ಕರಾವಳಿ

ಸಾಂಕ್ರಾಮಿಕ ರೋಗಗಳ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ದ.ಕ ಡಿಸಿ ರಾಜೇಂದ್ರ

ಮಂಗಳೂರು : ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ, ಸೇರಿದಂತೆ ಮತ್ತಿತರ ರೋಗಗಳ ನಿಯಂತ್ರಣ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದ್ದಾರೆ. ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಮಲೇರಿಯಾ, ಡೆಂಗ್ಯೂ ನಿಯಂತ್ರಣದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು, ಮಳೆ ನೀರು ಎಲ್ಲೆಂದರಲ್ಲಿ ನಿಂತು ಅದರಲ್ಲಿ ಸೊಳ್ಳೆ ಉತ್ಪತ್ತಿ ಹೆಚ್ಚಾಗಿ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ಸೇರಿದಂತೆ ಮತ್ತಿತರ ರೋಗಗಳು […]

ಸಾಂಕ್ರಾಮಿಕ ರೋಗಗಳ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ದ.ಕ ಡಿಸಿ ರಾಜೇಂದ್ರ Read More »

ಮಂಗಳೂರು: ಟಿಪ್ಪರ್ ಸಹಿತ ಸಮುದ್ರ ಪಾಲಾದವರ ಶವಗಳು ಹೊರಕ್ಕೆ

ಮಂಗಳೂರು: ಪಣಂಬೂರು ಎನ್‌ಎಂಪಿಟಿ ಬಂದರಿನಲ್ಲಿ ಹಡಗಿನಿಂದ ಅದಿರು ಹೊತ್ತೊಯ್ಯಲು ಬಂದಿದ್ದ ಟಿಪ್ಪರ್ ಸಹಿತ ಚಾಲಕ ಮತ್ತು ನಿರ್ವಹಾಕ ಸಮುದ್ರಪಾಲದ ಘಟನೆಯಲ್ಲಿ ಚಾಲಕನ ಶವ ನಿನ್ನೆ ರಾತ್ರಿ ಪತ್ತೆಯಾದರೆ ನಿರ್ವಾಹಕನ ಶವ ಇಂದು ಸಂಜೆ ಪತ್ತೆಯಾಗಿದೆ. ಡೆಲ್ಟಾ ಕಂಪನಿಗೆ ಸೇರಿದ ಟ್ರಕ್ ಜೂ.20 ರ ರಾತ್ರಿ 10:30 ರ ಸುಮಾರಿಗೆ ಹಡಗಿನಿಂದ ಕಬ್ಬಿಣದ ಅದಿರು ಅನ್ಲೋಡ್ ಮಾಡಿ ತುಂಬಿಸಿಕೊಳ್ಳಲು 14ನೇ ಬರ್ತ್ ಗೆ ಬಂದಿತ್ತು. ಆದರೆ ಖಾಲಿಯಿದ್ದ ಟ್ರಕ್ ಅಕಸ್ಮಾತ್ ಸಮುದ್ರಕ್ಕೆ ಬಿದ್ದು ಮುಳುಗಿದ್ದು ಅದರಲ್ಲಿದ್ದ ಚಾಲಕ ಮತ್ತು

ಮಂಗಳೂರು: ಟಿಪ್ಪರ್ ಸಹಿತ ಸಮುದ್ರ ಪಾಲಾದವರ ಶವಗಳು ಹೊರಕ್ಕೆ Read More »

