ಕರಾವಳಿ

ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಕೊಂಕಣ್ ರೈಲ್ವೆ ಯಿಂದ ವಿಶೇಷ ಟ್ರಿಪ್

ಉಡುಪಿ: ಗಣೇಶ ಚತುರ್ಥಿ ಪ್ರಯುಕ್ತ ಕೊಂಕಣ ರೈಲ್ವೆ 224 ವಿಶೇಷ ಟ್ರಿಪ್ ಗಳನ್ನು ಪ್ರಾರಂಭಿಸಿ, ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದ ಕೊರೋನಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿದೆ. ಪ್ರತಿಯೊಂದು ರೈಲ್ವೆ ನಿಲ್ದಾಣದಲ್ಲಿ ನಿರ್ಗಮನ ಪ್ರಯಾಣಿಕರ ಉಷ್ಣತೆ ಪರಿಶೀಲನೆ, ಪ್ರಥಮ-ಚಿಕಿತ್ಸಾ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ, ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಮುಖ ನಿಲ್ದಾಣಗಳಲ್ಲಿ ಆಹಾರ ಮಳಿಗೆಗಳನ್ನು ತೆರೆಯಲು ಹಾಗೂ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಆರ್ ಪಿಎಫ್ ಸಿಬ್ಬಂದಿಯೊಂದಿಗೆ ಹೆಚ್ಚುವರಿ ರೈಲ್ವೆ ಭದ್ರತಾ ಸಿಬ್ಬಂದಿಯನ್ನು ಜನಸಂದಣಿ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಮತ್ತು ಭದ್ರತಾ […]

ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಕೊಂಕಣ್ ರೈಲ್ವೆ ಯಿಂದ ವಿಶೇಷ ಟ್ರಿಪ್ Read More »

ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ದೌರ್ಜನ್ಯ – ನೊಂದ ಶಿಕ್ಷಕ ದಂಪತಿಗಳು ನ್ಯಾಯಕ್ಕಾಗಿ ಮೊರೆ

ಪುತ್ತೂರು: ಪುತ್ತೂರು ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ಮರ,ಮರಳು ಲೂಟಿಕೋರರು ತಕರಾರು ಎತ್ತಿ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ನೊಂದ ಶಿಕ್ಷಕ ದಂಪತಿಗಳು ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾರೆ. ಕಡಬ ತಾಲೂಕಿನ ಕಾಣಿಯೂರಿನ ನಿವಾಸಿಗಳಾದ ಶಿವರಾಮ ಗೌಡ ಮತ್ತು ಬೇಬಿ ದೌರ್ಜನ್ಯಕ್ಕೊಳಗಾದವರು, ವೃತ್ತಿಯಲ್ಲಿ ಶಿಕ್ಷಕರಾಗಿರುವ ಇವರು ತಮ್ಮ ಸುರಕ್ಷತೆಗಾಗಿ ಮನೆಯ ಮುಂದೆ ವರ್ಷಗಳ ಹಿಂದೆ ಸಿಸಿ ಕ್ಯಾಮರಾ ಆಳವಡಿಸಿದ್ದರು. ಆದರೆ ಈ ಭಾಗದಲ್ಲಿ ಅಕ್ರಮವಾಗಿ ಮರ, ಮರಳು ದಂಧೆ ಹೆಚ್ಚಾಗಿ ನಡೆಯುತ್ತಿದ್ದು

ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ದೌರ್ಜನ್ಯ – ನೊಂದ ಶಿಕ್ಷಕ ದಂಪತಿಗಳು ನ್ಯಾಯಕ್ಕಾಗಿ ಮೊರೆ Read More »

ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ ಪ್ರಕರಣ – ವಿಹಿಂಪದಿಂದ ಲವ್ ಜಿಹಾದ್ ಆರೋಪ

ಮಂಗಳೂರು: ನಗರದ ಬಲ್ಲಾಳ್‌ಬಾಗ್‌ನಿಂದ ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ ನಗದು ಸಹಿತ ನಾಪತ್ತೆಯಾದ ಘಟನೆಯೂ ಲವ್ ಜಿಹಾದ್ ಪ್ರಕರಣವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. ಮೂಲತಃ ಗದಗ ನಿವಾಸಿಗಳಾಗಿದ್ದು, ಬರ್ಕೆ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಚ್‌ಮನ್‌ ಆಗಿರುವ ಯಶೋಧಾ ಎಂಬವರ ಪುತ್ರಿ ರೇಷ್ಮಾ ( 21) ಅವರ ನಿಶ್ಚಿತಾರ್ಥ ಆ. 21 ರಂದು ನಡೆದಿದ್ದು, ನಿಶ್ಚಿತಾರ್ಥ ಸಂದರ್ಭ ಗಂಡಿನ ಮನೆಯವರು ನೀಡಿದ ಚಿನ್ನಾಭರಣ ಸಮೇತ ನಾಪತ್ತೆಯಾಗಿದ್ದರು. ಈ ಪ್ರಕರಣವನ್ನು ವಿಹಿಂಪ ಖಂಡಿಸುತ್ತದೆ. ಯುವತಿ ನಾಪತ್ತೆಯಾದ ಮನೆಗೆ

ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ ಪ್ರಕರಣ – ವಿಹಿಂಪದಿಂದ ಲವ್ ಜಿಹಾದ್ ಆರೋಪ Read More »

ಮಂಗಳೂರು: ಮಗಳು ಮಾಡಿದ ತಪ್ಪಿಗೆ ಮೊಮ್ಮಗಳನ್ನು ‘ಜಿಹಾದ್’ ಬಲೆಗೆ ಬೀಳಿಸಿದ ಅಜ್ಜ| ನಿಶ್ಚಿತಾರ್ಥವಾಗಿ ಪರಾರಿಯಾದ ಯುವತಿಯ ಅಸಲಿ ಕಥೆ ಬಲು ವಿಚಿತ್ರ

ಮಂಗಳೂರು: ಕರಾವಳಿಯಲ್ಲಿ ಲವ್‌ ಜಿಹಾದ್‌ ಎಂಬ ಶಬ್ದ ಭಾರಿ ಬೆಳಕಿಗೆ ಬರುತ್ತಿದೆ. ಮುಸ್ಲಿಂ ಹುಡುಗರು, ಹಿಂದೂ ಯುವತಿಯರನ್ನು ಪ್ರೇಮದ ಬಲೆಗೆ ಸಿಲುಕಿಸಿ ನಂತರ ಮದುವೆಯ ಹೆಸರಿನಲ್ಲಿ ಹೆಣ್ಣುಮಕ್ಕಳ ಧರ್ಮ ಬದಲಿಸಿ ಮೋಸ ಮಾಡುತ್ತಿದ್ದಾರೆ ಎಂಬ ಆರೋಪ ಸಾಕಷ್ಟಿದೆ. ಆದರೆ ಮಂಗಳೂರಿನಲ್ಲೊಂದು ಕುತೂಹಲದ ವಿಚಿತ್ರ ಲವ್ ಜಿಹಾದ್ ನಡೆದಿದೆ. ಹಳೆಯ ಸೇಡು ತೀರಿಸಿಕೊಳ್ಳಲು ಮಗಳ ಮಗಳನ್ನೇ ರಾತ್ರೋರಾತ್ರಿ ಎತ್ತಾಕೊಂಡು ಹೋಗಿರುವ ಘಟನೆ ನಡೆದಿದೆ.ಮುಸ್ಲಿಂ ಧರ್ಮದ ಯುವತಿ ಹಿಂದೂ ಧರ್ಮದ ಯುವಕನನ್ನು ಮದುವೆಯಾಗಿದ್ದಾಳೆ ಎನ್ನುವ ಕಾರಣ, ಸುಮಾರು 22 ವರ್ಷ

ಮಂಗಳೂರು: ಮಗಳು ಮಾಡಿದ ತಪ್ಪಿಗೆ ಮೊಮ್ಮಗಳನ್ನು ‘ಜಿಹಾದ್’ ಬಲೆಗೆ ಬೀಳಿಸಿದ ಅಜ್ಜ| ನಿಶ್ಚಿತಾರ್ಥವಾಗಿ ಪರಾರಿಯಾದ ಯುವತಿಯ ಅಸಲಿ ಕಥೆ ಬಲು ವಿಚಿತ್ರ Read More »

ಇನ್ನೆರಡು ತಿಂಗಳು ದೇವರ ನಾಡಿಗೆ ಹೋಗುವಂತಿಲ್ಲ| ಕೇರಳಕ್ಕೆ ಹೋಗುವುದು, ಬರುವುದು ನಿರ್ಬಂಧಿಸಿ ದ.ಕ ಡಿಸಿ ಆದೇಶ|

ಮಂಗಳೂರು : ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಸಂಪೂರ್ಣವಾಗಿ ಎರಡು ತಿಂಗಳ ಕಾಲ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ

ಇನ್ನೆರಡು ತಿಂಗಳು ದೇವರ ನಾಡಿಗೆ ಹೋಗುವಂತಿಲ್ಲ| ಕೇರಳಕ್ಕೆ ಹೋಗುವುದು, ಬರುವುದು ನಿರ್ಬಂಧಿಸಿ ದ.ಕ ಡಿಸಿ ಆದೇಶ| Read More »

