ಕರಾವಳಿ

ಜಿಲ್ಲೆಯಲ್ಲಿ ಈ ವಾರದ ವೀಕೆಂಡ್ ಕರ್ಫ್ಯೂ ಇಲ್ಲ : ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈ ವಾರದ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಕೆವಿ ಹೇಳಿದ್ದಾರೆ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಹಿಂದೆ ಇದ್ದ ಲಾಕ್ಡೌನ್ ನಿಯಮಗಳನ್ನು ಜೂನ್ 21 ರವರೆಗೆ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಂದಿನಂತೆಯೇ ವಾರದ ಎಲ್ಲಾ ದಿನ ನಿರ್ಬಂಧಗಳು ಮುಂದುವರೆಯಲಿದೆ. ಪ್ರತ್ಯೇಕವಾಗಿ ಈ ವಾರದ ಶನಿವಾರ ಮತ್ತು ಆದಿತ್ಯವಾರ (ಜೂ. 13 ಮತ್ತು 14) ದಂದು ವಾರಂತ್ಯ […]

ಜಿಲ್ಲೆಯಲ್ಲಿ ಈ ವಾರದ ವೀಕೆಂಡ್ ಕರ್ಫ್ಯೂ ಇಲ್ಲ : ಜಿಲ್ಲಾಧಿಕಾರಿ ಡಾ. ರಾಜೇಂದ್ರ Read More »

ಪೂರ್ಣಾಹುತಿಯಾದ ಭಾಸ್ಕರ ಶೆಟ್ಟಿ ಕೊಲೆ‌ ಪ್ರಕರಣ | ಬಹುಕೋಟಿ ಆಸ್ತಿಯ ವಾರಸ್ದಾರ ಯಾರು…?

ಉಡುಪಿ: 2016ರ ಬಹುಕೋಟಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಅಂತಿಮ ತೀರ್ಪು ಕಳೆದವಾರ ಹೊರಬಂದಿತ್ತು. ಉಡುಪಿಯ ಜಿಲ್ಲಾ ನ್ಯಾಯಾಲಯ ಪತ್ನಿ ಪುತ್ರ ಹಾಗೂ ಓರ್ವ ಜ್ಯೋತಿಷಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. ಇನ್ನು ಭಾಸ್ಕರ ಶೆಟ್ಟಿ ತನ್ನ ಬಹುಕೋಟಿ ಆಸ್ತಿಗೆ ಬರೆದಿದ್ದ ವೀಲುನಾಮೆ ಬಹಿರಂಗಗೊಂಡಿದೆ. ಇನ್ನು, ತನ್ನ ಪತ್ನಿ ಒಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು ಅವನು ನನ್ನ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ತನ್ನ ಪುತ್ರ ಹಾಗೂ ಪತ್ನಿಯ ಸ್ನೇಹ ಬೆಳೆಸಿ, ನನ್ನನ್ನು ಮುಗಿಸಲು ಯೋಜನೆ

ಪೂರ್ಣಾಹುತಿಯಾದ ಭಾಸ್ಕರ ಶೆಟ್ಟಿ ಕೊಲೆ‌ ಪ್ರಕರಣ | ಬಹುಕೋಟಿ ಆಸ್ತಿಯ ವಾರಸ್ದಾರ ಯಾರು…? Read More »

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಲಂಕಾ ಪ್ರಜೆಗಳ ಬಂಧನ

ಮಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಶ್ರೀಲಂಕಾ ದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಲಾಡ್ಜ್ ಗಳಲ್ಲಿ ಮತ್ತು ನಗರದ ಕೆಲವು ಮನೆಗಳಲ್ಲಿ ಅವರು ವಾಸಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಲಂಕಾ ಪ್ರಜೆಗಳು ಕಳೆದ ಮಾರ್ಚ್ ತಿಂಗಳಿನಲ್ಲಿ ತಮಿಳುನಾಡಿನ ತೂತುಕುಡಿಗೆ ಆಗಮಿಸಿದ್ದರು. ಅಲ್ಲಿಂದ ಉದ್ಯೋಗಕ್ಕಾಗಿ ಕೆನಡಾಗೆ ಹೋಗುವವರಿದ್ದರು. ತಮಿಳುನಾಡಿನಲ್ಲಿ ಲಂಕನ್ನರಿಗೆ ಕೆನಡಾದಲ್ಲಿ ಕೆಲಸ ಕೊಡಿಸುವ ಏಜೆಂಟ್ ಳಿದ್ದರು. ಆ ಸಮಯದಲ್ಲಿ ತಮಿಳುನಾಡಿನಲ್ಲಿ ಚುನಾವಣೆ ಇದ್ದುದರಿಂದ ಅವರಿಗೆ ಕೆನಡಾಗೆ

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಲಂಕಾ ಪ್ರಜೆಗಳ ಬಂಧನ Read More »

