ಕರಾವಳಿ

ಬಂಟ್ವಾಳ : ಸ್ಕೂಟರ್,ಜೀಪ್ ಢಿಕ್ಕಿ- ಸವಾರ ಸಾವು

ಬಂಟ್ವಾಳ: ಜೀಪ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತ ಪಟ್ಟ ಘಟನೆ ನಾವೂರದಲ್ಲಿ ನಡೆದಿದೆ.ನಾವೂರ ನಿವಾಸಿ ಅಬ್ಬಾಸ್ (60) ಮೃತಪಟ್ಟ ವ್ಯಕ್ತಿ. ತಾಲೂಕಿನ ಮಣಿಹಳ್ಳ ಸಮೀಪದ ನಾವೂರ ಮಸೀದಿ ಎದುರಿನಲ್ಲಿ ಜೀಪ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಗಂಭೀರ ಗಾಯವಾಗಿದ್ದ ಸ್ಕೂಟರ್ ಸವಾರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಸವಾರ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬಂಟ್ವಾಳ : ಸ್ಕೂಟರ್,ಜೀಪ್ ಢಿಕ್ಕಿ- ಸವಾರ ಸಾವು Read More »

ಮಂಗಳೂರು: ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ

ಮಂಗಳೂರು: ವಕ್ತಿಯೊಬ್ಬನಿಗೆ ತಂಡವೊಂದು ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಎದುರುಪದವು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಇರಿತಕ್ಕೊಳಗಾದವರನ್ನು ಬಾಗಲಕೋಟೆ ಮೂಲದ ನಿಂಗಣ್ಣ ಎಂದು ಗುರುತಿಸಲಾಗಿದೆ. ಚೂರಿ ಎದುರುಪದವು ನಿವಾಸಿ ದಿವಾಕರ್ ಯಾನೆ ದೀವ ತಂಡದಿಂದ ಈ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ. ಮದ್ಯಪಾನದ ಅಮಲಿನಲ್ಲಿ ನಿಂಗಣ್ಣ ಹಾಗೂ ತಂಡದೊಂದಿಗೆ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಕೊನೆಗೆ ಚೂರಿ ಇರಿಯುವ ಹಂತಕ್ಕೆ ಹೋಗಿದೆ.ಚೂರಿ ಇರಿತದ ಪರಿಣಾಮ ನಿಂಗಣ್ಣ ತಲೆಗೆ ಗಂಭೀರ ಗಾಯವಾಗಿದ್ದು

ಮಂಗಳೂರು: ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ Read More »

ಬಂಟ್ವಾಳದಲ್ಲಿ ಪತ್ತೆಯಾದ 13ನೇ ಶತಮಾನದ ಶಾಸನದಲ್ಲಿ ಬಯಲಾಯಿತು ಮಂಗಳೂರಿನ ಸ್ಫೋಟಕ ರಹಸ್ಯ

ಸಪ್ಟೆಂಬರ್ : ಬಂಟ್ವಾಳ ತಾಲೂಕಿನ ಮೇಗಿನ‌ ಕುರಿಯಾಳದಲ್ಲಿ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ‌-ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗ ಸಂಸ್ಥೆ) ಇದರ ಅಧ್ಯಯನ‌ ನಿರ್ದೇಶಕ ಪ್ರೊ.ಎಸ್‌.ಎ.ಕೃಷ್ಣಯ್ಯ ಅವರು ಇತ್ತೀಚೆಗೆ ಪತ್ತೆ ಮಾಡಿದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ.ಗ್ರಾನೈಟ್ (ಕಣ)ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು ಕನ್ನಡ ಲಿಪಿ ಮತ್ತು ಭಾಷೆಯಲ್ಲಿದ್ದು 25 ಸಾಲುಗಳನ್ನು ಹೊಂದಿದೆ. ಶಾಸನವು 178 ಸೆಂ.ಮೀ ಎತ್ತರ ಮತ್ತು 78 ಸೆಂ.ಮೀ ಅಳತೆಯನ್ನು ಹೊಂದಿರುತ್ತದೆ. ಶಕವರುಷ 1286 ನೇ ಕ್ರೋಧಿ ಸಂವತ್ಸರದ

ಬಂಟ್ವಾಳದಲ್ಲಿ ಪತ್ತೆಯಾದ 13ನೇ ಶತಮಾನದ ಶಾಸನದಲ್ಲಿ ಬಯಲಾಯಿತು ಮಂಗಳೂರಿನ ಸ್ಫೋಟಕ ರಹಸ್ಯ Read More »