ಮೇಯಲು ಬಿಟ್ಟ ಎಮ್ಮೆಗೆ ಗುಂಡಿಕ್ಕಿದ ಕಿಡಿಗೇಡಿಗಳು| ಮತ್ತೊಂದು ಅಮಾನವೀಯ ಘಟನೆಗೆ ಸಾಕ್ಷಿಯಾದ ಕರಾವಳಿ|

ಬೆಳ್ತಂಗಡಿ : ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡುಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಫಲಸ್ತಡ್ಕ ಎಂಬಲ್ಲಿ ನಡೆದಿದೆ. ಹೊಸ್ತೋಟ ವಾಳ್ಯದ ಅರೆಕ್ಕಲ್ ಮಹಾದೇವ ಭಟ್ ಎಂಬವರ ಹಾಲು ಕರೆಯುವ ಸುಮಾರು 10 ವರ್ಷ ಪ್ರಾಯದ ಎಮ್ಮೆಯನ್ನು ಮನೆ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ತಡರಾತ್ರಿವರೆಗೂ ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದಾಗ ಸಮೀಪದ ಫಲಸ್ತಡ್ಕ ಎಂಬಲ್ಲಿ ಮಂಗಳವಾರ ಮೃತದೇಹ ಪತ್ತೆಯಾಗಿದೆ. ಎಮ್ಮೆಯ ಮೈಮೇಲೆ ಗುಂಡಿನ ಗಾಯಗಳು ಕಂಡುಬಂದಿದ್ದು ಬೇಟೆಗಾರರ ಗುಂಡೇಟಿಗೆ ಬಲಿಯಾಗಿದೆಯೇ

ಮೇಯಲು ಬಿಟ್ಟ ಎಮ್ಮೆಗೆ ಗುಂಡಿಕ್ಕಿದ ಕಿಡಿಗೇಡಿಗಳು| ಮತ್ತೊಂದು ಅಮಾನವೀಯ ಘಟನೆಗೆ ಸಾಕ್ಷಿಯಾದ ಕರಾವಳಿ| Read More »

ಸುಳ್ಯ: ಜಿ.ಪಂ ಸದಸ್ಯೆ ಮೇಲೆ ಹಲ್ಲೆ ಪ್ರಕರಣ| ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಸೇರಿ 14 ಮಂದಿಗೆ 2 ವರ್ಷ ಜೈಲು|

ಸುಳ್ಯ: 2014ರ ಚುನಾವಣೆ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಮರ್ಕಂಜದ ಕುದ್ಕುಳಿ ಎಂಬಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಸರಸ್ವತಿ ಕಾಮತ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಇತರ 14 ಮಂದಿಗೆ ಸುಳ್ಯ ನ್ಯಾಯಾಲಯ ಜೈಲುವಾಸದ ತೀರ್ಪು ನೀಡಿದೆ. ಹರೀಶ್ ಕಂಜಿಪಿಲಿ ಮತ್ತು ಇತರ 14 ಮಂದಿ ಮದುವೆ ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದಾಗ ತನ್ನ ವಾಹನವನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದಲ್ಲದೆ ಕಾಲಿನಿಂದ ತನ್ನ

ಸುಳ್ಯ: ಜಿ.ಪಂ ಸದಸ್ಯೆ ಮೇಲೆ ಹಲ್ಲೆ ಪ್ರಕರಣ| ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಸೇರಿ 14 ಮಂದಿಗೆ 2 ವರ್ಷ ಜೈಲು| Read More »

ಸುಳ್ಯ: ಸಂಬಂಧಿಕನೆಂದು ಬಂದವನು ಪತ್ನಿಯ ಜೊತೆ ಸಂಬಂಧ ಬೆಳೆಸಿ ಕರೆದೊಯ್ದ| ಅವನೊಂದಿಗೆ ಹೋದವಳು ಠಾಣೆಗೆ ಬಂದು ಹೇಳಿದ್ದೇನು? ಉಂಡೂಹೋದ ಕೊಂಡೂ ಹೋದ…!

