ಕರಾವಳಿ

ದಕ್ಷಿಣ ಕನ್ನಡ ಗಡಿಯಲ್ಲಿ ಆಗಸ್ಟ್ 30ರ ವರೆಗೂ ಮದ್ಯದಂಗಡಿಗಳು ಬಂದ್-ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸದ್ಯ ಗಡಿಯಲ್ಲಿರುವ ಮದ್ಯದಂಗಡಿಗಳನ್ನು ಆಗಸ್ಟ್ 30ರ ತನಕ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ನೆರೆಯ ಕೇರಳ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಭಿಸಿದ್ದು ಇದರಿಂದ ಕೋವಿಡ್ ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ […]

ದಕ್ಷಿಣ ಕನ್ನಡ ಗಡಿಯಲ್ಲಿ ಆಗಸ್ಟ್ 30ರ ವರೆಗೂ ಮದ್ಯದಂಗಡಿಗಳು ಬಂದ್-ಜಿಲ್ಲಾಧಿಕಾರಿ ಆದೇಶ Read More »

ಒಂದೆಡೆ ಸಾವರ್ಕರ್ ರಥಯಾತ್ರೆ, ಮತ್ತೊಂದೆಡೆ ಆರೋಪಿಗಳಿಗೆ ಜಾಮೀನು- ಇದೆಂಥಾ ವಿಪರ್ಯಾಸ…!?

ಪುತ್ತೂರು: ಕಬಕ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಸಾವರ್ಕರ್ ಫೋಟೊ ಇದ್ದ ವಾಹನವನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.ಕಬಕ ಗ್ರಾಮ ಪಂಚಾಯತ್ ವತಿಯಿಂದ ನಡೆಸಲಾಗಿದ್ದ ಸ್ವರಾಜ್ಯ ರಥ ಯಾತ್ರೆಯಲ್ಲಿ ಸಾವರ್ಕರ್ ಭಾವಚಿತ್ರವನ್ನು ಅಳವಡಿಸಿರುವುದನ್ನು ಆಕ್ಷೇಪಿಸಿ ರಥ ಯಾತ್ರೆ ತಡೆದು ಪ್ರತಿಭಟನೆ ವ್ಯಕ್ತಪಡಿಸಿದ್ದರು. ಪುತ್ತೂರು ತಾಲೂಕಿನ ಕಬಕ ಗ್ರಾಮದ ವಿದ್ಯಾಪುರ ಅಜೀಜ್ (43), ಶಮೀರ್ ಮುರ (40) ಹಾಗೂ ಕೊಡಿಪ್ಪಾಡಿ ಗ್ರಾಮದ ಅಬ್ದುಲ್ ರಹಿಮಾನ್‌ ಅವರನ್ನು ಪುತ್ತೂರು ನಗರ

ಒಂದೆಡೆ ಸಾವರ್ಕರ್ ರಥಯಾತ್ರೆ, ಮತ್ತೊಂದೆಡೆ ಆರೋಪಿಗಳಿಗೆ ಜಾಮೀನು- ಇದೆಂಥಾ ವಿಪರ್ಯಾಸ…!? Read More »

ಕಮಿಷನರ್ ಗೆ ಧ್ವನಿಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾದ ದಂಪತಿ – ಕೋವಿಡ್,ಬ್ಲ್ಯಾಕ್ ಫಂಗಸ್ ಗೆ ಹೆದರಿ ಜೀವತ್ಯಾಗ..!

ಮಂಗಳೂರು: ಕೋವಿಡ್ ತಗುಲಿದೆ ಎಂಬ ಭಯದಲ್ಲಿ ದಂಪತಿ, ನಗರ ಪೊಲೀಸ್ ಕಮಿಷನರ್‌ಗೆ ವಾಟ್ಸ್ ಆ್ಯಪ್‌ನಲ್ಲಿ ಧ್ವನಿ ಮುದ್ರಣ ಕಳುಹಿಸಿ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಉದ್ಯಮಿ ರಮೇಶ ಸುವರ್ಣ ತಾನು ಎಂದು ಆ ವ್ಯಕ್ತಿ ಹೇಳಿಕೊಂಡಿದ್ದಾರೆ. ‘ಕೋವಿಡ್ ಬಂದಿರುವ ಕಾರಣಕ್ಕೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಕಳುಹಿಸಿರುವ ಧ್ವನಿ ಮುದ್ರಣದಲ್ಲಿ ಅವರು ತಿಳಿಸಿದ್ದರು. ಆ ವ್ಯಕ್ತಿ ಕರೆಯನ್ನು ಸ್ವೀಕರಿಸುತ್ತಿಲ್ಲದ ಕಾರಣ ಪೊಲೀಸ್ ಕಮಿಷನರ್ ಪುನಃ ಧ್ವನಿ ಮುದ್ರಣ‌ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ಳದಂತೆ

