ಕರಾವಳಿ

ಕಾರ್ಕಳ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಕಾರ್ಕಳ: ಇಲ್ಲಿನ ಮಾಳ ಗ್ರಾಮದ ಹುಕ್ರಟ್ಟೆ ಎಂಬಲ್ಲಿ ಆಹಾರ ಅರಸಿ‌ ಬಂದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ಅದನ್ನು ರಕ್ಷಿಸಿದ್ದಾರೆ. ಗ್ರಾಮದ ವ್ಯಕ್ತಿಯೊಬ್ಬರ ಖಾಸಗಿ ಸ್ಥಳದಲ್ಲಿನ ಬಾವಿಯೊಂದರಲ್ಲಿ ಬಿದ್ದಿದ ಚಿರತೆಯನ್ನು ಹಗ್ಗ ಇಳಿಸಿ ರೆಸ್ಕ್ಯೂ ಕಾರ್ಯ ಕೈಗೊಂಡ ರಕ್ಷಿಸಲಾಯಿತು. ರಕ್ಷಣಾ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಮಂಜುನಾಥ್ ಗಾಣಿಗ, ಅಶ್ವಿತ್ ಕೆ, ರಾಘವೇಂದ್ರ ಕೆ ಅರಣ್ಯ ರಕ್ಷಕರಾದ ಸಂದೀಪ್ ಸಿ ಗ್ರಾಮ ಪಂಚಾಯತ್ ಸದಸ್ಯರಾದ ಸುಧೀರ್, ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. https://youtube.com/shorts/HyAusPrD66U?feature=share ಚಿರತೆಯು ನೀರಿನಲ್ಲಿಯೇ […]

ಕಾರ್ಕಳ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ Read More »

ಉಡುಪಿ: ಮೀನುಗಳು ಸಾವನಪ್ಪಿದ ಪ್ರಕರಣ|ಅಧಿಕಾರಿಗಳಿಂದ ತೆಂಗಿನಕಾಯಿ ಮುಟ್ಟಿಸಿ ಪ್ರಮಾಣ ಮಾಡಿಸಿದ ಗ್ರಾಮಸ್ಥರು.!

ಉಡುಪಿ: ಜಿಲ್ಲೆಯ ಉದ್ಯಾವರ ಬಳಿ, ಪಾಪಾನಾಶಿನಿ ನದಿ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿರುವ ಹಿನ್ನಲೆ ಈ ದುಷ್ಕೃತ್ಯಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳ ಬಳಿ ಗ್ರಾಮಸ್ಥರು ತೆಂಗಿನಕಾಯಿ ಮುಟ್ಟಿಸಿ ಪ್ರಮಾಣ ಮಾಡಿಸಿದ ಘಟನೆ ಸೆ. 24 ರಂದು ನಡೆದಿದೆ. ಇಲ್ಲಿನ ಪಿತ್ರೋಡಿ ಹೊಳೆಯಲ್ಲಿ ರಾಶಿ ರಾಶಿ ಪ್ರಮಾಣದಲ್ಲಿ ಮೀನುಗಳು ಸತ್ತು ಬಿದ್ದಿವೆ. ಇದಕ್ಕೆ ಸ್ಥಳೀಯ ಫಿಶ್‌ ಮೀಲ್‌ ಫ್ಯಾಕ್ಟರಿಯಿಂದ ಹೊರಗೆ ಬರುವ ತ್ಯಾಜ್ಯವೇ ಕಾರಣ. ಆದರೆ ಪ್ರತಿ ಬಾರಿ ಅಧಿಕಾರಿಗಳು ಫ್ಯಾಕ್ಟರಿ ಪರವಾಗಿ

ಉಡುಪಿ: ಮೀನುಗಳು ಸಾವನಪ್ಪಿದ ಪ್ರಕರಣ|ಅಧಿಕಾರಿಗಳಿಂದ ತೆಂಗಿನಕಾಯಿ ಮುಟ್ಟಿಸಿ ಪ್ರಮಾಣ ಮಾಡಿಸಿದ ಗ್ರಾಮಸ್ಥರು.! Read More »

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿ – ಹಲವರಿಗೆ ಗಾಯ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಸೆ.23ರಂದು ನಡೆದಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ನಡುವೆ

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿ – ಹಲವರಿಗೆ ಗಾಯ Read More »