ದ ಕ: ಕಪ್ಪು ಶಿಲೀಂದ್ರ ಕ್ಕೆ ಮತ್ತೆರಡು ಬಲಿ

ಮಂಗಳೂರು: ಮಾರಕ ಕಪ್ಪು ಶಿಲೀಂದ್ರ ಸೊಂಕಿಗೆ ಜಿಲ್ಲೆಯಲ್ಲಿ ಮತ್ತೆರಡು ಸಾವು ಸಂಭವಿಸಿದ್ದು ಮೂರು ಹೊಸ ಪ್ರಕರಣಗಳು ವರದಿಯಾಗಿದೆ. ಮೃತಪಟ್ಟವರು ಮತ್ತು ಹೊಸದಾಗಿ ಸೋಂಕಿಗೊಳಗಾದ ವರು ಎಲ್ಲರೂ ಹೊರಜಿಲ್ಲೆಯವರಗಿದ್ದಾರೆ. ಪತ್ತೆಯಾದ ಮೂರು ಹೊಸ ಪ್ರಕರಣಗಳು ಉತ್ತರ ಕನ್ನಡ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಗೆ ಸಂಬಂಧಿಸಿದ್ದಾಗಿವೆ. ಎಲ್ಲರನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇನ್ನು ಈ ಹಿಂದೆ ಸೊಂಕಿಗೊಳಗಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ನಿನ್ನೆ ಮೃತಪಟ್ಟಿದ್ದಾರೆ. ಅವರಲ್ಲಿ ಒಬ್ಬರು ಚಿಕ್ಕಮಗಳೂರು ಮತ್ತು ಇನ್ನೊಬ್ಬರು ಉತ್ತರ ಕನ್ನಡ ಜಿಲ್ಲೆಗೆ ಸೇರಿದವರಾಗಿದ್ದಾರೆ.

ದ ಕ: ಕಪ್ಪು ಶಿಲೀಂದ್ರ ಕ್ಕೆ ಮತ್ತೆರಡು ಬಲಿ Read More »

ಕರಾವಳಿಯಲ್ಲಿ ಅಕ್ರಮವಾಗಿ ನೆಲೆಸಿದ್ದಳು ಪಾಕಿಸ್ತಾನಿ ಮಹಿಳೆ…! | ಪೊಲೀಸರಿಂದ ತನಿಖೆ ಚುರುಕು

ಭಟ್ಕಳ: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನ ಮೂಲದ ಖತೀಜಾ ಮೆಹರಿನ್ ಎಂಬಾಕೆ ಇಲ್ಲಿ ನೆಲೆಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭಟ್ಕಳ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.‌ ಕಳೆದ ಎಂಟು ವರ್ಷಗಳ ಹಿಂದೆ ಈಕೆಯನ್ನು ಸ್ಥಳೀಯ ನಿವಾಸಿ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್‌ ಎಂಬಾತ ದುಬೈನಲ್ಲಿ ವಿವಾಹವಾಗಿದ್ದ. ಈಕೆ ಮದುವೆ ನಂತರ 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಆ ಬಳಿಕ 2015ರಲ್ಲಿ ಅಕ್ರಮವಾಗಿ ಭಾರತ ಪ್ರವೇಶ

ಕರಾವಳಿಯಲ್ಲಿ ಅಕ್ರಮವಾಗಿ ನೆಲೆಸಿದ್ದಳು ಪಾಕಿಸ್ತಾನಿ ಮಹಿಳೆ…! | ಪೊಲೀಸರಿಂದ ತನಿಖೆ ಚುರುಕು Read More »

ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಉಡುಪಿ ಮೂಲದ ಪದ್ದು ಬಂಗೇರ ವಿಧಿವಶ

ಉಡುಪಿ: 80ರ ದಶಕದಲ್ಲಿ ಭಾರತ ಫುಟ್ಬಾಲ್ ತಂಡವನ್ನೂ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದ ಶೇಖರ್ ಪದ್ದು ಬಂಗೇರ (75ವ.) ಇಂದು ಮೃತಪಟ್ಟಿದ್ದಾರೆ. ಜಿಲ್ಲೆಯ ಬಡಾನಿಡಿಯೂರು ಮೂಲದವರಾದ ಅವರಿಗೆ ಕೆಲ ದಿನಗಳ ಹಿಂದೆ ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭಾರತ ತಂಡದಲ್ಲಿ ಗೋಲ್ಕೀಪರ್ ಹಾಗೂ ನಾಯಕನಾಗಿದ್ದ ಇವರು ದೇಶಕ್ಕೆ ಹಲವಾರು ಪಂದ್ಯಗಳನ್ನು ಗೆಲ್ಲಿಸಿ ಕೊಟ್ಟಿದ್ದಾರೆ. ಹಾಗೂ ಹಲವಾರು ಪ್ರತಿಷ್ಠಿತ

ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಉಡುಪಿ ಮೂಲದ ಪದ್ದು ಬಂಗೇರ ವಿಧಿವಶ Read More »

ಕರಾವಳಿಯಲ್ಲಿ ಇಂದಿನಿಂದ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಇಂದಿನಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಸಾರ್ವಜನಿಕರು ಎಚ್ಚರದಿಂದಿರುವಂತೆ ಸೂಚಿಸಲಾಗಿದೆ. ಇಂದಿನಿಂದ ಅಂದರೆ ಜೂನ್ 10 ರಿಂದ ಮೂರು ದಿನ ಎಲ್ಲೊ ಅಲರ್ಟ್ ಹಾಗೂ ನಂತರದ ಮೂರು ದಿನಗಳಲ್ಲಿ (13 ರಿಂದ 15) ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ,

ಕರಾವಳಿಯಲ್ಲಿ ಇಂದಿನಿಂದ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ Read More »

ಜೂ.14ರ ನಂತರವೂ ದಕ್ಷಿಣ ಕನ್ನಡಕ್ಕಿಲ್ಲ ಅನ್ ಲಾಕ್ ಭಾಗ್ಯ…!?

