ಕರಾವಳಿ

ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಅಪಘಾತಗೊಂಡು ಆಸ್ಪತ್ರೆಗೆ ದಾಖಲು | ಮುನಿದಳೇ‌ ಮಂತ್ರದೇವತೆ ಕಲ್ಲುರ್ಟಿ…? | ಆರೋಪಿ ರಕ್ಷಣೆಗೆ ರಾಜಕೀಯ ಶಕ್ತಿಗಳ ಕೈವಾಡ

ಬಂಟ್ವಾಳ : ಚಿಕ್ಕಪ್ಪನೇ ನಿರಂತರ ಅತ್ಯಾಚಾರ ಎಸಗಿ ಸಂತ್ರಸ್ತಳಾಗಿದ್ದ ಯುವತಿಯ ಪೋಷಕರು ಪನೋಲಿಬೈಲು ಕಲ್ಲುರ್ಟಿ‌ ಮೊರೆ ಹೋಗಿದ್ದು, ಆಕೆ ಧರ್ಮ ರಕ್ಷಿಸಿದ್ದಾಳೆ ಎಂಬ ಮಾತೀಗ ತುಳುನಾಡಿನಲ್ಲಿ ಕೇಳಿಬಂದಿದ್ದು, ತಾಯಿಯ ಸತ್ಯ ಮತ್ತೆ‌ ಗೋಚರಿಸಿದೆ. ಮಗಳ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಚಿಕ್ಕಪ್ಪ, ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮನಿಗೆ ಕಳೆದ ಶುಕ್ರವಾರ ಬೆಳಿಗ್ಗೆ ಆಕ್ಸಿಡೆಂಟ್ ಆಗಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಾಮುಕ ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿಯಿಂದ […]

ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಅಪಘಾತಗೊಂಡು ಆಸ್ಪತ್ರೆಗೆ ದಾಖಲು | ಮುನಿದಳೇ‌ ಮಂತ್ರದೇವತೆ ಕಲ್ಲುರ್ಟಿ…? | ಆರೋಪಿ ರಕ್ಷಣೆಗೆ ರಾಜಕೀಯ ಶಕ್ತಿಗಳ ಕೈವಾಡ Read More »

ಪುತ್ತೂರು: ಎರಡು ತಿಂಗಳ ಬಾಣಂತಿ ಮೃತ್ಯು

ಪುತ್ತೂರು: ಎರಡು ತಿಂಗಳ ಬಾಣಂತಿ ಒಬ್ಬರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಇಂದು ನಡೆದಿದೆ. ಪುತ್ತೂರಿನ ಕೃಷ್ಣ ನಗರ ನಿವಾಸಿ ದಿಲೀಪ್ ಎಂಬವರ ಪತ್ನಿ ಅಕ್ಷತಾ (26) ಮೃತಪಟ್ಟವರು. ಅಕ್ಷತಾ 2 ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ಆ ಬಳಿಕ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತು. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಷತಾ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪುತ್ತೂರು: ಎರಡು ತಿಂಗಳ ಬಾಣಂತಿ ಮೃತ್ಯು Read More »

ಸೋಂಕಿತರಿಗೆ ಕೇರ್ ಸೆಂಟರ್’ನಲ್ಲಿ ಚಿಕಿತ್ಸೆ ಉತ್ತಮ: ಸಚಿವ ಎಸ್ ಅಂಗಾರ

ಸುಬ್ರಹ್ಮಣ್ಯ: ಕೋವಿಡ್ ಸೋಂಕಿತರು ಕೇರ್ ಸೆಂಟರ್ ನಲ್ಲಿ ಇದ್ದುಕೊಂಡೆ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಸಚಿವ ಅಂಗಾರ ಹೇಳಿದ್ದಾರೆ. ಅವರು ನಿನ್ನೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕೋವಿಡ್ ಪಾಸಿಟಿವ್ ವರದಿ ಬಂದವರು ಮನೆಯಲ್ಲಿ ಇರುವುದಕ್ಕಿಂತ ಆರೈಕೆ ಕೇಂದ್ರಗಳಲ್ಲಿ ಉಳಿಯುವುದು ಸೂಕ್ತ. ಮನೆಯಲ್ಲಿದ್ದರೆ ನೆರೆಹೊರೆಯವರಿಗೆ ಸೋಂಕು ಹರಡುವ ಸಂಭವ ಹೆಚ್ಚು. ಅದಕ್ಕಾಗಿ ಸಾರ್ವಜನಿಕರು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯಬೇಕು. ಆರೈಕೆ ಕೇಂದ್ರದಲ್ಲಿ ಆಹಾರ ಮತ್ತು ಔಷಧ ವಿತರಣೆ ವ್ಯವಸ್ಥಿತವಾಗಿ

