ಕರಾವಳಿ

ನವ ಮಂಗಳೂರು ಬಂದರಿನಲ್ಲಿ ಸಹಾಯಕ ‌ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು: ನವ ಮಂಗಳೂರು ಬಂದರು ಮಂಡಳಿ (NMPT)ಯಲ್ಲಿ ಸಹಾಯಕ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಬೇರೆ ಇಲಾಖೆಗಳಲ್ಲಿ ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್​ 16 ಕಡೆಯ ದಿನವಾಗಿದೆ. ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ವಿವರ:ಸಹಾಯಕ ಕಾರ್ಯದರ್ಶಿ ಗ್ರೇಡ್​ 2 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಿ ಸಂಸ್ಥೆಯಲ್ಲಿ ಮೂರು ವರ್ಷದ ಸೇವಾ ಅನುಭವವನ್ನು […]

ನವ ಮಂಗಳೂರು ಬಂದರಿನಲ್ಲಿ ಸಹಾಯಕ ‌ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನ Read More »

ಮಂಗಳೂರು: ಮೇಲಧಿಕಾರಿ ಕಿರುಕುಳದಿಂದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ? ಮೃತ ದೇಹದೊಂದಿಗೆ ಠಾಣೆಗೆ ಆಗಮಿಸಿದ ಕುಟುಂಬಸ್ಥರು

ಮಂಗಳೂರು: ಮಂಗಳೂರು ವಿಭಾಗದ ಕೆಎಸ್‌ಆರ್‌ಟಿಸಿ ಚಾಲಕ ಕಂ ನಿರ್ವಾಹಕರಾಗಿದ್ದ ಬಾಗಲಕೋಟೆಯ ಹುನಗುಂದದ ನಿಂಗಪ್ಪ ಇಮರಾಪುರ ಸೆ. 26 ರ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಘಟನೆಗೆ ಮೇಲಧಿಕಾರಿಗಳ ಕಿರುಕುಳ ಕಾರಣ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಹುನಗುಂದ ಮೂಲದ ರಾಮವಡಗಿ ಗ್ರಾಮದವರಾದ ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡವರು. ಇವರು ಮಂಗಳೂರಿನ ಮೂರನೇ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದರು. ಕಳೆದ 6 ತಿಂಗಳ ಹಿಂದೆ ಕರ್ತವ್ಯಲೋಪದ ಅಡಿಯಲ್ಲಿ ಅವರನ್ನು

ಮಂಗಳೂರು: ಮೇಲಧಿಕಾರಿ ಕಿರುಕುಳದಿಂದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ? ಮೃತ ದೇಹದೊಂದಿಗೆ ಠಾಣೆಗೆ ಆಗಮಿಸಿದ ಕುಟುಂಬಸ್ಥರು Read More »

ಮಂಗಳೂರು: ಪೊಲೀಸರ ಎದುರೇ ನೈತಿಕ ಪೊಲೀಸ್ ಗಿರಿ| ಐವರು ಅಂದರ್

ಮಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ ಎದುರೇ ನೈತಿಕ ಪೊಲೀಸ್ ಗಿರಿ ನಡೆದಿದೆ. ಮಂಗಳೂರಿನ ಸುರತ್ಕಲ್ ಟೋಲ್‌ಗೇಟ್ ಬಳಿ ಭಾನುವಾರ ಸಂಜೆ ಹಿಂದೂ ಸಂಘಟನೆ ಯುವಕರು ಹಾಗೂ ಅನ್ಯಕೋಮಿನ ಯುವಕ, ಯುವತಿಯರ ನಡುವೆ ಮಾತಿನ ಚಕಮಕಿಯಾಗಿದ್ದು 5 ಜನರನ್ನು ಬಂಧಿಸಲಾಗಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ಹಿಂದೂ-ಮುಸ್ಲಿಂ ಯುವಕ-ಯುವತಿಯರ ಒಟ್ಟು 6 ಜನ ಸ್ನೇಹಿತರು ವೀಕೆಂಡ್ ಎಂದು ಮಲ್ಪೆ ಬೀಚ್ ಗೆ ಹೋಗಿ ವಾಪಸ್ ಬರುವಾಗ ಮಂಗಳೂರಿನ ಸುರತ್ಕಲ್ ಟೋಲ್‌ಗೇಟ್ ಬಳಿ ಹಿಂದೂ ಸಂಘಟನೆ ಗುಂಪೊಂದು ಅನ್ಯಕೋಮಿನ ಯುವಕ, ಯುವತಿಯರ ಕಾರನ್ನು