ಗಣೇಶ ಹಬ್ಬಕ್ಕೆ ಇನ್ನೆಲ್ಲೂ ಸಿಗದ ಆಫರ್ ನೀಡಿದ ವೆಂಕಟರಮಣ ಸೊಸೈಟಿ| ಕೇವಲ 10% ಬಡ್ಡಿಗೆ ಹೊಸ ವಾಹನ ಸಾಲ

ಸುಳ್ಯ: ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಗಣೇಶ ಹಬ್ಬದ ಪ್ರಯುಕ್ತ ಸೆ.1ರಿಂದ 30ರವರೆಗೆ ಖರೀದಿಸುವ ಹೊಸ ವಾಹನಕ್ಕೆ ಶೆ.10ರ ಬಡ್ಡಿ ದರದಲ್ಲಿ ಶೀಘ್ರ ವಾಹನ ಸಾಲ ವಿತರಣೆ ಮಾಡುವ ಯೋಜನೆ ಹಮ್ಮಿಕೊಂಡಿದೆ. ಈ ಆಫರ್ ಕೇವಲ ಒಂದು ತಿಂಗಳ ಅವಧಿಯದ್ದಾಗಿದ್ದು, ಸೂಕ್ತ ದಾಖಲೆ‌ ಒದಗಿಸಿದಲ್ಲಿ ತಕ್ಷಣ ಸಾಲ ವಿತರಿಸುವ ಭರವಸೆಯನ್ನು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹೊಸ ವಾಹನ ಖರೀದಿಸುವ ಗ್ರಾಹಕರಿಗೆ ಇದೊಂದು ಉತ್ತಮ ಆಫರ್ ಆಗಿದ್ದು, ಸಂಘವು ಸುಳ್ಯ, ಪುತ್ತೂರು, ಬಿ.ಸಿ

ಗಣೇಶ ಹಬ್ಬಕ್ಕೆ ಇನ್ನೆಲ್ಲೂ ಸಿಗದ ಆಫರ್ ನೀಡಿದ ವೆಂಕಟರಮಣ ಸೊಸೈಟಿ| ಕೇವಲ 10% ಬಡ್ಡಿಗೆ ಹೊಸ ವಾಹನ ಸಾಲ Read More »

ಪುತ್ತೂರು: ಠಾಣೆ ಮೆಟ್ಟಿಲೇರಿಸಿದ ಯುವಕ- ಯುವತಿಯ ಲವ್| ಪ್ರೀತಿ ಅರಸಿ ಬಂದಾತನಿಗೆ ಪೊಲೀಸ್ ಡ್ರಿಲ್|

ಪುತ್ತೂರು: ಇನ್ಸ್ಟ್ರಾಗ್ರಾಂ ಮೂಲಕ ಪರಿಚಯವಾದ ಯುವತಿಯೋರ್ವಳನ್ನು ಭೇಟಿಯಾಗಲು ಬಂದಾತ ಆಕೆಯ ಜೊತೆಗೆ ಠಾಣೆ ಮೆಟ್ಟಿಲೇರಿದ ಘಟನೆ ಪುತ್ತೂರಲ್ಲಿ ನಡೆದಿದೆ.ರಾಯಚೂರು ಮೂಲದ ಯುವಕನೋರ್ವ ಪುತ್ತೂರಿನ ಯುವತಿಯೋರ್ವಳನ್ನು ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು ಸಂಪರ್ಕ ಮಾಡಲು ತನ್ನ ಸ್ನೇಹಿತನ ಜೊತೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ. ಇದನ್ನು ಗಮನಿಸಿದ ತಂಡವೊಂದು ಅವರನ್ನು ಪ್ರಶ್ನಿಸಿದಾಗ ಮಾತಿನ ಚಕಮಕಿ ನಡೆದು ತುಸು ಗೊಂದಲ ಉಂಟಾಯಿತು. ಅನುಮಾನಗೊಂಡ ಆ ತಂಡದ ಕೆಲವರು ಯುವಕ ಮತ್ತು ಯುವತಿಯರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇನ್ಟ್ರಾಗ್ರಾಂ ಮೂಲಕ ಯುವಕ

ಪುತ್ತೂರು: ಠಾಣೆ ಮೆಟ್ಟಿಲೇರಿಸಿದ ಯುವಕ- ಯುವತಿಯ ಲವ್| ಪ್ರೀತಿ ಅರಸಿ ಬಂದಾತನಿಗೆ ಪೊಲೀಸ್ ಡ್ರಿಲ್| Read More »

