ಕರಾವಳಿ

ಮಂಗಳೂರಿಗೆ ಕಾಲಿಟ್ಟ ‘ಇಟಾ’ ವೈರಸ್| ಕತರ್ ನಿಂದ ಬಂತು ಮಹಾಮಾರಿ|

ಮಂಗಳೂರು:. ಕೊರೋನಾ ಏರಿಕೆಯ ನಡುವೆ ಡೆಲ್ಟಾ ಸೋಂಕಿನ ಜೊತೆಗೆ ಇದೀಗ ಮತ್ತೊಂದು ಶಾಕ್ ಗೆ ಕರಾವಳಿಯ ಜನತೆ ಬೆಚ್ಚಿಬಿದ್ದಿದ್ದಾರೆ. ಎರಡು ತಿಂಗಳ ಹಿಂದೆ ಕತರ್ ನಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಯೋರ್ವರಲ್ಲಿ ಗುರುವಾರದಂದು ಕೊರೋನಾ ಸೋಂಕಿನ ಹೊಸ ತಳಿ ‘ಇಟಾ’ (ಬಿ.1.525) ವೈರಾಣು ಪತ್ತೆಯಾಗಿದೆ. ಇದರ ಜೊತೆಗೆ ಹೊಸದಾಗಿ ಒಂದು ಡೆಲ್ಟಾ ಪ್ಲಸ್‌ ಪ್ರಕರಣ ಕೂಡ ಕಂಡುಬಂದಿದ್ದು, ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಾಣು ಹೊಂದಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹೊಸದಾಗಿ ಕಂಡುಬಂದಿರುವ ಇಟಾ ವೈರಾಣುವಿನ ಬಗ್ಗೆ ತಿಳಿಯಲು ಇನ್ನಷ್ಟೇ […]

ಮಂಗಳೂರಿಗೆ ಕಾಲಿಟ್ಟ ‘ಇಟಾ’ ವೈರಸ್| ಕತರ್ ನಿಂದ ಬಂತು ಮಹಾಮಾರಿ| Read More »

ದ.ಕ ದಲ್ಲಿ ಕೋವಿಡ್ ಏರಿಕೆ| ವಾರಾಂತ್ಯದಲ್ಲಿ ಪುಣ್ಯಕ್ಷೇತ್ರಗಳು ಲಾಕ್| ಭಕ್ತಾದಿಗಳಿಗೆ ನಿರ್ಬಂಧ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಅನುಷ್ಠಾನಗೊಳಿಸಿದ್ದು, ವಾರಾಂತ್ಯಕ್ಕೆ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರಕ್ಕೆ ಭಕ್ತಾದಿಗಳ ಪ್ರವೇಶ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೆರೆಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ನೆರೆಯ ರಾಜ್ಯ, ಜಿಲ್ಲೆಗಳಿಂದ ಜಿಲ್ಲೆಯ ಪ್ರಯಾಣಿಕರ ಓಡಾಟದಿಂದಾಗಿ ಕೆಲವೊಂದು ಕಠಿಣ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ.5ರಿಂದ ಆ.15ರವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು,

ದ.ಕ ದಲ್ಲಿ ಕೋವಿಡ್ ಏರಿಕೆ| ವಾರಾಂತ್ಯದಲ್ಲಿ ಪುಣ್ಯಕ್ಷೇತ್ರಗಳು ಲಾಕ್| ಭಕ್ತಾದಿಗಳಿಗೆ ನಿರ್ಬಂಧ Read More »

ಕೋವಿಡ್ ಹಿನ್ನೆಲೆ: ಮಂಗಳೂರು ವಿವಿ ಪರೀಕ್ಷೆಗಳು ತಾತ್ಕಾಲಿಕ ರದ್ದು

ಮಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದಿಂದ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಮಂಗಳೂರು ವಿಶ್ವವಿದ್ಯಾಲಯದ ರಿಜೆಸ್ಟಾರ್ ಅವರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ಜಿಲ್ಲೆಯಾದ ಕೇರಳದ ಕಾಸರಗೋಡಿನಿಂದ ಆಗಮಿಸುತ್ತಾರೆ. ನೆರೆಯ ರಾಜ್ಯ \ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ. ಸಂಭಾವ್ಯ

ಕೋವಿಡ್ ಹಿನ್ನೆಲೆ: ಮಂಗಳೂರು ವಿವಿ ಪರೀಕ್ಷೆಗಳು ತಾತ್ಕಾಲಿಕ ರದ್ದು Read More »

