ಕರಾವಳಿ

ಕರಾವಳಿ : ಜೊತೆಯಾಗಿ‌ ಸಾವಿನ ಕದ ತಟ್ಟಿದ ಸಹೋದರರು

ಕಾರ್ಕಳ:  ಸಹೋದರರಿಬ್ಬರು ಒಂದೇ ದಿನದಲ್ಲಿ ಮೃತ ಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಾಣೂರು ಚಿಕ್ಕಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮ್ರತಪಟ್ಟರೇ, ಸಹೋದರ ಸಾಣೂರು ನಿವಾಸಿ ಮಿಯಾರು ಗುಂಡಾಜೆ ಬಳಿಯ ರಾಜಾರಾಮ. ರಾವ್ (55) ಜೂ.14 ರಂದು ಬೆಳಗ್ಗೆ ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಮೃತ ಪಟ್ಟಿದ್ದಾರೆ. ರಾಜರಾಮ್ ರಾವ್ ಅವರು ಇತ್ತೀಚೆಗೆ ಅಪಘಾತಕ್ಕೆ ಒಳಗಾಗಿದ್ದರು. ಚಿಕಿತ್ಸೆಗಾಗಿ ಮಣಿಪಾಲ ಇನ್ನಿತರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅಂತಿಮವಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ […]

ಕರಾವಳಿ : ಜೊತೆಯಾಗಿ‌ ಸಾವಿನ ಕದ ತಟ್ಟಿದ ಸಹೋದರರು Read More »

ಮಂಗಳೂರಿನಲ್ಲಿ ಒಮಾನ್ ರಾಷ್ಟದ ಪ್ರಜೆ ಪೊಲೀಸ್ ವಶಕ್ಕೆ | ಲಾಡ್ಜ್ ಗಳಿಗೆ ಇನ್ನುಮಂದೆ ಅನಿಯಮಿತ ದಾಳಿ : ಕಮಿಷನರ್

ಮಂಗಳೂರು: ಲಾಡ್ಜ್ ಒಂದರಲ್ಲಿ ಡ್ರಗ್ಸ್ ಸೇವನೆ ಮಾಡುತ್ತಿದ್ದ ಒಮಾನ್ ರಾಷ್ಟ್ರದ ಪ್ರಜೆ ಮತ್ತು ಹಿಮಾಚಲ ಪ್ರದೇಶದ ವ್ಯಕ್ತಿಯನ್ನು ಮಂಗಳೂರು ನಗರದ ಪೊಲೀಸರು ಇಂದು ಬಂಧಿಸಿದ್ದಾರ ನಗರದ ಲಾಡ್ಜ್ ಒಂದರಲ್ಲಿ ಒಮಾನ್ ರಾಷ್ಟ್ರದ ಪ್ರಜೆ ಅಹ್ಮದ್ ಮತ್ತು ಹಿಮಾಚಲ ಪ್ರದೇಶದ ನಿವಾಸಿ ರಾಮ್ ಎಂಬಾತ ಸೆರೆಸಿಕ್ಕಿರುವ ಆರೋಪಿಗಳು. ಒಮಾನ್ ಪ್ರಜೆ ಅಹ್ಮದ್ ಆರು ತಿಂಗಳ ಹಿಂದೆ ಗೋವಾಕ್ಕೆ ಟೂರಿಸ್ಟ್ ವೀಸಾದಲ್ಲಿ ಬಂದಿದ್ದ. ಆದರೆ, ಅನಾರೋಗ್ಯಕ್ಕೀಡಾಗಿದ್ದ ಅಹ್ಮದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಆನಂತರ ಚಿಕಿತ್ಸೆ ಪಡೆದು ಹೊರಬಂದಿದ್ದ. ಈ ನಡುವೆ

ಮಂಗಳೂರಿನಲ್ಲಿ ಒಮಾನ್ ರಾಷ್ಟದ ಪ್ರಜೆ ಪೊಲೀಸ್ ವಶಕ್ಕೆ | ಲಾಡ್ಜ್ ಗಳಿಗೆ ಇನ್ನುಮಂದೆ ಅನಿಯಮಿತ ದಾಳಿ : ಕಮಿಷನರ್ Read More »