ಕಮಿಷನರ್ ಗೆ ಧ್ವನಿಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾದ ದಂಪತಿ – ಕೋವಿಡ್,ಬ್ಲ್ಯಾಕ್ ಫಂಗಸ್ ಗೆ ಹೆದರಿ ಜೀವತ್ಯಾಗ..! Read More »

ಮಂಗಳೂರು: ಸಿಟಿ ಬಸ್ ಮೇಲೆ ಉರುಳಿ ಬಿದ್ದ ತೆಂಗಿನಮರ.! ಬೊಂಡ ಕಿತ್ತ ಸಾರ್ವಜನಿಕರು

ಮಂಗಳೂರು: ಸಿಟಿ ಬಸ್ ಮೇಲೆ ತೆಂಗಿನಮರವೊಂದು ಬಿದ್ದ ಘಟನೆ ಆ. 17 ರ ನಗರದ ಮಲ್ಲಿಕಟ್ಟೆ ವೃತ್ತದ ಬಳಿ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರೆಲ್ಲರೂ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಬೆಳಗ್ಗೆ ಸುಮಾರು ಹತ್ತುಗಂಟೆ ವೇಳೆ ಚಲಿಸುತ್ತಿದ್ದ 15 ನಂಬರ್ ನ ಸಿಟಿ ಬಸ್ ಮೇಲೆ ಬಿದ್ದಿದೆ. ತೆಂಗಿನ ಮರ ಬಸ್ ನ ಹಿಂಬಂದಿಗೆ ಬಿದ್ದ ಕಾರಣ ಸಂಭವನೀಯ ಅಪಾಯ ತಪ್ಪಿದೆ. ಸ್ಥಳಕ್ಕೆ ಮಾಜಿ ಎಮ್.ಎಲ್.ಸಿ ಐವನ್ ಡಿಸೋಜ್ ಅವರು ಹಾಗು ಮಾಜಿಮೇಯರ್ ಶಶಿಧರ ಹೆಗ್ಡೆಯವರು ಭೇಟಿ ನೀಡಿದರು ಬಿದ್ದ

ಮಂಗಳೂರು: ಸಿಟಿ ಬಸ್ ಮೇಲೆ ಉರುಳಿ ಬಿದ್ದ ತೆಂಗಿನಮರ.! ಬೊಂಡ ಕಿತ್ತ ಸಾರ್ವಜನಿಕರು Read More »

ಆ. 30ರವರೆಗೆ ದ.ಕದಲ್ಲಿ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ | ಡಿ.ಸಿ ಡಾ| ರಾಜೇಂದ್ರ ಕೆ.ವಿ ಆದೇಶ

ದ.ಕ. ಜಿಲ್ಲೆಯಲ್ಲಿ ಆಗಸ್ಟ್ 30ರ ತನಕ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಆಗಸ್ಟ್ 30 ಬೆಳಗ್ಗೆ 6 ರ ತನಕ ಹೊಸ ಆದೇಶ ಅನ್ವಯವಾಗಲಿದೆ. ಜಿಲ್ಲಾಧಿಕಾರಿಗಳ ಆದೇಶದಲ್ಲಿ ಏನಿದೆ? ಜಿಲ್ಲೆಯಲ್ಲಿರುವ ಎಲ್ಲಾ ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಗಳು ತೆರೆಯಬಹುದು. ಆದರೆ, ಸೋಮವಾರದಿಂದ ಶುಕ್ರವಾರವರೆಗೆ ರಾತ್ರಿ 7ರ ತನಕ ಮಾತ್ರ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯ

ಆ. 30ರವರೆಗೆ ದ.ಕದಲ್ಲಿ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ | ಡಿ.ಸಿ ಡಾ| ರಾಜೇಂದ್ರ ಕೆ.ವಿ ಆದೇಶ Read More »

