ಕರಾವಳಿ

ಭಾರೀ ಮಳೆ ಹಿನ್ನೆಲೆ; ಇಂದು(ಜು.8) ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಮಂಗಳೂರು ತಾಲೂಕಿನ ಶಾಲಾ, ಪಿಯು ಕಾಲೇಜಿಗೆ ಜುಲೈ 08ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 08/07/224 ರಂದು ರಜೆಯನ್ನು ಘೋಷಿಸಲಾಗಿದೆ.

ಭಾರೀ ಮಳೆ ಹಿನ್ನೆಲೆ; ಇಂದು(ಜು.8) ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಪುತ್ತೂರು: ಒಂಟಿಯಾಗಿ ವಾಸಿಸುತ್ತಿದ್ದ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ(ಜು.7) ಬೆಳಗ್ಗೆ ಪುತ್ತೂರು ತಾಲೂಕಿನ ಆರ್ಯಾಪು ಎಂಬಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಪಂಜಳ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿಶ್ವನಾಥ (32) ಆತ್ಮಹತ್ಯೆ ಮಾಡಿಕೊಂಡಾತ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿದ್ದಾರೆ.

ಪುತ್ತೂರು: ಒಂಟಿಯಾಗಿ ವಾಸಿಸುತ್ತಿದ್ದ ಯುವಕ ಆತ್ಮಹತ್ಯೆ Read More »

ಸುಳ್ಯ: ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ

ಸಮಗ್ರ ನ್ಯೂಸ್: ರಾಜಕೀಯ, ಸಾಮಾಜಿಕ ಕ್ಷೇತ್ರದ ಮುಖಂಡ, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭವು ಜುಲೈ 6 ರಂದು ಕೇರ್ಪಳಧ ಬಂಟರ ಭವನದಲ್ಲಿ ನಡೆಯಿತು. ವಿಶೇಷವಾಗಿ ಕೆ.ಆ‌ರ್.ಗೋಪಾಲಕೃಷ್ಣ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಟಿ.ಎಂ.ಶಹೀದ್ ತೆಕ್ಕಿಲ್ ಅವರು ಅಡಿಕೆ ಗಿಡಕ್ಕೆ ನೀರೆರೆದು ಉದ್ಘಾಟಿಸಿ ಮಾತನಾಡಿದರು. ಸುಳ್ಯ ಭಾಗದಲ್ಲಿ ವ್ಯಾಪಕವಾಗಿರುವ ಅಡಿಕೆ ಹಳದಿ ರೋಗದ ಕುರಿತು ಸಮಗ್ರ ಸಂಶೋಧನೆ ಅಗತ್ಯ ಈ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು

ಸುಳ್ಯ: ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ Read More »

ವ್ಯಾಪಕ‌ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಎಲ್ಲಾ‌ ಮಾದರಿಯ ಟ್ರಕ್ಕಿಂಗ್ ನಿಷೇಧಿಸಿ ಡಿಸಿ‌ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಭಾರಿ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಮರ ಬೀಳುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಅದರಂತೆ

ವ್ಯಾಪಕ‌ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಎಲ್ಲಾ‌ ಮಾದರಿಯ ಟ್ರಕ್ಕಿಂಗ್ ನಿಷೇಧಿಸಿ ಡಿಸಿ‌ ಆದೇಶ Read More »

ಪುತ್ತೂರು: ಎ.ವಿ.ಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಪೋಷಕರ ಸಭೆ

ಸಮಗ್ರ ನ್ಯೂಸ್: ಪುತ್ತೂರು,ಜು 4; ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಪೋಷಕರ ಸಭೆಯು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅವರು ವಹಿಸಿದ್ದರು. ಶಾಲೆಯ ಶೈಕ್ಷಣಿಕ ವಿಚಾರಗಳ ಬಗ್ಗೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ ಅವರು ಮಾತನಾಡಿ ಬೆಳೆಯುತ್ತಿರುವ ಎವಿಜಿ ಶಾಲೆಯಲ್ಲಿ ಈ ವರ್ಷ ಶಾಲಾ ಕೊಠಡಿ, ಆಟದ ಮೈದಾನ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಶೌಚಾಲಯ, ಕಂಪ್ಯೂಟರ್ ಹಾಗೂ ಲೈಬ್ರರಿ ಕೊಠಡಿಗಳು ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ಎರಡು ವಾಹನಗಳ

ಪುತ್ತೂರು: ಎ.ವಿ.ಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಪೋಷಕರ ಸಭೆ Read More »

ಸುಳ್ಯ: ಗಣಿಗಾರಿಕೆಯಿಂದ ಸ್ಥಳೀಯರಿಗಿಲ್ಲ ನೆಮ್ಮದಿ| ಮರ್ಕಂಜ‌ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮರ್ಕಂಜದ ಅಳವುಪಾರೆ ಎಂಬಲ್ಲಿ ನಡೆಸಲಾಗುತ್ತಿರುವ ಗಣಿಗಾರಿಕೆಯಿಂದ ಸ್ಥಳೀಯರಿಗೆ ನೆಮ್ಮದಿ ಇಲ್ಲವಾಗಿದೆ.‌ ಕೆರೆ, ಬೋರ್ ವೆಲ್ ಗಳು ಬತ್ತಿ‌ ಹೋಗಿದ್ದು, ಶಾಲೆ, ದೇವಸ್ಥಾನಗಳು ಬಿರುಕು ಬಿಟ್ಟಿವೆ.‌ ದೂರು‌ ನೀಡಲು ಹೋದರೆ ಗ್ರಾಮಸ್ಥರ ಮೇಲೆಯೇ ಕೇಸು‌ ಹಾಕಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮರ್ಕಂಜ ಗ್ರಾ.ಪಂ ನ ಗ್ರಾಮಸಭೆಯಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷೆ ಗೀತಾ ಹೊಸೊಳಿಕೆ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆದವು. ಗ್ರಾಮದ ಅಳವುಪಾರೆ ಎಂಬಲ್ಲಿ ಗಣಿಗಾರಿಕೆ

