ಕರಾವಳಿ

ಕರಾವಳಿಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಓರ್ವ ಬಲಿ? !

ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಯ ಜೊತೆಗೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡುಬತ್ತಿದೆ. ಜಿಲ್ಲೆಯಲ್ಲಿ 6 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡುಬಂದಿದ್ದು, ಓರ್ವ ಶಂಕಿತ ಈಗಾಗಲೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಇನ್ನೂಳಿದ ಸೋಂಕಿತರು ಸದ್ಯ ವೆನ್ಲಾಕ್ ಮತ್ತು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಾವಳಿಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಓರ್ವ ಬಲಿ? ! Read More »

ಕಾರ್ಕಳ : ಕೊರೊನಾ ಮಾರ್ಗಸೂಚಿ ಉಲ್ಲಂಘನೆ – ಕೇಸು ದಾಖಲು

ಕಾರ್ಕಳ, ಮೇ.18: ರಾಜ್ಯ ಸರಕಾರ  ಹಾಗೂ ಜಿಲ್ಲಾಡಳಿತವು ಹೊರಡಿಸಿದ ಕೊರೊನಾ ಕರ್ಫ್ಯೂ  ಮಾರ್ಗಸೂಚಿಯನ್ನು ಉಲ್ಲಂಘಿಸಿ  ವ್ಯಾಪಾರದಲ್ಲಿ ತೊಡಗಿಸಿದ ವ್ಯಾಪಾರಿಯೊಬ್ಬರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಸಾಣೂರು ಗ್ರಾಮದ ಕುಂಟಲ್ಪಾ‌ಡಿ ನಿವಾಸಿ ಪ್ರಕಾಶ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರು ಕುಂಟಲ್ಪಾಡಿಯಲ್ಲಿ ತನ್ನ ಮಾಲಕತ್ವದಲ್ಲಿರುವ ಅಂಗಡಿಯನ್ನು ಸಂಜೆ 6:30ಕ್ಕೆ ತೆರೆದು ವ್ಯಾಪಾರ ನಡೆಸುತಿದ್ದರು. ಈ  ಬಗ್ಗೆ  ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಆ ಬಳಿಕ ಅಂಗಡಿಯನ್ನು ಮುಚ್ಚಿಸಿ ಆರೋಪಿ ಪ್ರಕಾಶ್ ವಿರುದ್ಧ ಪ್ರಕರಣದ ದಾಖಲಿಸಿಕೊಂಡಿದ್ದಾರೆ.

ಕಾರ್ಕಳ : ಕೊರೊನಾ ಮಾರ್ಗಸೂಚಿ ಉಲ್ಲಂಘನೆ – ಕೇಸು ದಾಖಲು Read More »

ಪಡಿತರದಲ್ಲಿ ಕರಾವಳಿ ಜನರಿಗೆ ಸಿಗುತ್ತೆ ಕೆಂಪು ಕುಚಲಕ್ಕಿ!

ಮಂಗಳೂರು, ಮೇ 18: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಭಾಗದ ಜನ ಊಟಕ್ಕೆ ಬಳಸುವ ಕೆಂಪು ಕುಚಲಕ್ಕಿಯನ್ನು ಪಡಿತರ ಅಂಗಡಿಗಳಲ್ಲಿ ಪೂರೈಸಲು ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆಯಲ್ಲಿ ಸಚಿವರು ಈ ವಿಷಯ ತಿಳಿಸಿದ್ದು, ಕೆಂಪು ಕುಚ್ಚಲಕ್ಕಿಯನ್ನು ಸ್ಥಳೀಯ ಗಿರಣಿಗಳ ಮೂಲಕ ಸಂಸ್ಕರಿಸಿ ಪಡಿತರ ಅಂಗಡಿಗಳ ಮೂಲಕ ಗುಣಮಟ್ಟದ ಅಕ್ಕಿ ವಿತರಿಸಲು ಸರ್ಕಾರ ಅಗತ್ಯ ಯೋಜನೆ ರೂಪಿಸುತ್ತಿದೆ. ದಕ್ಷಿಣ ಕನ್ನಡ