ದಕ್ಷಿಣ ಕನ್ನಡದ ಗಡಿಗ್ರಾಮಗಳ ಮದ್ಯದಂಗಡಿಗಳು ಆ.15ರವರೆಗೆ ಬಂದ್

ಮಂಗಳೂರು : ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಕೇರಳ ರಾಜ್ಯದ ಗಡಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮದ್ಯದಂಗಡಿ ಬಂದ್ ಮಾಡಲಾಗಿದೆ. ಕೇರಳದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ಕೇರಳದ ಗಡಿಭಾಗದ ಜನತೆ ದಕ್ಷಿಣ ಕನ್ನಡ ಜಿಲ್ಲೆಯ ಮದ್ಯದಂಗಡಿಗಳನ್ನು ಅವಲಂಬಿಸಿರುವದರಿಂದ ಕೊರೊನಾ ಪ್ರಸರಣವಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಕೇರಳ ಗಡಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಆಗಸ್ಟ್ 15 ವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.

ದಕ್ಷಿಣ ಕನ್ನಡದ ಗಡಿಗ್ರಾಮಗಳ ಮದ್ಯದಂಗಡಿಗಳು ಆ.15ರವರೆಗೆ ಬಂದ್ Read More »

ಆಳಿವೆ ಬಾಗಿಲ ಬಳಿ ದೋಣಿ ಅವಘಡ: ಮೀನುಗಾರರು ಅಪಾಯದಿಂದ ಪಾರು

ಗಂಗೊಳ್ಳಿ,: ಮೀನುಗಾರಿಕಾ ಋತು ಆರಂಭವಾಗುತ್ತಿದ್ದಂತೆ ಗಂಗೊಳ್ಳಿ ಬಂದರಿನ ಅಳಿವೆ ಬಾಗಿಲ ಬಳಿ ಭಾನುವಾರ ದೋಣಿ ಅವಘಡ ಉಂಟಾಗಿ ನಾಲ್ವರು ಮೀನುಗಾರರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಜಿ.ಪ್ರಕಾಶ್ ಮಾಲಕತ್ವದ ಪರಶಕ್ತಿ ಹೆಸರಿನ ದೋಣಿಯಲ್ಲಿ ನಾಲ್ವರು ಮೀನುಗಾರರು ಬಲೆಯನ್ನು ತುಂಬಿಸಿಕೊಂಡು ಮೀನುಗಾರಿಕೆ ತೆರಳುತ್ತಿದ್ದರು. ಈ ವೇಳೆ ನೀರು ದೋಣಿಯೊಳಗೆ ಬಂದು ಮಗುಚಿ ಬಲೆ ನೀರಿನಲ್ಲಿ ಮುಳುಗಿದೆ. ಬಳಿಕ ಎರಡು ಯಾಂತ್ರಿಕೃತ ದೋಣಿಗಳ ಸಹಾಯದಿಂದ ದೋಣಿಯನ್ನು ದಡಕ್ಕೆ ತರಲಾಗಿದೆ. ಅನೇಕ ವರ್ಷಗಳಿಂದ ಅಳಿವೆ ಬಾಗಿಲು ವ್ಯಾಪ್ತಿಯಲ್ಲಿ ಡ್ರೆಜ್ಜಿಂಗ್ ಮಾಡದೇ ಹೂಳು

ಆಳಿವೆ ಬಾಗಿಲ ಬಳಿ ದೋಣಿ ಅವಘಡ: ಮೀನುಗಾರರು ಅಪಾಯದಿಂದ ಪಾರು Read More »

ಕೊರೊನಾ ನೆಗೆಟಿವ್ ವರದಿ ಇಲ್ಲದೆ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರು| 50 ಕ್ಕೂ ಹೆಚ್ಚು ಮಂದಿಗೆ ಕ್ವಾರಂಟೈನ್

