ಕರಾವಳಿ

ಸುಳ್ಯ: ಪೊಲೀಸ್ ಠಾಣೆಯಲ್ಲಿ ವಿಶಿಷ್ಟ ಆಯುಧ ಪೂಜೆ| ಸಾಂಪ್ರದಾಯಿಕ ಧಿರಿಸಿನೊಂದಿಗೆ ‌ಮಿಂಚಿದ ಆರಕ್ಷಕರು

ಸುಳ್ಯ: ನಾಡಿನೆಲ್ಲೆಡೆ ಸಂಭ್ರಮದ ಆಯುಧ ಪೂಜೆ ನಡೆಯುತ್ತಿದ್ದರೆ, ಸುಳ್ಯ ಠಾಣೆಯಲ್ಲಿ ವಿಶಿಷ್ಟ ರೀತಿಯಲ್ಲಿ ಆಯುಧ ಪೂಜೆ ನಡೆಸಲಾಯಿತು. ದಿನಂಪ್ರತಿ ಖಾಕಿ ಬಟ್ಟೆಯಲ್ಲಿ ಜಬರ್ದಸ್ತ್ ಆಗಿ ಕಾಣುತ್ತಿದ್ದ ಪೊಲೀಸರು ಇಂದು ಸಾಂಪ್ರದಾಯಿಕ ಶೈಲಿಯ ದಿರಿಸನ್ನು ಧರಿಸಿ ಹಬ್ಬಾಚರಣೆ ನಡೆಸಿದರು. ಠಾಣೆಯಲ್ಲಿ ಆಯುಧಗಳಿಗೆ ಪೂಜೆ ನಡೆಸಲಾಯಿತು. ಬಳಿಕ ಪೊಲೀಸ್ ವಾಹನಗಳಿಗೆ ವಾಹನ ಪೂಜೆ ನಡೆಸಿ ಸಿಹಿಹಂಚಿ ಸಂಭ್ರಮಿಸಿದರು.

ಸುಳ್ಯ: ಪೊಲೀಸ್ ಠಾಣೆಯಲ್ಲಿ ವಿಶಿಷ್ಟ ಆಯುಧ ಪೂಜೆ| ಸಾಂಪ್ರದಾಯಿಕ ಧಿರಿಸಿನೊಂದಿಗೆ ‌ಮಿಂಚಿದ ಆರಕ್ಷಕರು Read More »

ಸುಳ್ಯ: ಉದ್ಯಮಿ ಕೆ.ಪಿ ಜಾನಿಗೆ ಪುತ್ರಿ ವಿಯೋಗ

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಸಂಪಾಜೆಯ ಬಾಲಕಿ ಜೆಮಿಮಾ ಕೆ ಜಾನ್‌ ಇಂದು ನಿಧನಳಾಗಿದ್ದಾಳೆ. ಜನಪರ ಹೋರಾಟಗಾರ ಕಾಂಟ್ರಾಕ್ಟರ್ ಕೆ.ಪಿ.ಜಾನಿಯವರ ಮಗಳು ಜೆಮಿಮಾ ಅಪರೂಪದ ಮಾರಣಾಂತಿಕ ವೈರಸ್‌ಗೆ ತುತ್ತಾಗಿದ್ದಳು. ಮಗುವನ್ನು ಬದುಕಿಸುವುದಕ್ಕೆ ಕುಟುಂಬ ಹರಸಾಹಸ ನಡೆಸಿತ್ತು. ಹಿತೈಷಿ, ಸ್ನೇಹಿತರ, ಬಂಧು ಬಳಗದ ಪ್ರಾರ್ಥನೆ ಫಲಿಸಲಿಲ್ಲ. ಐದು ವರ್ಷದ ಜೆಮಿಮಾ ಗುರುವಾರ ಮೃತಪಟ್ಟಿದ್ದಾಳೆ ಎಂದು ಸ್ನೇಹಿತ ಮೂಲಗಳು ತಿಳಿಸಿವೆ.

ಸುಳ್ಯ: ಉದ್ಯಮಿ ಕೆ.ಪಿ ಜಾನಿಗೆ ಪುತ್ರಿ ವಿಯೋಗ Read More »

ಮಂಗಳೂರು: ದುಷ್ಕರ್ಮಿಗಳಿಂದ ಚೂರಿ ಇರಿತ

ಮಂಗಳೂರು: ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ತಡರಾತ್ರಿ ಮಾಲೆಮಾರ್ ಬಳಿ ಸಂಭವಿಸಿದೆ. ಪಂಜಿಮೊಗರು ನಿವಾಸಿ ರಾಜೇಶ್ (45) ಗಾಯಗೊಂಡವರು. ಇವರು ಕೊಟ್ಟಾರದಿಂದ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಬೆನ್ನಿಗೆ ಚೂರಿಯಿಂದ ಇರಿದಿದ್ದಾರೆ. ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾವೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ದುಷ್ಕರ್ಮಿಗಳಿಂದ ಚೂರಿ ಇರಿತ Read More »

