ಕರಾವಳಿ

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ

ಸುಳ್ಯ : ಅಡ್ಕಾರ್ ಮಾವಿನ ಕಟ್ಟೆಯಲ್ಲಿ ಕಾರು ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಭವಿಸಿದೆ. ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಹಾಗೂ ವೇಗವಾಗಿ ಬಂದ ಹಿನ್ನೆಲೆ ಚಾಲಕ ನಿಯಂತ್ರಣ ಕಳೆದು ಕೊಂಡಿದ್ದಾನೆ, ಬಳಿಕ ಕಾರು ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.ಇದೇ ವೇಳೆ ಕಾರಿನಲ್ಲಿ ಇದ್ದ ಮೂವರು ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಮೈಸೂರಿನ ಶ್ರೇಯಸ್ಸ್, ಭುವನ್ ಹಾಗೂ ಸರ್ವೇಶ್ ಎಂದು ಗುರುತಿಸಲಾಗಿದೆ, ಅವರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ Read More »

ಮಂಗಳೂರು: ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಕೊಲೆ ಪ್ರಕರಣ – ನಾಲ್ವರು ಪೊಲೀಸ್ ವಶಕ್ಕೆ

ಮಂಗಳೂರು: ನಗರದ ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಪಾರ್ಟಿ ನೆಪದಲ್ಲಿ ಯುವಕನೊಬ್ಬನ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ನಿವಾಸಿ ಜೇಸನ್ (25) ವಶಕ್ಕೆ ಪಡೆದ ಆರೋಪಿ. ಅ.15 ರಂದು ರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್,ಪ್ರಜ್ವಲ್ ಎಂಬವರು ತೆರಳಿದ್ದರು. ಸರಿಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಎಂಬುವರ ಮಧ್ಯೆ

ಮಂಗಳೂರು: ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಕೊಲೆ ಪ್ರಕರಣ – ನಾಲ್ವರು ಪೊಲೀಸ್ ವಶಕ್ಕೆ Read More »

ದ.ಕ ದಲ್ಲಿ‌ ಕೊರೊನಾ ಮಾರ್ಗಸೂಚಿ ಕಟ್ಟುನಿಟ್ಟು| ಎರಡು ಡೋಸ್ ಲಸಿಕೆ ಹಾಕಿಸದವರಿಗೆ‌ ಮಾಲ್, ಚಿತ್ರಮಂದಿರಕ್ಕೆ ನಿರ್ಬಂಧ

ಮಂಗಳೂರು: ಮಂಗಳೂರಿನಲ್ಲಿ ಮಾಲ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳ ಒಳಗೆ ಪ್ರವೇಶಿಸಲು ಕೊರೋನಾ ಲಸಿಕೆಯ ಎರಡು ಡೋಸ್‌ ಹಾಕಿಕೊಳ್ಳುವುದು ಕಡ್ಡಾಯ ಎಂದು ದಕ್ಷಿಣ ಕನ್ನಡ ಡಿಸಿ ಡಾ.ರಾಜೇಂದ್ರ ಕೆವಿ ಹೇಳಿದ್ದಾರೆ. ಕೋವಿಡ್ ಪಾಸಿಟಿವಿಟಿ ದರ ಶೇಕಡ 0.46ಕ್ಕೆ ಇಳಿದಿರುವುದರಿಂದ ಅಕ್ಟೋಬರ್ 14ರಿಂದ ಥಿಯೇಟರ್‌ಗಳು, ಮಲ್ಟಿಪ್ಲೆಕ್ಸ್‌ಗಳು, ಆಡಿಟೋರಿಯಂಗಳು 100 ಪ್ರತಿಶತ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ. ಆದ್ದರಿಂದ, ಈ ಸ್ಥಳಗಳಿಗೆ ಭೇಟಿ ನೀಡುವ ಎಲ್ಲ ಜನರು ಎರಡು ಡೋಸ್ ಲಸಿಕೆಗಳನ್ನು ತೆಗೆದುಕೊಳ್ಳಬೇಕು. ಆದರೆ ವಯಸ್ಸಾದವರು ಮತ್ತು

ದ.ಕ ದಲ್ಲಿ‌ ಕೊರೊನಾ ಮಾರ್ಗಸೂಚಿ ಕಟ್ಟುನಿಟ್ಟು| ಎರಡು ಡೋಸ್ ಲಸಿಕೆ ಹಾಕಿಸದವರಿಗೆ‌ ಮಾಲ್, ಚಿತ್ರಮಂದಿರಕ್ಕೆ ನಿರ್ಬಂಧ Read More »

ಖಾಝಿ ನೇಮಕ ವಿಚಾರ| ಮಸೀದಿಯೊಳಗೇ ಹೊಡೆದಾಟ‌ ನಡೆಸಿದ ಮುಖಂಡರು|

ಪುತ್ತೂರು: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ.‌ ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ

ಖಾಝಿ ನೇಮಕ ವಿಚಾರ| ಮಸೀದಿಯೊಳಗೇ ಹೊಡೆದಾಟ‌ ನಡೆಸಿದ ಮುಖಂಡರು| Read More »

ಸುಬ್ರಹ್ಮಣ್ಯ: ಬೈಕಿನ ಮೇಲೆ ಕಡವೆ ಹಾರಿ ಸವಾರ ಸಾವು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕಿನ ಮೇಲೆ ಕಡವೆ ಹಾರಿದ ಪರಿಣಾಮವಾಗಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಕಛೇರಿ ಸಿಬ್ಬಂದಿ ರಾಮಚಂದ್ರ ಅರ್ಬಿತ್ತಾಯ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ಇಂದು ಮುಂಜಾನೆ ಸುಮಾರು 5.45ರ ಹೊತ್ತಿಗೆ ರಾಮಚಂದ್ರ ಅರ್ಬಿತ್ತಾಯರು ತಮ್ಮ ಸಹೋದರ ರವಿ ಅರ್ಬಿತ್ತಾಯರೊಂದಿಗೆ ಕುಲ್ಕುಂದಕ್ಕೆ ಶಟಲ್ ಬ್ಯಾಡ್ಮಿಂಟನ್ ಆಟ ಆಡಲು ತೆರಳುತ್ತಿರುವ ಸಂದರ್ಭ ಕುಲ್ಕುಂದದ ಬ್ರಾಮರಿ‌ ನೆಸ್ಟ್ ವಸತಿಗೃಹದ ಬಳಿ ಅವರು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಪಕ್ಕದ ಗುಡ್ಡದಿಂದ ಕಡವೆ

ಸುಬ್ರಹ್ಮಣ್ಯ: ಬೈಕಿನ ಮೇಲೆ ಕಡವೆ ಹಾರಿ ಸವಾರ ಸಾವು Read More »

ದಸರಾ ಪಾರ್ಟಿಯಲ್ಲಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯ

ಮಂಗಳೂರು: ಇಲ್ಲಿನ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಧನುಷ್ (20 ವರ್ಷ) ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಘಟನೆಯ ವಿವರ: ಅ.15ರಂದು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್ & ಪ್ರಜ್ವಲ್ ಎಂಬವರು ತೆರಳಿದ್ದಾರೆ. ಸಮಯ ಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್

ದಸರಾ ಪಾರ್ಟಿಯಲ್ಲಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯ Read More »

ಆಯುಧ ಪೂಜೆ ದಿನ ವಿಎಚ್ ಪಿ ಯಿಂದ ತ್ರಿಶೂಲ ದೀಕ್ಷೆ| ಚರ್ಚೆಗೆ ಗ್ರಾಸವಾದ ಪರಿವಾರದ ನಡೆ| ಸ್ಪಷ್ಟನೆ ನೀಡಿದ ಶರಣ್

ಮಂಗಳೂರು: ಆಯುಧ ಪೂಜೆ ದಿನವಾದ ನಿನ್ನೆ ತ್ರಿಶೂಲ ದೀಕ್ಷೆ ಹೆಸರಲ್ಲಿ ಹಿಂದೂ ಕಾರ್ಯಕರ್ತರಿಗೆ ಬಜರಂಗದಳದವರು ಶಸ್ತ್ರ ಹಂಚಿದ ಘಟನೆ ನಡೆದಿದ್ದು, ಕಾರ್ಯಕ್ರಮದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರಸ್ಪರ ಆರೋಪ ಪ್ರತ್ಯಾರೋಪಗಳು ನಡೆದಿದೆ. ಮಂಗಳೂರು ನಗರದ ಕದ್ರಿ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ನಡೆದ ತ್ರಿಶೂಲ ದೀಕ್ಷೆ ಕಾರ್ಯಕ್ರಮದಲ್ಲಿ ಹಿಂದೂ ಕಾರ್ಯಕರ್ತರಿಗೆ ಚೂರಿ ಮಾದರಿಯ ತ್ರಿಶೂಲದಂಥ ಶಸ್ತ್ರವನ್ನು ಹಂಚಿಕೆ ಮಾಡಲಾಗಿದೆ. ಮಂಗಳೂರಿನ ಕದ್ರಿಯ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ವಿಎಚ್‌ಪಿ ವಿಭಾಗದ ಕಾರ್ಯದರ್ಶಿ ಶರಣ್ ಪಂಪ್

ಆಯುಧ ಪೂಜೆ ದಿನ ವಿಎಚ್ ಪಿ ಯಿಂದ ತ್ರಿಶೂಲ ದೀಕ್ಷೆ| ಚರ್ಚೆಗೆ ಗ್ರಾಸವಾದ ಪರಿವಾರದ ನಡೆ| ಸ್ಪಷ್ಟನೆ ನೀಡಿದ ಶರಣ್ Read More »