ಬೆಳ್ತಂಗಡಿ : ಹಾವು ಕಡಿತದಿಂದ ಯುವಕ ಸಾವು

ಬೆಳ್ತಂಗಡಿ: ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಇಂದು ತಾಲೂಕಿನ ಪುಂಜಾಲಕಟ್ಟೆ ಎಂಬಲ್ಲಿ ಸಂಭವಿಸಿದೆ. ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಉಸ್ಮಾನ್ ಅವರ ಪುತ್ರ ಆಸಿದ್( 26) ಮೃತಪಟ್ಟವರು. ಆಸಿದ್ ಅವರು ಕೂಲಿ ಕಾರ್ಮಿಕರಾಗಿದ್ದು, ವಾಮದಪದವು ಬಳಿ ಮಂಗಳವಾರ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹಾವಿನ ಕಡಿತಕ್ಕೊಳಗಾಗಿದ್ದರು. ಬಳಿಕ ಅವರನ್ನು ಚಿಕಿತ್ಸೆ ಗಾಗಿ ಆಸ್ಪತ್ರೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವರು ಉಸ್ಮಾನ್ ಅವರ ಮೂವರು ಪುತ್ರರಲ್ಲಿ ಕೊನೆಯವರಾಗಿದ್ದು ಅವಿವಾಹಿತರಾಗಿದ್ದರು.

ಬೆಳ್ತಂಗಡಿ : ಹಾವು ಕಡಿತದಿಂದ ಯುವಕ ಸಾವು Read More »

ದ.ಕ ದಲ್ಲಿ ವೀಕೆಂಡ್ ಕರ್ಪ್ಯೂ ಇನ್ಮುಂದೆ ಹೀಗಿರಲಿದೆ.| ಹೊಸ ಮಾರ್ಗಸೂಚಿ ಪ್ರಕಟಿಸಿದ ಡಿಸಿ ಡಾ| ರಾಜೇಂದ್ರ ಕೆ.ವಿ

ಮಂಗಳೂರು: ರಾಜ್ಯ ಸರ್ಕಾರದ ಆದೇಶ ಹಾಗೂ ಜಿಲ್ಲೆಯ ವಿದ್ಯಮಾನಗಳನ್ನು ಗಮನಿಸಿ, ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಕೆಲವು ನಿರ್ಬಂಧಗಳನ್ನು ಜಾರಿ ಮಾಡಿದ್ದಾರೆ. ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ, ಚಾಲ್ತಿಯಲ್ಲಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಗಳಿಗೆ ಹಾಜರಾಗಲು

ದ.ಕ ದಲ್ಲಿ ವೀಕೆಂಡ್ ಕರ್ಪ್ಯೂ ಇನ್ಮುಂದೆ ಹೀಗಿರಲಿದೆ.| ಹೊಸ ಮಾರ್ಗಸೂಚಿ ಪ್ರಕಟಿಸಿದ ಡಿಸಿ ಡಾ| ರಾಜೇಂದ್ರ ಕೆ.ವಿ Read More »

ಮಂಗಳೂರು: ಫೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ನ್ಯಾಯಾಲಯ ಸಂಕೀರ್ಣದಿಂದ ಜಿಗಿದು ಆತ್ಮಹತ್ಯೆ

ಮಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಕೋರ್ಟಿಗೆ ಹಾಜರುಪಡಿಸಿದ ವೇಳೆ ನಗರದ ನ್ಯಾಯಾಲಯ ಸಂಕೀರ್ಣದ ಆರನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ತಲಪಾಡಿ ಕಿನ್ಯ ನಿವಾಸಿ ರವಿರಾಜ್ (32) ಕೋರ್ಟ್ ಮಹಡಿಯಿಂದ ಹಾರಿ ಸಾವು ಕಂಡವರು. ರವಿರಾಜ್ ಅವರನ್ನು ಸೋಮವಾರ ತೊಕ್ಕೊಟ್ಟಿನ ಸೆಬಾಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು. ಆರೋಪಿಯನ್ನು ಇಂದು ಉಳ್ಳಾಲ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ

ಮಂಗಳೂರು: ಫೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ನ್ಯಾಯಾಲಯ ಸಂಕೀರ್ಣದಿಂದ ಜಿಗಿದು ಆತ್ಮಹತ್ಯೆ Read More »

ಉಳ್ಳಾಲ| ಕಾರಿನ ನಂಬರ್ ಪ್ಲೇಟ್ ನಲ್ಲಿ ಕೊರಗಜ್ಜನ ಭಾವಚಿತ್ರಕ್ಕೆ ಪೊಲೀಸರಿಂದ ಆಕ್ಷೇಪ| ಪೊಲೀಸರ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ| ಸ್ಥಳದಲ್ಲಿ ಬಿಗುವಿನ ವಾತಾವರಣ