ಪಡಿತರದಲ್ಲಿ ಕರಾವಳಿ ಜನರಿಗೆ ಸಿಗುತ್ತೆ ಕೆಂಪು ಕುಚಲಕ್ಕಿ! Read More »

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ: ಕಳೆದು ಎರಡು ದಿನಗಳ ಹಿಂದೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮುಗ್ಡಾಲ್ ಗುಡ್ಡೆ ನಿವಾಸಿ ವಿನಯ್ (೨೪) ಮೃತಪಟ್ಟ ಯುವಕ. ಮಾ.೧೦ ರಂದು ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ಪಿಕಪ್ ಜೀಪ್ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ವಿನಯ್ ಅವರ ತಲೆಗೆ ಗಾಯವಾಗಿದ್ದು, ಅವರು ಕೋಮಾ ಅವಸ್ಥೆಯಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು Read More »

ವಿಶ್ವಸುಂದರಿ ರನ್ನರ್ ಅಪ್ ಸ್ಥಾನ ಪಡೆದ ಕರಾವಳಿ ಬೆಡಗಿ. ಯಾರೀ ಸುಂದರಿ ಗೊತ್ತಾ..?

ಅಮೆರಿಕಾದ ಫ್ಲೋರಿಡಾದಲ್ಲಿ ನಡೆದ 69ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಉದ್ಯಾವರ ಮೂಲದ ಆ್ಯಡ್ಲಿನ್ ಕ್ಯಾಸ್ಟೆಲಿನೋ ಮೂರನೇ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. 22ರ ಹರೆಯದ ಆ್ಯಡ್ಲಿನ್ ಕ್ಯಾಸ್ಟೆಲಿನೋ, ಉದ್ಯಾವರ ಮೂಲದ ಅಲ್ಫೋನ್ಸಸ್ ಕ್ಯಾಸ್ಟೆಲಿನೊ ಮತ್ತು ಮೀರಾ ಕ್ಯಾಸ್ಟೆಲಿನೊ ದಂಪತಿ ಪುತ್ರಿ. ವಿವಿಧ ಆನ್‌ಲೈನ್ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದ ಅವರು, 2020ರಲ್ಲಿ ಲಿವಾ ಮಿಸ್ ದಿವಾ ಯೂನಿವರ್ಸ್ ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ನೇರವಾಗಿ ಮಿಸ್ ಯೂನಿವರ್ಸ್ ಸ್ಪರ್ಧೆಗೆ ಪ್ರವೇಶ ಪಡೆದುಕೊಂಡಿದ್ದರು. ಕುವೈತ್ ನಲ್ಲಿ ಹುಟ್ಟಿ ಬೆಳೆದು, ಮುಂಬೈನಲ್ಲಿ ಪ್ರೌಢ

ವಿಶ್ವಸುಂದರಿ ರನ್ನರ್ ಅಪ್ ಸ್ಥಾನ ಪಡೆದ ಕರಾವಳಿ ಬೆಡಗಿ. ಯಾರೀ ಸುಂದರಿ ಗೊತ್ತಾ..? Read More »

ಪುತ್ತೂರು | ಡಿವೈಡರ್ ಗೆ ಕಾರು ಢಿಕ್ಕಿ; ಚಾಲಕ ಸಾವು

ಪುತ್ತೂರು: ಪುತ್ತೂರಿನ ಕೆಮ್ಮಾಯಿಯಲ್ಲಿ ಬೆಳ್ಳಂಬೆಳಗ್ಗೆ ಕಾರೊಂದು ರಸ್ತೆ ಡಿವೈಡರ್ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ದುರ್ಘಟನೆ ನಡೆದಿದೆ. ಸಾವನ್ನಪ್ಪಿದವರನ್ನು ಬೆಳ್ತಂಗಡಿ ಬಾರ್ಯ ನಿವಾಸಿ ಅರುಣ್ ಕುಮಾರ್ ಎಂದು ಗುರುತಿಸಲಾಗಿದ್ದು. ಕಾರು‌ ರಸ್ತೆ ಡಿವೈಡರ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡಿದ್ದು ಅವರನ್ನು ಆದರ್ಶ ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ದಯಾನಂದ ಅವರ ಸಹಾಯದೊಂದಿಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ

ಪುತ್ತೂರು | ಡಿವೈಡರ್ ಗೆ ಕಾರು ಢಿಕ್ಕಿ; ಚಾಲಕ ಸಾವು Read More »

ಉಪ್ಪಿನಂಗಡಿ: ಮನೆಯಿಂದ ಲಕ್ಷಾಂತರ ಮೌಲ್ಯದ ನಗ-ನಗದು ಕಳವು

ಉಪ್ಪಿನಂಗಡಿ: ಮನೆಯಲ್ಲಿ ಮನೆಮಂದಿ ಇಲ್ಲದ ಸಮಯದಲ್ಲಿ ಕೈಚಳಕ ತೋರಿಸಿದ ಕಳ್ಳರು ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದು ದೋಚಿದ ಘಟನೆ ಇಲ್ಲಿಗೆ ಸಮೀಪದ ಕರಾಯ ಎಂಬಲ್ಲಿ ನಡೆದಿದೆ. ಕರಾಯ ಗ್ರಾಮದ ಮುರಿಯಾಳ ಮಹಮ್ಮದ್ ಅಶ್ರಫ್ ಎಂಬವರ ಮನೆಯಿಂದ, ಮನೆಮಂದಿ ಇಲ್ಲದಿದ್ದಾಗ ಬೀಗ ಒಡೆದು ಕಳ್ಳತನ ನಡೆದಿದೆ. ಅಶ್ರಫ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅವರ ತಂದೆ, ಪತ್ನಿ ಮತ್ತು ಮಕ್ಕಳು ಮನೆಯಲ್ಲಿರುತ್ತಿದ್ದರು. ಕಳೆದವಾರ ಹಬ್ಬದ ನಿಮಿತ್ತ ಮನೆಯವರೆಲ್ಲರೂ ಅಶ್ರಫ್ ಅವರ ಪತ್ನಿ ಶಾಹಿದ್ ಅವರ ತವರು ಮನೆಗೆ ತೆರಳಿದ್ದು ಸೋಮವಾರ

ಉಪ್ಪಿನಂಗಡಿ: ಮನೆಯಿಂದ ಲಕ್ಷಾಂತರ ಮೌಲ್ಯದ ನಗ-ನಗದು ಕಳವು Read More »

ಮಂಗಳೂರು: ಎಸ್ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪಿಎಸ್ಐ ಕೊರೋನಾಗೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ತುಂಬು ಗರ್ಭಿಣಿ ಮಹಿಳಾ ಪಿಎಸ್ಐ ಕೋವಿಡ್ ಗೆ ಬಲಿಯಾದ ಘಟನೆ ನಡೆದಿದೆ. ಕಳೆದ 5 ತಿಂಗಳ ಹಿಂದೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದ ಶ್ಯಾಮಿಲಿ (24 ವ) ಮೃತಪಟ್ಟ ಮಹಿಳೆ. ಶ್ಯಾಮಿಲಿಯವರು ಹೆರಿಗೆ ರಜೆ ನಿಮಿತ್ತ ತವರಿಗೆ ತೆರಳಿದ್ದರು. ಕಳೆದೆರಡು ವಾರಗಳ ಹಿಂದೆ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ನಂತರ ಕೋಲಾರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ

ಮಂಗಳೂರು: ಎಸ್ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪಿಎಸ್ಐ ಕೊರೋನಾಗೆ ಬಲಿ Read More »

ಮಂಗಳೂರು | ಜೆಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಬಸ್ಸು ಬೆಂಕಿಗಾಹುತಿ

