ಕರಾವಳಿ

ಬಿಸಿ ಬಿಸಿ ಪಾಯಸ ತಿಂದು ಬಾಯಿ ಸುಟ್ಕೋತೀರಾ? ತಣಿಯೋವರೆಗೂ ಕಾಯ್ಬೇಕಲ್ವೇ? ಡಿ.ಸಿ ರಾಜೇಂದ್ರ ಆಡಿಯೊ ವೈರಲ್

ಮಂಗಳೂರು, ಸೆ.5 : ಪಾಯಸ ಆಗೋವರೆಗೆ ಇದ್ದವರು ಆರೋ ತನಕ ಇರಬಾರದೇ ? ಪಾಯಸ ಆಗಿದೆ, ಅದನ್ನು ಬಿಸಿ ಬಿಸಿ ಇರುವಾಗಲೇ ತಿಂದ್ಬಿಟ್ಟು ಬಾಯಿ ಸುಟ್ಟುಕೊಳ್ಳೋದು ಯಾಕೆ ? ಹೀಗೆಂದು ಗಾದೆ ಮಾತಿನ ಮೂಲಕ ದಕ್ಷಿಣ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ವೀಕೆಂಡ್ ಕರ್ಫ್ಯೂ ಬಗ್ಗೆ ಪ್ರಶ್ನಿಸಿ ಕರೆ ಮಾಡಿದ ವ್ಯಕ್ತಿಗೆ ಸಮಾಧಾನ ಚಿತ್ತದಿಂದ ಉತ್ತರಿಸಿದ ಆಡಿಯೋ ಈಗ ವೈರಲ್ ಆಗಿದೆ. ರೆಡಿಮೇಡ್ ಬಟ್ಟೆ, ಫ್ಯಾನ್ಸಿ, ಚಪ್ಪಲಿ ಮಾರಾಟದ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಂತೋಷ್ ಕಾಮತ್ ಅನ್ನುವವರು […]

ಬಿಸಿ ಬಿಸಿ ಪಾಯಸ ತಿಂದು ಬಾಯಿ ಸುಟ್ಕೋತೀರಾ? ತಣಿಯೋವರೆಗೂ ಕಾಯ್ಬೇಕಲ್ವೇ? ಡಿ.ಸಿ ರಾಜೇಂದ್ರ ಆಡಿಯೊ ವೈರಲ್ Read More »

ಪುತ್ತೂರು| ರೈಲ್ವೆ ಜಾಯಿಂಟ್ ಕದಿಯುತ್ತಿದ್ದ ಖದೀಮರ ಬಂಧನ| ಇದರ ಹಿಂದೆ ವಿಧ್ವಂಸಕ ಕೃತ್ಯವಿತ್ತೇ…?

ಪುತ್ತೂರು, ಸೆ.5 : ರೈಲ್ವೇ ಹಳಿಗೆ ಅಳವಡಿಸಿರುವ ಜಾಯಿಂಟ್ ಕ್ಲಿಪ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಸುಮಾರು ಒಂದು ತಿಂಗಳಿನಿಂದ ರೈಲು ಹಳಿಯಿಂದ ಕಬ್ಬಿಣದ ಕ್ಲಿಪ್​ಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮಫ್ತಿಯಲ್ಲಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದರು. ಶನಿವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಮಫ್ತಿಯಲ್ಲಿದ್ದ ರೈಲ್ವೇ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ

ಪುತ್ತೂರು| ರೈಲ್ವೆ ಜಾಯಿಂಟ್ ಕದಿಯುತ್ತಿದ್ದ ಖದೀಮರ ಬಂಧನ| ಇದರ ಹಿಂದೆ ವಿಧ್ವಂಸಕ ಕೃತ್ಯವಿತ್ತೇ…? Read More »

