ಕರಾವಳಿ

ಬೆಳ್ತಂಗಡಿ:‌ಮುಂಗಾರು ಮಳೆಯಬ್ಬರ ಹಿನ್ನೆಲೆ| ಗಡಾಯಿಕಲ್ಲು ಸೇರಿ ಹಲವು ಪ್ರವಾಸಿತಾಣ, ಜಲಪಾತ ವೀಕ್ಷಣೆಗೆ ನಿರ್ಬಂಧ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು ಜಲಪಾತಗಳ ವೀಕ್ಷಣೆಗೆ ಹೆಚ್ಚಿನ ಪ್ರವಾಸಿಗರು ಬರುವ ಸಾಧ್ಯತೆ ಇದ್ದು ಪ್ರವಾಸಿಗರು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ತಾತ್ಕಾಲಿಕವಾಗಿ ಜಲಪಾತಗಳಿಗೆ ಹಾಗೂ ನರಸಿಂಹಗಡ (ಗಡಾಯಿಕಲ್ಲು) ಗೆ ಪ್ರವೇಶ ನಿರ್ಬಂಧಿಸಿ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ, ಕುದುರೆಮುಖ, ಸೋಮೇಶ್ವರ, ಆಗುಂಬೆ, ಸಿದ್ದಾಪುರ, ಕೊಲ್ಲೂರು ಕೆರೆಕಟ್ಟೆ ಮತ್ತು ಕಾರ್ಕಳ ಈ ವನ್ಯಜೀವಿ ವಲಯಗಳ ಅರಣ್ಯ ಪ್ರದೇಶಗಳಲ್ಲಿ ಬರುವ ಅರಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಡು ಮನೆ, […]

ಬೆಳ್ತಂಗಡಿ:‌ಮುಂಗಾರು ಮಳೆಯಬ್ಬರ ಹಿನ್ನೆಲೆ| ಗಡಾಯಿಕಲ್ಲು ಸೇರಿ ಹಲವು ಪ್ರವಾಸಿತಾಣ, ಜಲಪಾತ ವೀಕ್ಷಣೆಗೆ ನಿರ್ಬಂಧ Read More »

ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಡಾ. ಶೌರ್ಯ ಎಸ್.ವಿ. ಗೆ ಪ್ರಥಮ ಸ್ಥಾನ

ಸಮಗ್ರ ನ್ಯೂಸ್: ಅತೀ ಚಿಕ್ಕ ವಯಸ್ಸಿನಲ್ಲಿ ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಊರಿನ, ಸರಕಾರಿ ಶಾಲೆಯ ಕೀರ್ತಿ ಹೆಚ್ಚಿಸಿರುವ ಈಕೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಿ 262ಕ್ಕಿಂತಲೂ ಹೆಚ್ಚು ಪ್ರಮಾಣ ಪತ್ರ ಹಾಗೂ 172ಕ್ಕಿಂತಲೂ ಹೆಚ್ಚು ಪ್ರಶಸ್ತಿ ಪತ್ರವನ್ನು ತನ್ನದಾಗಿಸಿಕೊಂಡಿರುವ ಶೌರ್ಯ ಎಸ್.ವಿ. ಇಡೀ ಜಗತ್ತಿಗೆ ಪ್ರತಿಭೆ ಪ್ರದರ್ಶನ ಪರಿಚಯಿಸುವ ಕಾತರದಲ್ಲಿ ಇದ್ದಾಳೆ. ಅಂತರಾಷ್ಟ್ರೀಯ ಬಾಲಪ್ರತಿಭೆ ಡಾ.ಶೌರ್ಯ.ಎಸ್.ವಿ. ಸಮಾಜದಲ್ಲಿ ಇಂದು ಅನೇಕ ಬಾಲ ಪ್ರತಿಭೆಗಳು ತಮ್ಮಲ್ಲಿನ ವಿವಿಧ ಕಲೆಯನ್ನು ಅನಾವರಣೆಗೊಳಿಸಿ

ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಡಾ. ಶೌರ್ಯ ಎಸ್.ವಿ. ಗೆ ಪ್ರಥಮ ಸ್ಥಾನ Read More »

ದೇವರಕೊಲ್ಲಿ ಬಳಿ ರಸ್ತೆಗೆ ಉರುಳಿದ ಮರ| ಮಾಣಿ – ಮೈಸೂರು ರಸ್ತೆ ಸಂಚಾರ ಬಂದ್

ಸಮಗ್ರ ನ್ಯೂಸ್: ಮಾಣಿ‌ – ಮೈಸೂರು ರಾ.ಹೆದ್ದಾರಿಯ ದೇವರಕೊಲ್ಲಿ ಬಳಿ ರಸ್ತೆಗೆ ಮರ ಉರುಳಿದೆ. ಪರಿಣಾಮವಾಗಿ ರಸ್ತೆ ‌ಸಂಚಾರ ಸಂಪೂರ್ಣ ಬಂದ್ ಆಗಿದೆ ಎಂದು ತಿಳಿದುಬಂದಿದೆ.

