ಕರಾವಳಿ

ಅಗತ್ಯ ವಸ್ತುಗಳ ಬೆಲೆ ಏರಿಕೆಯೇ ಬಿಜೆಪಿ ಯ ಬಹುದೊಡ್ಡ ಸಾಧನೆ: ದ ಕ ಯುವ ಕಾಂಗ್ರೆಸ್

ಮಂಗಳೂರು: ಅಗತ್ಯವಸ್ತುಗಳ ಬೆಲೆ ಏರಿಕೆಯೇ ಬಿಜೆಪಿ ಸರಕಾರದ ಬಹುದೊಡ್ಡ ಸಾಧನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಹೇಳಿದೆ. ನಿನ್ನೆ ಮಂಗಳೂರಿನಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನೋಟ್ ಬ್ಯಾನ್, ಜಿಎಸ್‌ಟಿಯಂತಹ ಕಾನೂನು ಜಾರಿಗೆ ತಂದು ಜನರನ್ನು ಸಂಕಷ್ಟಕ್ಕೆ ದೂಡಿದೆ. […]

ಅಗತ್ಯ ವಸ್ತುಗಳ ಬೆಲೆ ಏರಿಕೆಯೇ ಬಿಜೆಪಿ ಯ ಬಹುದೊಡ್ಡ ಸಾಧನೆ: ದ ಕ ಯುವ ಕಾಂಗ್ರೆಸ್ Read More »

ಉಡುಪಿ: ದನ ಕದ್ದು ಟಾಯ್ಲೆಟ್ ನಲ್ಲಿ ಕೊಂದಾತನ ಬಂಧನ | ಸಿಸಿಟಿವಿ ಸಹಾಯದಿಂದ ಕೃತ್ಯ ಬಯಲು

ಉಡುಪಿ: ವ್ಯಕ್ತಿಯೋರ್ವ ನೆರೆಮನೆಯ ಹಸುವನ್ನು ಕದ್ದು ತನ್ನ ಮನೆಯ ಟಾಯ್ಲೆಟ್ ನಲ್ಲಿ ಮಾಂಸ ಮಾಡಿ ಮಾರಾಟ ಮಾಡಿದ್ದಾನೆ ಎನ್ನಲಾದ ಘಟನೆ ಜಿಲ್ಲೆಯ ನೇಜಾರಿನಲ್ಲಿ ನಡೆದಿದೆ. ಆರೋಪಿ ಇಬ್ರಾಹಿಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನೇಜಾರು ನಿವಾಸಿ ಗಂಗಾಧರ್ ಎಂಬವರು ಪ್ರತಿದಿನದಂತೆ ಭಾನುವಾರ ಬೆಳಿಗ್ಗೆ ತನ್ನ ಮನೆಯ ಹಸುವನ್ನು ಮೇಯಲು ಬಿಟ್ಟಿದ್ದರು. ಸ್ವಲ್ಪ ಸಮಯದಲ್ಲಿ ಹತ್ತಿರದಲ್ಲೇ ಇದ್ದ ಹಸು ಕಾಣೆಯಾಗಿತ್ತು. ನಂತರ ಘಟನೆ ನಡೆದ ಪ್ರದೇಶದಲ್ಲಿದ್ದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ, ನೆರೆಮನೆಯ ಇಬ್ರಾಹಿಂ ಎಂಬಾತ ಹಸುವನ್ನು ಎಳೆದೊಯ್ಯುವ ದೃಶ್ಯ ಸೆರೆಯಾಗಿರುವುದು

ಉಡುಪಿ: ದನ ಕದ್ದು ಟಾಯ್ಲೆಟ್ ನಲ್ಲಿ ಕೊಂದಾತನ ಬಂಧನ | ಸಿಸಿಟಿವಿ ಸಹಾಯದಿಂದ ಕೃತ್ಯ ಬಯಲು Read More »