ಸುಳ್ಯ: ಗಣಿಗಾರಿಕೆಯಿಂದ ಸ್ಥಳೀಯರಿಗಿಲ್ಲ ನೆಮ್ಮದಿ| ಮರ್ಕಂಜ‌ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ Read More »

ಬಂಟ್ವಾಳ: ನಾಪತ್ತೆಯಾಗಿದ್ದ ದೈವಪಾತ್ರಿ‌ ನದಿಯಲ್ಲಿ ಶವವಾಗಿ‌ ಪತ್ತೆ

ಸಮಗ್ರ ನ್ಯೂಸ್: ಗುರುವಾರ(ಜು.5) ಬೆಳಗಿನ ಜಾವ ಮನೆಯಿಂದ ಬಾಡಿಗೆಯ ನೆಪದಲ್ಲಿ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ರಿಕ್ಷಾ ಚಾಲಕ, ತಾಲೂಕಿನ ಕುಕ್ಕಿಪಾಡಿ ಗ್ರಾಮದ ನೇಲ್ಯಕುಮೇರು ನಿವಾಸಿ ಬಾಬು ಪೂಜಾರಿಯವರ ಪುತ್ರ, ಎಣ್ಮೂರು ಶ್ರೀ ನಾಗಬ್ರಹ್ಮ ದೈವಸ್ಥಾನ ಬೈದರ್ಕಳ ಗರಡಿಯಲ್ಲಿ ಕೋಟಿಯ ದರ್ಶನ ಪಾತ್ರಿಯಾಗಿರುವ ಗಿರೀಶ್‌ (37) ಅವರ ಮೃತದೇಹ ಫಲ್ಗುಣಿ ನದಿಯಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದೆ. ಅಡ್ಡೂರು ಪರಿಸರದ ಕೆಳಗಿನಕೆರೆಯಲ್ಲಿ ಗಿರೀಶ್‌ ಅವರ ಮೃತದೇಹ ಪತ್ತೆಯಾಗಿದೆ. ನದಿಗೆ ಹಾರಿ ಆತ್ಮಹತ್ಯೆ ಗಿರೀಶ್‌ ಅಡ್ಡೂರು-ಪೊಳಲಿ ಸೇತುವೆಯ ಮೇಲೆ ಅಟೋರಿಕ್ಷಾ ನಿಲ್ಲಿಸಿ

ಬಂಟ್ವಾಳ: ನಾಪತ್ತೆಯಾಗಿದ್ದ ದೈವಪಾತ್ರಿ‌ ನದಿಯಲ್ಲಿ ಶವವಾಗಿ‌ ಪತ್ತೆ Read More »

ಅಕ್ರಮ ಕಲ್ಲುಕೋರೆ ಪ್ರಕರಣ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಎರಡು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಅಕ್ರಮ‌ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ. ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ.5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್

ಅಕ್ರಮ ಕಲ್ಲುಕೋರೆ ಪ್ರಕರಣ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಎರಡು ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಕರಾವಳಿಗೆ ರೆಡ್ ಅಲರ್ಟ್| ಇಂದು (ಜು.6) ದ.ಕ ಜಿಲ್ಲೆಯ ಶಾಲೆ, ಪ.ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪ.ಪೂರ್ವ ಕಾಲೇಜುಗಳಿಗೆ ಜುಲೈ06ರ ಶನಿವಾರ ರಜೆ ಘೋಷಿಸಲಾಗಿದೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಖಾಸಗಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ( 12 ನೇ ತರಗತಿ) ಭಾರೀ ಮಳೆ

ಕರಾವಳಿಗೆ ರೆಡ್ ಅಲರ್ಟ್| ಇಂದು (ಜು.6) ದ.ಕ ಜಿಲ್ಲೆಯ ಶಾಲೆ, ಪ.ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಪುತ್ತೂರು: ಮನೆ ನಾಯಿಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ

ಸಮಗ್ರ ನ್ಯೂಸ್: ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಅದ್ವರಾಜ್ ಅನುಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯವನ್ನು ಪೋಳ್ಯದಲ್ಲಿ ಜು.4ರಿಂದ ಜು.9ರವರೆಗೆ ನಡೆಸಲಾಗುವುದು. ಸಂತಾನ ಹರಣ ಮಾಡಿಸುವುದರಿಂದ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ. ದಾರಿ ನಾಯಿಗಳ ಸಂಖ್ಯೆ ಕಡಿಮೆಯಾಗಿ

ಪುತ್ತೂರು: ಮನೆ ನಾಯಿಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ Read More »