ಸುಳ್ಯ : ಕಾರು-ರಿಕ್ಷಾ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ

ಸುಳ್ಯ: ಕಾರು ಹಾಗೂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಅಡ್ಕಾರು ಸಮೀಪದ ವಿನೋಬನಗರ ಎಂಬಲ್ಲಿ ನಡೆದಿದೆ. ಇಂದು ಸಂಜೆ ಸುಳ್ಯದಿಂದ ಪುತ್ತೂರು ಕಡೆ ತೆರಳುತ್ತಿದ್ದ ರಿಕ್ಷಾ ಮತ್ತು ಪುತ್ತೂರು ಕಡೆಯಿಂದ ಸುಳ್ಯ ಕಡೆ ಬರುತ್ತಿದ್ದ ಟೂರಿಸ್ಟ್ ಕಾರು ನಡುವೆ ಅಪಘಾತ ಸಂಭವಿಸಿದೆ. ಈ ಪರಿಣಾಮ ಆಟೋ ರಿಕ್ಷಾ ನಜ್ಜುಗುಜ್ಜಾಗಿದ್ದು ಚಾಲಕ ಗಂಭೀರ ಗಾಯಕೊಂಡಿದ್ದಾನೆ. ತಕ್ಷಣ ಗಾಯಾಳು ಆಟೋ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಳ್ಯ : ಕಾರು-ರಿಕ್ಷಾ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ Read More »

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಸಿ ನಿರಂತರ ಅತ್ಯಾಚಾರ | ಠಾಣೆ ಮೆಟ್ಟಿಲೇರಿದ ಯುವತಿ

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಕೆ ಹಾಕಿ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾದೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾ.ಪ. ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಪ್ರಕರಣ ಆರೋಪಿ. ಈತ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ.ಒಂದು ವೇಳೆ ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಕೊಲೆ

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಸಿ ನಿರಂತರ ಅತ್ಯಾಚಾರ | ಠಾಣೆ ಮೆಟ್ಟಿಲೇರಿದ ಯುವತಿ Read More »

ಬಿಪಿಎಲ್ ಕಾರ್ಡ್ ದಾರರ ವಿದ್ಯುತ್ ಬಿಲ್ ಮನ್ನಾ: ಸ್ಪಷ್ಟನೆ ನೀಡಿದ ಮೆಸ್ಕಾಂ

ಮಂಗಳೂರು: 3 ತಿಂಗಳ ವಿದ್ಯುತ್ ಬಿಲ್ ಮನ್ನಾ ಎಂಬ ಮಾಹಿತಿ ಭಾರೀ ವೈರಲ್ ಆಗಿದ್ದು, ಈ ಬಗ್ಗೆ ಮಂಗಳೂರು ವಿದ್ಯುತ್ ಸರಬರಾಜು ನಿಗಮ ಅಧಿಕಾರಿಗಳು ನಮ್ಮಿಂದ ಇಂತಹ ಯಾವುದೆ ಆದೇಶ ನೀಡಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. “ಕೋವಿಡ್ -19 ಈ ಸಂದರ್ಭದಲ್ಲಿ ರಾಜ್ಯದಲ್ಲಿ ಬಡ ಮತ್ತು ಮಾಧ್ಯಮ ವರ್ಗದ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ಲಾಕ್‌ಡೌನ್‌ನಿಂದಾಗಿ ದಿನನಿತ್ಯ ದುಡಿದು/ ಮಾಸಿಕ ವೇತನವನ್ನು ಅವಲಂಬಿಸಿ ಜೀವನ ನಡೆಸುವ ಬಡ ಮತ್ತು ಮಾಧ್ಯಮ ವರ್ಗದವರ ಆರ್ಥಿಕ ಹೊರೆಯಾಗಿದೆ. ಆರ್ಥಿಕ ಪ್ಯಾಕೇಜ್ ಎಲ್ಲಾರಿಗೂ

ಬಿಪಿಎಲ್ ಕಾರ್ಡ್ ದಾರರ ವಿದ್ಯುತ್ ಬಿಲ್ ಮನ್ನಾ: ಸ್ಪಷ್ಟನೆ ನೀಡಿದ ಮೆಸ್ಕಾಂ Read More »

ಸಂಪೂರ್ಣ ಸೀಲ್ ಡೌನ್ ಆದ ದ.ಕ ಜಿಲ್ಲೆಯ 17 ಗ್ರಾಮಗಳಲ್ಲಿ ಏನೇನಿರುತ್ತೆ ಗೊತ್ತಾ?