ಕಡಬ: ಮಹಿಳೆಯ ಮೇಲೆ ವ್ಯಕ್ತಿಯಿಂದ ಹಲ್ಲೆ ಆರೋಪ| ಆಸ್ಪತ್ರೆಗೆ ದಾಖಲಾದ ಇತ್ತಂಡಗಳು|

ಕಡಬ: ಇಲ್ಲಿನ ಮುಳಿಮಜಲು ಎಂಬಲ್ಲಿ ಗೂಡಂಗಡಿ ವ್ಯಾಪಾರಸ್ಥೆಯೋರ್ವರ ಮೇಲೆ ಅಲ್ಲೇ ಪಕ್ಕದಲ್ಲಿ ಅಂಗಡಿ ನಡೆಸುತ್ತಿರುವ ವ್ಯಕ್ತಿಯೋರ್ವರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿ ಈ ಸಂಬಂಧ ಇತ್ತಂಡದ ಐವರು ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಸೆ.5ರಂದು ನಡೆದಿದೆ. ಮುಳಿಮಜಲಿನಲ್ಲಿ ಗೂಡಂಗಡಿ ವ್ಯಾಪಾರ ನಡೆಸುತ್ತಿರುವ ಜಗನ್ನಾಥ ಎಂಬವರ ಪತ್ನಿ ಪ್ರಮೋದ ಎಂಬವರ ಮೇಲೆ ಸಮೀಪದಲ್ಲಿ ಮಾಂಸದಂಗಡಿ ನಡೆಸುತ್ತಿರುವ ರಾಜುಮ್ಯಾಥ್ಯೂ ಎಂಬವರು ವೀಡಿಯೋ ಮಾಡಿ ಹಲ್ಲೆ ನಡೆಸಿದ್ದಾರೆ ,ಅಲ್ಲದೆ ರಕ್ಷಣೆಗೆ ಬಂದ ತನ್ನ ಮಗಳ ಮೇಲೆ ಕೈ

ಕಡಬ: ಮಹಿಳೆಯ ಮೇಲೆ ವ್ಯಕ್ತಿಯಿಂದ ಹಲ್ಲೆ ಆರೋಪ| ಆಸ್ಪತ್ರೆಗೆ ದಾಖಲಾದ ಇತ್ತಂಡಗಳು| Read More »

ಅಮ್ಮನ ನೆನಪಿಗಾಗಿ ಗುಡಿಕಟ್ಟಿದ ಮಗ| ಕಾಪುವಿನ ಈ ತಾಯಿ ಈಗ ಗುಡಿಯೊಳಗಿನ ದೇವತೆ

ಉಡುಪಿ: ತಾಯಿ, ಹಿರಿಯರ ನೆನಪಿಗಾಗಿ ಕಾಪು ಗರಡಿ ರಸ್ತೆಯ ಬದಿಯಲ್ಲಿರುವ ನವದುರ್ಗಾ ಲಕ್ಷ್ಮೀ ನಿವಾಸ್ ಮನೆಯ ಆವರಣದಲ್ಲಿ ಮಗನೋರ್ವ ಗುಡಿಕಟ್ಟಿದ್ದು, ತಾಯಿಯ ಶ್ರೇಷ್ಟತೆಯನ್ನು ಲೋಕಕ್ಕೆ ಸಾರಿರುವ ವಿಶೇಷ ಕಾರ್ಯ ವೈರಲ್ ಆಗಿದೆ. ಶ್ರೀ ಬ್ರಹ್ಮ ಬೈದರ್ಕಳ ಪೊಯ್ಯ ಪೊಡಿಕಲ್ಲ ಗರೊಡಿಯ ಗರಡಿ ಮನೆಯ ಸದಸ್ಯರಾದ ಗೀತಾ ಯಾದವ್ ಪೂಜಾರಿ , ಅವರ ತಾಯಿ ಕಲ್ಯಾಣಿ ಬಾಯಿ ಪೂಜಾರಿ, ಮುತ್ತಜ್ಜಿ ಮುತ್ತಕ್ಕ ಬೈದಿ ಪೂಜಾರ್‍ತಿ ಅವರ ಮೂರ್ತಿಯನ್ನು ಕೆತ್ತಿಸಿ, ಗುಡಿಯೊಳಗೆ ಪ್ರತಿಷ್ಠಾಪನೆ ಮಾಡಿಸಿದ್ದಾರೆ. ಮುಂಬೈ ಮಹಾನಗರದಲ್ಲಿ ಕಾಂಗ್ರೆಸ್ ಪಕ್ಷದ

ಅಮ್ಮನ ನೆನಪಿಗಾಗಿ ಗುಡಿಕಟ್ಟಿದ ಮಗ| ಕಾಪುವಿನ ಈ ತಾಯಿ ಈಗ ಗುಡಿಯೊಳಗಿನ ದೇವತೆ Read More »

