ಕರಾವಳಿ

ಮೂಡುಬಿದಿರೆ: ಹಾಸ್ಟೆಲ್ ‌ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

ಮೂಡಬಿದಿರೆ : ವಿದ್ಯಾರ್ಥಿಯೋರ್ವ ಕಾಲೇಜು ಹಾಸ್ಟೇಲ್‌ನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್‌ ಕಾಲೇಜು ಹಾಸ್ಟೆಲ್‌ನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಬೆಳಗಾವಿ ಮೂಲದ ರಜತ್‌ ಸುರೇಶ್‌ ಪಟ್ಟದ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿರುವ ವಿದ್ಯಾರ್ಥಿಯಾಗಿದ್ದಾರೆ. ಸದ್ಯ ವಿದ್ಯಾರ್ಥಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ನಿನ್ನೆ ಸಂಜೆಯ 7 ಗಂಟೆಯ ಸುಮಾರಿಗೆ ಹಾಸ್ಟೇಲ್‌ನಲ್ಲಿ ವಿದ್ಯಾರ್ಥಿಗಳೆಲ್ಲಾ ಅಭ್ಯಾಸ ಮಾಡುತ್ತಿದ್ದರು. ಈ ವೇಳೆಯಲ್ಲಿ ವಿದ್ಯಾರ್ಥಿ ಏಕಾಏಕಿಯಾಗಿ ಹಾಸ್ಟೇಲ್‌ನ 5ನೇ ಮಹಡಿಯಿಂದ […]

ಮೂಡುಬಿದಿರೆ: ಹಾಸ್ಟೆಲ್ ‌ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ Read More »

ನಾಗಾಲೋಟದಲ್ಲಿ ಹೊಸ ಅಡಿಕೆ ಧಾರಣೆ| ಕೃಷಿಕರ ಮೊಗದಲ್ಲಿ ಹೊಸ ಕಳೆ

ಪುತ್ತೂರು: ಮಂಗಳೂರು ಚಾಲಿ ಹೊಸ ಅಡಿಕೆ ಧಾರಣೆ ದಿನೇದಿನೇ ಏರುಗತಿಯತ್ತ ಸಾಗುತ್ತಿದೆ. ಈ ಬೆಳವಣಿಗೆ ಇದೇರೀತಿ ಮುಂದುವರಿದರೆ ಕೆ.ಜಿ. ಅಡಿಕೆ ಬೆಲೆ 500 ದಾಟುವ ನಿರೀಕ್ಷೆಯಿದೆ. ಧಾರಣೆ ಏರಿಕೆಯಿಂದಾಗಿ ಕೃಷಿಕರ ಮೊಗದಲ್ಲಿ ಹೊಸ ಕಳೆ‌ ಮೂಡಿದೆ. ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಯ ಧಾರಣೆ ಏರಿಕೆ ಕಾಣುತ್ತಿದೆ. ಸೋಮವಾರ ಖಾಸಗಿ ಮಾರುಕಟ್ಟೆಯಲ್ಲಿ ಚಾಲಿ ಹೊಸ ಅಡಿಕೆ ಕೆ.ಜಿ.ಗೆ 485- 487ರಲ್ಲಿ ಖರೀದಿಯಾಗಿದೆ. ಕ್ಯಾಂಪ್ಕೋದಲ್ಲಿ ಹೊಸ ಅಡಿಕೆಯ ಧಾರಣೆ ಕೆ.ಜಿ.ಗೆ ರೂ. 480ಕ್ಕೆ ಇತ್ತು. ಕಳೆದ 1

ನಾಗಾಲೋಟದಲ್ಲಿ ಹೊಸ ಅಡಿಕೆ ಧಾರಣೆ| ಕೃಷಿಕರ ಮೊಗದಲ್ಲಿ ಹೊಸ ಕಳೆ Read More »