ಸೋಂಕಿತರಿಗೆ ಕೇರ್ ಸೆಂಟರ್’ನಲ್ಲಿ ಚಿಕಿತ್ಸೆ ಉತ್ತಮ: ಸಚಿವ ಎಸ್ ಅಂಗಾರ Read More »

ದ ಕ: ಕಾಲೇಜು ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಮತ್ತು ಸಿಬ್ಬಂದಿಗಳಿಗೆ ನಾಳೆಯಿಂದ ವ್ಯಾಕ್ಸಿನೇಷನ್

ಮಂಗಳೂರು: ಜಿಲ್ಲೆಯ ಪದವಿ ಕಾಲೇಜಿನ ಎಲ್ಲಾ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ, ಬೋಧಕ ವೃಂದದವರಿಗೆ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ನಾಳೆಯಿಂದ ವ್ಯಾಕ್ಸಿನೇಷನ್ ಕಾರ್ಯಕ್ರಮ ಆರಂಭಿಸಲಾಗುತ್ತಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಮಾಹಿತಿ ನೀಡಿದ್ದಾರೆ. ಜುಲೈ ತಿಂಗಳಿನಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳು, ಸ್ನಾತಕೋತ್ತರ ಪದವಿ ಕಾಲೇಜುಗಳು, ಐಐಟಿ, ಡಿಪ್ಲೋಮಾ ಕಾಲೇಜುಗಳು, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳು

ದ ಕ: ಕಾಲೇಜು ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಮತ್ತು ಸಿಬ್ಬಂದಿಗಳಿಗೆ ನಾಳೆಯಿಂದ ವ್ಯಾಕ್ಸಿನೇಷನ್ Read More »

ಕರಾವಳಿಗರೇ ಎಚ್ಚರ… ‘ದುಶ್ಮನ್ ಬಗಲ್ ಮೆ’,ಹೆಚ್ಚುತ್ತಿವೆ ‘ಡೆಲ್ಟಾ’ ಪ್ಲಸ್ ಕೇಸ್‌

ಮಂಗಳೂರು: ಕೇರಳದ ಕರಾವಳಿ ಭಾಗಗಳಲ್ಲಿ ಕೊರೊನಾ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನೆರೆಯ ದಕ್ಷಿಣಕನ್ನಡ ಜಿಲ್ಲೆಗೂ ಭೀತಿ ಹೆಚ್ಚಾಗಿದೆ. ಕೇರಳದಿಂದ ಪ್ರತಿನಿತ್ಯ ಸಾವಿರಾರು ಮಂದಿ ದಕ್ಷಿಣ ಕನ್ನಡ ಜಿಲ್ಲೆಗೆ ವ್ಯಾಪಾರ, ಉದ್ಯೋಗಕ್ಕಾಗಿ ಬಂದು ಹೋಗುತ್ತಾರೆ. ಹೀಗಾಗಿ ಜಿಲ್ಲೆಯ ಜನತೆಗೆ ಭೀತಿ ಹೆಚ್ಚಾಗಿದ್ದು, ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಈ ವಾರದ ವೀಕೆಂಡ್ ಕರ್ಪ್ಯೂ ಜಾರಿ ಇದ್ದ ಕಾರಣ ಗಡಿ ಭಾಗದಲ್ಲಿ ಹೆಚ್ಚಿನ ವಾಹನ ಓಡಾಟ ಇರಲಿಲ್ಲ. ಆದರೂ ಯಾವೊಂದು ತಪಾಸಣೆಯೂ

ಕರಾವಳಿಗರೇ ಎಚ್ಚರ… ‘ದುಶ್ಮನ್ ಬಗಲ್ ಮೆ’,ಹೆಚ್ಚುತ್ತಿವೆ ‘ಡೆಲ್ಟಾ’ ಪ್ಲಸ್ ಕೇಸ್‌ Read More »

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ

ಕಾರ್ಕಳ: ನಗರದ ಮಂಜುನಾಥ ಪೈ ಸಭಾಂಗಣ ಬಳಿಯ ದೇವರಗದ್ದೆ ರಸ್ತೆಯಲ್ಲಿ ಚಾಲಕನೊಬ್ಬ ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ. ಚಿಕ್ಕಮಗಳೂರು ಮೂಲದವನಾಗಿದ್ದು, ಹಿರಿಯಂಗಡಿ ನಿವಾಸಿಯಾಗಿರುವ ಮಂಜುನಾಥ (೩೪) ಎಂಬಾತ ವಿಷ ಸೇವನೆಗೈದವರು. ಇದೀಗ ಮಂಜುನಾಥನನ್ನು ಸ್ಥಳೀಯ ನಾಗರಿಕರು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ Read More »

