ಕರಾವಳಿ

ನೇತ್ರಾವತಿ ನದಿ ನೀರನ್ನು ಮಲಿನ ಮಾಡಿದ ಆರೋಪ: 4 ಮಂದಿಯ ವಿರುದ್ಧ ಕೇಸ್

ಮಂಗಳೂರು: ಇಲ್ಲಿ ಹರಿಯುವ ನೇತ್ರಾವತಿ ನೀರನ್ನು ಮಲಿನ ಮಾಡಿದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 4 ಮಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಉಪ್ಪಿನಂಗಡಿ ನಿರಲ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕಿ ನವೀನ ರೈ, ಗೌರಿ ವೆಂಕಟೇಶ್ ವಸತಿ ಸಮುಚ್ಚಯದ ಮಾಲಕ ಪ್ರಕಾಶ್ ಭಟ್, ಹೊಟೇಲ್ ಲಕ್ಷ್ಮೀ ನಿವಾಸ ಸಂಸ್ಥೆಯ ಶೇಖರ್ ಮತ್ತು ಇಳಂತಿಲ ಗ್ರಾಮದ ಅಂಡೆತ್ತಡ್ಕ ನಿವಾಸಿ ಸದಾನಂದ ಪ್ರಕರಣದ ಆರೋಪಿಗಳು. ಇವರು ನದಿಗೆ ಮಲಿನ ನೀರು ಬಿಡುವ ಮತ್ತು ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ […]

ನೇತ್ರಾವತಿ ನದಿ ನೀರನ್ನು ಮಲಿನ ಮಾಡಿದ ಆರೋಪ: 4 ಮಂದಿಯ ವಿರುದ್ಧ ಕೇಸ್ Read More »

ಮಂಗಳೂರು: ಕೊನೆಗೂ ಪತ್ತೆಯಾಯಿತು ಶವದಿಂದ ನಾಪತ್ತೆಯಾದ ಡೈಮಂಡ್ – ಕಳ್ಳ ಗಂಡನಿಗೆ ಸಾತ್ ಕೊಟ್ಟು ಹೆಂಡತಿ ಈಗ ಮಾತಾಡಮ್ಮ !!

ಮಂಗಳೂರು: ಕೆಲ ದಿನಗಳ ಹಿಂದೆ ಭಾರೀ ಸುದ್ದಿಯಲ್ಲಿದ್ದ ನಗರದ ಬೆಂದೂರ್ ವೆಲ್ ನಲ್ಲಿರುವ ಖಾಸಗಿ ಆಸ್ಪತ್ರೆಯಾದ ಕೊಲಾಸ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿರುವ ವ್ಯಕ್ತಿಯ ಮೃತದೇಹದ ಕಿವಿಯಿಂದ ನಾಪತ್ತೆಯಾಗಿದ್ದ ವಜ್ರದ ಕಿವಿ ಓಲೆಯನ್ನು ಕದ್ರಿ ಪೊಲೀಸರು ಪತ್ತೆ ಮಾಡಿದ್ದಾರೆ. ಮಾಲ್ ಒಂದರ ಭದ್ರತಾ ವಿಭಾಗದ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಹರೀಶ್ ಶೆಟ್ಟಿ (45) ಗುರುವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಅವನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ತೆಗೆಯಲಾಗಿತ್ತಾದರೂ, ಮೃತದೇಹದ ಕಿವಿಯಲ್ಲಿನ ವಜ್ರದ ಓಲೆ

ಮಂಗಳೂರು: ಕೊನೆಗೂ ಪತ್ತೆಯಾಯಿತು ಶವದಿಂದ ನಾಪತ್ತೆಯಾದ ಡೈಮಂಡ್ – ಕಳ್ಳ ಗಂಡನಿಗೆ ಸಾತ್ ಕೊಟ್ಟು ಹೆಂಡತಿ ಈಗ ಮಾತಾಡಮ್ಮ !! Read More »

ಉಡುಪಿ: ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ – ಸ್ಥಳದಲ್ಲೇ ಸಾವುಕಂಡ ಸವಾರ

ಉಡುಪಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಉಚ್ಚಿಲ ಸಮೀಪದ ಮುಳೂರಿನಲ್ಲಿ ನಡೆದಿದೆ. ಸವಾರನನ್ನು ಪಡುಬಿದ್ರೆ ನಿವಾಸಿ ಚರಣ್ ಶೆಟ್ಟಿ ಮೃತ ಸ್ಕೂಟರ್ ಸವಾರ. ಇವರು ಉಡುಪಿಯಿಂದ ಪಡುಬಿದ್ರೆಯತ್ತ ಸ್ಕೂಟರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದರು. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರಿನ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾದ ಲಾರಿಯ ಹಿಂಬದಿಗೆ ಢಿಕ್ಕಿಯಾಗಿದೆ. ಈ ಪರಿಣಾಮ ಸ್ಕೂಟರ್ ಲಾರಿಯ ಅಡಿಯಲ್ಲಿ ಸಿಲುಕಿದೆ. ಘಟನೆಯಿಂದ ಸವಾರ ಗಂಭೀರವಾಗಿ ಗಾಯಗೊಂಡಿದ್ದು,

ಉಡುಪಿ: ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ – ಸ್ಥಳದಲ್ಲೇ ಸಾವುಕಂಡ ಸವಾರ Read More »

ಉಪ್ಪಿನಂಗಡಿ: ಮೀನಿನ ಅಂಗಡಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಉಪ್ಪಿನಂಗಡಿ: ಇಲ್ಲಿನ ಹಳೆಗೇಟು ಬಳಿ ಇರುವ ಮೀನಿನ ಅಂಗಡಿಯೊಂದಕ್ಕೆ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇದು ಅಶೋಕ್ ಎಂಬವರಿಗೆ ಸೇರಿದ ಮೀನಿನ ಅಂಗಡಿಯಾಗಿದೆ. ಭಾನುವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಿಂದ ಮೀನಿನ ಅಂಗಡಿ ಹಾಗೂ ಮಂಜುಗಡ್ಡೆ ಹಾಕಿ ಶೇಖರಿಸಿಟ್ಟ ಮೀನು ಸುಟ್ಟು ಹೋಗಿವೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು, ಪುತ್ತೂರು ತಾಲೂಕು ಶಾಸಕ ಸಂಜೀವ ಮಠಂದೂರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು ಕಿಡಿಗೇಡಿಗಳ

ಉಪ್ಪಿನಂಗಡಿ: ಮೀನಿನ ಅಂಗಡಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು Read More »

ಮಂಗಳೂರು: ಮಹಿಳೆಯರ ಹೇರ್ಬ್ಯಾಂಡ್‌ನಲ್ಲಿಟ್ಟು ಚಿನ್ನ ಸಾಗಟ – ಆರೋಪಿ ವಶಕ್ಕೆ

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ 5,58,900 ಲಕ್ಷದ ಚಿನ್ನ ಸಾಗಟ ಮಾಡುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ನಡೆದಿದೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ ಮುರುಡೇಶ್ವರ ನಿವಾಸಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಿದಾಗ ಆರೋಪಿಯು ದುಬೈನಿಂದ ಮಹಿಳೆಯರ ಹೇರ್ಬ್ಯಾಂಡ್ ಇನ್ನಿತರ ವಸ್ತುಗಳ ಮೂಲಕ ಚಿನ್ನ ಸಾಗಟ ಮಾಡುತ್ತಿರುವುದು ಪತ್ತೆಯಾಗಿದೆ. ಇನ್ನು ಒಟ್ಟು 115 ಗ್ರಾಂ ನ 558900 ಲಕ್ಷ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಮಂಗಳೂರು: ಮಹಿಳೆಯರ ಹೇರ್ಬ್ಯಾಂಡ್‌ನಲ್ಲಿಟ್ಟು ಚಿನ್ನ ಸಾಗಟ – ಆರೋಪಿ ವಶಕ್ಕೆ Read More »

ಮಂಗಳೂರು: ಶವದಿಂದಲೇ ಡೈಮಂಡ್ ರಿಂಗ್ ಕಳ್ಳತನ|ಆಸ್ಪತ್ರೆಯಲ್ಲಿದ್ದ ಸೆಕ್ಯುರಿಟಿಯ ಸುತ್ತ ಬೆಳೆದ ಅನುಮಾನದ ಹುತ್ತ…!