ಮಂಗಳೂರು: ಇಂದು ಬೆಳಿಗ್ಗಿನ ಜಾವ ಲಾಕ್‌ಡೌನ್ ಹಿನ್ನಲೆಯಲ್ಲಿ ಜೆಪ್ಪು ಮಾಕೆರ್ಟ್ನಲ್ಲಿ ನಿಂತಿದ್ದ ಬಸ್ಸುವೊಂದು ಬೆಂಕಿಗಾಹುತಿಯಾದ ಘಟನೆ ಸಂಭವಿಸಿದೆ. ನರೇಶ್ ಪೂಜಾರಿ ಮಾಲಕತ್ವದ ರಾಜಲಕ್ಷ್ಮಿ ಟ್ರಾವೆಲ್ಸ್ ಬಸ್ಸಿನಲ್ಲಿ ಮುಂಜಾನೆ 4ರ ಹೊತ್ತಿಗೆ ಬೆಂಕಿಕಾಣಿಸಿಕೊಂಡಿದೆ. ಹಾಗೆಯೇ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಹತ್ತಿರದಲ್ಲೇ ಇದ್ದ ಬಸ್ಸುಗಳಿಗೆ ಯಾವುದೇ ಹಾನಿ ಉಂಟಾಗಿಲ್ಲ. ಇದು ದುಷ್ಕರ್ಮಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು | ಜೆಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಬಸ್ಸು ಬೆಂಕಿಗಾಹುತಿ Read More »

‘ಇತ್ತೆ ಪಂಪ್ವೆಲ್ ಬತ್ತ್ ತೂಲೆ’ ವರ್ಲಿ‌ಕಲೆಯಿಂದ ಕಂಗೊಳಿಸುತ್ತಿದೆ ಮಂಗಳೂರಿನ ಪಂಪ್ವೆಲ್

ಮಂಗಳೂರು: ಟ್ರೋಲಿಗರಿಂದ ಸಾಕಷ್ಟು ಸುದ್ದಿಯಾಗಿದ್ದ ಮಂಗಳೂರಿನ ಪಂಪ್ ವೆಲ್ ಪ್ಲೈ ಓವರ್ ಮತ್ತೆ ಸುದ್ದಿಯಾಗುತ್ತಿದೆ. ಪ್ಲೈ ಓವರ್ ನ ಗೋಡೆಗಳು ಸುಂದರ ವರ್ಣರಂಜಿತ ವರ್ಲಿ ಚಿತ್ರಗಳಿಂದ ಕಂಗೊಳಿಸುತ್ತಿದ್ದು, ತನ್ನನ್ನು ಅಣಕಿಸಿದವರನ್ನು ಕೆಣಕುತ್ತಿದೆ. ಪ್ಲೈ ಓವರ್ ನ ಎರಡು ಬದಿ ರಸ್ತೆಗಳಲ್ಲಿ ಸಂಚರಿಸುವಾಗ ವರ್ಲಿ ಚಿತ್ತಾರಗಳು ಕಣ್ಣುಗಳಿಗೆ ಮುದನೀಡುತ್ತಿವೆ. ಮಂಗಳೂರಿನ ಆದಿತತ್ವ ಕಲಾವಿದರ ಬಳಗದ ಕುಂಚದಲ್ಲಿ ಮೂಡಿದ ಈ ವರ್ಲಿ ಚಿತ್ತಾರಗಳು ಪ್ರಯಾಣಿಕರ ಕಣ್ಮನ ಸೆಳೆಯುತ್ತಿದೆ.ಕರ್ನಾಟಕ ಬ್ಯಾಂಕ್ ಸಹಕಾರದೊಂದಿಗೆ ರಸ್ತೆ ಗೋಡೆಗೆ ಬೇಸ್ ಪೈಂಟ್ ನಿಂದ ಅಂದಗೊಳಿಸಿ ವರ್ಲಿ

‘ಇತ್ತೆ ಪಂಪ್ವೆಲ್ ಬತ್ತ್ ತೂಲೆ’ ವರ್ಲಿ‌ಕಲೆಯಿಂದ ಕಂಗೊಳಿಸುತ್ತಿದೆ ಮಂಗಳೂರಿನ ಪಂಪ್ವೆಲ್ Read More »