ಮಂಗಳೂರು: ಪಂಪ್ವೆಲ್, ಕಂಕನಾಡಿಯಲ್ಲಿ ಸಾವರ್ಕರ್ ಬ್ಯಾನರ್ ಅಳವಡಿಸಿದ ಭಜರಂಗದಳ

ಮಂಗಳೂರು: ಇಲ್ಲಿನ ಪ್ರಮುಖ ಜನನಿಬಿಡ ಪ್ರದೇಶ ಪಂಪ್ವೆಲ್ ಮೇಲ್ಸೇತುವೆ ಮೇಲೆ ಬಜರಂಗದಳದ ಕಾರ್ಯಕರ್ತರು ವೀರ ಸಾವರ್ಕರ್ ಬ್ಯಾನರ್ ಮತ್ತೆ ಅಳವಡಿಸಿರುವ ಘಟನೆ ಇಂದು ರಾತ್ರಿ ನಡೆದಿದೆ. ಪುತ್ತೂರು ಸಮೀಪದ ಕಬಕದಲ್ಲಿ ನಿನ್ನೆ ಎಸ್ ಡಿಪಿಐ ಕಾರ್ಯಕರ್ತರು ಸ್ವಾತಂತ್ರ್ಯ ರಥಯಾತ್ರೆಯಲ್ಲಿನ ಸಾವರ್ಕರ್ ಫೋಟೋ ತೆಗೆಯಲು ಕ್ಯಾತೆ ತೆಗೆದು ವಿವಾದಕ್ಕೀಡಾದ ಬೆನ್ನಲ್ಲೇ ಮತ್ತೆ ಕರಾವಳಿಯಲ್ಲಿ ಕೋಮುದ್ವೇಷ ಭುಗಿಲೇಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿಂದೆ ಪಂಪ್ವೆಲ್ ಮೇಲ್ಸೇತುವೆ ಮೇಲೆ ಅಳವಡಿಸಿದ್ದ ಸಾವರ್ಕರ್ ಬ್ಯಾನರ್ ಅನ್ನು ತೆರವುಗೊಳಿಸಲಾಗಿದ್ದು, ಇದೀಗ ಮತ್ತೆ ಭಜರಂಗದಳದ ಕಾರ್ಯಕರ್ತರು

ಮಂಗಳೂರು: ಪಂಪ್ವೆಲ್, ಕಂಕನಾಡಿಯಲ್ಲಿ ಸಾವರ್ಕರ್ ಬ್ಯಾನರ್ ಅಳವಡಿಸಿದ ಭಜರಂಗದಳ Read More »

ಮಂಗಳೂರು: ಕಾಡುಪ್ರಾಣಿ ಬೇಟೆ – 12 ಮಂದಿ ಅರೆಸ್ಟ್, ಆಯುಧಗಳ ವಶ

ಮಂಗಳೂರು: ಮೂಡುಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಡ್ಯಡ್ಕ ಗುಡ್ಡೆಯಂಗಡಿಯಲ್ಲಿ ಕಾಡು ಪ್ರಾಣಿ ಬೇಟೆಯಾಡುತ್ತಿದ್ದ12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾನ್‌ ಮನೆಜಸ್‌‌, ಶ್ರೀನಿವಾಸ್‌, ಗುರುಪ್ರಸಾದ್‌, ಜೋಯಲ್‌ ಅನಿಲ್‌ ಡಿಸೋಜಾ, ಅನಜಯ್‌‌, ಸನತ್‌, ಹರೀಶ್‌ ಪೂಜಾರಿ, ಮೋಹನ್‌ ಗೌಡ, ನೋಣಯ್ಯ, ವಿನಯ್‌‌ ಪೂಜಾರಿ, ರಮೇಶ್‌ ಹಾಗೂ ಗಣೇಶ್‌ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 4 ಗನ್, 1 ಗ್ಯಾಸ್ ಸಿಲಿಂಡರ್, 12 ಮೊಬೈಲ್ ಫೋನ್, 2ಮರದ ತುಂಡು, ಗ್ಯಾಸ್ ಬರ್ನರ್, ನೆಟ್, ಮತ್ತಿತ್ತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು: ಕಾಡುಪ್ರಾಣಿ ಬೇಟೆ – 12 ಮಂದಿ ಅರೆಸ್ಟ್, ಆಯುಧಗಳ ವಶ Read More »

ಮಂಗಳೂರು: ಕೆ.ಜಿ ಗಟ್ಟಲೆ ಅಪಾಯಕಾರಿ ಸ್ಫೋಟಕ ಪತ್ತೆ : ಓರ್ವ ಬಂಧನ

ಮಂಗಳೂರು: ಅಕ್ರಮವಾಗಿ 1725 ಕೆ.ಜಿ.ಗೂ ಅಧಿಕ ಅಪಾಯಕಾರಿ ಸ್ಫೋಟಕಳನ್ನು ನಗರದ ಬಂದರ್‍ನ ಗಾಂಧಿ ಸನ್ಸ್ ಕಟ್ಟಡದ ಕೊಠಡಿಯೊಂದರಲ್ಲಿ ದಾಸ್ತಾನು ಇರಿಸಿರುವ ವಿಷಯ ಬೆಳಕಿಗೆ ಬಂದಿದ್ದು, ಇದಕ್ಕೆ ಸಂಬಂಧಸಿದಂತೆ ಓರ್ವನ್ನು ಮಂಗಳೂರು ಪೆÇಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಮುಡಿಪು ಕೈರಂಗಳ ನಿವಾಸಿ ಆನಂದ ಗಟ್ಟಿ (50) ಬಂಧಿತ ಆರೋಪಿ. ಈತನಿಂದ 400 ಕೆ.ಜಿ. ಸಲ್ಫರ್ ಪೌಡರ್, 350 ಕೆ.ಜಿ. ಪೆÇಟ್ಯಾಷಿಯಂ ನೈಟ್ರೇಟ್, 50 ಕೆ.ಜಿ. ಬ್ಯಾರಿಯಂ ನೈಟ್ರೇಟ್, 395 ಕೆ.ಜಿ. ಪೆÇಟ್ಯಾಷಿಯಂ ಕ್ಲೊರೈಟ್, 260 ಕೆ.ಜಿ. ತೂಕದ ವಿವಿಧ