ಮಂಗಳೂರು: ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದ ವ್ಯಕ್ತಿಯೋರ್ವರ ಮೃತದೇಹವನ್ನು ರಾತ್ರಿ ಬೆಂದೂರು ವೆಲ್ ಕೊಲೊಸೊ ಆಸ್ಪತ್ರೆಯಲ್ಲಿ ಇಡಲಾಗಿತ್ತು. ಆದರೆ, ಇಂದು ಬೆಳಗ್ಗೆ ನೋಡಿದಾಗ ಹರೀಶ್ ಶೆಟ್ಟಿ ಅವರ ಕಿವಿಯಲ್ಲಿದ್ದ ಡೈಮಂಡ್ ರಿಂಗ್ ಕಾಣೆಯಾದ ಬಗ್ಗೆ ಬೆಳಕಿಗೆ ಬಂದಿದೆ.ಸಿಟಿ ಸೆಂಟರ್ ಮಾಲ್‍ನಲ್ಲಿ ಸೆಕ್ಯುರಿಟಿ ವಿಭಾಗದಲ್ಲಿ ಮ್ಯಾನೇಜರ್ ಆಗಿದ್ದ ಹರೀಶ್ ಶೆಟ್ಟಿ (42) ಮೃತ ಪಟ್ಟವರು. ಇವರು ನಿನ್ನೆ ಬೆಳಗ್ಗೆ ತನ್ನ ಪತ್ನಿ, ಮಕ್ಕಳೊಂದಿಗೆ ಕುಂದಾಪುರಕ್ಕೆ ತೆರಳಿದ್ದರು. ಮಧ್ಯಾಹ್ನ ಹೊಟೇಲ್ ಒಂದರಲ್ಲಿ ಊಟ ಮಾಡುತ್ತಿದ್ದಾಗ ದಿಢೀರ್ ಆಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು

ಮಂಗಳೂರು: ಶವದಿಂದಲೇ ಡೈಮಂಡ್ ರಿಂಗ್ ಕಳ್ಳತನ|ಆಸ್ಪತ್ರೆಯಲ್ಲಿದ್ದ ಸೆಕ್ಯುರಿಟಿಯ ಸುತ್ತ ಬೆಳೆದ ಅನುಮಾನದ ಹುತ್ತ…! Read More »

ಉಡುಪಿ: ಸಿಡಿಲು ಬಡಿದು ಇಬ್ಬರು ಗಂಭೀರ

ಉಡುಪಿ: ಗದ್ದೆ‌ ಬದಿಯಲ್ಲಿ ನಡೆದುಕೊಂಡು ಹೋಗುತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಪರ್ಕಳದ ಪರೀಕದಲ್ಲಿ ಸಂಭವಿಸಿದೆ. ಉಡುಪಿಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ. ಸಿಡಿಲು ಅಪ್ಪಳಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಉಡುಪಿ: ಸಿಡಿಲು ಬಡಿದು ಇಬ್ಬರು ಗಂಭೀರ Read More »

ಉಡುಪಿ: ಫುಟ್ ವೇರ್ ಮಳಿಗೆ ಬೆಂಕಿಗಾಹುತಿ: ಲಕ್ಷಾಂತರ ರೂ. ನಷ್ಟ

ಉಡುಪಿ: ಮಣಿಪಾಲದಲ್ಲಿರುವ ಫುಟ್ ವೇರ್ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಉಂಟಾಗಿ ಲಕ್ಷಾಂತರ ರೂ. ನಷ್ಟವಾದ ಘಟನೆ ಗುರುವಾರ ರಾತ್ರಿ ನಡೆದಿದೆ. ಖ್ಯಾತ ಫುಟ್ ವೇರ್ ಮಳಿಗೆಗೆ ಇದಾಗಿದ್ದು ಶಾಟ್ ಸಕ್ರ್ಯೂಟ್’ನಿಂದ ದುರಂತ ಸಂಭವಿಸಿದೆ. ಅಂಗಡಿ ಮಾಲೀಕರು ರಾತ್ರಿ ವ್ಯವಹಾರ ಮುಗಿಸಿ ಅಂಗಡಿ ಮುಚ್ಚಿ ತೆರಳಿದ ಬಳಿಕ ಈ ಘಟನೆ ನಡೆದಿದೆ. ಒಳಗಿದ್ದ ಸಂಪೂರ್ಣ ದಾಸ್ತಾನು ಬೆಂಕಿಗಾಹುತಿಯಾಗಿದ್ದು ಉಡುಪಿ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಫುಟ್ ವೇರ್ ಮಳಿಗೆ ಅಲ್ಲದೇ ಪಕ್ಕದ ಒಂದು

ಉಡುಪಿ: ಫುಟ್ ವೇರ್ ಮಳಿಗೆ ಬೆಂಕಿಗಾಹುತಿ: ಲಕ್ಷಾಂತರ ರೂ. ನಷ್ಟ Read More »