ರೈತ ಚಳುವಳಿಗಾರರನ್ನು ಅಪಹಾಸ್ಯ ಮಾಡಿದ ಯಕ್ಷಗಾನ ಕಲಾವಿದ| ಆಕ್ರೋಶದ ಬೆನ್ನಲ್ಲೇ ಕ್ಷಮೆಯಾಚಿಸಿದ ದಿನೇಶ್ ಕೋಡಪದವು|

ಮಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವವರು ನಿಜವಾದ ರೈತರಲ್ಲ ಅವರೆಲ್ಲರೂ ನಕಲಿಗಳು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು, ರೈತ ಸಂಘಟನೆಗಳ ಆಕ್ರೋಶದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿದ್ದಾರೆ. ಯಕ್ಷಗಾನ ರಂಗದಲ್ಲಿ ಮೂವರು ಕಲಾವಿದರು ರೈತರನ್ನು ಅಪಹಾಸ್ಯ ಮಾಡಿ ತುಳುವಿನಲ್ಲಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವೇದಿಕೆಯಲ್ಲಿ ಸಹ ಕಲಾವಿದರೊಂದಿಗೆ ಹಾಸ್ಯ ಸಂಭಾಷಣೆ ನಡೆಸಿದ್ದ ದಿನೇಶ್‌, “ಹಲವು ತಿಂಗಳುಗಳಿಂದ ಹಸಿರು ಶಾಲು, ಟೊಪಿ ಧರಿಸಿ ದೆಹಲಿ ಗಡಿಗಳಲ್ಲಿ

ರೈತ ಚಳುವಳಿಗಾರರನ್ನು ಅಪಹಾಸ್ಯ ಮಾಡಿದ ಯಕ್ಷಗಾನ ಕಲಾವಿದ| ಆಕ್ರೋಶದ ಬೆನ್ನಲ್ಲೇ ಕ್ಷಮೆಯಾಚಿಸಿದ ದಿನೇಶ್ ಕೋಡಪದವು| Read More »

ಯಕ್ಷಗಾನದಲ್ಲೂ ರಾಜಕೀಯ -ಕೃಷಿ ಕಾಯ್ದೆ ವಿರೋಧಿ ಹೋರಾಟಗಾರರನ್ನು ನಕಲಿ ರೈತರು ಎಂದ ಯಕ್ಷಗಾನ ಕಲಾವಿದ

ಮಂಗಳೂರು ಸೆಪ್ಟೆಂಬರ್ 22: ಕೇಂದ್ರ ಸರಕಾರದ ವಿರುದ್ದ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ನಕಲಿ ರೈತರು ಎಂದು ಅಪಹಾಸ್ಯ ಮಾಡಿರುವ ಯಕ್ಷಗಾನದ ವಿಡಿಯೋ ತುಣಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಕ್ಷಗಾನದ ವೇದಿಕೆಯಲ್ಲಿ ಕಲಾವಿದರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ಉಲ್ಲೇಖಿಸಿ, ‘ಹಲವಾರು ತಿಂಗಳುಗಳಿಂದ ಹಸಿರು ಶಾಲು, ಟೊಪ್ಪಿ ಧರಿಸಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ನಕಲಿಗಳು. ಅವರು ಆರು ವರ್ಷ ಹೋರಾಟ ನಡೆಸಿದರೂ ಏನೂ ಆಗುವುದಿಲ್ಲ’ ಎಂದು ಹೇಳಿದ್ದಾರೆ. ‘ರೈತರು ರಸ್ತೆಯಲ್ಲಿ ಕುಳಿತಿದ್ದರೆ

ಯಕ್ಷಗಾನದಲ್ಲೂ ರಾಜಕೀಯ -ಕೃಷಿ ಕಾಯ್ದೆ ವಿರೋಧಿ ಹೋರಾಟಗಾರರನ್ನು ನಕಲಿ ರೈತರು ಎಂದ ಯಕ್ಷಗಾನ ಕಲಾವಿದ Read More »