ಧರ್ಮಸ್ಥಳ: 4 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ಆರೋಪಿ ಅರೆಸ್ಟ್

ಬೆಳ್ತಂಗಡಿ: ಯುವಕನೋರ್ವ ನಾಲ್ಕು ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪೋಷಕರು ನೀಡಿದ ದೂರಿನನ್ವಯ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನೀಚ ಕೃತ್ಯವೆಸಗಿ ಪೊಲೀಸರ ಅತಿಥಿಯಾದವನು ವಿಘ್ನೇಶ್ ಭಂಡಾರಿ. ಈತ ತಾಲೂಕಿನ ಕಕ್ಕಿಂಜೆಯಲ್ಲಿ ನಾಲ್ಕು ವರ್ಷದ ಪುಟ್ಟ ಬಾಲಕಿಯ ಮೇಲೆ ಹಿಂದೊಮ್ಮೆ ಲೈಂಗಿಕ ಕಿರುಕುಳ ಎಸಗಿದ್ದ. ಆ ಸಮಯದಲ್ಲಿ ಮಗುವಿನ ಪೋಷಕರು ಮಾತುಕತೆ ನಡೆಸಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದರು. ಆದರೆ ಆರೋಪಿ ನೀಚ ಕೃತ್ಯವನ್ನು ಮತ್ತೆ ಮುಂದುವರಿಸಿದ್ದು, ಮಗುವಿನ ಪೋಷಕರು ನೀಡಿದ ದೂರಿನನ್ವಯ ಆತನನ್ನು ಪೊಲೀಸರು

ಧರ್ಮಸ್ಥಳ: 4 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ಆರೋಪಿ ಅರೆಸ್ಟ್ Read More »

ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ

ಪುತ್ತೂರು: ವಿವಾಹ ನಿಶ್ಚಿತಾರ್ಥ ವಾಗಿದ್ದ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಗ್ರಾಮದ ಕುಳದಪಾರೆಯಲ್ಲಿ ನಡೆದಿದೆ. ನಿದಿಯಡ್ಕ ನಿವಾಸಿ ಸುಬ್ಬಣ್ಣ ನಾಯ್ಕ ಅವರ ಪುತ್ರಿ ಪ್ರಿಯಾ (25) ಮೃತ ಯುವತಿ. ಈಶ್ವರಮಂಗಲದ ಜೆರಾಕ್ಸ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿದ್ದ ಪ್ರಿಯ, ತನ್ನ ಮನೆಯಲ್ಲಿ ನಿನ್ನೆ ಯಾರು ಇಲ್ಲದ ಸಂಧರ್ಭ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಈ ಹಿಂದೆ ಪುತ್ತೂರು ತಾಲ್ಲೂಕಿನ ಬಡಗನ್ನೂರು ಸರ್ಕಾರಿ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಅದೂರು ಪೊಲೀಸ್

ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.8)ಯಿಂದ ಟಫ್ ರೂಲ್ಸ್ ಜಾರಿ, ಅನಗತ್ಯ ತಿರುಗಾಟ ಮಾಡಿದರೆ ಜೋಕೆ- ಡಿಸಿ ರಾಜೇಂದ್ರ

ಮಂಗಳೂರು. ಜೂನ್ 7: ರಾಜ್ಯ ಸರ್ಕಾರ ರಾಜ್ಯವನ್ನು ಅನ್‌ಲಾಕ್ ಮಾಡುವುದಕ್ಕೆ ರೂಪುರೇಷೆ ಸಿದ್ಧಪಡಿಸುತ್ತಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಂಗಳವಾರದಿಂದ ಪ್ರತ್ಯೇಕ ಟಫ್ ರೂಲ್ಸ್ ಜಾರಿಯಾಗಲಿದೆ. ಜೂ.8 ರಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣ ನಿಯಮ ಜಾರಿಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಅಧಿಕಾರಿಗಳು ತೀರ್ಮಾನ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, ಮಂಗಳೂರು ನಗರ ಭಾಗದಲ್ಲಿ ಹೆಚ್ಚಿನ

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.8)ಯಿಂದ ಟಫ್ ರೂಲ್ಸ್ ಜಾರಿ, ಅನಗತ್ಯ ತಿರುಗಾಟ ಮಾಡಿದರೆ ಜೋಕೆ- ಡಿಸಿ ರಾಜೇಂದ್ರ Read More »