ಮಂಗಳೂರು: ಕೆ.ಜಿ ಗಟ್ಟಲೆ ಅಪಾಯಕಾರಿ ಸ್ಫೋಟಕ ಪತ್ತೆ : ಓರ್ವ ಬಂಧನ Read More »

ಕರಾವಳಿಯಲ್ಲಿ ಮತ್ತೆ ವಿವಾದದ ಕಿಡಿ ಹೊತ್ತಿಸಿದ ಎಸ್ ಡಿಪಿಐ| ಘಟನೆ ಖಂಡಿಸಿ ಆ.17ರಂದು ವೀರ ಸಾವರ್ಕರ್ ರಥಯಾತ್ರೆ|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕದಲ್ಲಿ ಸ್ವಾತಂತ್ರ್ಯ ರಥಯಾತ್ರೆಯನ್ನು ಎಸ್‌ಡಿಪಿಐ ಕಾರ್ಯಕರ್ತರು ತಡೆದ ವಿಚಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಾದದ ಕಿಡಿ ಹೊತ್ತಿಸಿದೆ. ಸ್ವಾತಂತ್ರ್ಯ ರಥ ಯಾತ್ರೆಯಲ್ಲಿದ್ದ ಸಾವರ್ಕರ್ ಭಾವಚಿತ್ರವನ್ನು ಹರಿಯಲು ಯತ್ನಿಸಿದ ಎಸ್‌ಡಿಪಿಐ ವಿರುದ್ಧ ಹಿಂದೂ ಸಂಘಟನೆಗಳು ತೊಡೆ ತಟ್ಟಿದ್ದು, ಕಬಕ ಜಂಕ್ಷನ್‌ನಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪುತ್ತೂರು ತಾಲೂಕಿನ ಕಬಕ ಜಂಕ್ಷನ್‌ನಲ್ಲಿ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಸೇರಿದ್ದು, ಸಾವರ್ಕರ್ ಫೋಟೋ ಹಿಡಿದು, ಎಸ್‌ಡಿಪಿಐ ವಿರುದ್ಧ ಘೋಷಣೆ ಕೂಗಿದ್ದಾರೆ.

ಕರಾವಳಿಯಲ್ಲಿ ಮತ್ತೆ ವಿವಾದದ ಕಿಡಿ ಹೊತ್ತಿಸಿದ ಎಸ್ ಡಿಪಿಐ| ಘಟನೆ ಖಂಡಿಸಿ ಆ.17ರಂದು ವೀರ ಸಾವರ್ಕರ್ ರಥಯಾತ್ರೆ| Read More »

ಸುಳ್ಯ: ವೈರಲ್ ಆಯ್ತು ಮಹಿಳೆಯ ಧ್ವಜವಂದನೆ| ಇದು ನಿಜವಾದ ದೇಶಭಕ್ತಿ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ-ಏರಣಗುಡ್ಡೆಯಲ್ಲಿ ಗಾಂಧಿ ವಿಚಾರ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆದಿತ್ತು. ಈ ಕಾರ್ಯಕ್ರಮದ ಬಳಿಕ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರು ಧ್ವಜವಂದನೆ ಮಾಡಿದ್ದು , ಈ ಫೋಟೋ ವೈರಲ್‌ ಆಗಿದೆ. ಗಾಂಧಿ ವಿಚಾರ ವೇದಿಕೆ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಮುಖರು ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು. ಬೆಳಗ್ಗೆ 9 ಗಂಟೆಗೆ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಮುಗಿದ ಬಳಿಕ ಅತಿಥಿಗಳು ತೆರಳಿದ್ದರು. ಕಾರ್ಯಕ್ರಮ ಸಂಘಟಿಸಿದ ಕೆಲ ಮಂದಿ ಸ್ಥಳದಲ್ಲಿ ಮಾತುಕತೆ ನಡೆಸುತ್ತಿದ್ದರು.

ಸುಳ್ಯ: ವೈರಲ್ ಆಯ್ತು ಮಹಿಳೆಯ ಧ್ವಜವಂದನೆ| ಇದು ನಿಜವಾದ ದೇಶಭಕ್ತಿ Read More »