ಸುಳ್ಯ ತಾಲೂಕಿನಲ್ಲಿ ಅ. 16ರಂದು ದ.ಕ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಮಂಗಳೂರು: ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯಲ್ಲಿ ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಹಮ್ಮಿಕೊಂಡಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನಲೆ ಗ್ರಾಮ ಲೆಕ್ಕಾಧಿಕಾರಿಗಳು ಪ್ರತೀ ಮನೆಯ ಸರ್ವೇ ಮಾಡಿ, ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು

ಸುಳ್ಯ ತಾಲೂಕಿನಲ್ಲಿ ಅ. 16ರಂದು ದ.ಕ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ Read More »

ಕಡಲನಗರಿಯಲ್ಲಿ ನವರಾತ್ರಿ ಸಡಗರ| ವಿವಿಧೆಡೆ ವಿಶೇಷ ಪೂಜೆ, ಪುನಸ್ಕಾರ ಸಂಭ್ರಮ

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಗುರುವಾರ ಆಯುಧ ಪೂಜೆ ಮತ್ತು ಶುಕ್ರವಾರ ವಿಜಯದಶಮಿ ಹಬ್ಬ ಆಚರಿಸಲಾಗುತ್ತಿದ್ದು, ಕಡಲನಗರಿ‌ ಸಂಭ್ರಮದಿಂದ ಅಣಿಯಾಗುತ್ತಿದೆ. ಬೆಲೆ ಏರಿಕೆ ನಡುವೆಯೂ ನಗರ ಮತ್ತು ಹೊರವಲಯದ ಮಾರುಕಟ್ಟೆಗಳಲ್ಲಿ ಪೂಜೆಗಾಗಿ ಹೂವು, ಹಣ್ಣು ಖರೀದಿ ಭರಾಟೆಯು ಬಿರುಸು ಪಡೆದಿತ್ತು. ಬಹುತೇಕ ಕಡೆ ರಸ್ತೆ ಬದಿಯಲ್ಲಿ ಉತ್ತರ ಕರ್ನಾಟಕದಿಂದ ಆಗಮಿಸಿದ ಹೂವಿನ ವ್ಯಾಪಾರಿಗಳು ಬುಧವಾರ ಭರ್ಜರಿ ವ್ಯಾಪಾರ ನಡೆಸಿದ್ದಾರೆ. ಮುಂಜಾನೆಯಿಂದಲೇ ಲಾರಿಗಳಲ್ಲಿ ಸೇವಂತಿಗೆ, ಮಲ್ಲಿಗೆ, ಗುಲಾಬಿ ಹೂಗಳು ಮತ್ತು ಲಿಂಬೆ ಹಣ್ಣು ತಂದು ಅಲ್ಲಲ್ಲಿ ರಾಶಿ ಹಾಕಿ

ಕಡಲನಗರಿಯಲ್ಲಿ ನವರಾತ್ರಿ ಸಡಗರ| ವಿವಿಧೆಡೆ ವಿಶೇಷ ಪೂಜೆ, ಪುನಸ್ಕಾರ ಸಂಭ್ರಮ Read More »

ಮಂಗಳೂರು: ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡ ಸಿಎಂ ‘ಭಾವನೆಗಳಿಗೆ ಧಕ್ಕೆ ಆದಾಗ ಆಕ್ಷನ್ ಅಂಡ್ ರಿಯಾಕ್ಷನ್ ಸಹಜ’

ಮಂಗಳೂರು: ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಕಂಡುಬರುತ್ತಿರುವ ನೈತಿಕ ಪೊಲೀಸ್ ಗಿರಿ ಬಹಳ ಸೂಕ್ಷ್ಮವಾಗಿರೋ ವಿಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿದ್ದಾವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ‌. ಕಾನೂನನ್ನು ಕಾಪಾಡುವ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ಎಂದ ಅವರು,ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಾಗುತ್ತದೆ.

ಮಂಗಳೂರು: ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡ ಸಿಎಂ ‘ಭಾವನೆಗಳಿಗೆ ಧಕ್ಕೆ ಆದಾಗ ಆಕ್ಷನ್ ಅಂಡ್ ರಿಯಾಕ್ಷನ್ ಸಹಜ’ Read More »

ಮಂಗಳೂರು: ಕಸ್ಟಮ್ಟ್ ಕಛೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು ಕಸ್ಟಮ್ಸ್ ಅಫೀಸಿನಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, SSLC(10th), ITI ಪಾಸ್ ಆದವರಿಗೆ ಹುದ್ದೆ ಖಾಲಿ ಇದೆ. ಖಾಲಿ ಇರುವ ಈ ಕೆಳಗಿನ 19 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.ಹುದ್ದೆಯ ಹೆಸರು: ಸೀಮನ್, ಗ್ರೀಸರ್, ಟ್ರೇಡ್ಸ್‌ಮನ್, ಸುಖಾನಿ, ಎಂಜಿನ್ ಡ್ರೈವರ್ ವೇತನ: Rs.18000/- ದಿಂದ 81100/-ಹುದ್ದೆಯ ಸ್ಥಳ: ಮಂಗಳೂರು ಕಸ್ಟಮ್ಸ್ ಕಚೇರಿ ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳ ಸಂಖ್ಯೆSeaman 7 (10th /SSLC)Greaser 3 (10th /SSLC)Tradesman 1 (10th /SSLC/ITI)Launch