ಅಸಂಘಟಿತ ಕಾರ್ಮಿಕರಿಗೆ 2,000 ರೂ. ಪರಿಹಾರ ಧನ : ಡಿಸಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು: ಕೋವಿಡ್‌ ಲಾಕ್‌ಡೌನ್‌ ಹಿನ್ನಲೆಯಲ್ಲಿ ದುಡಿಮೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ₹2,000 ಪರಿಹಾರಧನವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ. ಈ ಕುರಿತು ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲಸವಿಲ್ಲದೆ ಆರ್ಥಿಕವಾಗಿ ಸಂಕಷ್ಟಕ್ಕೊಳಗಾದ ಅಸಂಘಟಿತ ಕಾರ್ಮಿಕ ವಲಯದ 18 ರಿಂದ 65 ವರ್ಷದೊಳಗಿನ ಕ್ಷೌರಿಕ, ಅಗಸ, ಟೈಲರ್, ಅಕ್ಕಸಾಲಿಗ, ಕಮ್ಮಾರ, ಕುಂಬಾರ, ಗೃಹಕಾರ್ಮಿಕರು, ಚಿಂದಿ ಆಯುವವರು, ಹಮಾಲಿ ಇತ್ಯಾದಿ ಕಾರ್ಮಿಕರುಗಳು ಈ ಪರಿಹಾರ

ಅಸಂಘಟಿತ ಕಾರ್ಮಿಕರಿಗೆ 2,000 ರೂ. ಪರಿಹಾರ ಧನ : ಡಿಸಿ ಡಾ. ರಾಜೇಂದ್ರ ಕೆ.ವಿ Read More »

ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಬಂಧನ

ಮಂಗಳೂರು: ಇಲ್ಲಿನ ಖಾಸಗಿ ಆಸ್ಪತ್ರೆ ವಿರುದ್ಧ ಪ್ರತಿಭಟಿಸಿ ಧರಣಿ ಕೂತಿದ್ದ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಾಗ ಅವರ ಕುಟುಂಬಕ್ಕೆ ಹತ್ತು ಲಕ್ಷಕ್ಕೂ ಅಧಿಕ ಬಿಲ್ ಮಾಡಿದ್ದ, ಮೃತದೇಹ ನೀಡದೆ ಸತಾಯಿಸಿದ ಖಾಸಗಿ ಆಸ್ಪತ್ರೆ ವಿರುದ್ಧ ಸುಹೈಲ್ ಕಂದಕ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿ ಧರಣಿ ಕೂತಿದ್ದರು. ಪ್ರತಿಭಟನೆಗೆ ಮಣಿದ ಆಸ್ಪತ್ರೆ ಮೃತದೇಹ ಹಸ್ತಾಂತರ ಮಾಡಿದ್ದರು. ಘಟನೆ ನಡೆದು ಹಲವು ದಿನಗಳು ಕಳೆದರೂ

ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಬಂಧನ Read More »

ಮಂಗಳೂರಲ್ಲಿ ಮತ್ತೆ ಆ್ಯಕ್ಟಿವ್ ಆದ ಡ್ರಗ್ಸ್ ದಂಧೆ: ವಿ.ವಿ ಬಳಿ ಮೂವರು ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಮಂಜೇಶ್ವರ ಉಪ್ಪಳ ಗೇಟ್ ಬಳಿ ನಿವಾಸಿಗಳಾದ ಮಹಮ್ಮದ್ ಮುನಾಫ್‌, ಮಹಮ್ಮದ್ ಮುಝಾಂಬಿಲ್ ಮತ್ತು ಅಹಮ್ಮದ್ ಮಸೂಕ್ ರವರನ್ನು ವಶಕ್ಕೆ ಪಡೆದಿದ್ದಾರೆ.ಕೊಣಾಜೆ ಪೊಲೀಸ್ ಠಾಣಾ ಪೊಲೀಸರಿಗೆ ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಮಾಹಿತಿ ದೊರೆತಾಗ ಕೊಣಾಜೆ ವಿಶ್ವವಿದ್ಯಾನಿಲಯದ ಗಣೇಶ್ ಮಹಲ್ ಎಂಬಲ್ಲಿ ಕಾರೊಂದನ್ನು ನಿಲ್ಲಿಸಿ ತಪಾಸಣೆ ಮಾಡಿ, ಅವರಿಂದ