ಮಂಗಳೂರು: ಕೋವಿಡ್ ಎರಡನೆಯ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂತಹಂತದ ಅನ್ಲಾಕ್ ಗೆ ಸಿದ್ಧತೆ ನಡೆಸುತ್ತಿದ್ದು ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಮುಂದುವರಿಸುವ ಸಾಧ್ಯತೆ ಎದ್ದು ಕಾಣುತ್ತಿದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನಿರೀಕ್ಷೆಗೆ ತಕ್ಕಂತೆ ಕೋವಿಡ್ ಪಾಸಿಟಿವ್ ಪ್ರಮಾಣ ನಿಯಂತ್ರಣಕ್ಕೆ ಬರುತ್ತಿದೆ. ಸದ್ಯ ಅಂತಹ ಜಿಲ್ಲೆಗಳಲ್ಲಿ ಹಂತಹಂತವಾಗಿ ನಿರ್ಬಂಧ ತೆರವು ಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಇನ್ನು ದಕ್ಷಿಣ ಕನ್ನಡ ಸೇರಿದಂತೆ ಮೈಸೂರು ಶಿವಮೊಗ್ಗ ಹಾಸನ ತುಮಕೂರು ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ

ಜೂ.14ರ ನಂತರವೂ ದಕ್ಷಿಣ ಕನ್ನಡಕ್ಕಿಲ್ಲ ಅನ್ ಲಾಕ್ ಭಾಗ್ಯ…!? Read More »

ಮಂಗಳೂರು: ಕಟೀಲ್ ಸಂದರ್ಶನದ ಆಡಿಯೋ ತಿರುಚಿದ ಪ್ರಕರಣ | ಸಾಮಾಜಿಕ ಕಾರ್ಯಕರ್ತ ಅರೆಸ್ಟ್

ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರೊಂದಿಗಿನ ಸಂದರ್ಶನ ಒಂದರ ಆಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆರೋಪ ಅಡಿಯಲ್ಲಿ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಖಾಸಗಿ ಟಿವಿ ಚಾನೆಲೊಂದು ಸಂದರ್ಶನ ನಡೆಸಿತ್ತು. ಸಂದರ್ಶನದಲ್ಲಿ ವೀಕ್ಷಕರಿಗೆ ಸಂಸದರೊಂದಿಗೆ ಪ್ರಶ್ನೆ ಕೇಳುವ ಅವಕಾಶ ಕಲ್ಪಿಸಲಾಗಿತ್ತು. ಹಾಗೆ ಪ್ರೇಕ್ಷಕರೊಬ್ಬರು ಪ್ರಶ್ನೆ ಕೇಳಿದ ವಿಡಿಯೋ ತುಣುಕೊಂದನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುನಿಲ್

ಮಂಗಳೂರು: ಕಟೀಲ್ ಸಂದರ್ಶನದ ಆಡಿಯೋ ತಿರುಚಿದ ಪ್ರಕರಣ | ಸಾಮಾಜಿಕ ಕಾರ್ಯಕರ್ತ ಅರೆಸ್ಟ್ Read More »

ಸುಳ್ಯ : ಪಿಕಪ್ – ಲಾರಿ ಢಿಕ್ಕಿ : ಓರ್ವ ಮೃತ್ಯು: ನಾಲ್ವರಿಗೆ ಗಾಯ

ಸುಳ್ಯ: ಪಿಕಪ್ ಹಾಗೂ ಕಂಟೈನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ತಾಲೂಕಿನ ಅಡ್ಕಾರ್ ಸಮೀಪದ ಮಾವಿನಕಟ್ಟೆ ಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತ ಪಟ್ಟವನನ್ನು ಪೆರಾಜೆಯ ದಿನಕರ ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದ ಸ್ಥಳ ಅಪಾಯಕಾರಿ ಜಾಗವಾಗಿದ್ದು, ಹಿಂದೆ ಇಲ್ಲಿ ಹಲವಾರು ಅಪಘಾತಗಳು ಸಂಭವಿಸಿ ಜೀವಹಾನಿಗಳಾ ಗಿತ್ತು. ಪುತ್ತೂರಿನಿಂದ ಸಂಪಾಜೆಗೆ ತೆರಳುತ್ತಿದ್ದ ಪಿಕಪ್ ಮತ್ತು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿದೆ.

ಸುಳ್ಯ : ಪಿಕಪ್ – ಲಾರಿ ಢಿಕ್ಕಿ : ಓರ್ವ ಮೃತ್ಯು: ನಾಲ್ವರಿಗೆ ಗಾಯ Read More »