ಬಂಟ್ವಾಳ: ಬಾಲಕನ ಬಲಿ ಪಡೆದ ಕಲ್ಲಿನ ಕೋರೆ

ಬಂಟ್ವಾಳ: ನೀರು ತುಂಬಿದ್ದ ಕಲ್ಲಿನ ಕೋರೆಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರೆಕಾಡಿನಲ್ಲಿ ನಡೆದಿದೆ. ಸಾಧಿಕ್ ಎಂಬವರ ಪುತ್ರ 6ನೇ ತರಗತಿ ವಿದ್ಯಾರ್ಥಿ ಸವಾದ್ (12) ಮೃತ ಬಾಲಕ. ಈತ ಮತ್ತು ಸ್ಥಳೀಯ ಮಕ್ಕಳು ಸೇರಿಕೊಂಡು ಕೆಂಪು ಕಲ್ಲಿನ ಕೋರೆ ಬಳಿ ಆಟವಾಡುತ್ತಿದ್ದರು. ಇದೇ ವೇಳೆ ಸವಾದ್ ಎಂಬಾತ ಕಾಲು ಜಾರಿ ನೀರು ತುಂಬಿದ್ದ ಕಲ್ಲಿನ ಕೋರೆಯ ಗುಂಡಿಗೆ ಬಿದ್ದಿದ್ದಾನೆ. ತಕ್ಷಣ ಜೊತೆಗಿದ್ದ ಬಾಲಕರು ಆತನ ಮನೆಯವರಿಗೆ ಮಾಹಿತಿ ತಿಳಿಸಿದ್ದಾರೆ.

ಬಂಟ್ವಾಳ: ಬಾಲಕನ ಬಲಿ ಪಡೆದ ಕಲ್ಲಿನ ಕೋರೆ Read More »

ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಡಿಒ ಸಾವು

ಬಂಟ್ವಾಳ: ಎರಡು ದಿನದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ. ಪಿಡಿಒ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತ ಪಟ್ಟಿದ್ದಾರೆ ಪಂಚಾಯತ್ ಆಭಿವೃದ್ಧಿ ಅಧಿಕಾರಿ ಶಿವು ಮೃತಪಟ್ಟವರು. ಇವರು ಕಳೆದ ಎರಡು ದಿನದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಬಳಿಕ ತುಂಬೆ ಆಸ್ಪತ್ರೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು.ಆದರೆ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದು ಶುಕ್ರವಾರ ಮೃತಪಟ್ಟಿದ್ದಾರೆ.

ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಡಿಒ ಸಾವು Read More »

ಕಡಬ| ಪೊಲೀಸ್ ‌ವಾಹನ ಹಾಗೂ ಖಾಸಗಿ ಬೊಲೆರೋ ಡಿಕ್ಕಿ| ಎಸ್ ಐ ರುಕ್ಮನಾಯ್ಕ್ ಅಪಾಯದಿಂದ ಪಾರು

ಕಡಬ: ಎಸ್ ಐ ಸಹಿತ ಪೊಲೀಸರು ಪ್ರಯಾಣಿಸುತ್ತಿದ್ದ ಜೀಪು ಹಾಗೂ ಖಾಸಗಿ ಬೊಲೆರೋ ಮಧ್ಯೆ ಕಡಬ ಸಮೀಪದ ಕಳಾರ ಎಂಬಲ್ಲಿ ಸೆ.4ರಂದು ಬೆಳಿಗ್ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ . ಅಪಘಾತದಲ್ಲಿ ಎರಡು ವಾಹನಗಳು ನುಜ್ಜುಗುಜ್ಜಾಗಿದ್ದು ಕಡಬ ಠಾಣಾ ಎಸ್ ಐ ರುಕ್ಮನಾಯ್ಕ್ ಸಹಿತ ಪೊಲೀಸರು ಹಾಗೂ ಇನ್ನೊಂದು ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಡಬ ಎಸ್.ಐ. ರುಕ್ಮ ನಾಯ್ಕ್ ಪೊಲೀಸ್ ಜೀಪ್ ನಲ್ಲಿ ಪ್ರಯಾಣಿಸುತ್ತಿದ್ದರು. ಅವರ ಸಹಿತ ಕಡಬದ ಪೊಲೀಸ್‌ ಜೀಪಿನ ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು

ಕಡಬ| ಪೊಲೀಸ್ ‌ವಾಹನ ಹಾಗೂ ಖಾಸಗಿ ಬೊಲೆರೋ ಡಿಕ್ಕಿ| ಎಸ್ ಐ ರುಕ್ಮನಾಯ್ಕ್ ಅಪಾಯದಿಂದ ಪಾರು Read More »