ಮಂಗಳೂರಲ್ಲಿ ಮತ್ತೆ ಆ್ಯಕ್ಟಿವ್ ಆದ ಡ್ರಗ್ಸ್ ದಂಧೆ: ವಿ.ವಿ ಬಳಿ ಮೂವರು ಅರೆಸ್ಟ್ Read More »

ನವವಿವಾಹಿತ ಅರಣ್ಯವೀಕ್ಷಕ ಆತ್ಮಹತ್ಯೆ: ಕಾರಣ ನಿಗೂಢ

ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿ, ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ನೆಡುತೋಪು ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲಕೃಷ್ಣ ಗೌಡ (40) ಅವರು ಗುರುವಾರ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕೃಷ್ಣ ಗೌಡ ಅವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ 15 ವರ್ಷಗಳಿಂದ ನೆಡುತೋಪು ವೀಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದರು. ಕಳೆದ 6 ತಿಂಗಳ ಹಿಂದೆಯಷ್ಟೆ ವಿವಾಹವಾಗಿದ್ದರು. ಗುರುವಾರ ಬೆಳಗ್ಗೆ ಮನೆ ಸಮೀಪವೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ, ಪೊಲೀಸ್

ನವವಿವಾಹಿತ ಅರಣ್ಯವೀಕ್ಷಕ ಆತ್ಮಹತ್ಯೆ: ಕಾರಣ ನಿಗೂಢ Read More »

ಸಮಾಜ ಸೇವಕಿಯ ಸಮಾಯೋಜಿತ ಸಲಹೆ | ಕಾರ್ಕಳದಲ್ಲಿ ಅಸಹಾಯಕ ಮಕ್ಕಳಿಗೆ ಸಿಕ್ತು ರಕ್ಷಣೆ

ಕಾರ್ಕಳ: ಹೆತ್ತವರಿಂದ ನಿರ್ಲಕ್ಷಕ್ಕೆ ಒಳಗಾಗಿ ಅಸಹಾಯಕ ಸ್ಥಿತಿಯಲ್ಲಿದ್ದ ನಾಲ್ಕು ಸಣ್ಣ ಪ್ರಾಯದ ಎಳೆ ಮಕ್ಕಳನ್ನು ಸಮಾಜ ಸೇವಕಿಯೊಬ್ಬರ ಸಮಯೋಚಿತ ಮಾರ್ಗದರ್ಶನದಿಂದ ಉಡುಪಿ ಮಕ್ಕಳ ಪುನರ್ವಸತಿ ಕೇಂದ್ರದವರು ರಕ್ಷಣೆ ಮಾಡಿದ ಘಟನೆ ಜೂ.2ರಂದು ನಡೆದಿದೆ.ಇಲ್ಲಿನ ನಿಟ್ಟೆ ಗ್ರಾಮ ಪಂಚಾಯತು ಮದನಾಡು ಎಂಬಲ್ಲಿ ಕೌಟುಂಬಿಕ ಕಲಹದಿಂದ ಪದ್ಮನಾಭ ಎಂಬವರ ಪತ್ನಿ ಗಂಡ, ಮನೆ, ಮಕ್ಕಳನ್ನು ತೊರೆದು ಹೋಗಿದ್ದಾರೆ. ದಂಪತಿಗೆ ನಾಲ್ಕು ಮಂದಿ ಮಕ್ಕಳಿದ್ದು, ತಾಯಿ ಇಲ್ಲದೆ ತಂದೆಯೊಂದಿಗೆ 1 ಹೆಣ್ಣು ಸೇರಿ ನಾಲ್ಕು ಮಂದಿ ಮಕ್ಕಳು ಅಸಹಾಯಕ ಸ್ಥಿತಿಯಲ್ಲಿದ್ದರು. ಸುರಕ್ಷಿತವಲ್ಲದೆ,

ಸಮಾಜ ಸೇವಕಿಯ ಸಮಾಯೋಜಿತ ಸಲಹೆ | ಕಾರ್ಕಳದಲ್ಲಿ ಅಸಹಾಯಕ ಮಕ್ಕಳಿಗೆ ಸಿಕ್ತು ರಕ್ಷಣೆ Read More »