ಮಂಗಳೂರು: ಕೊರೊನಾ ನೆಗೆಟಿವ್ ವರದಿ ಇಲ್ಲದೆ ಕೇರಳ ಹಾಗೂ ಮಹರಾಷ್ಟ್ರದಿಂದ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ತಾತ್ಕಾಲಿಕವಾಗಿ ಕ್ವಾರಂಟೈನ್ ನಲ್ಲಿ ಇಡಲಾದ ಘಟನೆ ಆಗಸ್ಟ್ 2 ರಂದು ನಡೆದಿದೆ. ಕೇರಳ ಹಾಗೂ ಮಹಾರಾಷ್ಟ್ರದಿಂದ ರೈಲಿನಲ್ಲಿ ಬಂದ ಪ್ರಯಾಣಿಕರಲ್ಲಿ ಕೋವಿಡ್ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿಗಳನ್ನು ಪರಿಶೀಲನೆ ನಡೆಸಲಾಗಿತ್ತು. ಈ ಸಂದರ್ಭ ನೆಗೆಟಿವ್ ವರದಿ ಹೊಂದಿರದ ಕೇರಳ ಮತ್ತು ಮಹಾರಾಷ್ಟ್ರದ 50 ಕ್ಕೂ ಹೆಚ್ಚು ಪ್ರಯಾಣಿಕರನ್ನುತಡೆಹಿಡಿದು ನಗರದ ಪುರಭವನದಲ್ಲಿ ಇರಿಸಿ ಎಲ್ಲರನ್ನೂ ಗಂಟಲ ದ್ರವ ಪರೀಕ್ಷೆಗೆ

ಕೊರೊನಾ ನೆಗೆಟಿವ್ ವರದಿ ಇಲ್ಲದೆ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರು| 50 ಕ್ಕೂ ಹೆಚ್ಚು ಮಂದಿಗೆ ಕ್ವಾರಂಟೈನ್ Read More »

ಕಾರ್ಕಳ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಫಾಲ್ಸ್ ನಲ್ಲಿ ಮುಳುಗಿ ಸಾವು

ಕಾರ್ಕಳ : ಈಜಲು ಹೊಗಿದ್ದ ವಿದ್ಯಾರ್ಥಿನಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವನ್ನಪಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿರುವ ಅರ್ಭಿ ಫಾಲ್ಸ್ ನಲ್ಲಿ ಸೋಮವಾರ ಸಂಭವಿಸಿದೆ. ವರ್ಷಿತಾ (19 ವರ್ಷ) ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಮೂಲತಃ ಮಂಗಳೂರಿನವಳಾಗಿದ್ದು ಕಾರ್ಕಳದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಯೊಟೆಕ್ ವಿಭಾಗದಲ್ಲಿ ಕಲಿಯುತಿದ್ದಳು ಎನ್ನಲಾಗಿದೆ.ವರ್ಷಿತಾ ಮತ್ತು ಇನ್ನೋರ್ವ ವಿದ್ಯಾರ್ಥಿನಿ ಸೇರಿ ಪಾಲ್ಸ್ ಗೆ ತೆರಳಿದ್ದು ಈಜಲೆಂದು ನೀರಿಗೆ ಇಳಿದಿದ್ದರು. ಈ ವೇಳೆ ಮುಳುಗಿದ್ದಾಳೆ ಎನ್ನಲಾಗಿದೆ, ಬಳಿಕ ಅಗ್ನಿಶಾಮಕ ದಳದ ಸಹಾಯದಿಂದ ಮೃತದೇಹವನ್ನು

ಕಾರ್ಕಳ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಫಾಲ್ಸ್ ನಲ್ಲಿ ಮುಳುಗಿ ಸಾವು Read More »

ಡಿಸಿ‌ ಆದೇಶಕ್ಕೆ ಡೋಂಟ್ ಕೇರ್| ಮಂಗಳೂರು ಕಾಂಗ್ರೆಸ್ ‌ಕಚೇರಿಯಲ್ಲಿ ಭರ್ಜರಿ ಪದಗ್ರಹಣ|

ಮಂಗಳೂರು: ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಅಗಸ್ಟ್ 10 ವರೆಗೆ ಯಾವುದೇ ಸಭೆ ಸಮಾರಂಭ ನಡೆಸಬಾರದೆಂದು ಜಿಲ್ಲಾಧಿಕಾರಿ ಆದೇಶ ನೀಡಿದರೂ, ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಪದಗ್ರಹಣ ಭರ್ಜರಿ ಸಮಾರಂಭ ಏರ್ಪಡಿಸಲಾಗಿದೆ. ಈಗಾಗಲೇ ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಲ್ಲಿದ್ದು ಗಡಿ ಜಿಲ್ಲೆಯಾದ ದಕ್ಷಿಣಕನ್ನಡದಲ್ಲಿ ಆತಂಕ ಎದುರಾಗಿದೆ. ಈ ಹಿನ್ನಲೆ ನಿನ್ನೆ ನಡೆದ ಜಿಲ್ಲಾಡಳಿತದ ಸಭೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಗಸ್ಟ್ 10 ರವರೆಗೆ ಯಾವುದೇ ಸಭೆ ಸಮಾರಂಭ, ರಾಜಕೀಯ ಸಭೆಗಳನ್ನು ನಡೆಸದಂತೆ ನಿರ್ಬಂಧ