ಬಂಟ್ವಾಳ | ಶ್ರೀ ಗಂಧ ಮರ ಕಡಿದು ಮಾರಾಟ ಯತ್ನ |ಉಡ ಹಿಡಿದು ಪಾರ್ಟಿ ಮಾಡಲೆತ್ನಿಸಿದಾಗ ಅರಣ್ಯ ಇಲಾಖೆ ಮಿಂಚಿನ ದಾಳಿ

ಬಂಟ್ವಾಳ : ತಾಲೂಕಿನ ವೀರಕಂಬ ರಕ್ಷಿತಾರಣ್ಯ ದಿಂದ ಲಕ್ಷಾಂತರ ರೂ ಮೌಲ್ಯದ ಗಂಧದ ಮರಗಳನ್ನು ಕಡಿದು, ಮಾರಾಟ ಮಾಡಲು ಯತ್ನಿಸಿದ ವೇಳೆ ಬಂಟ್ವಾಳ ವಲಯ ಆರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳ ಬಂಧಿಸಿದ್ದಾರೆ. ಪಾತೂರು ನಿವಾಸಿ ಇಬ್ರಾಹಿಂ ಹಾಗೂ ಇರಾ ಗ್ರಾಮದ ಮೊಯಿದ್ದೀನ್ ಬಂಧಿತ ಆರೋಪಿಗಳು. ಕಾರ್ಯಚರಣೆ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಲಾಗಿದೆ. ಸಿದ್ದೀಕ್ ಹಾಗೂ ಸಿದ್ದೀಕ್ ಯಾನೆ ಕೊರಂಗು ಸಿದ್ದೀಕ್ ತಲೆಮರೆಸಿಕೊಂಡ ಆರೋಪಿಗಳು. ಆರೋಪಿಗಳು ಅಂದಾಜು ಮೂರು ಲಕ್ಷ

ಬಂಟ್ವಾಳ | ಶ್ರೀ ಗಂಧ ಮರ ಕಡಿದು ಮಾರಾಟ ಯತ್ನ |ಉಡ ಹಿಡಿದು ಪಾರ್ಟಿ ಮಾಡಲೆತ್ನಿಸಿದಾಗ ಅರಣ್ಯ ಇಲಾಖೆ ಮಿಂಚಿನ ದಾಳಿ Read More »

ಕಾಸರಗೋಡು: ಮಧೂರು ಮಲ್ಲ ಸೇರಿದಂತೆ ಜಿಲ್ಲೆಯ ಹಲವು ಊರುಗಳ ಹೆಸರು ಮಲಯಾಳಂಗೆ | ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಹಲವು ಕನ್ನಡ ಊರುಗಳ ಹೆಸರುಗಳನ್ನು ಕೇರಳ ಸರಕಾರ ಮಲಯಾಳಮ್ ಗೆ ಬದಲಾಯಿಸಿದೆ. ಇದೀಗ ಪಿಣರಾಯಿ ಸರಕಾರದ ವಿರುದ್ಧ ಆಕ್ರೋಶಿತರಾಗಿರುವ ಜನ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಭೌಗೋಳಿಕವಾಗಿ ಕೇರಳ ರಾಜ್ಯದಲ್ಲಿದ್ದರೂ ಬಹುವಾಗಿ ಕನ್ನಡ ಮತ್ತು ತುಳು ಭಾಷಿಗರಿರುವ ಕಾಸರಗೋಡು ಜಿಲ್ಲೆಯಲ್ಲಿರುವ ಹಲವು ಊರುಗಳ ಹೆಸರು ಈಗ ಮಳಯಾಳಂಗೆ ಬದಲಾಗಿದೆ. ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ಮಧೂರು ಮತ್ತು ಮಲ್ಲ ಊರುಗಳ ಹೆಸರನ್ನೂ ಕೂಡ ಬದಲಾಯಿಸಲಾಗಿದೆ. ಜಿಲ್ಲೆಯ ಕನ್ನಡ ಮಾತನಾಡುವ ಬಹುಸಂಖ್ಯಾತ ಕನ್ನಡಿಗರ ಅಭಿಪ್ರಾಯ ಕೇಳದೆ ಸರಕಾರ

ಕಾಸರಗೋಡು: ಮಧೂರು ಮಲ್ಲ ಸೇರಿದಂತೆ ಜಿಲ್ಲೆಯ ಹಲವು ಊರುಗಳ ಹೆಸರು ಮಲಯಾಳಂಗೆ | ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ Read More »

ಕಮರಿದ ಭರವಸೆಗಳ‌ ನಡುವೆ ಮೂಡಿದ ಆಶಾಕಿರಣ | ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು | ತಲೆ ಎತ್ತಿ ನಿಂತಿದೆ ‘ಗ್ರಾಮಸೇತು’