ಮಂಗಳೂರಿಗೆ ಬಂತು 6.5 ಕೋಟಿ ರೂ. ನ ಐಷಾರಾಮಿ ಬೆಂಟ್ಲಿ ಕಾರು

ಮಂಗಳೂರು: ವಿಶ್ವದ ಅತ್ಯಂತ ದುಬಾರಿ, ಐಷಾರಾಮಿ ಕಾರುಗಳಲ್ಲಿ ಒಂದಾದ ಬೆಂಟ್ಲಿ ಬ್ರ್ಯಾಂಡ್‌‌ನ ಬೆಂಟಾಯ್ಗ ವಿ8 ಫಸ್ಟ್‌‌ ಎಡಿಶನ್‌ ಎಸ್‌ಯುವಿ ಕಾರು ಮಂಗಳೂರಿಗೆ ಬಂದಿದೆ. ನಗರದ ಉದ್ಯಮಿ ರೋಹನ್‌‌ ಮೊಂತೆರೋ ಅವರು ರಾಜ್ಯದಲ್ಲೇ ಮೊದಲಿಗರಾಗಿ ಈ ಕಾರನ್ನು ಖರೀದಿಸಿದ್ದಾರೆ. ಇದು ಇಂಗ್ಲೆಂಡ್‌‌‌‌‌ನ ವಿಲಾಸಿ ಕಾರುಗಳಲ್ಲಿ ಅ‌ತ್ಯಂತ ದುಬಾರಿ ಹಾಗೂ ಪ್ರತಿಷ್ಠಿತ ಕಾರಾಗಿದೆ. ಈ ಕಾರು ದೇಶದ ಮೊದಲ ಐಷಾರಾಮಿ ಎಸ್‌ಯುವಿ ಕಾರು ಆಗಿ ಬೆಂಟ್ಲಿ ಬ್ರ್ಯಾಂಡ್‌‌ ಎಂದು ಗುರುತಿಸಕೊಂಡಿದ್ದು, ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. ಒಳಾಂಗಣ ವಿನ್ಯಾಸ ಕೂಡಾ ಆಕರ್ಷಕವಾಗಿದ್ದು,

ಮಂಗಳೂರಿಗೆ ಬಂತು 6.5 ಕೋಟಿ ರೂ. ನ ಐಷಾರಾಮಿ ಬೆಂಟ್ಲಿ ಕಾರು Read More »

ಕುಕ್ಕೆ: ಸರ್ಪಸಂಸ್ಕಾರ ಸೇರಿದಂತೆ ಎಲ್ಲಾ ಸೇವೆಗಳಿಗೂ ಅವಕಾಶ

ಸುಬ್ರಹ್ಮಣ್ಯ: ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲ ಸೇವೆಗಳನ್ನು ನಿಗದಿತ ಸಂಖ್ಯೆಯಲ್ಲಿ ನಡೆಸಲು ಮತ್ತು ಕೋವಿಡ್‌ ಮುಂಜಾಗ್ರತೆಯೊಂದಿಗೆ ಭಕ್ತರ ಮುಕ್ತ ಪ್ರವೇಶಕ್ಕೆ ಅನುಮತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಿನಕ್ಕೆ 100 ಸರ್ಪ ಸಂಸ್ಕಾರ, 20 ನಾಗಪ್ರತಿಷ್ಠೆ, 4 ಪಂಚಾಮೃತ ಅಭಿಷೇಕಕ್ಕೆ ಅವಕಾಶ ನೀಡಲಾಗಿದೆ. ಪ್ರತಿ ಸೇವೆಯಲ್ಲಿ ಇಬ್ಬರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಆಶ್ಲೇಷ ಬಲಿ ಸೇವೆಯು ಪ್ರತಿ ದಿನ ನಾಲ್ಕು ಪಾಳಿಗಳಲ್ಲಿ ನಡೆಯಲಿದ್ದು, ಒಂದು ಪಾಳಿಯಲ್ಲಿ 70

ಕುಕ್ಕೆ: ಸರ್ಪಸಂಸ್ಕಾರ ಸೇರಿದಂತೆ ಎಲ್ಲಾ ಸೇವೆಗಳಿಗೂ ಅವಕಾಶ Read More »

ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಾಡುಹಗಲೇ‌ ದುಷ್ಕರ್ಮಿಯಿಂದ ಮಹಿಳೆಯರ ಮೇಲೆ ಹಲ್ಲೆ

