ಕಳಚಿದ ಯಕ್ಷರಂಗದ ಕೊಂಡಿ| ಪ್ರಸಿದ್ದ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ
ಸುಳ್ಯ: ಯಕ್ಷರಂಗದ ಮೇರು ಪ್ರತಿಭೆ, ಕಂಚಿನ ಕಂಠದ ಭಾಗವತ ಪದ್ಯಾಣ ಗಣಪತಿ ಭಟ್ ಇಂದು(ಅ.11) ಬೆಳಿಗ್ಗೆ ನಿಧನರಾಗಿದ್ದಾರೆ.ತೆಂಕು ತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ತನ್ನ ಕಂಠದಿಂದ ಪ್ರಸಿದ್ಧಿಯನ್ನು ಹೊಂದಿದ ಪದ್ಯಾಣ ಗಣಪತಿ ಭಟ್ ರವರು ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಪದ್ಯಾಣದವರು. ಹಲವು ದಶಕಗಳಿಂದ ಹಲವು ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಕಲಾ ಸೇವೆ ಮಾಡಿದ್ದಾರೆ. ಪದ್ಯಾಣ’ ಪದವೇ ಸಂಗೀತ ಶೋತೃಗಳಲ್ಲಿ ಸಂಚಲನೆಯನ್ನುಂಟು ಮಾಡುವಂಥದ್ದು, ಪದ್ಯಾಣ ಕುಟುಂಬ ದಲ್ಲಿ ಜನಿಸಿದವರೆಲ್ಲರೂ ಸಂಗೀತ ಅಥವಾ ಯಕ್ಷಗಾನ ಕಲಾವಿದರೆಂಬುದು ವಾಸ್ತವ ಸಂಗತಿ.
ಕಳಚಿದ ಯಕ್ಷರಂಗದ ಕೊಂಡಿ| ಪ್ರಸಿದ್ದ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ Read More »