ಮಂಗಳೂರು : ಕಾರಿನ ನಂಬರ್ ಪ್ಲೇಟ್‌ ಬಳಿ ಕೊರಗಜ್ಜನ ಭಾವಚಿತ್ರ ಇದೆ ಎಂದು ಆಕ್ಷೇಪಿಸಿದ ಪೊಲೀಸ್‌ ಸಿಬ್ಬಂದಿಯ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರ ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ ಬಳಿ ಇಂದು ನಡೆದಿದೆ. ನಗರದ ಸಂಚಾರಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರ ಮಾರುತಿ 800 ವಾಹನದಲ್ಲಿ ನೋಂದಣಿ ಸಂಖ್ಯೆಯ ಬಳಿ ಕೊರಗಜ್ಜನ ಭಾವಚಿತ್ರವಿತ್ತು. ಆ ಭಾವಚಿತ್ರ ತೆಗೆಯುವಂತೆ ಪೊಲೀಸ್‌ ಸಿಬ್ಬಂದಿ ಸೂಚಿಸಿದ್ದು, ಈ ವೇಳೆ ದೈವದ ಭಾವಚಿತ್ರ ತೆಗೆಯಲು ಕಾರಿನ ಮಾಲೀಕ ಹಾಗೂ

ಉಳ್ಳಾಲ| ಕಾರಿನ ನಂಬರ್ ಪ್ಲೇಟ್ ನಲ್ಲಿ ಕೊರಗಜ್ಜನ ಭಾವಚಿತ್ರಕ್ಕೆ ಪೊಲೀಸರಿಂದ ಆಕ್ಷೇಪ| ಪೊಲೀಸರ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ| ಸ್ಥಳದಲ್ಲಿ ಬಿಗುವಿನ ವಾತಾವರಣ Read More »

ಕೋಣವನ್ನು ಸುಪಾರಿ ಪಡೆದು ಕೊಂದ ಪಾತಕಿಗಳು ಕಂಬಿ ಹಿಂದೆ| ಮನುಷ್ಯತ್ವ ಮರೆತ ನರರಾಕ್ಷಸರು..!

ಮಂಗಳೂರು: ಮಳೆಗಾಲದಲ್ಲಿ ಹುಲುಸಾಗಿ ಬೆಳೆದ ಹುಲ್ಲನ್ನು ತಿನ್ನುತ್ತಾ, ದಷ್ಟಪುಷ್ಟವಾಗಿ ಬೆಳೆದ ಬಿಡಾಡಿ ಕೋಣವದು. ಕೋಣದ ಯಜಮಾನ ಕೋಣವನ್ನು ಹಟ್ಟಿಗೆ ಸೇರಿಸದೇ ಬಿಟ್ಟು ಬಿಟ್ಟಿದ್ದ. ಕೋಣ ಊರಿನಲ್ಲೇ ಹುಲ್ಲಿದ್ದ ಜಾಗದಲ್ಲಿ ಮೇದು ಅಲ್ಲೇ ಮಲಗಿ ದಿನ ಕಳೆಯುತಿತ್ತು. ಆಹಾರ ಅರಸುತ್ತಾ, ಹುಲ್ಲು ಜಾಸ್ತಿ ಬೆಳೆದ ತೋಟಕ್ಕೆ ಕೋಣ ನುಗ್ಗಿದ್ದೇ ತಪ್ಪಾಗಿತ್ತು. ತೋಟದ ಮಾಲೀಕನ ಕೆಂಗಣ್ಣಿಗೆ ಕೋಣ ಅನಾಯಾಸವಾಗಿ ಬಿದ್ದಿತ್ತು. ಕೋಣವನ್ನು ತೋಟದಿಂದ ಓಡಿಸಲು ನಾನಾ ಪ್ರಯತ್ನ ಪಟ್ಟರೂ ಕೋಣ ಮಾತ್ರ ಜಪ್ಪಯ್ಯ ಅಂದ್ರೂ ತೋಟ ಬಿಡಲಿಲ್ಲ. ಅಂತಿಮವಾಗಿ ಮಾಲೀಕ

ಕೋಣವನ್ನು ಸುಪಾರಿ ಪಡೆದು ಕೊಂದ ಪಾತಕಿಗಳು ಕಂಬಿ ಹಿಂದೆ| ಮನುಷ್ಯತ್ವ ಮರೆತ ನರರಾಕ್ಷಸರು..! Read More »