ಮಂಗಳೂರು: ಪೊಲೀಸರ ಎದುರೇ ನೈತಿಕ ಪೊಲೀಸ್ ಗಿರಿ| ಐವರು ಅಂದರ್ Read More »

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಟ್ರಾಫಿಕ್ ಡ್ರೈವ್| ದಾಖಲೆ ಇಲ್ಲದಿದ್ದರೆ ಬಿಳುತ್ತೆ ದಂಡ|

ಮಂಗಳೂರು: ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಹನಗಳ ದಾಖಲೆ ತಪಾಸಣೆಗೆ ವಿಶೇಷ ಟ್ರಾಫಿಕ್ ಡ್ರೈವ್ ನ್ನು ಇಂದಿನಿಂದ ಅಕ್ಟೋಬರ್ 2 ರವರೆಗೆ ನಡೆಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಈ ವೇಳೆ ವಾಹನಗಳ ದಾಖಲೆ ತಪಾಸಣೆ ಸೇರಿದಂತೆ ಟ್ರಾಫಿಕ್ ನಿಯಮಗಳ ಬಗ್ಗೆಯೂ ತಪಾಸಣೆ ನಡೆಯಲಿದೆ. ಈ ಬಗ್ಗೆ ನಗರ ಪೊಲೀಸ್‌ ಆಯುಕ್ತ ಎನ್‌ ಶಶಿಕುಮಾರ್‌ ಮಾಹಿತಿ ನೀಡಿದ್ದು, “ಸೆ.27ರಿಂದ ಅ.2ರವರೆಗೆ ಒಂದು ವಾರಗಳ ಕಾಲ ನಾವು ನಿರಂತರವಾಗಿ ಪ್ರತಿದಿನಕ್ಕೆ ಒಂದೊಂದು ಆದ್ಯತೆ ನೀಡಿ ಟ್ರಾಫಿಕ್‌

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಟ್ರಾಫಿಕ್ ಡ್ರೈವ್| ದಾಖಲೆ ಇಲ್ಲದಿದ್ದರೆ ಬಿಳುತ್ತೆ ದಂಡ| Read More »

ಸಂಪಾಜೆ|ಎರಡು ಮದುವೆ ನಂತರ, ಮೂರನೇ ವಿವಾಹಕ್ಕೆ ತಯಾರಿ- ಸುಳ್ಳು ಹೇಳಿ ಮದುವೆ ಆಗುವ ಈತ ಜಗತ್ ಕಿಲಾಡಿ!

ಮಡಿಕೇರಿ: ಇವನಿಗೆ ಮದುವೆ ಆಗೋದೆ ಒಂದು ಖಯಾಲಿ. ಮದುವೆ ಆಗೋದು, ಒಂದೆರಡು ವರ್ಷ ಅವರೊಂದಿಗೆ ಸಂಸಾರ ಮಾಡೋದು, ಬಳಿಕ ಅವರನ್ನು ಬಿಟ್ಟು ಬೇರೆ ಮದುವೆ ಆಗೋದು. ಇದರಿಂದ ಸಂಸಾರದ ಕನಸುಗಳನ್ನು ಕಂಡು ಜೀವನ ಕಳೆಯಲು ಬಯಸುವ ಯುವತಿಯರು ಇವನಿಂದ ಮೋಸ ಹೋಗತ್ತಲೇ ಇದ್ದಾರೆ. ಮದುವೆಯನ್ನೇ ವೃತ್ತಿ ಮಾಡುತ್ತಿರುವ ಭೂಪ ಇರೋದು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಪಂಚಾಯತಿಯ ದಬ್ಬಡ್ಕದಲ್ಲಿ. ಪ್ರದೀಪ್ ಎಂಬಾತನೇ ಯುವತಿಯರಿಗೆ ಮೋಸ ಮಾಡುತ್ತಿರುವ ಆಸಾಮಿ. ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ ಯುವತಿಯೋರ್ವಳನ್ನು