ಸುಳ್ಯ: ಮೊಗ್ರ, ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಪುಟ್ಟ ಹಳ್ಳಿ. ಸುಮಾರು 2 ರಿಂದ 3 ಸಾವಿರ ಜನ ಈ ಹಳ್ಳಿಯಲ್ಲಿ ವಾಸವಿರುವ ಜನ. ಏರಣಗುಡ್ಡೆ, ಮಲ್ಕಜೆ, ಮೊಗ್ರ, ಕಮಿಲ ಈ ಹಳ್ಳಿಯ ವ್ಯಾಪ್ತಿಗೆ ಬರುವ ಪ್ರದೇಶಗಳು. ಶಾಲೆ, ಮತದಾನ ಕೇಂದ್ರ, ಅಂಗನವಾಡಿ, ಆರೋಗ್ಯ ಉಪಕೇಂದ್ರ, ದೈವಸ್ಥಾನ ಮೊದಲಾದವುಗಳ ಒಂದು ಕಂಪ್ಲೀಟ್ ಪ್ಯಾಕೇಜ್ ಈ ಹಳ್ಳಿಯದ್ದು. ಆದರೆ ಇವುಗಳೆಲ್ಲದರ ಸಂಪರ್ಕಕ್ಕೆ ಅಡ್ಡಿಯಾಗಿತ್ತು ಆ ಸೇತುವೆ ಇಲ್ಲದ ಹೊಳೆ.ಮಳೆಗಾಲದಲ್ಲಿ ತುಂಬಿ ಹರಿಯುವ ಹೊಳೆಗೆ ಅಡಿಕೆ ಮರದ

ಕಮರಿದ ಭರವಸೆಗಳ‌ ನಡುವೆ ಮೂಡಿದ ಆಶಾಕಿರಣ | ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು | ತಲೆ ಎತ್ತಿ ನಿಂತಿದೆ ‘ಗ್ರಾಮಸೇತು’ Read More »

ದ.ಕ.ದಲ್ಲಿ ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿ : ವಾಹನಗಳನ್ನು ಸೀಝ್ ಮಾಡಲು ಪೊಲೀಸರಿಗೆ ಸಂಪೂರ್ಣ ಅಧಿಕಾರ -ಡಿಸಿಪಿ ಹರಿರಾಂ ಶಂಕರ್ ಹೇಳಿದ್ದೇನು? ಇಲ್ಲಿದೆ ವಿಡಿಯೋ

ಮಂಗಳೂರು: ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸುವ ಹಿನ್ನೆಲೆಯ ಶನಿವಾರ ಹಾಗೂ ರವಿವಾರದಂದು ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಅನಗತ್ಯವಾಗಿ ಓಡಾಡಿದಲ್ಲಿ ವಾಹನಗಳನ್ನು ಸೀಝ್ ಮಾಡಲು ಪೊಲೀಸರಿಗೆ ಸಂಪೂರ್ಣ ಅಧಿಕಾರವೆಂದು ಡಿಸಿಪಿ ಹರಿರಾಂ ಶಂಕರ್ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಆರೋಗ್ಯ ಸೇವೆ ಹೊರತು ಪಡಿಸಿ ಬಹುತೇಕ ಎಲ್ಲಾ ಚಟುವಟಿಕೆಗಳು ಸ್ತಭವಾಗಿರಲಿದೆ. ಸಾರ್ವಜನಿಕರ ವಾಹನಗಳು ಸಂಚಾರ ನಡೆಸುವಂತಿಲ್ಲ. ಖಾಸಗಿ ವಾಹನಗಳು ರಸ್ತೆಗಿಳಿದ್ದಲ್ಲಿ ಮುಲಾಜಿಲ್ಲದೆ ಸೀಝ್ ಮಾಡಲು ಕಾನೂನು ಹಾಗೂ ಸುವ್ಯವಸ್ಥೆಯ ಡಿಸಿಪಿ ಹರಿರಾಂ ಶಂಕರ್ ಆದೇಶ ನೀಡಿದ್ದಾರೆ. ತುರ್ತು ಸಂದರ್ಭ

ದ.ಕ.ದಲ್ಲಿ ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿ : ವಾಹನಗಳನ್ನು ಸೀಝ್ ಮಾಡಲು ಪೊಲೀಸರಿಗೆ ಸಂಪೂರ್ಣ ಅಧಿಕಾರ -ಡಿಸಿಪಿ ಹರಿರಾಂ ಶಂಕರ್ ಹೇಳಿದ್ದೇನು? ಇಲ್ಲಿದೆ ವಿಡಿಯೋ Read More »