ಡಿಸಿ‌ ಆದೇಶಕ್ಕೆ ಡೋಂಟ್ ಕೇರ್| ಮಂಗಳೂರು ಕಾಂಗ್ರೆಸ್ ‌ಕಚೇರಿಯಲ್ಲಿ ಭರ್ಜರಿ ಪದಗ್ರಹಣ| Read More »

ಆಟೋ ಚಾಲಕರಿಗೆ ಶಾಕ್‌ : ಎಲ್‌ಪಿಜಿ ದರ ಏರಿಕೆ

ನವದೆಹಲಿ : ಕೊರೊನಾ ಸಂಕಷ್ಟದಿಂದ ಆಟೋ ಚಾಲಕರು ಸೇರಿದಂತೆ ಟ್ಯಾಕ್ಸಿ ಚಾಲಕರು ತತ್ತರಿಸಿದ್ದಾರೆ. ಈ ನಡುವಲ್ಲೇ ಎಲ್‌ಪಿಜಿ ಗ್ಯಾಸ್‌ ದರದಲ್ಲಿ ಭಾರೀ ಏರಿಕೆ ಕಂಡಿದ್ದು ಈ ಮೂಲಕ ಎಲ್‌ಪಿಜಿ ಗ್ಯಾಸ್‌ ಆಟೋ ಚಾಲಕರಿಗೆ ಶಾಕ್‌ ಕೊಟ್ಟಿದೆ. ಕಳೆದ ಎರಡು ವರ್ಷಗಳಿಂದಲೂ ದೇಶದಲ್ಲಿ ಕೊರೊನಾ ಹೆಮ್ಮಾರಿಯ ಆರ್ಭಟದ ಹಿನ್ನೆಲೆಯಲ್ಲಿ ಹೇರಿಕೆಯಾಗಿದ್ದ ಲಾಕ್‌ಡೌನ್‌ ಆಟೋ ಚಾಲಕರನ್ನು ಹಿಂಡಿ ಹಿಪ್ಪೆಯನ್ನಾಗಿಸಿತ್ತು. ಒಂದೆಡೆ ಆಟೋಗಳನ್ನು ರಸ್ತೆಗೆ ಇಳಿಸದೆ, ಇನ್ನೊಂದೆಡೆ ಸಾಲದ ಹೊರೆಯ ನಡುವಲ್ಲೇ ಕಳೆದೊಂದು ತಿಂಗಳಿನಿಂದ ಚಾಲಕರು ದುಡಿಮೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ

ಆಟೋ ಚಾಲಕರಿಗೆ ಶಾಕ್‌ : ಎಲ್‌ಪಿಜಿ ದರ ಏರಿಕೆ Read More »

ದ.ಕ : ಅಗಸ್ಟ್ 10 ರವರೆಗೆ ಎಲ್ಲಾ ಸಭೆ ಸಮಾರಂಭಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾದ ಹಿನ್ನಲೆ, ಜಿಲ್ಲೆಯಲ್ಲಿ ಎಲ್ಲಾ ಸಭೆ ಸಮಾರಂಭಗಳು ಸೇರಿದಂತೆ ಇತರ ಚಟುವಟಿಕೆಗಳಿಗೆ ಕಠಿಣ ನಿಯಮ ವನ್ನು ಜಿಲ್ಲಾಡಳಿತ ಹೊರಡಿಸದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಅಗಸ್ಟ್ 10 ರವರೆಗೆ ಜಿಲ್ಲೆಯಲ್ಲಿ ಯಾವುದೇ ಸಭೆ ಸಮಾರಂಭ ನಡೆಸದಂತೆ ನಿಷೇಧ ಹೇರಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ. ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10 ರವರೆಗೆ ನಡೆಸದಂತೆ

ದ.ಕ : ಅಗಸ್ಟ್ 10 ರವರೆಗೆ ಎಲ್ಲಾ ಸಭೆ ಸಮಾರಂಭಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ Read More »