ಭಾರೀಮಳೆಗೆ ತತ್ತರಿಸಿದ ಕುಕ್ಕೆ ಸುಬ್ರಹ್ಮಣ್ಯ| ಸ್ನಾನಘಟ್ಟ ಮುಳುಗಡೆ, ತಗ್ಗುಪ್ರದೇಶಕ್ಕೆ ನುಗ್ಗಿದ ನೆರೆ
ಕುಮಾರಧಾರದ ಉಪನದಿಯಾದ ದರ್ಪಣತೀರ್ಥವು ತುಂಬಿ ಹರಿದು ದರ್ಪಣತೀರ್ಥ ಸೇತುವೆಯು ಮುಳು ಗಡೆಗೊಂಡಿತ್ತು. ಇದರಿಂದಾಗಿ ಸುಬ್ರ ಹ್ಮಣ್ಯ- ಪುತ್ತೂರು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕುಕ್ಕೆಯ ಪರಿಸರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ನದಿ ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಸ್ನಾನಘಟ್ಟ ಜಲಾವೃತ್ತ: ಘಟ್ಟ ಪ್ರದೇಶದಲ್ಲಿ ಸುರಿದ ಮಳೆಯ ಪರಿಣಾಮ ಕುಮಾರಧಾರ ನದಿಯು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಕುಮಾರಧಾರ ಸ್ನಾನಘಟ್ಟವು ಮುಂಜಾನೆ ಮುಳುಗಡೆಯಾಗಿತ್ತು. ಸ್ನಾನಘಟ್ಟದಲ್ಲಿ ನಿರ್ಮಿತವಾಗಿದ್ದ ಶೌಚಾಲಯ ನೀರಿನಿಂದ ಆವೃತ ಗೊಂಡಿತ್ತು. ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಭಾರೀ […]