ದೇವರಕೊಲ್ಲಿ ಬಳಿ ರಸ್ತೆಗೆ ಉರುಳಿದ ಮರ| ಮಾಣಿ – ಮೈಸೂರು ರಸ್ತೆ ಸಂಚಾರ ಬಂದ್ Read More »

ಮಂಗಳೂರು: ಕಾಮಗಾರಿ ವೇಳೆ ಗುಡ್ಡ ಕುಸಿತ| ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಸಮಗ್ರ ನ್ಯೂಸ್: ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಮಂಗಳೂರು ನಗರದ ಬಲ್ಮಠ ರೋಡ್ ಸಮೀಪ ನಡೆದಿದೆ. ಕಟ್ಟಡ ನಿರ್ಮಾಣದ ವೇಳೆ ಘಟನೆ ನಡೆದಿದ್ದು, ಮಣ್ಣಿನಡಿ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು: ಕಾಮಗಾರಿ ವೇಳೆ ಗುಡ್ಡ ಕುಸಿತ| ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು Read More »

ಮಂಗಳೂರು: ಸಮವಸ್ತ್ರದಲ್ಲೇ ಹಾರೆ ಹಿಡಿದು ರಸ್ತೆ ಗುಂಡಿ ಮುಚ್ಚಿದ ಪೊಲೀಸರು| ಸಾರ್ವಜನಿಕರಿಂದ ವ್ಯಾಪಕ ಶ್ಲಾಘನೆ

ಸಮಗ್ರ ನ್ಯೂಸ್: ಹೊಂಡ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿರುವುದನ್ನು ಮನಗಂಡು ಪೊಲೀಸ್ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಹಾರೆ ಹಿಡಿದು ರಸ್ತೆಗಿಳಿದು ರಸ್ತೆ ಗುಂಡಿಗಳನ್ನು ಮುಚ್ಚಿದ ಘಟನೆ ಮಂಗಳೂರು ನಗರದ ಕೆಪಿಟಿಯಲ್ಲಿ ನಡೆದಿದೆ. ಕೆಪಿಟಿಯಲ್ಲಿನ ಹೆದ್ದಾರಿ ಸಂಪೂರ್ಣವಾಗಿ ರಸ್ತೆ ಗುಂಡಿಗಳಿಂದ ಕೂಡಿತ್ತು. ಇದರ ಪರಿಣಾಮವಾಗಿ ವಾಹನ ಸವಾರರು ಈ ಹೆದ್ದಾರಿಯಲ್ಲಿ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದರು. ಅನೇಕ ಸಲ ಅಪಘಾತಗಳ ನಡೆಯುವುದು ಸ್ವಲ್ಪದರಲ್ಲಿಯೇ ತಪ್ಪಿದ್ದು ಇದನ್ನು ಮನಗಂಡ ಕದ್ರಿ ಸಂಚಾರಿ ಠಾಣಾ ಸಬ್ ಇನ್‌ಸ್ಪೆಕ್ಟರ್

ಮಂಗಳೂರು: ಸಮವಸ್ತ್ರದಲ್ಲೇ ಹಾರೆ ಹಿಡಿದು ರಸ್ತೆ ಗುಂಡಿ ಮುಚ್ಚಿದ ಪೊಲೀಸರು| ಸಾರ್ವಜನಿಕರಿಂದ ವ್ಯಾಪಕ ಶ್ಲಾಘನೆ Read More »

ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ| ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ

ಸಮಗ್ರ ನ್ಯೂಸ್ : ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ. ಮಂಡ್ಯ ಎಸ್ಪಿಯಾಗಿದ್ದ ಯತೀಶ್ ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿಯಾಗಿ ನೇಮಕವಾಗಿದ್ದು, ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ರಿಷ್ಯಂತ್‌ ವರ್ಗಾವಣೆಯಾಗಿದ್ದಾರೆ. ಒಂದೇ ವರ್ಷದಲ್ಲಿ ರಿಷ್ಯಂತ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ. ರಿಷ್ಯಂತ್ 2023ರ ಜೂನ್ ನಲ್ಲಿ ದ.ಕ ಎಸ್ಪಿಯಾಗಿ ನೇಮಕಗೊಂಡಿದ್ದರು.

ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ| ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ Read More »

ಧರ್ಮಸ್ಥಳ: ಎರಡು ವರ್ಷದ ಹಸುಗೂಸನ್ನು ಬಿಟ್ಟು ಮಹಿಳೆ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಎರಡು‌ ವರ್ಷದ‌‌ ಮಗುವಿನ ತಾಯಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿ‌ ತಾಲೂಕಿನ ಧರ್ಮಸ್ಥಳ‌ ಗ್ರಾಮದ ಜೋಡುಸ್ಥಾನ ಎಂಬಲ್ಲಿ ‌ನಡೆದಿದೆ. ಮೃತರನ್ನು ಇಲ್ಲಿನ ನಿವಾಸಿ ರಕ್ಷಿತಾ ಜೈನ್ (26 ವ) ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜು.2ರಂದು ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