ಸಂಪಾಜೆ|ಎರಡು ಮದುವೆ ನಂತರ, ಮೂರನೇ ವಿವಾಹಕ್ಕೆ ತಯಾರಿ- ಸುಳ್ಳು ಹೇಳಿ ಮದುವೆ ಆಗುವ ಈತ ಜಗತ್ ಕಿಲಾಡಿ! Read More »

ಕಡಬ: ಮಸಾಜ್ ಸೆಂಟರ್ ಹೆಸರಲ್ಲಿ ಮಾಂಸದಂಧೆ| ಪಾರ್ಲರ್ ಗೆ ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್|

ಕಡಬ: ಮಸಾಜ್ ಸೆಂಟರ್ ಹೆಸರಿನಲ್ಲಿ ಪಾರ್ಲರ್​​​ ತೆರೆದು ಅಲ್ಲಿಗೆ ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಅದರ ಮಾಲಕ ಹಾಗೂ ಅಲ್ಲಿನ ಸಿಬಂದಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯರಿಬ್ಬರು ಕಡಬ ಠಾಣೆಗೆ ದೂರು ನೀಡಿದ ಘಟನೆ ಸೆ 24 ರಂದು ನಡೆದಿದೆ. ಕಡಬ ಸಮೀಪದ ಮಸಾಜ್ ಪಾರ್ಲರ್ ನಡೆಸುತ್ತಿರುವ ಕೇರಳದ ವಯನಾಡ್ ನಿವಾಸಿ ಅಬ್ರಾಹಾಂ, ಆತನ ಪಾರ್ಲರ್ ಸಿಬಂದಿ ಕೇರಳ ಮೂಲದ ಅನೀಶ್(25) ಎಂಬವರನ್ನು ಈ ಸಂಬಂಧ ಪೊಲೀಸರು

ಕಡಬ: ಮಸಾಜ್ ಸೆಂಟರ್ ಹೆಸರಲ್ಲಿ ಮಾಂಸದಂಧೆ| ಪಾರ್ಲರ್ ಗೆ ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್| Read More »

ಕಾರ್ಕಳ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಕಾರ್ಕಳ: ಇಲ್ಲಿನ ಮಾಳ ಗ್ರಾಮದ ಹುಕ್ರಟ್ಟೆ ಎಂಬಲ್ಲಿ ಆಹಾರ ಅರಸಿ‌ ಬಂದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ಅದನ್ನು ರಕ್ಷಿಸಿದ್ದಾರೆ. ಗ್ರಾಮದ ವ್ಯಕ್ತಿಯೊಬ್ಬರ ಖಾಸಗಿ ಸ್ಥಳದಲ್ಲಿನ ಬಾವಿಯೊಂದರಲ್ಲಿ ಬಿದ್ದಿದ ಚಿರತೆಯನ್ನು ಹಗ್ಗ ಇಳಿಸಿ ರೆಸ್ಕ್ಯೂ ಕಾರ್ಯ ಕೈಗೊಂಡ ರಕ್ಷಿಸಲಾಯಿತು. ರಕ್ಷಣಾ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಮಂಜುನಾಥ್ ಗಾಣಿಗ, ಅಶ್ವಿತ್ ಕೆ, ರಾಘವೇಂದ್ರ ಕೆ ಅರಣ್ಯ ರಕ್ಷಕರಾದ ಸಂದೀಪ್ ಸಿ ಗ್ರಾಮ ಪಂಚಾಯತ್ ಸದಸ್ಯರಾದ ಸುಧೀರ್, ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. https://youtube.com/shorts/HyAusPrD66U?feature=share ಚಿರತೆಯು ನೀರಿನಲ್ಲಿಯೇ

ಕಾರ್ಕಳ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ Read More »

ಉಡುಪಿ: ಮೀನುಗಳು ಸಾವನಪ್ಪಿದ ಪ್ರಕರಣ|ಅಧಿಕಾರಿಗಳಿಂದ ತೆಂಗಿನಕಾಯಿ ಮುಟ್ಟಿಸಿ ಪ್ರಮಾಣ ಮಾಡಿಸಿದ ಗ್ರಾಮಸ್ಥರು.!