ಸುಳ್ಯ: ಮಹಿಳೆಯೋರ್ವಳು ತನ್ನ ಮಕ್ಕಳೊಂದಿಗೆ ಪರಿಚಿತ ಯುವಕನೊಂದಿಗೆ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ಸೋಮವಾರ ಸಂಜೆ ಸುಳ್ಯ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಪತಿಯೊಂದಿಗೆ ತೆರಳಲು ಅಸಮ್ಮತಿ ಸೂಚಿಸಿರುವುದಾಗಿ ತಿಳಿದುಬಂದಿದೆ. ಸುಳ್ಯ ಜಯನಗರ ಕೊಯಿಂಗೋಡಿ ಸಮೀಪದ ನಿವಾಸಿ ಸಮಿತ್(ಸಂಧ್ಯಾ) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಸಂಬಂಧಿಕನೆಂದು ಮನೆಗೆ ಬರುತ್ತಿದ್ದ ಪ್ರದೀಪ್ ಎಂಬ ಯುವಕನೊಂದಿಗೆ ಪರಾರಿಯಾಗಿದ್ದಾಳೆಂದು ಆಕೆಯ ಪತಿ ಮನೋಜ್ ಸುಳ್ಯ ಠಾಣೆಗೆ ದೂರು ನೀಡಿದ ಹಿನ್ನಲೆಯಲ್ಲಿ ಸುಳ್ಯ ಠಾಣಾ ಉಪನಿರೀಕ್ಷಕ ಎಂ.ಆರ್.ಹರೀಶ್‌ರವರು ಪ್ರದೀಪ್ ಹಾಗೂ ಸಂದ್ಯಾಳನ್ನು ಠಾಣೆಗೆ

ಸುಳ್ಯ: ಸಂಬಂಧಿಕನೆಂದು ಬಂದವನು ಪತ್ನಿಯ ಜೊತೆ ಸಂಬಂಧ ಬೆಳೆಸಿ ಕರೆದೊಯ್ದ| ಅವನೊಂದಿಗೆ ಹೋದವಳು ಠಾಣೆಗೆ ಬಂದು ಹೇಳಿದ್ದೇನು? ಉಂಡೂಹೋದ ಕೊಂಡೂ ಹೋದ…! Read More »

ಸುಳ್ಯ| ನಾಪತ್ತೆಯಾಗಿ ಎರಡು ದಿನ ಕಳೆದರೂ‌ ಪತ್ತೆಯಾಗದ ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ| ಸಾಲಬಾಧೆಯಿಂದ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾದರಾ ರಾಜೇಶ್ ಗುಂಡಿಗದ್ದೆ?

ಸುಳ್ಯ : ಬೆಳ್ಳಾರೆಯ ಉದ್ಯಮಿ ರಾಜೇಶ್ ಗುಂಡಿಗದ್ದೆ (47) ಯವರು ಸೆ. 4 ರಿಂದ ಮನೆಗೆ ಬಾರದೇ ನಾಪತ್ತೆಯಾಗಿರುವ ಬಗ್ಗೆ ಅವರ ಪತ್ನಿ ವಿನಯಶ್ರೀಯವರು ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎರಡು ದಿನ ಕಳೆದರೂ ಪತ್ತೆಯಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸೆ. 5 ರಂದು ರಾಜೇಶ್ ಪತ್ನಿ ವಿನಯಶ್ರೀ ಅವರು ಠಾಣೆಗೆ ದೂರು ನೀಡಿದ್ದು, ಸುಳ್ಯ ಪೇಟೆಗೆ ಬರುವುದಾಗಿ ಹೇಳಿ ಹೋದವರು ಮನೆಗೆ ಬಾರದೆ, ಫೋನ್ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿರುವುದಾಗಿ ಅದರಲ್ಲಿ ತಿಳಿಸಲಾಗಿದೆ.

ಸುಳ್ಯ| ನಾಪತ್ತೆಯಾಗಿ ಎರಡು ದಿನ ಕಳೆದರೂ‌ ಪತ್ತೆಯಾಗದ ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ| ಸಾಲಬಾಧೆಯಿಂದ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾದರಾ ರಾಜೇಶ್ ಗುಂಡಿಗದ್ದೆ? Read More »

ಉಪ್ಪಿನಂಗಡಿ‌| ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಭೀಕರ ಅಪಘಾತ| ಯಮಸ್ವರೂಪಿಯಾದ ಲಾರಿ ಹಾಗೂ ಕಂಟೈನರ್| ಇಬ್ಬರು ದುರ್ಮರಣ

ಉಪ್ಪಿನಂಗಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಹಾಗೂ ನೆಲ್ಯಾಡಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕ ಸೇರಿ‌ ಇಬ್ಬರು ದುರ್ಮರಣ ಹೊಂದಿದ್ದಾರೆ. ಉಪ್ಪಿನಂಗಡಿಯ ಬೈಪಾಸ್ ನಲ್ಲಿ ಬುಲೆಟ್ ಟ್ಯಾಂಕರ್ ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅಪಘಾತವೂ ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇದೇ ಹೆದ್ದಾರಿಯ ನೆಲ್ಯಾಡಿ ಸಮೀಪ ಲಾರಿ ಹಾಗೂ

ಉಪ್ಪಿನಂಗಡಿ‌| ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಭೀಕರ ಅಪಘಾತ| ಯಮಸ್ವರೂಪಿಯಾದ ಲಾರಿ ಹಾಗೂ ಕಂಟೈನರ್| ಇಬ್ಬರು ದುರ್ಮರಣ Read More »