ಕುಂದಾಪುರ: ವಿವಾಹಿತನೊಂದಿಗೆ ಯುವತಿ ಪರಾರಿ

ಕುಂದಾಪುರ: ವಿವಾಹಿತನೊಂದಿಗೆ ಯುವತಿಯೋರ್ವಳು ಪರಾರಿಯಾದ ಘಟನೆ ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದಿದೆ. ಆಲೂರು ಗ್ರಾಮದ ಹಳ್ಳಿ ಹೆಬ್ಬಾಗಿಲು ನಿವಾಸಿ ಚಂದ್ರ (೪೨) ಹಾಗೂ ನೆರೆಮನೆಯಲ್ಲಿ ವಾಸಿಸುತ್ತಿದ್ದ ವನಜಾ (೨೯) ಎಂಬವರು ಒಂದ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಜೂನ್ ೭ರಂದು ಚಂದ್ರ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆ ಬಿಟ್ಟು ನಾಪತ್ತೆಯಾಗಿದ್ದಾರೆ. ಅದೇ ದಿನ ವನಜಾ ಕೂಡಾ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದು, ಇಬ್ಬರೂ ಕೂಡಾ ಇಲ್ಲಿಯವರೆಗೆ ಮನೆಗೆ ವಾಪಾಸ್ಸಾಗದೇ ನಾಪಾತ್ತೆಯಾಗಿದ್ದಾರೆ ಎಂದು

ಕುಂದಾಪುರ: ವಿವಾಹಿತನೊಂದಿಗೆ ಯುವತಿ ಪರಾರಿ Read More »

ಮಗನ ಕೇಶ ಅರ್ಪಿಸಿ ಕೊಲ್ಲೂರು ದೇವಿಯ ಹರಕೆ ತೀರಿಸಿದ ರಿಷಬ್ ಶೆಟ್ಟಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಮಗನ ತಲೆ ಕೂದಲು ತೆಗೆಸಿ ಹರಕೆಯನ್ನು ತೀರಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರಾದ ರಿಷಬ್ ಶೆಟ್ಟಿಯವರು, ಪತ್ನಿ ಪ್ರಗತಿ ಹಾಗೂ ಮಗ ರನ್ವಿತ್ ಸಮೇತ ಕೊಲ್ಲೂರಿಗೆ ಭೇಟಿ ನೀಡಿ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಅನ್‌ಲಾಕ್ ಆರಂಭವಾದ ಮೊದಲ ದಿನವೇ ದೇವಾಲಯಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ಅವರು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ರಿಷಬ್ ಶೆಟ್ಟಿ ಫಿಲ್ಮ್ಸ್

ಮಗನ ಕೇಶ ಅರ್ಪಿಸಿ ಕೊಲ್ಲೂರು ದೇವಿಯ ಹರಕೆ ತೀರಿಸಿದ ರಿಷಬ್ ಶೆಟ್ಟಿ Read More »

ಸೋಮೇಶ್ವರ: ಕೋವಿಡ್ ನಿಂದ ಮೃತಪಟ್ಟ 12 ಜನ ಅನಾಥರ ಪಿಂಡಪ್ರದಾನ ಮಾಡಿದ ಜಿಲ್ಲಾಡಳಿತ

ಸೋಮೇಶ್ವರ: ಕೋವಿಡ್ ನಿಂದ ಮೃತಪಟ್ಟ 12 ಜನ ಅನಾಥರ ಮೋಕ್ಷಕ್ಕೆ ದ.ಕ. ಜಿಲ್ಲಾಡಳಿತದ ವತಿಯಿಂದ ತಿಲಹೋಮ ಮತ್ತು ಪಿಂಡ ಪ್ರದಾನ ಕಾರ್ಯಕ್ರಮ ಸೋಮೇಶ್ವರದ ಸೋಮನಾಥೇಶ್ವರ ದೇವಾಲಯದಲ್ಲಿ ನಡೆಯಿತು. ಸ್ಥಳೀಯ ಅರ್ಚಕರಾದ ಶಂಕರ್ ಅಡಿಗ ಅವರ ಮಾರ್ಗದರ್ಶನದಲ್ಲಿ ಮೃತರ ಪರವಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ರವಿಶಂಕರ್ ಸೋಮೇಶ್ವರ ವಿಧಿವಿಧಾನಗಳನ್ನು ನೆರವೇರಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಸೋಮೇಶ್ವರ ಸಮುದ್ರಕಿನಾರೆಯಲ್ಲಿ ಪಿಂಡಪ್ರದಾನ ಮಾಡಿದರು. ದ ಕ ಜಿಲ್ಲಾಸ್ಪತ್ರೆಯಲ್ಲಿ 12 ಜನ ಅನಾಥರು ಕೊರೋನಾಗೆ ತುತ್ತಾಗಿ ಸಾವನ್ನಪ್ಪಿದ್ದರು. ಅವರೆಲ್ಲರ ಅಂತ್ಯಸಂಸ್ಕಾರ

