತು. ರಾಜು ಎಂಬ ಈ ಲಂಗೂರ್ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಕಿಡ್ನಿ ಹಾಗೂ ಲಿವರ್​​ ಸಂಬಂಧಿ ಸಮಸ್ಯೆಯಿಂದ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಪಡುಬಿದ್ರಿಯ ಬಾರ್​​ ಒಂದರ ಸಮೀಪ ಅನಾರೋಗ್ಯದಿಂದ ಬಳಲುತ್ತಿದ್ದ ಈ ಲಂಗೂರ್ ನ್ನು 2005ರಲ್ಲಿ ರಕ್ಷಿಸಲಾಗಿತ್ತು. ಬಾರ್ ಸಮೀಪವೇ ಈ ಲಂಗೂರ್ ಇರುತ್ತಿದ್ದರಿಂದ ಇದಕ್ಕೆ ಮದ್ಯಪಾನಿಗಳು ಮದ್ಯವನ್ನು ನೀಡುತ್ತಿದ್ದರು. ಇದಾದ

ಪಿಲಿಕುಳದ ಮದ್ಯಪ್ರೇಮಿ ಲಂಗೂರ್ ಸಾವು| ಇದರ ಹಿಂದಿದೆ ರೋಚಕ ಕಹಾನಿ..! Read More »

ಉಳ್ಳಾಲ: ಯುವಕನಿಗೆ ಚೂರಿ ಇರಿತ – ಆರೋಪಿ ಪರಾರಿ, ಪೊಲೀಸರಿಂದ ಶೋಧ

ಮಂಗಳೂರು: ಉಳ್ಳಾಲದ ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಗಾಯಗೊಂಡವರನ್ನು ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಹರೀಶ್ ಎಂದು ಗುರುತಿಸಲಾಗಿದೆ. ಉಳ್ಳಾಲ ಪೊಲೀಸರು ಗಾಯಾಳುಗಳನ್ನು ತೊಕ್ಕೊಟ್ಟುವಿನಲ್ಲಿರುವ ಆಸ್ಪತ್ರೆಗೆ ಸೇರಿಸಿದ್ದಾರೆ. ಮೊಗವೀರಪಟ್ನ ನಿವಾಸಿಯೊಬ್ಬ ವಿಶಾಲ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ವೈಯಕ್ತಿಕ ದ್ವೇಷದಿಂದ ನಡೆದಿರುವ ಕೃತ್ಯ ಎಂದು ಶಂಕಿಸಲಾಗಿದ್ದು, ಸದ್ಯ ವಿಶಾಲ್ ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಉಳ್ಳಾಲ: ಯುವಕನಿಗೆ ಚೂರಿ ಇರಿತ – ಆರೋಪಿ ಪರಾರಿ, ಪೊಲೀಸರಿಂದ ಶೋಧ Read More »

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ವರ ಮೃತದೇಹ ಪತ್ತೆಯಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ. ಮೃತ ಮಹಿಳೆಯ ಪ್ರಾಯ ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದ್ದು,ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಜಂಬೂರಾಜ್ ಮಹಾಜನ್, ಎ. ಎಸ್.ಐ ಮೋಹನ್. ಕೆ,ಮಹಾಲಕ್ಷ್ಮಿ, ಮಹೇಶ್ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಮ್ಲಜನಕ ಮಟ್ಟ ತಪಾಸಣೆ ಸ್ಥಗಿತ

ಮಂಗಳೂರು: ಅಂತರಾಷ್ಟ್ರೀಯ ಆಗಮನಕ್ಕಾಗಿ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕೆಮ್ಮು ಜ್ವರ ಶೀತ ಉಸಿರಾಟ ತೊಂದರೆ ಹೊರತುಪಡಿಸಿ ಆಮ್ಲಜನಕದ ಮಟ್ಟ ತಪಾಸಣೆಯನ್ನು ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಸೂಚಿಸಿರುವ ಆಯ್ದು ದೇಶಗಳಿಂದ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರನ್ನು ಹೊರತುಪಡಿಸಿ ಉಳಿದ ಪ್ರಯಾಣಿಕರ ಸಿಪಿಸಿಆರ್ ಪರೀಕ್ಷಾ ವರದಿ ಪರಿಸಿ ಪರಿಶೀಲನೆ ಸ್ಥಗಿತಗೊಳಿಸಲಾಗಿದೆ. ಇದರ ಬದಲಾಗಿ ಪ್ರಯಾಣಿಕರು ಏರ್ ಸುವಿಧ ಪೋರ್ಟಲ್ ನಲ್ಲಿ ಆರ್ ಟಿಸಿಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕಾಗಿದೆ. ಈ ಪರೀಕ್ಷಾ ವರದಿಯನ್ನು ಸಂಬಂಧಿತ ಏರ್ ಲೈನ್’ನ ಪ್ರಯಾಣಿಕರು

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಮ್ಲಜನಕ ಮಟ್ಟ ತಪಾಸಣೆ ಸ್ಥಗಿತ Read More »

ಹಸುಗೂಸು ಅದಲು ಬದಲು ಪ್ರಕರಣ|ಡಿಎನ್ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ

ಮಂಗಳೂರು: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹಸುಗೂಸನ್ನು ಅದಲು ಬದಲಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯ ಮಗು, ತಂದೆ ಹಾಗೂ ತಾಯಿಯ ಡಿಎನ್‌ಎ ಪರೀಕ್ಷೆಗೆ ಅನುಮತಿ ನೀಡಿದೆ. ತಮ್ಮ ಮಗು ಲೇಡಿಗೋಷನ್ ಆಸ್ಪತ್ರೆಯಲ್ಲಿ ಅದಲು ಬದಲಾಗಿದೆ ಎಂದು ಆರೋಪಿಸಿ ಕುಂದಾಪುರ ನಿವಾಸಿ ಮುಸ್ತಫಾ ಎಂಬುವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ನ್ಯಾಯಾಲಯ ನೀಡಿರುವ ಆದೇಶದನ್ವಯ ಅ.19ರಂದು ಮಗು ಹಾಗೂ ಪೋಷಕರ ಡಿಎಎನ್ ಪರೀಕ್ಷೆ ನಡೆಯಲಿದೆ. ಬಳಿಕ ಇದರ ಸ್ಯಾಂಪಲ್‌ ಅನ್ನು ಹೈದರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ

ಹಸುಗೂಸು ಅದಲು ಬದಲು ಪ್ರಕರಣ|ಡಿಎನ್ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ Read More »

ಪುತ್ತೂರು: ಹೊಸಬಟ್ಟೆ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ| ಕಾರಣ ನಿಗೂಢ

ಮಂಗಳೂರು: ಕೃಷಿಕ ದಂಪತಿಗಳು ಹೊಸ ಬಟ್ಟೆ ಧರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ಘಟನೆ ನಡೆದಿದೆ. ಪಾದೆಕರ್ಯದ ನಿವಾಸಿಗಳಾದ ಕೃಷಿಕ ಸುಬ್ರಹ್ಮಣ್ಯ ಭಟ್ (65) ಮತ್ತು ಶಾರಾದ (50) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು. ಇವರಿಬ್ಬರು ರಾತ್ರಿ ತಮ್ಮ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಮಕ್ಕಳು ಬಾಗಿಲು ತೆಗೆದು ನೋಡಿದಾಗ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವರು ಹೊಸ ಬಟ್ಟೆ ಧರಿಸಿಕೊಂಡು ಆತ್ಮಹತ್ಯೆ

ಪುತ್ತೂರು: ಹೊಸಬಟ್ಟೆ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ| ಕಾರಣ ನಿಗೂಢ Read More »