ಮಂಗಳೂರು ವಿ.ವಿ. : ಸೆ. 30 ರಿಂದ 6ನೇ ಸೆಮಿಸ್ಟರ್ ಪರೀಕ್ಷೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ 6ನೇ ಸೆಮಿಸ್ಟರ್ ಪರೀಕ್ಷೆ ಹಾಗೂ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯನ್ನು ಆಫ್ ಲೈನ್ ಮೂಲಕ ಸೆ. 30 ರಂದು ನಡೆಸಲು ಸೋಮವಾರ ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ನಿರ್ಧರಿಸಿದೆ. ಇನ್ನು ಎರಡು ದಿನದೊಳಗೆ ಈ ಕುರಿತ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದೆ. 1, 3, 5 ನೇ ಸೆಮಿಸ್ಟರ್ ಮೌಲ್ಯಮಾಪನವನ್ನು ಕೂಡಾ ಶೀಘ್ರ ಮುಗಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 6ನೇ ಸೆಮಿಸ್ಟರ್ ಪರೀಕ್ಷೆ ಇನ್ನೂ ನಡೆದಿರುವ ಕಾರಣ ಸುಮಾರು 40 ಸಾವಿರ ವಿದ್ಯಾರ್ಥಿಗಳು

ಮಂಗಳೂರು ವಿ.ವಿ. : ಸೆ. 30 ರಿಂದ 6ನೇ ಸೆಮಿಸ್ಟರ್ ಪರೀಕ್ಷೆ Read More »

ಗತಿ ಇಲ್ಲದವರು ನನ್ನ ಸಾಕಬೇಡಿ – ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

ಪುತ್ತೂರು: ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವ್ಯಕ್ತಿಯೊಬ್ಬರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಡಬದ ಪೇಟೆಯಲ್ಲಿ ಇತ್ತೀಚೆಗೆ ಆಡುಗಳ ಉಪಟಳ ಜಾಸ್ತಿಯಾಗಿದ್ದು,ಆಡು ಸಾಕುವ ಮಂದಿ ಆಡುಗಳನ್ನು ಮೇಯಲು ರಸ್ತೆ ಸಮೀಪವೇ ಬಿಟ್ಟಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ಸಂಚರಿಸುವ ಸವಾರರಿಗೆ ಸಮಸ್ಯೆಯಾಗಿದ್ದು, ಆಡುಗಳಿಂದಾಗಿ ಕೆಲವು ಬೈಕ್ ಗಳ ಅಪಘಾತವೂ ನಡೆದಿದೆ. ಈ ಕುರಿತಂತೆ ಸ್ಥಳೀಯಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದ ಹಿನ್ನಲೆ ಆಡಿನ ಕತ್ತಿಗೆ ಪ್ಲೇ ಕಾರ್ಡ್ ಅಳವಡಿಸಿ ವಿಶೇಷ ಪ್ರತಿಭಟನೆ ಮಾಡಲಾಗಿದ್ದು, ಪ್ಲೇಕಾರ್ಡ್ ನಲ್ಲಿ ಗತಿ

ಗತಿ ಇಲ್ಲದವರು ನನ್ನ ಸಾಕಬೇಡಿ – ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ Read More »

ಸಾಕ್ಷ್ಯ ಹೇಳಲು ಗೈರುಹಾಜರಿ – ಡಿಕೆಶಿಗೆ ಸುಳ್ಯ ಕೋರ್ಟ್ ನಿಂದ ವಾರಂಟ್ ಜಾರಿ

ಸುಳ್ಯ: ವಿದ್ಯುತ್‌ ಸಮಸ್ಯೆ ಬಗ್ಗೆ ಬೆಳ್ಳಾರೆಯ ಸಾಯಿ ಗಿರಿಧರ್‌ ಮತ್ತು ಇಂಧನ ಖಾತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ನಡುವಿನ ಫೋನ್‌ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಬಾರಿ ಸಮನ್ಸ್‌ ಜಾರಿ ಮಾಡಿದ ಬಳಿಕವೂ ನ್ಯಾಯಾಲಯಕ್ಕೆ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಜರಾಗದಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸುಳ್ಯ ನ್ಯಾಯಾಲಯ ವಾರಂಟ್‌ ಜಾರಿ ಮಾಡಿದೆ. ನ್ಯಾಯಾಲಯಕ್ಕೆ ಹಾಜರಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶರು ಡಿ.ಕೆ. ಶಿವಕುಮಾರ್‌ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲು ಐಜಿಪಿ ಮತ್ತು ಡಿಐಜಿಗೆ