ಮಂಗಳೂರು: ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಗೊಳಿಸಲು ದ.ಕ ಜಿಲ್ಲೆಯ 17 ಗ್ರಾಮಗಳನ್ನು ಜೂನ್ 14 ರಿಂದ ಕಂಪ್ಲೀಟ್ ಸೀಲ್ ಡೌನ್ ಮಾಡಲಾಗಿದ್ದು, ಈ ಗ್ರಾಮ ಪಂಚಾಯತ್ ಗಳಲ್ಲಿ ಕೆಲವು ಸೂಚಿತ ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ. ಉಳಿದಂತೆ ಗ್ರಾಮಕ್ಕೆ ಒಳಪ್ರವೇಶ ಹಾಗೂ ನಿರ್ಗಮನಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗುವುದು. ಸೀಲ್‌ ಡೌನ್ ಮಾಡಲಾದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅವಶ್ಯಕತೆಯನ್ನು ಆಧರಿಸಿ ಪಾವತಿ ಆಧಾರದ ಮೇಲೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯನ್ನು ಮಾಡಲು ಸಂಬಂಧಪಟ್ಟ ಗ್ರಾಮ ಪಂಚಾಯತ್ ಕಾರ್ಯಪಡೆಗಳು ಕ್ರಮವಹಿಸಬೇಕು. ಈ ಗ್ರಾಮಪಂಚಾಯತ್

ಸಂಪೂರ್ಣ ಸೀಲ್ ಡೌನ್ ಆದ ದ.ಕ ಜಿಲ್ಲೆಯ 17 ಗ್ರಾಮಗಳಲ್ಲಿ ಏನೇನಿರುತ್ತೆ ಗೊತ್ತಾ? Read More »

ಜೂ.14 ರಿಂದ 21 ರವರೆಗೆ ದ.ಕ ಜಿಲ್ಲೆಯ 17 ಗ್ರಾ.ಪಂ ಸೀಲ್ ಡೌನ್

ಮಂಗಳೂರು: ಕೋವಿಡ್ ಸೋಕಿನ ಪ್ರಮಾಣ ಕಡಿಮೆಗೊಳಿಸುವ ಸಲುವಾಗಿ ದ.ಕ. ಜಿಲ್ಲೆಯ 17 ಗ್ರಾಪಂಗಳನ್ನು ಜೂ.14ರಿಂದ ಬೆಳಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ದ.ಕ.ಜಿ.ಪಂ ಸಿಇಒ ಅವರ ವರದಿ ಆಧರಿಸಿ 50ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಗ್ರಾಪಂಗಳನ್ನು ಸೀಲ್ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ,

ಜೂ.14 ರಿಂದ 21 ರವರೆಗೆ ದ.ಕ ಜಿಲ್ಲೆಯ 17 ಗ್ರಾ.ಪಂ ಸೀಲ್ ಡೌನ್ Read More »

ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಒತ್ತಾಯ | ಇಂದು ಟ್ವೀಟ್ ಅಭಿಯಾನದಲ್ಲಿ ಕೈಜೋಡಿಸಲು ತುಳು ಸಂಘಟನೆಗಳ ಕರೆ

ಮಂಗಳೂರು: ತುಳುಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಅಧಿಕೃತ ಭಾಷೆಯಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ತುಳು ಸಂಘಟನೆಗಳು ಇಂದು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿವೆ. ಉತ್ತರ ಕೇರಳ ಮತ್ತು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ತುಳು ಮಾತನಾಡುವ ಜನರು ಅಧಿಕವಾಗಿದ್ದಾರೆ. ರಾಜ್ಯ ಸರ್ಕಾರಗಳು ಇದುವರೆಗೂ ತುಳುಭಾಷೆಗೆ ಯಾವುದೇ ಸ್ಥಾನಮಾನ ನೀಡಿಲ್ಲ. ಆದ್ದರಿಂದ ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ಒದಗಿಸಿಕೊಡುವಲ್ಲಿ ಸರಕಾರವನ್ನು ಒತ್ತಾಯಿಸಲು ಇಂದು, ಜೂ.13ರಂದು ನಡೆಯುವ ಟ್ವಿಟರ್ ಅಭಿಯಾನದಲ್ಲಿ ಕೈಜೋಡಿಸುವಂತೆ ತುಳುನಾಡ ಜನತೆಗೆ ತುಳು ಸಂಘಟನೆಗಳು ಕರೆ ನೀಡಿವೆ. ಇಂದು ದಿನಪೂರ್ತಿ

ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಒತ್ತಾಯ | ಇಂದು ಟ್ವೀಟ್ ಅಭಿಯಾನದಲ್ಲಿ ಕೈಜೋಡಿಸಲು ತುಳು ಸಂಘಟನೆಗಳ ಕರೆ Read More »

ಮಂಗಳೂರು ವಿಶ್ವವಿದ್ಯಾನಿಲಯ: ಸಾಹಿತಿ ಡಾ. ಸಿದ್ದಲಿಂಗಯ್ಯರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಮಂಗಳಗಂಗೋತ್ರಿ: ಕಳೆದ ಎರಡು ದಿನಗಳ ಹಿಂದೆ ನಿಧನಹೊಂದಿದ ಪ್ರಸಿದ್ಧ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಶ್ರದ್ಧಾಂಜಲಿ ಕೋರಲಾಯಿತು. ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದ ಅವರಣದಲ್ಲಿ ಶನಿವಾರ ಕಾರ್ಯಕ್ರಮ ನಡೆಯಿತು. ಸಿದ್ದಲಿಂಗಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ, ‘ಡಾ. ಸಿದ್ದಲಿಂಗಯ್ಯ ಅವರು ಲೇಖನಿ ಮೂಲಕವೇ ಸಮಾಜದಲ್ಲಿನ ಅನ್ಯಾಯ ಹಾಗೂ ಅಸಮಾನತೆಯ ವಿರುದ್ಧ ಹೋರಾಡಿ ಸಮಾಜವನ್ನು ತಿದ್ದುವಲ್ಲಿ ಸಫಲರಾಗಿದ್ದರು. ಅವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ’ ಎಂದರು. ವಿಶ್ವವಿದ್ಯಾನಿಲಯದ

ಮಂಗಳೂರು ವಿಶ್ವವಿದ್ಯಾನಿಲಯ: ಸಾಹಿತಿ ಡಾ. ಸಿದ್ದಲಿಂಗಯ್ಯರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ Read More »

ಹರೀಶ್ ಪೂಂಜಾರನ್ನು ಹೊಗಳಿದ ಕಾಂಗ್ರೆಸ್ ನಾಯಕರಿಗೆ ಸ್ವಪಕ್ಷದಿಂದ ತೆಗಳಿಕೆ

ಬೆಳ್ತಂಗಡಿ: ಬೆಳ್ತಂಗಡಿ ಯ ಶಾಸಕ ಹರೀಶ್ ಪೂಂಜಾ ಅವರನ್ನು ಹೊಗಳಿದ ಕಾರಣಕ್ಕೆ, ತನ್ನ 8 ಜನ ನಾಯಕರುಗಳಿಗೆ ಕಾಂಗ್ರೆಸ್ ಪಕ್ಷ ಬಿಸಿ ಮುಟ್ಟಿಸಿದೆ. ಪಕ್ಷದಲ್ಲಿ ಶಿಸ್ತು ಉಲ್ಲಂಘಿಸಿದ ವಿಚಾರ ಸ್ಪಷ್ಟನೆ ಕೋರಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನೋಟೀಸು ಜಾರಿ ಮಾಡಲಾಗಿದೆ. ಜೂನ್ 3 ರಂದು ಬಿಡುಗಡೆಯಾದ ಸ್ಥಳೀಯ ವಾರ ಪತ್ರಿಕೆಯೊಂದರಲ್ಲಿ ಬಿಜೆಪಿ ಯ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರ ಶಾಸಕತ್ವಕ್ಕೆ ಮೂರು ವರ್ಷ ಪೂರೈಸಿರುವ ಪ್ರಯುಕ್ತ ಕಾಂಗ್ರೆಸ್ ನಾಯಕರು ಶುಭಕೋರಿದ್ದರು. ನಿವೃತ್ತ ಪೊಲೀಸ್

ಹರೀಶ್ ಪೂಂಜಾರನ್ನು ಹೊಗಳಿದ ಕಾಂಗ್ರೆಸ್ ನಾಯಕರಿಗೆ ಸ್ವಪಕ್ಷದಿಂದ ತೆಗಳಿಕೆ Read More »