ತಾಲಿಬಾನಿಗಳ ಕರಿನೆರಳು| ಆತಂಕದಲ್ಲಿದ್ದಾರೆ ಮಂಗಳೂರು ವಿ.ವಿಯ ಅಪ್ಘಾನ್ ವಿದ್ಯಾರ್ಥಿಗಳು|

ಮಂಗಳೂರು : ದೇಶವು ತಾಲಿಬಾನ್‌ ಉಗ್ರರ ಕೈವಶವಾಗುತ್ತಿದ್ದಂತೆ ಇತ್ತ ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಅಫ್ಘಾನಿ ಸ್ಥಾನದ ವಿದ್ಯಾರ್ಥಿಗಳು ಮುಂದೇನು ಎಂಬ ಆತಂಕದಲ್ಲಿದ್ದಾರೆ. 2-3 ವರ್ಷದ ಹಿಂದೆ ಮಂಗಳೂರಿಗೆ ಶಿಕ್ಷಣಕ್ಕಾಗಿ ಬಂದಿದ್ದ ಈ ವಿಧ್ಯಾರ್ಥಿಗಳು ಪದವಿಯಲ್ಲಿ 18, ಸ್ನಾತಕೋತ್ತರ ಪದವಿಯಲ್ಲಿ 13, ಪಿಎಚ್‌ಡಿಯಲ್ಲಿ 22 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಹಾಸ್ಟೆಲ್‌ಗ‌ಳಲ್ಲಿದ್ದಾರೆ. ತಮ್ಮ ದೇಶದಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ಮಾಧ್ಯಮಗಳ ಮೂಲಕ ಮೊಬೈಲ್‌ ಕರೆ ಮಾಡಿ ವಿಚಾರಿಸುತ್ತಿರುವ ದೃಶ್ಯ ಕಂಡು ಬರುತ್ತಿದೆ. ಕೆಲವು ವಿದ್ಯಾರ್ಥಿಗಳು ದೇಶದ ಪರಿಸ್ಥಿತಿ ಹಾಗೂ ಮನೆ ಮಂದಿಯ

ತಾಲಿಬಾನಿಗಳ ಕರಿನೆರಳು| ಆತಂಕದಲ್ಲಿದ್ದಾರೆ ಮಂಗಳೂರು ವಿ.ವಿಯ ಅಪ್ಘಾನ್ ವಿದ್ಯಾರ್ಥಿಗಳು| Read More »

ಬೆಳ್ತಂಗಡಿ| ತಾಯಿಯನ್ನೇ ಅತ್ಯಾಚಾರ‌ ಮಾಡಿದ್ದಾನೆ ಈತ…!, ಯುವಕನ ವಿರುದ್ಧ ಅಶ್ಲೀಲ ಸಂದೇಶ ರವಾನೆ, ದೂರು ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಲಾಯಿಲದ ಯುವಕನ ಬಗ್ಗೆ ಮಾನಹಾನಿಕರವಾಗಿ ಅಪಪ್ರಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಲಾಯಿಲ ಸಮೃದ್ಧಿ ನಿವಾಸದ ಸುಶಾನ್ ಚಂದ್ರ ಎಂಬ ಯುವಕನ ಬಗ್ಗೆ ಇತ್ತೀಚೆಗಷ್ಟೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶವನ್ನು ಕಿಡಿಗೇಡಿಗಳು ರವಾನಿಸಿದ್ದರು.`ಯುವಕನೋರ್ವ ತನ್ನ ತಾಯಿಯನ್ನು ನಿರಂತರವಾಗಿ ಅತ್ಯಾಚಾರ ಮಾಡಿ ಗರ್ಭ ಧರಿಸುವಂತೆ ಮಾಡಿ ಪರಾರಿಯಾಗಿದ್ದಾನೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ. ಈ ವಿಕೃತ ಕಾಮಿಯ ಹೆಸರು ಸುಶನ್ ಚಂದ್ರ 56 ಅಡಿ ಎತ್ತರವಿದ್ದು, ಗುಂಗುರು ಕೂದಲು

ಬೆಳ್ತಂಗಡಿ| ತಾಯಿಯನ್ನೇ ಅತ್ಯಾಚಾರ‌ ಮಾಡಿದ್ದಾನೆ ಈತ…!, ಯುವಕನ ವಿರುದ್ಧ ಅಶ್ಲೀಲ ಸಂದೇಶ ರವಾನೆ, ದೂರು ದಾಖಲು Read More »