ಸೋಮೇಶ್ವರ: ಕೋವಿಡ್ ನಿಂದ ಮೃತಪಟ್ಟ 12 ಜನ ಅನಾಥರ ಪಿಂಡಪ್ರದಾನ ಮಾಡಿದ ಜಿಲ್ಲಾಡಳಿತ Read More »

ಮಂಗಳೂರು ಬಂದರಿನಲ್ಲಿ ನೀರಿಗೆ ಬಿದ್ದ ಲಾರಿ |ಚಾಲಕರಿಬ್ಬರು ಸಾವು ಶಂಕೆ

ಮಂಗಳೂರು: ನವಮಂಗಳೂರು ಬಂದರಿನಲ್ಲಿ ನಿನ್ನೆ ರಾತ್ರಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಇಳಿದಿದ್ದು ಚಾಲಕರಿಬ್ಬರು ಲಾರಿ ಸಹಿತ ಕಣ್ಮರೆಯಾಗಿದ್ದಾರೆ. ಎನ್ಎಂಪಿಟಿ ಯ 14ನೇ ಬರ್ತ್ ನಲ್ಲಿ ನಿನ್ನೆ ಮಧ್ಯರಾತ್ರಿ ಘಟನೆ ಸಂಭವಿಸಿದೆ. ಕಣ್ಮರೆಯಾದ ವರನ್ನು ಚಾಲಕ ರಾಜೇಶಾಬ್ (25) ಮತ್ತು ಬದಲಿ ಚಾಲಕ ಮಾಲಕಪ್ಪ (35) ಎಂದು ಗುರುತಿಸಲಾಗಿದೆ. ಇಬ್ಬರೂ ಚಾಲಕರು ಸಾವವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಲಾರಿಗೆ ಹಡಗಿನಿಂದ ಸರಕು ತುಂಬಿಸಲು ತರುತ್ತಿದ್ದಾಗ ಆಕಸ್ಮಿಕವಾಗಿ ಲಾರಿ ನೀರಿಗೆ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಮಂಗಳೂರು ಬಂದರಿನಲ್ಲಿ ನೀರಿಗೆ ಬಿದ್ದ ಲಾರಿ |ಚಾಲಕರಿಬ್ಬರು ಸಾವು ಶಂಕೆ Read More »

ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು

ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು ಉಪ್ಪಿನಂಗಡಿ : ಇಲಿ ವಿಷ ತಿಂದು 2ವರ್ಷದ ಮಗು ಮೃತಪಟ್ಟಿರುವ ಘಟನೆ ನೆಲ್ಯಾಡಿಯ ಬಜತ್ತೂರಿನಲ್ಲಿ ನಡೆದಿದೆ. ಬಜತ್ತೂರಿನ ಕೆಮ್ಮಾರದ ನಿವೃತ್ತ ಸೈನಿಕ ಸೈಜು ಎಂಬವರು ಪುತ್ರಿ ಶ್ರೇಯಾ (2) ಮೃತಪಟ್ಟ ಮಗು. ಶ್ರೇಯಾ ತಂದೆ-ತಾಯಿ ಮನೆಯಲ್ಲಿ ಹಳೇ ವಸ್ತುಗಳನ್ನು ಕ್ಲೀನ್ ಮಾಡುತ್ತಿದ್ದರು. ಪಕ್ಕದಲ್ಲೇ ಇದ್ದ ಶ್ರೇಯಾ ಇಲಿ ವಿಷ ತೆಗೆದು ತಿಂದಿದ್ದಾಳೆ. ಇದು ಪೋಷಕರ ಗಮನಕ್ಕೆ ಬರುವುದು ಕೊಂಚ ತಡವಾಗಿದ್ದು, ಮಗು ವಿಷ ತಿಂದಿರುವುದನ್ನು ತಿಳಿದ ತಕ್ಷಣ

ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು Read More »

ಮಂಗಳಾದೇವಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ | ಪ್ರಕರಣ ದಾಖಲು

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿ ಮದುವೆ ಏರ್ಪಡಿಸಲಾಗಿತ್ತು. ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸ್ವಲ್ಪಮಟ್ಟಿಗೆ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆಯಾದರೂ ಅದ್ದೂರಿ ಮದುವೆ ಇನ್ನಿತರ ಸಮಾರಂಭಗಳಿಗೆ ಅವಕಾಶವಿಲ್ಲ. ಮನೆಯಲ್ಲಿ ಮದುವೆಗೆ ಅವಕಾಶವಿದ್ದು ನಿಗದಿತ ಜನ ಸೇರಿಸಬಹುದಾಗಿದೆ. ದೇವಸ್ಥಾನದಲ್ಲಿ ನಡೆದ ಮದುವೆಯಲ್ಲಿ ನಿಯಮ ಮೀರಿ ಜನ ಸೇರಿಸಲಾಗಿದೆ. ಪಾಲಿಕೆಯ ನಾಮನಿರ್ದೇಶಿತ ಸದಸ್ಯರೊಬ್ಬರ ಮಗಳು ಸೇರಿದಂತೆ ಐದಾರು ಜೋಡಿ ಮದುವೆ ನಡೆಯುತ್ತಿತ್ತು. ಸುಮಾರು 40ಕ್ಕೂ ಹೆಚ್ಚು ವಾಹನಗಳಲ್ಲಿ

ಮಂಗಳಾದೇವಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ | ಪ್ರಕರಣ ದಾಖಲು Read More »

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್

ಸುಬ್ರಹ್ಮಣ್ಯ: ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ನಿರ್ಬಂಧವಿದ್ದರೂ ಹೊರಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಭಕ್ತರನ್ನು ಗುಂಡ್ಯ ಚೆಕ್’ಪೋಸ್ಟ್ ನಿಂದಲೇ ವಾಪಸ್ ಕಳುಹಿಸುವ ಕಾರ್ಯ ನಡೆಯುತ್ತಿದೆ. ಅಗತ್ಯ ದಾಖಲೆಗಳನ್ನು ಹೊಂದಿದವವರನ್ನು ಮಾತ್ರ ಜಿಲ್ಲೆಯ ಒಳಬರಲು ಬಿಡಲಾಗುತ್ತಿದೆ. ಶಿರಾಡಿ ಘಾಟ್ ಮೂಲಕ ಜಿಲ್ಲೆಯ ಧರ್ಮಸ್ಥಳ ಮತ್ತು ಸುಬ್ರಮಣ್ಯ ಪುಣ್ಯಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ತೀರ್ಥಯಾತ್ರೆ ಆಗಮಿಸಿದ್ದ ಬರೋಬ್ಬರಿ 69 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳನ್ನು ಕರೆಯಲಾಗುವುದಿಲ್ಲ. ಅಂತರ್ ಜಿಲ್ಲಾ ಗಡಿಗಳಲ್ಲಿ

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್ Read More »

ಅಗತ್ಯ ವಸ್ತು ಖರೀದಿಗೆ ಮದ್ಯಾಹ್ನ 1 ರವರೆಗೆ ಅವಕಾಶ: ದಕ ಜಿಲ್ಲಾಧಿಕಾರಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಲಾಕ್‌ ಡೌನ್ ಜೂ.21 ರಿಂದ ಜೂ.28 ರವರೆಗೆ ಸೆಮಿ ಲಾಕ್‌ಡೌನ್ ಮಾದರಿಯಲ್ಲಿ ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲಾಕ್‌ ಡೌನ್ ತೆರವು ಕುರಿತಂತೆ ರಾಜ್ಯ ಸರಕಾರ ಶನಿವಾರ ಹೊರಡಿಸಿದೆ ಆದೇಶದಂತೆ ಜೂ.11ರಂದು ಹೊರಡಿಸಿದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಹಾಗಾಗಿ ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ. ಆದಾಗ್ಯೂ

ಅಗತ್ಯ ವಸ್ತು ಖರೀದಿಗೆ ಮದ್ಯಾಹ್ನ 1 ರವರೆಗೆ ಅವಕಾಶ: ದಕ ಜಿಲ್ಲಾಧಿಕಾರಿ Read More »