ಮಂಗಳೂರು: ಕಸ್ಟಮ್ಟ್ ಕಛೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಅ.13 ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಸಿಎಂ ಭೇಟಿ ಹಿನ್ನೆಲೆ| ಕ್ಷೇತ್ರದಲ್ಲಿ ಬಿಗಿ ಬಂದೋಬಸ್ತ್, ಭಕ್ತರಿಗೆ ಪ್ರವೇಶ ನಿಷೇಧ

ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರು ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ ಹಿನ್ನೆಲೆಯಲ್ಲಿ ಅ. 13ರಂದು ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ಅ. 13ರಂದು ಸಂಜೆ 3 ಗಂಟೆಯಿಂದ 7 ಗಂಟೆಯವರೆಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ಭಕ್ತರು ಸಹಕರಿಸಲು ಕೋರಲಾಗಿದೆ. ಬೆಳಗ್ಗೆ 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಅವರು 11 ಗಂಟೆಗೆ ಉಡುಪಿಗೆ ತೆರಳಿ, ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ

ಅ.13 ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಸಿಎಂ ಭೇಟಿ ಹಿನ್ನೆಲೆ| ಕ್ಷೇತ್ರದಲ್ಲಿ ಬಿಗಿ ಬಂದೋಬಸ್ತ್, ಭಕ್ತರಿಗೆ ಪ್ರವೇಶ ನಿಷೇಧ Read More »

ಫೇಸ್ಬುಕ್ ನಲ್ಲಿ ಹಿಂದುತ್ವ ವಿರೋಧಿ ‌ಫೋಸ್ಟಿಂಗ್ ಆರೋಪ| ಉಪನ್ಯಾಸಕಿಯಿಂದ ಸ್ಪಷ್ಟನೆ

ಸುಳ್ಯ: ಪೇಸ್ಟುಕ್ ನಲ್ಲಿ ಹಿಂದುತ್ವ ವಿರೋಧಿ‌ ಹಾಗೂ‌ ಧರ್ಮನಿಂದನೆ ಕುರಿತಂತೆ ಫೋಸ್ಟಿಂಗ್ ಮಾಡಲಾಗಿದೆ ಎಂದು ಸುಳ್ಯದ ಪದವಿ ಕಾಲೇಜೊಂದರ ಉಪನ್ಯಾಸಕಿಯ ಮೇಲೆ ಆರೋಪ ವ್ಯಕ್ತವಾಗಿದ್ದು, ಈ ಕುರಿತಂತೆ ಉಪನ್ಯಾಸಕಿ ಪೂರ್ಣಿಮಾ ಮಳಲಿ ‘ಸಮಗ್ರ ಸಮಾಚಾರ’ ಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ‘ನಾನು ನಿನ್ನೆ ಪುರೋಹಿತರು ಸತ್ಯನಾರಾಯಣ ಪೂಜೆ , ವರ ಮಹಾಲಕ್ಷ್ಮಿ ಪೂಜೆ ಮಾಡಲು ಹೇಳಿ ಬಡವರನ್ನು ಸುಲಿಗೆ ಮಾಡುತ್ತಾರೆ . ಬಡವರು ಜೀವನ ಮಾಡುವುದೇ ಕಷ್ಟ ಎಂದು ಹೇಳಿದ್ದು.ಹಿಂದು ಧರ್ಮದಲ್ಲಿ

ಫೇಸ್ಬುಕ್ ನಲ್ಲಿ ಹಿಂದುತ್ವ ವಿರೋಧಿ ‌ಫೋಸ್ಟಿಂಗ್ ಆರೋಪ| ಉಪನ್ಯಾಸಕಿಯಿಂದ ಸ್ಪಷ್ಟನೆ Read More »

ಉಡುಪಿ: ಭೀಕರ ರಸ್ತೆ ಅಪಘಾತ – ಸವಾರ ಸ್ಥಳದಲ್ಲೇ ಸಾವು

ಉಡುಪಿ: ಉಪ್ಪೂರು ಉಡುಪಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಅ. 12ರ ಮಂಗಳವಾರ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗರಾಜು (40) ಎಂದು ಗುರುತಿಸಲಾಗಿದೆ. ಇವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಪರಿಣಾಮ ದ್ವಿಚಕ್ರ ವಾಹನ ಸವಾರ ರಸ್ತೆಗೆ ಉರುಳಿಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ರೈಸ್ ಮಿಲ್ ನಲ್ಲಿ ಕೆಲಸ ಮಾಡುತಿದ್ದ ನಾಗರಾಜು

ಉಡುಪಿ: ಭೀಕರ ರಸ್ತೆ ಅಪಘಾತ – ಸವಾರ ಸ್ಥಳದಲ್ಲೇ ಸಾವು Read More »