ಮಂಗಳೂರು: ಅಪರಿಚಿತ ದುಷ್ಕರ್ಮಿಯೊಬ್ಬ ಮೂವರು ಮಹಿಳೆಯರ ಮೇಲೆ ತಲ್ವಾರ್ ದಾಳಿ ನಡೆಸಿದ ಘಟನೆ ನಗರದ ಕರಂಗಲಪಾಡಿ ಬಳಿ ಸೆ.20ರಂದು ನಡೆದಿದೆ. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಒಳಗೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಣ ಮತ್ತು ತರಭೇತಿ ಸಂಸ್ಥೆಯಲ್ಲಿ ಕೆಲಸ ಮಾಡುವ ನಿರ್ಮಲಾ, ರಿನಾ ರಾಯ್, ಗುಣವತಿ ಮೇಲೆ ತಲ್ವಾರ್ ದಾಳಿ ಗೆ ಒಳಗಾದವರು .ಇವರ ಪೈಕಿ ನಿರ್ಮಲಾ ಅವರ ಸ್ಥಿತಿ ಗಂಭೀರವಾಗಿದ್ದು, ಮೂವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ

ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಾಡುಹಗಲೇ‌ ದುಷ್ಕರ್ಮಿಯಿಂದ ಮಹಿಳೆಯರ ಮೇಲೆ ಹಲ್ಲೆ Read More »

ಡಿ.ವಿ ಸದಾನಂದ ಗೌಡರದ್ದು ಎನ್ನಲಾದ ಸೆಕ್ಸ್ ವಿಡಿಯೋ ವೈರಲ್?

ಮಂಗಳೂರು: ರಮೇಶ್ ಜಾರಕಿಹೊಳಿ ಸೆಕ್ಸ್ ವಿಡಿಯೋ ವೈರಲ್ ಆದ ಬಳಿಕ ಕೇಂದ್ರ ಮಾಜಿ ಸಚಿವ, ಬಿಜೆಪಿಯ ಪ್ರಭಾವಿ ಮುಖಂಡ, ರಾಜ್ಯದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರನ್ನು ಹೋಲುವ ವ್ಯಕ್ತಿಯ ನಗ್ನ ದೃಶ್ಯಾವಳಿಯ ವಿಡಿಯೋವೊಂದು ವೈರಲ್ ಆಗಿದೆ. ಕಳೆದ ಹಲವು ವರ್ಷಗಳಿಂದ ಸದಾನಂದ ಗೌಡರ ವಿಡಿಯೋ ಇದೆ ಎಂದು ಸುದ್ದಿ ಹಬ್ಬುತ್ತಿದ್ದು, ಇದೀಗ ನಿಜವಾಗುವ ಮೂಲಕ ಸದಾನಂದ ಗೌಡರು ಕೂಡಾ ರಮೇಶ್ ಜಾರಕಿಹೋಳಿ ಸಾಲಿಗೆ ಸೇರ್ಪಡೆಯಾಗಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ವಿಡಿಯೋದಲ್ಲಿ ಅದು ತೋರಿಸಿ ಇದು ತೋರಿಸಿ ಎಂದು

ಡಿ.ವಿ ಸದಾನಂದ ಗೌಡರದ್ದು ಎನ್ನಲಾದ ಸೆಕ್ಸ್ ವಿಡಿಯೋ ವೈರಲ್? Read More »

ದ.ಕ ಜಿಲ್ಲೆಯಲ್ಲಿ ಪುಣ್ಯಕ್ಷೇತ್ರಗಳಿಗೆ ವಾರಾಂತ್ಯದಲ್ಲೂ ಮುಕ್ತ ಅವಕಾಶ- ಕೋವಿಡ್ ನೆಗೆಟಿವ್ ವರದಿ ಅಗತ್ಯ- ಡಿಸಿ ಆದೇಶ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ಷರತ್ತುಗಳೊಂದಿಗೆ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ಆದರೆ ದೇವಾಲಯಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಡಳಿತ ಮಂಡಳಿಯು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರಬೇಕು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ

ದ.ಕ ಜಿಲ್ಲೆಯಲ್ಲಿ ಪುಣ್ಯಕ್ಷೇತ್ರಗಳಿಗೆ ವಾರಾಂತ್ಯದಲ್ಲೂ ಮುಕ್ತ ಅವಕಾಶ- ಕೋವಿಡ್ ನೆಗೆಟಿವ್ ವರದಿ ಅಗತ್ಯ- ಡಿಸಿ ಆದೇಶ Read More »