ಉಡುಪಿ: ಜಿಲ್ಲೆಯ ಉದ್ಯಾವರ ಬಳಿ, ಪಾಪಾನಾಶಿನಿ ನದಿ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿರುವ ಹಿನ್ನಲೆ ಈ ದುಷ್ಕೃತ್ಯಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳ ಬಳಿ ಗ್ರಾಮಸ್ಥರು ತೆಂಗಿನಕಾಯಿ ಮುಟ್ಟಿಸಿ ಪ್ರಮಾಣ ಮಾಡಿಸಿದ ಘಟನೆ ಸೆ. 24 ರಂದು ನಡೆದಿದೆ. ಇಲ್ಲಿನ ಪಿತ್ರೋಡಿ ಹೊಳೆಯಲ್ಲಿ ರಾಶಿ ರಾಶಿ ಪ್ರಮಾಣದಲ್ಲಿ ಮೀನುಗಳು ಸತ್ತು ಬಿದ್ದಿವೆ. ಇದಕ್ಕೆ ಸ್ಥಳೀಯ ಫಿಶ್‌ ಮೀಲ್‌ ಫ್ಯಾಕ್ಟರಿಯಿಂದ ಹೊರಗೆ ಬರುವ ತ್ಯಾಜ್ಯವೇ ಕಾರಣ. ಆದರೆ ಪ್ರತಿ ಬಾರಿ ಅಧಿಕಾರಿಗಳು ಫ್ಯಾಕ್ಟರಿ ಪರವಾಗಿ

ಉಡುಪಿ: ಮೀನುಗಳು ಸಾವನಪ್ಪಿದ ಪ್ರಕರಣ|ಅಧಿಕಾರಿಗಳಿಂದ ತೆಂಗಿನಕಾಯಿ ಮುಟ್ಟಿಸಿ ಪ್ರಮಾಣ ಮಾಡಿಸಿದ ಗ್ರಾಮಸ್ಥರು.! Read More »

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿ – ಹಲವರಿಗೆ ಗಾಯ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಸೆ.23ರಂದು ನಡೆದಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ನಡುವೆ

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿ – ಹಲವರಿಗೆ ಗಾಯ Read More »

ರೈತ ಚಳುವಳಿಗಾರರನ್ನು ಅಪಹಾಸ್ಯ ಮಾಡಿದ ಯಕ್ಷಗಾನ ಕಲಾವಿದ| ಆಕ್ರೋಶದ ಬೆನ್ನಲ್ಲೇ ಕ್ಷಮೆಯಾಚಿಸಿದ ದಿನೇಶ್ ಕೋಡಪದವು|

ಮಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವವರು ನಿಜವಾದ ರೈತರಲ್ಲ ಅವರೆಲ್ಲರೂ ನಕಲಿಗಳು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು, ರೈತ ಸಂಘಟನೆಗಳ ಆಕ್ರೋಶದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿದ್ದಾರೆ. ಯಕ್ಷಗಾನ ರಂಗದಲ್ಲಿ ಮೂವರು ಕಲಾವಿದರು ರೈತರನ್ನು ಅಪಹಾಸ್ಯ ಮಾಡಿ ತುಳುವಿನಲ್ಲಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವೇದಿಕೆಯಲ್ಲಿ ಸಹ ಕಲಾವಿದರೊಂದಿಗೆ ಹಾಸ್ಯ ಸಂಭಾಷಣೆ ನಡೆಸಿದ್ದ ದಿನೇಶ್‌, “ಹಲವು ತಿಂಗಳುಗಳಿಂದ ಹಸಿರು ಶಾಲು, ಟೊಪಿ ಧರಿಸಿ ದೆಹಲಿ ಗಡಿಗಳಲ್ಲಿ

ರೈತ ಚಳುವಳಿಗಾರರನ್ನು ಅಪಹಾಸ್ಯ ಮಾಡಿದ ಯಕ್ಷಗಾನ ಕಲಾವಿದ| ಆಕ್ರೋಶದ ಬೆನ್ನಲ್ಲೇ ಕ್ಷಮೆಯಾಚಿಸಿದ ದಿನೇಶ್ ಕೋಡಪದವು| Read More »