ಪುತ್ತೂರು:ವೀಕೆಂಡ್ ‌ಕರ್ಪ್ಯೂ ವಿರುದ್ದ ಸೆಟೆದು ನಿಂತರೆ ಕಠಿಣ ಕ್ರಮ – ಎಸಿ ಖಡಕ್ ಆದೇಶ

ಪುತ್ತೂರು: ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು, ಈ ವೇಳೆ ಅಂಗಡಿ ಮುಂಗಟ್ಟು ತೆರೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಸಹಾಯಕ ಕಮಿಷನರ್ ಅವರು ಉಪ ವಿಭಾಗದ ಎಲ್ಲಾ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂನಿಂದ ವ್ಯಾಪಾರ ವ್ಯವಹಾರಕ್ಕೆ ಮತ್ತು ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗುವುದರಿಂದ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂವನ್ನು ಪ್ರೋತ್ಸಾಹಿಸುವುದಿಲ್ಲ ಎಂಬುದಾಗಿ ಪುತ್ತೂರು ವರ್ತಕರ ಸಂಘ ಸೇರಿದಂತೆ ಹಲವು

ಪುತ್ತೂರು:ವೀಕೆಂಡ್ ‌ಕರ್ಪ್ಯೂ ವಿರುದ್ದ ಸೆಟೆದು ನಿಂತರೆ ಕಠಿಣ ಕ್ರಮ – ಎಸಿ ಖಡಕ್ ಆದೇಶ Read More »

ದ.ಕದಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲು ಶಾಸಕ ಕಾಮತ್, ಸಚಿವ ಕೋಟರಿಂದ ಸಿಎಂಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ ಸ್ಥಾನವಾಗಿದೆ. ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವುದರಿಂದ ಜನರು ತಮ್ಮ ದಿನನಿತ್ಯದ ವ್ಯವಹಾರವನ್ನು ನಡೆಸಲು ಸಹಕಾರಿಯಾಗಲಿದೆ. ಕೈಗಾರಿಕೋದ್ಯಮ, ವೃತ್ತಿಪರ ನೌಕರರು, ದಿನಕೂಲಿ ಕೂಲಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಬಸ್ ನೌಕರರು, ಸಣ್ಣಪುಟ್ಟ ಉದ್ಯಮ ಸೇರಿದಂತೆ ಇನ್ನಿತರ ವರ್ಗದ ಜನರು ಕೆಲಸ

ದ.ಕದಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲು ಶಾಸಕ ಕಾಮತ್, ಸಚಿವ ಕೋಟರಿಂದ ಸಿಎಂಗೆ ಮನವಿ Read More »

ಸುಳ್ಯ| ಮಕ್ಕಳೊಂದಿಗೆ ಯುವಕನ ಜೊತೆ ಮಹಿಳೆ ಪರಾರಿ

ಸುಳ್ಯ. ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಪರಿಚಿತ ಯುವಕನೊಬ್ಬನೊಂದಿಗೆ ಪರಾರಿಯಾಗಿರುವ ಘಟನೆ ಸುಳ್ಯದ ಜಯನಗರದಿಂದ ವರದಿಯಾಗಿದೆ. ಜಯನಗರದ ಕೊಯಿಂಗೋಡಿ ಸಮೀಪದ ವಿವಾಹಿತ ಮಹಿಳೆಯೋರ್ವಳು ಆಕೆಯ ಮನೆಗೆ ಆಗಾಗ ಬರುತ್ತಿದ್ದ ಪುತ್ತೂರು ಮೂಲದ ಪ್ರದೀಪ್ ಎಂಬ ಯುವಕನೊಂದಿಗೆ ತೆರಳಿರುವುದಾಗಿ ಹೇಳಲಾಗಿದೆ. ಈ ಕುರಿತಂತೆ ಪತಿ ಮತ್ತು ಮನೆಯವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ನಡುವೆ ನಾಪತ್ತೆಯಾಗಿರುವ ಮಹಿಳೆ ಸ್ಥಳಿಯ ಸ್ವಸಹಾಯ ಸಂಘವೊಂದರ ಸದಸ್ಯೆಯಾಗಿದ್ದು, ಸಂಘದಿಂದ ಸುಮಾರು 1 ಲಕ್ಷ ರೂ.ಗಳಷ್ಟು ಸಾಲ ತೆಗೆದಿದ್ದು, ಆಕೆ ಪರಾರಿಯಾಗಿರುವ

ಸುಳ್ಯ| ಮಕ್ಕಳೊಂದಿಗೆ ಯುವಕನ ಜೊತೆ ಮಹಿಳೆ ಪರಾರಿ Read More »