ಧರ್ಮಸ್ಥಳ: ಎರಡು ವರ್ಷದ ಹಸುಗೂಸನ್ನು ಬಿಟ್ಟು ಮಹಿಳೆ ಆತ್ಮಹತ್ಯೆಗೆ ಶರಣು Read More »

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ/ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್‌: ಯಕ್ಷಗಾನ ಅಭಿಯಾನಕ್ಕಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರ ತಂಡ ಜು. 9ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಮೆರಿಕ ಇದರ ಆಯೋಜನೆಯಯಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಅಮೆರಿಕದ 20 ರಾಜ್ಯಗಳಲ್ಲಿ ಈ ತಂಡ ಯಕ್ಷಗಾನ ಪ್ರದರ್ಶನ ನೀಡಲಿದೆ ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದ್ದಾರೆ ಟ್ರಸ್ಟ್‌ನ ಯುಎಸ್ಎ ಘಟಕದ ಅಧ್ಯಕ್ಷ ಡಾ.ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ ,

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ/ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ Read More »

ಉಪ್ಪಿನಂಗಡಿ: ದಾರಿ‌ ತಪ್ಪಿಸಿದ ಗೂಗಲ್ ಮ್ಯಾಪ್| ಆಸ್ಪತ್ರೆಗೆ ಹೋಗಬೇಕಿದ್ದ ಕಾರು ಹೊಳೆ ಪಾಲು

ಸಮಗ್ರ ನ್ಯೂಸ್: ಡಿಜಿಟಲ್‌ ಯುಗದಲ್ಲಿ ದಾರಿ ಗೊತ್ತಾಗದಿದ್ದರೆ ಗೂಗಲ್‌ ಮ್ಯಾಪ್‌ ಬಳುವುದು ಮಾಮೂಲು. ಈಗಂತೂ ಬಹುತೇಕ ಎಲ್ಲರೂ ಗೂಗಲ್‌ ಮ್ಯಾಪ್‌ ನೋಡಿಕೊಂಡೇ ಗೊತ್ತಿಲ್ಲದ ಸ್ಥಳಗಳಿಗೆ ಬೈಕ್‌, ಕಾರುಗಳಲ್ಲಿ ಪ್ರಯಾಣಿಸುತ್ತಿರುತ್ತಾರೆ. ಆದರೆ ಎಷ್ಟೋ ಸಂದರ್ಭಗಳಲ್ಲಿ ಈ ಮ್ಯಾಪ್‌ ನಮ್ಮನ್ನು ದಾರಿ ತಪ್ಪಿಸುವುದು ಉಂಟು. ಈ ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಕಾರು ನದಿಗೆ ಬಿದ್ದ, ಹೊಂಡಕ್ಕೆ ಬಿದ್ದ ಘಟನೆಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಯುವಕರು ಗೂಗಲ್‌ ಮ್ಯಾಪ್‌

ಉಪ್ಪಿನಂಗಡಿ: ದಾರಿ‌ ತಪ್ಪಿಸಿದ ಗೂಗಲ್ ಮ್ಯಾಪ್| ಆಸ್ಪತ್ರೆಗೆ ಹೋಗಬೇಕಿದ್ದ ಕಾರು ಹೊಳೆ ಪಾಲು Read More »

ಸುಳ್ಯ: ಎರಡು ವರ್ಷಗಳ ಹಿಂದಿನ ಕಳ್ಳತನ ಪ್ರಕರಣ ‌ಭೇದಿಸಿದ ಬೆಳ್ಳಾರೆ ಪೊಲೀಸರು| ಬೆಳ್ತಂಗಡಿ ಮೂಲದ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಎರಡು ವರ್ಷಗಳ ಹಿಂದೆ ಬೆಳ್ಳಾರೆ ಠಾಣೆ ವ್ಯಾಪ್ತಿಯ ಎಡಮಂಗಲದಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿ, ಬೆಳ್ತಂಗಡಿ ಮೂಲದ ಶರತ್‌ (26) ಅವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. 2022ರ ಮಾರ್ಚ್‌ನಲ್ಲಿ ರಾತ್ರಿ ಸಮಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿನ ಮನೆಯೊಂದರ ಬಾಗಿಲು ಮುರಿದು ನುಗ್ಗಿದ ಆರೋಪಿ ಮನೆಯೊಳಗಿದ್ದ ಕಬ್ಬಿಣದ ಕಪಾಟಿನ ಬೀಗದ ಕೀ ಬಳಸಿ ಕಪಾಟು ತೆರೆದು 30 ಸಾವಿರ ನಗದು ಹಾಗೂ 1.48 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ಅಂದಾಜು 1.78

ಸುಳ್ಯ: ಎರಡು ವರ್ಷಗಳ ಹಿಂದಿನ ಕಳ್ಳತನ ಪ್ರಕರಣ ‌ಭೇದಿಸಿದ ಬೆಳ್ಳಾರೆ ಪೊಲೀಸರು| ಬೆಳ್ತಂಗಡಿ ಮೂಲದ ಯುವಕ ಅರೆಸ್ಟ್ Read More »