ಸಾಕ್ಷ್ಯ ಹೇಳಲು ಗೈರುಹಾಜರಿ – ಡಿಕೆಶಿಗೆ ಸುಳ್ಯ ಕೋರ್ಟ್ ನಿಂದ ವಾರಂಟ್ ಜಾರಿ Read More »

ಸೆ.17ರಿಂದ 8-10, ಹಾಗೂ ಸೆ.20ರಿಂದ 6 ಮತ್ತು 7ನೇ ತರಗತಿಗಳ ಪ್ರಾರಂಭಕ್ಕೆ ದ.ಕ ಜಿಲ್ಲಾಧಿಕಾರಿ ‌ಸೂಚನೆ

ಮಂಗಳೂರು, ಸೆ.13: ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು. ಮಕ್ಕಳಿಗೆ ತೊಂದರೆಯಾಗ ದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಾಲೆಗಳನ್ನು ತೆರೆಯುವ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೆ.17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ, ಸೆ.20ರಂದು 6 ಮತ್ತು 7ನೇ ತರಗತಿಗಳನ್ನು ಆರಂಭಿಸಲು ಸೂಚಿಸಿದರು. ಜೊತೆಗೆ ಎಲ್ಲ ಪ್ರಥಮ ಪಿ.ಯು.ಸಿ ತರಗತಿಗಳನ್ನು ಆರಂಭಿಸಲು ತಿಳಿಸಿದರು.

ಸೆ.17ರಿಂದ 8-10, ಹಾಗೂ ಸೆ.20ರಿಂದ 6 ಮತ್ತು 7ನೇ ತರಗತಿಗಳ ಪ್ರಾರಂಭಕ್ಕೆ ದ.ಕ ಜಿಲ್ಲಾಧಿಕಾರಿ ‌ಸೂಚನೆ Read More »

ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವಾ ಸಿಎ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಶ್ರೇಣಿ

ಮಂಗಳೂರು: ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದೆ. ಇದರಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ದೇಶಕ್ಕೆ ಪ್ರಥಮ ಶ್ರೇಣಿ ಪಡೆದಿದ್ದಾರೆ. ರುತ್ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರಾಂಕ್ ಪಡೆದ ಪ್ರಥಮ ಮಂಗಳೂರಿಗರಾಗಿದ್ದಾರೆ, ಈಕೆ ಮಂಗಳೂರಿನ ರೋಸಿ ಮಾರಿಯಾ ಡಿಸಿಲ್ಲಾ ಮತ್ತು ರಫರ್ಟ್ ಡಿಸಿಲ್ಲಾ ದಂಪತಿಯ ಪುತ್ರಿ. ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಶ್ರೇಣಿ ಪಡೆದ ರುತ್ ಇತಿಹಾಸ ಸೃಷ್ಟಿಸಿದ್ದು, ಕಳೆದ ಕೆಲ ವರ್ಷಗಳಿಂದ ಪರೀಕ್ಷೆಯನ್ನು

ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವಾ ಸಿಎ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಶ್ರೇಣಿ Read More »

ವೇಣೂರು: ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ

ಮೂಡುಬಿದಿರೆ: ವೇಣೂರು‌ ಸಮೀಪದ ಮರೋಡಿ ಗ್ರಾಮದ ಪಲಾರ ನಿವಾಸಿ, ಬಿಜೆಪಿ ಮುಖಂಡ ರಾಮ ಪ್ರಸಾದ್‌‌ ಮರೋಡಿ (37) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ,13ರ ಸೋಮವಾರದಂದು ನಿಧನರಾಗಿದ್ದಾರೆ. ರಾಮ ಪ್ರಸಾದ್‌ ಅವರು ಕೆಲ ದಿನಗಳ ಹಿಂದೆ ಜಾಂಡಿಸ್‌ ಖಾಯಿಲೆಯಿಂದ ಬಳಲುತ್ತಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರಾಮ್‌ ಪ್ರಸಾದ್‌ ಅವರು ಬಜರಂಗದಳದ ಮೇಣೂರು ಪ್ರಖಂಡ ಸಂಚಾಲಕರಾಗಿದ್ದರು. ಇವರು ಪಲಾರಗೋಳಿ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ

ವೇಣೂರು: ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ Read More »

ನೆಲ್ಯಾಡಿ: ಉದನೆಯ ಗಣಪತಿಕಟ್ಟೆಗೆ ಹಾನಿಗೊಳಿಸಿದ ಕಿಡಿಗೇಡಿಗಳು| ಸ್ಥಳಕ್ಕೆ ಹಿಂದೂ ಮುಖಂಡರು ದೌಡು|

ನೆಲ್ಯಾಡಿ: ಇಲ್ಲಿಗೆ ಸಮೀಪದ ಉದನೆಯ ಗಣಪತಿ ಕಟ್ಟೆಯನ್ನು ಕಿಡಿಗೇಡಿಗಳು ಹಾನಿಗೊಳಿಸಿರುವ ಘಟನೆ ಸೆ.10 ರ ರಾತ್ರಿ ನಡೆದಿದೆ. ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸೆ.10ರಂದು ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಆದರೆ ರಾತ್ರಿ ವೇಳೆ ಕಿಡಿಗೇಡಿಗಳು ಬಾಳೆಗಿಡಗಳನ್ನು ಹಾಳುಮಾಡಿ ಮೆಟ್ಟಿಲನ್ನು ಹಾನಿಗೊಳಿಸಿದ್ದಾರೆ. ಕಲ್ಲು ಎತ್ತಿಹಾಕಿ ಮೆಟ್ಟಿಲು ಹಾಗೂ ಮೆಟ್ಟಿಲಿನ ಬದಿಗಳನ್ನು ಹಾನಿಗೊಳಿಸಿರುವುದಾಗಿ ವರದಿಯಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ನೆಲ್ಯಾಡಿ: ಉದನೆಯ ಗಣಪತಿಕಟ್ಟೆಗೆ ಹಾನಿಗೊಳಿಸಿದ ಕಿಡಿಗೇಡಿಗಳು| ಸ್ಥಳಕ್ಕೆ ಹಿಂದೂ ಮುಖಂಡರು ದೌಡು| Read More »

ಪಣಂಬೂರು: ದೋಣಿ ದುರಂತ – ನಾಲ್ವರು ಮೀನುಗಾರರ ರಕ್ಷಣೆ , ಓರ್ವ ನಾಪತ್ತೆ

ಮಂಗಳೂರು: ಪಣಂಬೂರು ಸಮುದ್ರ ತೀರದಲ್ಲಿ ದೋಣಿ ದುರಂತ ಸಂಭವಿಸಿ ಮೀನುಗಾರರು ನೀರುಪಾಲಾದ ಘಟನೆ ನಡೆದಿದೆ. ಅಝರ್ ಎಂಬವರ ಮಾಲಕತ್ವದ ಗಿಲ್ ನೆಟ್ ಬೋಟ್ ಇದಾಗಿದ್ದು ಅವಘಡ ಸಂಭವಿಸಿ ಮೀನುಗಾರರು ನೀರುಪಾಲಾಗಿದ್ದು ಈ ಪೈಕಿ ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ಎಂಬ ನಾಲ್ವರು ಮೀನುಗಾರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಪೈಕಿ ಓರ್ವ ನಾಪತ್ತೆಯಾಗಿದ್ದು ಆತನನ್ನು ಶರೀಫ್ ಎಂದು ಗುರುತಿಸಲಾಗಿದೆ. ಸದ್ಯ ದೋಣಿಯನ್ನು ದಡಕ್ಕೆ ತರಲಾಗಿದೆ.

ಪಣಂಬೂರು: ದೋಣಿ ದುರಂತ – ನಾಲ್ವರು ಮೀನುಗಾರರ ರಕ್ಷಣೆ , ಓರ್ವ ನಾಪತ್ತೆ Read More »