ಸುಳ್ಯ: ಪೊಲೀಸ್ ಠಾಣೆಯಲ್ಲಿ ವಿಶಿಷ್ಟ ಆಯುಧ ಪೂಜೆ| ಸಾಂಪ್ರದಾಯಿಕ ಧಿರಿಸಿನೊಂದಿಗೆ ‌ಮಿಂಚಿದ ಆರಕ್ಷಕರು

ಸುಳ್ಯ: ನಾಡಿನೆಲ್ಲೆಡೆ ಸಂಭ್ರಮದ ಆಯುಧ ಪೂಜೆ ನಡೆಯುತ್ತಿದ್ದರೆ, ಸುಳ್ಯ ಠಾಣೆಯಲ್ಲಿ ವಿಶಿಷ್ಟ ರೀತಿಯಲ್ಲಿ ಆಯುಧ ಪೂಜೆ ನಡೆಸಲಾಯಿತು. ದಿನಂಪ್ರತಿ ಖಾಕಿ ಬಟ್ಟೆಯಲ್ಲಿ ಜಬರ್ದಸ್ತ್ ಆಗಿ ಕಾಣುತ್ತಿದ್ದ ಪೊಲೀಸರು ಇಂದು ಸಾಂಪ್ರದಾಯಿಕ ಶೈಲಿಯ ದಿರಿಸನ್ನು ಧರಿಸಿ ಹಬ್ಬಾಚರಣೆ ನಡೆಸಿದರು. ಠಾಣೆಯಲ್ಲಿ ಆಯುಧಗಳಿಗೆ ಪೂಜೆ ನಡೆಸಲಾಯಿತು. ಬಳಿಕ ಪೊಲೀಸ್ ವಾಹನಗಳಿಗೆ ವಾಹನ ಪೂಜೆ ನಡೆಸಿ ಸಿಹಿಹಂಚಿ ಸಂಭ್ರಮಿಸಿದರು.

ಸುಳ್ಯ: ಪೊಲೀಸ್ ಠಾಣೆಯಲ್ಲಿ ವಿಶಿಷ್ಟ ಆಯುಧ ಪೂಜೆ| ಸಾಂಪ್ರದಾಯಿಕ ಧಿರಿಸಿನೊಂದಿಗೆ ‌ಮಿಂಚಿದ ಆರಕ್ಷಕರು Read More »

ಸುಳ್ಯ: ಉದ್ಯಮಿ ಕೆ.ಪಿ ಜಾನಿಗೆ ಪುತ್ರಿ ವಿಯೋಗ

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಸಂಪಾಜೆಯ ಬಾಲಕಿ ಜೆಮಿಮಾ ಕೆ ಜಾನ್‌ ಇಂದು ನಿಧನಳಾಗಿದ್ದಾಳೆ. ಜನಪರ ಹೋರಾಟಗಾರ ಕಾಂಟ್ರಾಕ್ಟರ್ ಕೆ.ಪಿ.ಜಾನಿಯವರ ಮಗಳು ಜೆಮಿಮಾ ಅಪರೂಪದ ಮಾರಣಾಂತಿಕ ವೈರಸ್‌ಗೆ ತುತ್ತಾಗಿದ್ದಳು. ಮಗುವನ್ನು ಬದುಕಿಸುವುದಕ್ಕೆ ಕುಟುಂಬ ಹರಸಾಹಸ ನಡೆಸಿತ್ತು. ಹಿತೈಷಿ, ಸ್ನೇಹಿತರ, ಬಂಧು ಬಳಗದ ಪ್ರಾರ್ಥನೆ ಫಲಿಸಲಿಲ್ಲ. ಐದು ವರ್ಷದ ಜೆಮಿಮಾ ಗುರುವಾರ ಮೃತಪಟ್ಟಿದ್ದಾಳೆ ಎಂದು ಸ್ನೇಹಿತ ಮೂಲಗಳು ತಿಳಿಸಿವೆ.

ಸುಳ್ಯ: ಉದ್ಯಮಿ ಕೆ.ಪಿ ಜಾನಿಗೆ ಪುತ್ರಿ ವಿಯೋಗ Read More »

ಮಂಗಳೂರು: ದುಷ್ಕರ್ಮಿಗಳಿಂದ ಚೂರಿ ಇರಿತ

ಮಂಗಳೂರು: ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ತಡರಾತ್ರಿ ಮಾಲೆಮಾರ್ ಬಳಿ ಸಂಭವಿಸಿದೆ. ಪಂಜಿಮೊಗರು ನಿವಾಸಿ ರಾಜೇಶ್ (45) ಗಾಯಗೊಂಡವರು. ಇವರು ಕೊಟ್ಟಾರದಿಂದ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಬೆನ್ನಿಗೆ ಚೂರಿಯಿಂದ ಇರಿದಿದ್ದಾರೆ. ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾವೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ದುಷ್ಕರ್ಮಿಗಳಿಂದ ಚೂರಿ ಇರಿತ Read More »